ಆವರಣದ ಬಗ್ಗೆ ಒಂದು ಅನೌಪಚಾರಿಕ ಪತ್ರ
ನನ್ನ ತಂದೆ ಜಿ.ಎನ್. ಅಶೋಕ ವರ್ಧನ, ಮಂಗಳೂರಿನ ಅತ್ರಿ ಬುಕ್ ಸೆಂಟರ್ ಮಾಲಿಕ. ಭೈರಪ್ಪನವರ ಆವರಣ ಪುಸ್ತಕ ಬಿಡುಗಡೆಯಾಗಿ ಭಾರೀ ವ್ಯಾಪಾರ ನಡೆಸುತ್ತಿರುವ ಸಮಯದಲ್ಲಿ ತಮ್ಮ ಅನಿಸಿಕೆಗಳನ್ನು ಬರೆದಿದ್ದಾರೆ. ಅವನ್ನು ಈ ಮೂಲಕ ನಿಮ್ಮೆಲ್ಲರ ಓದಿಗಾಗಿ ಸಂಪದಕ್ಕೆ ಸೇರಿಸುತ್ತಿದ್ದೇನೆ.
- ಅಭಯ ಸಿಂಹ.
ಪ್ರಿಯರೆ ನನಗೆ ಹೊಳೆದ ಕೆಲವು ಈಚಿನ ವಿಚಾರಗಳನ್ನು ಹೀಗೇ ಇನ್ನಷ್ಟು ಮಂದಿಯೊಂದಿಗೆ ಹಂಚಿಕೊಳ್ಳಬೇಕೆಂದು ತುಡಿತ ತೀವ್ರವಾದುದರಿಂದ ಎಂದಿನಂತೆ ಯಾವ ಔಪಚಾರಿಕ ಚೌಕಟ್ಟು, ಅಂತಿಮ ತೀರ್ಮಾನಗಳನ್ನು ಹೇರದೆ ನಿರೂಪಿಸುತ್ತೇನೆ. ಆದರೆ ಅವಶ್ಯ ನಿಮ್ಮ ಪ್ರತಿಕ್ರಿಯೆಗಳನ್ನು ಕಾದಿರುತ್ತೇನೆ. ಸಾಹಿತ್ಯಭಂಡಾರದಿಂದ ಆವರಣದ ಇಪ್ಪತ್ತೈದು ಪ್ರತಿ ಕೇಳಿದ್ದೆ. ಕನ್ನಡದಲ್ಲಿ ಎಂದೂ ಇಲ್ಲದ ಬಿಡುಗಡೆಯ ದಿನದ ಒತ್ತಡದಲ್ಲಿ ಐದನೇ ತಾರೀಕಿನಂದು ಬಂದ ಪ್ರತಿಗಳು ಮಾರಿಹೋಗುವುದನ್ನು ಕಂಡು ಆರರಂದು ಮತ್ತೆ ಐವತ್ತು ಪ್ರತಿಗಳಿಗೆ ಬೇಡಿಕೆ ಮಂಡಿಸಿದೆ. ಎಲ್ಲರಿಗೂ ತಿಳಿದಂತೆ `ಭಂಡಾರಿಗಳು' ಎರಡನೇ ಮುದ್ರಣವನ್ನು ಒಂಬತ್ತಕ್ಕೆ ಮುಗಿಸಿಕೊಟ್ಟರು.
- Read more about ಆವರಣದ ಬಗ್ಗೆ ಒಂದು ಅನೌಪಚಾರಿಕ ಪತ್ರ
- Log in or register to post comments