ತೊಗಲುಗೊಂಬೆಯಾಟದ ಚಾಣಾಕ್ಷ - ಬೆಳಗಲ್ಲು ವೀರಣ್ಣ
ವೃತ್ತಿ ರಂಗಭೂಮಿ ಹಾಗು ತೊಗಲುಗೊಂಬೆಯಾಟದ ಮಹಾನ್ ಕಲಾವಿದ ಶ್ರೀ ಬೆಳಗಲ್ಲು ವೀರಣ್ಣ, ರಾಷ್ಟ್ರೀಯ ಸ್ಥರದ ಪ್ರತಿಭಾಶಾಲಿ.
ಪೌರಾಣಿಕ ಕಥೆಗಳಿಗಷ್ಟೇ ಸೀಮಿತವಾಗಿದ್ದ ತೊಗಲು ಆಟದ ಪ್ರಕಾರವನ್ನು ಐತಿಹಾಸಿಕ ಮತ್ತು ಸಾಮಾಜಿಕ ವಸ್ತುಗಳ ಕಥಾ ಪ್ರಸಂಗಗಳನ್ನು ನಿರೂಪಿಸಲು ಮೊಟ್ಟ ಮೊದಲಿಗೆ ಭಾರತದಲ್ಲಿ ಬಳಸಿದ ಏಕೈಕ ಕಲಾವಿದರೆಂಬ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದಾರೆ.
ಸುಮರು ೧೯೩೬ರಲ್ಲಿ ಸಿಳ್ಳೆಕ್ಯಾತ ಜನಾಂಗದಲ್ಲಿ ಹುಟ್ಟಿದ ಈ ಕಲಾವಿದರ ಪೂರ್ವಜರು ಸಹ ಮಹಾನ್ ಕಲಾವಿದರೇ. ತಂದೆ ದೊಡ್ಡ ಹನುಮಂತಪ್ಪ ಪ್ರಸಿದ್ಧ ಪಿಟೀಲು ವಾದಕರಾಗಿದ್ದರು. ಅಲ್ಲದೆ ಬಯಲಾಟದ ಸ್ತ್ರೀ ಪಾತ್ರ ವೇಶಧಾರಿಯಾಗಿದ್ದು, ಇವರ ಅಜ್ಜ ಗಂಜಿ ಹನುಮಂತಪ್ಪ ಜ್ಯೋತಿಷ್ಯ ಮತ್ತು ರಮಲ ವಿದ್ಯಾ ಪಂಡಿತರಾಗಿದ್ದರು.
ಬಾಲಕ ವೀರಣ್ಣ ತಂದೆಯ ಬಯಲಾಟದ ವಿದ್ಯೆಯನ್ನು ಮಗೂಡಿಸಿಕೊಂದ್ರು. ಅವರ ಧ್ವನಿ ಮತ್ತು ಗಾಯನ ಸಿರಿಯನ್ನು ಮೆಚ್ಚಿಕೊಂಡಿದ್ದ ಜೋಳದರಾಶಿ ದೊಡ್ಡನಗೌಡರು ಸಿಡಿಗಿನ ಮೊಳೆ ಶ್ರೀ ವೈ.ಎಂ. ಚಂದ್ರಯ್ಯಸ್ವಾಮಿ ತಮ್ಮ ಕಂಪನಿ ನಾಟಕಗಳಿಗೆ ಹುಟ್ಟು ಕಲಾವಿದರಾದ ವೀರಣ್ಣನವರನ್ನು ಸೇರಿಸಿಕೊಂಡು ಆರಂಭದ ದಿನಗಳಲ್ಲಿ ಪ್ರೋತ್ಸಾಹಿಸಿದರು.
- Read more about ತೊಗಲುಗೊಂಬೆಯಾಟದ ಚಾಣಾಕ್ಷ - ಬೆಳಗಲ್ಲು ವೀರಣ್ಣ
- Log in or register to post comments