ಸಂಪದ ಪುಟಗಳು - ಲೇಖಕರ ಹೆಸರು ಅಥವಾ ಐಡಿ ಬಳಸಿ ಹುಡುಕಿ

Enter a comma separated list of user names.

ಈಗ ಜಿ ಎನ್ ಯು / ಗ್ನೂ ಕನ್ನಡದಲ್ಲಿ

ಎಲ್ಲರಿಗೂ ಸ್ವಾತಂತ್ರೊತ್ಸವದ ಶುಭಾಶಯಗಳು,

 ಮುಕ್ತ ತಂತ್ರಾಂಶ ಪ್ರತಿಷ್ಠಾನ (ಎಪ್ಸೆಪ್) ದ ಜಿ ಎನ್ ಯು (ಗ್ನೂ) ವೆಬ್ ಸೈಟನ್ನು ಕನ್ನಡಕ್ಕೆ ಅನುವಾದಿಸುವ ಕೆಲಸವನ್ನ ಶುರು ಮಾಡಿದ್ದೇನೆ. ಗ್ನೂ ಬಗ್ಗೆ ತಿಳಿಯಲಿಚ್ಚಿಸುವ ಎಲ್ಲ ಕನ್ನಡಗರು ಇದರ ಉಪಯೊಗ ಪಡೆದು ಕೊಳ್ಳಬಹುದು.

ಜೀವನ

ಭಾರದ ಹೃದಯ
ನಿರ್ಬಲ ತೋಳುಗಳು
ಎದೆಯ ಕಟ್ಟೆಯೊಡೆದು
ಧುಮಕಲು ಕಾದಿರುವ ಹನಿಗಳು

ಎಲ್ಲಿ ಎಡವಿದೆನೋ
ಎಲ್ಲಿಗೆ ಒಡುವೆನೋ

ಮುಳುಗಿದ ಆ ಸೂರ್ಯನನ್ನರಸಿ,
ಮತ್ತೆ ಮೂಡುವನೆಂದೆನಿಸಿ,
ಸಾಗಿದೆ ದಿಕ್ಕಿಲ್ಲದ ಪಯಣ, ಜೀವನ...

ತೊಡಕು

ಇದ್ದಕಿದ್ದ ಹಾಗೆ ಬಣ್ಣದ ಪಲ್ಯ ಮಾಡೋಣ ಅಂತ ಮನಸಾಯಿತು. ಬಾಣಲಿಯಲ್ಲಿ ಒಂದಷ್ಟು ಬಣ್ಣ ಉದುರಿಸಿ, ತಟಕ್ಕು ಎಣೆ ಹಾಕಿ ಹುರಿಯೋಕೆ ಶುರು ಮಾಡಿದೆ. ಹುರಿದಾಗ ಬಣ್ಣಗಳೆಲ್ಲಾ ಒಂದೇ ರೀತಿ ಆಗಲ್ಲ. ಒಂದೊಂದು ಬಣ್ಣ ಒಂದೊಂದು ರೂಪ ರಾದ್ಧಾಂತ ಮಾಡ್ಕೋತಾವೆ. ಕೆಲವು ಮುರುಟಿಕೊಂಡರೆ ಕೆಲವು ಅರಳಕೋತಾವೆ. ಕೆಲವು ಹರಡಿಕೊಂಡರೆ ಇನ್ನು ಕೆಲವು ಸುರಟಿಕೋತಾವೆ.

ಜಿ.ಟಿ.ನಾರಾಯಣರಾವ್ ಸಂದರ್ಶನ (ಆಡಿಯೋ, ವಿಡಿಯೋ)

[:video/1|ವಿಡಿಯೋ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ]

 

ಜಿ.ಟಿ. ನಾರಾಯಣರಾವ್ ಅಧ್ಯಯನ ಕೊಠಡಿಯಲ್ಲಿ

ಸಂಪದ ತಂಡ ಹೊಸತೇನನ್ನಾದರೂ ಯೋಚಿಸಿದರೆ ಅದನ್ನು ಸಾಧ್ಯವಾಗಿಸುವುದಕ್ಕೆ ವಿಶ್ವವೇ ನಮ್ಮ ಪರವಾಗಿ ಸಂಚು ಹೂಡುತ್ತದೆ ಎನಿಸುತ್ತದೆ. ಕನ್ನಡ ವಿಜ್ಞಾನ ಸಾಹಿತ್ಯ ಇತಿಹಾಸದಲ್ಲಿ ಪ್ರಮುಖ ಸ್ಥಾನ ಪಡೆದಿರುವ ಜಿ.ಟಿ.ನಾರಾಯಣರಾವ್‌ ಅವರದ್ದೊಂದು ಪಾಡ್‌ಕ್ಯಾಸ್ಟ್‌ ಮಾಡಬೇಕು ಎಂಬ ಯೋಜನೆ ಬಹಳ ಹಳೆಯದು. ಆದರೆ ಅದು ಸಾಧ್ಯವಾಗಿರಲಿಲ್ಲ. ಈ ನಡುವೆ ಹರಿಪ್ರಸಾದ್‌ ನಾಡಿಗರು ಪಾಡ್‌ಕ್ಯಾಸ್ಟ್‌ ಜತೆ ವಿಡಿಯೋ ಕೂಡಾ ಹಾಕಬಹುದು ಎನ್ನುತ್ತಿದ್ದರು. ಇದಕ್ಕೆ ಅಗತ್ಯವಿರುವ ಕ್ಯಾಮೆರಾ, ಧ್ವನಿಗ್ರಹಣ, ಆಮೇಲೆ ಸಂಕಲನವನ್ನೆಲ್ಲಾ ಯಾರು ಮಾಡುವುದು ಎಂಬುದು ನಮ್ಮೆದುರು ಇದ್ದ ದೊಡ್ಡ ಪ್ರಶ್ನೆಯಾಗಿತ್ತು.

