ಸಂಪದ ಪುಟಗಳು - ಲೇಖಕರ ಹೆಸರು ಅಥವಾ ಐಡಿ ಬಳಸಿ ಹುಡುಕಿ

Enter a comma separated list of user names.

ಹೆನ್ರಿ ಫೋರ್ಡ್

ಬಹಳಷ್ಟು ಜನರು ಸಮಸ್ಯೆಯ ಬಗ್ಗೆ ಚಿಂತಿಸುವುದರಲ್ಲೇ ಎಷ್ಟು ಸಮಯ ಕಳೆಯುತ್ತಾರೆಂದರೆ, ಆ ಸಮಸ್ಯೆಯನ್ನು ಬಗೆಹರಿಸುವುದರ ಬಗ್ಗೆ ಆಲೋಚಿಸಲು ಅವರ ಬಳಿ ಸಮಯವೇ ಉಳಿದಿರುವುದಿಲ್ಲ!

ದೇವಕಾರ - ಶಾಪಗ್ರಸ್ತ ಸ್ವರ್ಗ

ಸುಮಾರು ೩ ವರ್ಷಗಳ ಹಿಂದೆ ಉದಯವಾಣಿಯಲ್ಲಿ ದೇವಕಾರದ ಬಗ್ಗೆ ಸೀತಾರಾಮ ಭಟ್ಟರ ಲೇಖನವೊಂದು ಬಂದಿತ್ತು. ದೇವಕಾರಿಗೆ ಭೇಟಿ ನೀಡಬೇಕೆಂದು ಅಂದೇ ನಿರ್ಧರಿಸಿಯಾಗಿತ್ತು. ಉತ್ತರ ಕನ್ನಡ ಜಿಲ್ಲೆಯ ಕದ್ರಾದಿಂದ ೨೫ಕಿಮಿ ದೂರದಲ್ಲಿದೆ ದೇವಕಾರು. ಕದ್ರಾ ಜಲಾಶಯದ ಒಂದು ಮಗ್ಗುಲಲ್ಲಿ ದೇವಕಾರಿದ್ದರೆ ಮತ್ತೊಂದು ಮಗ್ಗುಲಲ್ಲಿರುವುದು ಕೈಗಾ.

ನನ್ನ ೩ ಭೇಟಿಗಳಲ್ಲಿ ಮೊದಲ ಭೇಟಿಯೇ ಅವಿಸ್ಮರಣೀಯ. ಅಕ್ಟೋಬರ್ ೨, ೨೦೦೪ರಂದು ನಾವು ದೇವಕಾರ ಕಡವು ತಲುಪಿದಾಗ ಸಂಜೆ ೫ ಆಗಿತ್ತು. ದೋಣಿಯವನಿಗೆ 'ಕೂ' ಹಾಕಿ, ಆತ ಬಂದು ನಮ್ಮನ್ನು ಕದ್ರಾ ಹಿನ್ನೀರು ದಾಟಿಸಿ, ನಾವು ದೇವಕಾರ ಹಳ್ಳಿಯೊಳಗೆ ಪ್ರವೇಶಿಸಿದಾಗ ೬.೦೦ ದಾಟಿತ್ತು. ಗೆಳೆಯ ಲಕ್ಷ್ಮೀನಾರಾಯಣನಿಗೆ ರಾತ್ರಿಯ ಊಟ ಮತ್ತು ಮಲಗುವ ಸ್ಥಳದ ಬಗ್ಗೆ ಚಿಂತೆ. ದೋಣಿಯವನಲ್ಲಿ 'ಮಧುಕರ್ ಕಳಸ್' ಬಗ್ಗೆ ಕೇಳಿದಾಗ ಆತ ಮುಂದೆ ಹೋಗಿ ಅಲ್ಲಿ ಸಿಗುತ್ತಾರೆ ಎಂದು ನಮ್ಮನ್ನು ಸಾಗಹಾಕಿದ.

ಮುಂದೆ ಮನೆಯೊಂದರಿಂದ ಹತ್ತಾರು ಜನರು ಜೋರಾಗಿ ಮಾತಾಡುವ ಸದ್ದು. ನಮ್ಮನ್ನು ನೋಡಿದ ಕೂಡಲೇ ಮಾತು ಬಂದ್. ಸುಮಾರು ೨೦ರಷ್ಟು ಕಣ್ಣುಗಳು ನಮ್ಮನ್ನೇ ದಿಟ್ಟಿಸಿ ನೋಡುತ್ತಿದ್ದವು. ಮಧುಕರ್ ಅಲ್ಲೇ ಇದ್ದರು. ಅವರ ಪರಿಚಯವಾಗಿ ನಂತರ ನಮ್ಮನ್ನೂ ಅಲ್ಲೇ ಕುತ್ಕೊಳ್ಳಿಸಿ ಮಾತುಕತೆ ಮುಂದುವರಿಯಿತು. ಮಾತುಕತೆ ನಿಧಾನವಾಗಿ ದೇವಕಾರದ ಕಡೆ ತಿರುಗಿತು.