ಗೆಳೆಯ ಅಭಯಸಿಂಹ ವೃತ್ತಿಯ ಕಾರಣಕ್ಕೆ ಬೆಂಗಳೂರಿಗೆ ವಾಸ್ತವ್ಯವನ್ನು ಬದಲಾಯಿಸಿದ್ದೇ ನನ್ನೆದುರು ಇದ್ದ ಎಲ್ಲ ಪ್ರಶ್ನೆಗಳಿಗೂ ಉತ್ತರ ದೊರೆತಿಬಿಟ್ಟಿತು. ಅದರ ಪರಿಣಾಮವಾಗಿ ಈ ವಿಡಿಯೋ ಹಾಗೂ ಪಾಡ್‌ಕ್ಯಾಸ್ಟ್‌ ನಿಮ್ಮ ಮುಂದಿದೆ.

ಜಿ.ಟಿ.ಎನ್‌. ನನಗೆ ಪುಸ್ತಕಗಳ ಮೂಲಕ ಬಾಲ್ಯದಲ್ಲೇ ಪರಿಚಿತರು. ನಿಮ್ಮಲ್ಲನೇಕರಿಗೂ ಅವರು ಹೀಗೆ ಪರಿಚಿತರಾಗಿರಬಹುದು. ಹತ್ತು ಹನ್ನೆರಡು ವರ್ಷಗಳಿಂದ ಅವರನ್ನು ವೈಯಕ್ತಿಕವಾಗಿ ಪರಿಚಯಿಸಿಕೊಳ್ಳಲೂ ಸಾಧ್ಯವಾಯಿತು. `ನುಡಿದಂತೆ ನಡೆಯುವುದು' ಎಂಬುದಕ್ಕೆ ಸಾಕ್ಷಿಯಾಗುವಂಥ ಬದುಕು ಜಿ.ಟಿ.ಎನ್‌. ಅವರದ್ದು. ವೈಜ್ಞಾನಿಕ ಮನೋಧರ್ಮ ಎಂಬುದು ಕೇವಲ ಅವರ ಬರೆವಣಿಗೆಗೆ ಸೀಮಿತವಾಗಿರುವ ವಿಷಯವಲ್ಲ. ಅದು ಅವರ ಬದುಕೂ ಕೂಡಾ.

ಬಾಗಲಕೋಟೆಯ ಸುತ್ತ ಮುತ್ತ - ೨

ಎರಡನೇ ದಿನ ನಾವು ಹೊರಟದ್ದು ಗೋಕಾಕ ಮತ್ತು ಗೊಡಚಿನಮಲ್ಕಿ ಜಲಪಾತಗಳನ್ನು ನೋಡಲು. ಬಾಗಲಕೋಟೆಯಿಂದ ಗದ್ದನಕೇರಿ, ಕಲಾದಗಿ, ಲೋಕಾಪುರ ಮಾರ್ಗವಾಗಿ ಯರಗಟ್ಟಿಗೆ ಬಸ್ಸೊಂದರಲ್ಲಿ ಬಂದೆವು. ಯರಗಟ್ಟಿಯಿಂದ ಟೆಂಪೋದಲ್ಲಿ ಗೋಕಾಕಕ್ಕೆ ಪಯಣ. ಗೋಕಾಕ ಜಲಪಾತದಲ್ಲಿ ನೀರಿನ ಪ್ರಮಾಣ ಕಡಿಮೆಯಿತ್ತು. ನೀರಿನ ಪ್ರಮಾಣ ಕಡಿಮೆ ಇದ್ದಾಗ ಜಲಪಾತವೊಂದರ ಎತ್ತರ ಅರಿವಾಗುವುದು.

ಕನ್ನಡದ ಹೈಜಾಕ್-ಕನ್ನಡ ಪಂಡಿತರಿಂದ?

ಸಂಸ್ಕೃತ ಸುಂದರ,ಸುಲಲಿತ,ಸುಶ್ರಾವ್ಯ ಭಾಷೆ.ಆದರೆ ಕೇವಲ ಕೆಲವೇ ಪಂಡಿತರು ಸೇರಿ ವ್ಯಾಕರಣಕ್ಕೇ,ಉಚ್ಛಾರಕ್ಕೇ ಮಹತ್ವ ಕೊಟ್ಟು,ಉಳಿದವರು ಕಲಿಯದಂತೆ, ಕಲಿತವರು ಮಾತನಾಡಲು ಹಿಂಜರಿಯುವಂತೆ ಮಾಡಿದರು.

ಪ್ಯಾರಿಸ್ ಪ್ರಸಂಗ

ನನ್ನ ಮೊದಲ ನೌಕರಿ ಚೆನ್ನೈನಲ್ಲಿ ಆಗಿತ್ತು. ಈ ಘಟನೆ ನಡೆದದ್ದು ನಾನು ಚೆನ್ನೈಗೆ ಕಾಲಿಟ್ಟ ಮೊದಲ ದಿನವೇ.  ಗೆಳೆಯ ವಿಕ್ರಮ್ ಪಾಟೀಲ ಅದಾಗಲೇ ಅಲ್ಲಿ ನೌಕರಿ ಮಾಡುತ್ತಿದ್ದು, 'ಬ್ಯಾಚೆಲರ್ಸ್ ಪ್ಯಾರಡೈಸ್' ಎಂದು ಕರೆಸಿಕೊಳ್ಳುತ್ತಿದ್ದ ಟ್ರಿಪ್ಲಿಕೇನ್-ನಲ್ಲಿ ವಾಸವಾಗಿದ್ದ.