ದೇವಕಾರಿನಲ್ಲಿ ರಸ್ತೆಗಳಿಲ್ಲ, ಅಂಗಡಿಗಳಿಲ್ಲ, ವಿದ್ಯುತ್ ಸಂಪರ್ಕವಿಲ್ಲ, ವಾಹನಗಳಿಲ್ಲ, ದೂರವಾಣಿ ಇಲ್ಲ, ಆಸ್ಪತ್ರೆಯಿಲ್ಲ ಮತ್ತು ನಾಲ್ಕನೇ ತರಗತಿಯ ನಂತರ ಶಾಲೆಯಿಲ್ಲ. ಹೆಚ್ಚಿನ ಹಳ್ಳಿಗರು ನಾಲ್ಕನೆ ತರಗತಿಯ ತನಕ ಓದಿದವರು. ಸುಮಾರು ೩೫೦ರಷ್ಟು ಜನಸಂಖ್ಯೆಯುಳ್ಳ ಪುಟ್ಟ ಗ್ರಾಮವಿದು. ಒಂದು ಕಡೆಯಿಂದ ಕದ್ರಾ ಜಲಾಶಯದ ಹಿನ್ನೀರು, ಮತ್ತೊಂದು ಕಡೆಯಿಂದ ಕೊಡಸಳ್ಳಿ ಜಲಾಶಯದ ಹಿನ್ನೀರು ಮತ್ತು ಮಗದೊಂದು ಕಡೆಯಿರುವುದೇ ಕೈಗಾ ಎಂಬ ಅಣುಭೂತ. ಯಲ್ಲಾಪುರ ತಾಲೂಕಿನ ಬಾರೆ ಸಮೀಪದಿಂದ ೩ ತಾಸುಗಳ ಕಾಲುದಾರಿಯಿದೆ ದೇವಕಾರಿಗೆ. ಇರುವ ನೇರ ಸಂಪರ್ಕವೆಂದರೆ ಇದೊಂದೆ. ಹಳ್ಳಿಗರ ಜೀವನ ಭತ್ತದ ಒಂದು ಬೆಳೆಯ ಮೇಲೆ ನಿರ್ಭರ. ಕೈಗಾದಿಂದ ವಿದ್ಯುತ್ ತಂತಿಗಳು 'ಸುಂಯ್' ಎಂದು ಶಬ್ದ ಮಾಡುತ್ತಾ ದೇವಕಾರ್ ಮೂಲಕ ಹಾದುಹೋದರೂ ಇಲ್ಲಿ ವಿದ್ಯುತ್ ಸಂಪರ್ಕ ಇಲ್ಲ!

ಇಲ್ಲಿಗಿರುವುದು ಕೂಡಾ ಒಂದೇ ಬಸ್. ರಾತ್ರಿ ೮-೮.೩೦ ರ ಸುಮಾರಿಗೆ ಕದ್ರಾದಿಂದ ಹೊರಡುವ ಈ ಬಸ್ಸು ಸುಮಾರು ೯-೯.೧೫ಕ್ಕೆ ದೇವಕಾರು ಕಡವಿನಿಂದ ಒಂದು ಕಿಮಿ ದೂರವಿರುವ ಬಸ್ ನಿಲ್ದಾಣದಲ್ಲಿ ಹಳ್ಳಿಗರನ್ನು ಇಳಿಸಿ ಹಾಗೆ ಮುಂದೆ ಕೊಡಸಳ್ಳಿಗೆ ತೆರಳಿ ಅಲ್ಲೇ ಹಾಲ್ಟ್. ಮರುದಿನ ಮುಂಜಾನೆ ೬.೧೫ರ ಸುಮಾರಿಗೆ ದೇವಕಾರು ಕಡವಿನ ಸಮೀಪದಿಂದ ಹಾದುಹೋಗುತ್ತದೆ. ಮುಂಜಾನೆಯ ಈ ಬಸ್ಸಿಗಾಗಿ ೫ ಗಂಟೆಗೇ ದೋಣಿಯವನನ್ನು ಎಬ್ಬಿಸಿ ಕರ್ರಗೆ ಭಯಾನಕವಾಗಿ ಕಾಣುವ ಕಾಳಿ ಹಿನ್ನೀರನ್ನು ದಾಟಿ ನಂತರ ೧ ಕಿಮಿ ನಡೆದು ರಸ್ತೆಯ ಬಳಿ ಬರಬೇಕು. ಈ ಬಸ್ಸು ಎಲ್ಲಾದರೂ ತಪ್ಪಿದರೆ ೨೫ಕಿಮಿ ನಡೆದೇ ಕದ್ರಾ ತಲುಪಬೇಕು ಅಥವಾ ಮರಳಿ ನಾಳೆ ಬರಬೇಕು. ಈ ಬಸ್ಸಿನಲ್ಲಿ ಕದ್ರಾಕ್ಕೆ ತೆರಳಿ ಮುಂಜಾನೆ ೧೦-೧೧ರ ಹಾಗೆ ತಮಗಿದ್ದ ಎಲ್ಲಾ ಕೆಲಸಗಳನ್ನು ಮುಗಿಸಿ ಮರಳಿ ಬರಲು ಹಳ್ಳಿಗರು ಮತ್ತೆ ರಾತ್ರಿ ೮.೩೦ರ ವರೆಗೆ ಕಾಯಬೇಕು! ರಾತ್ರಿ ಸುಮಾರು ೯.೩೦ಕ್ಕೆ ಕಡವಿನ ಬಳಿ ಆಗಮಿಸಿ ಮತ್ತದೇ ಪೆಟ್ರೊಮ್ಯಾಕ್ಸ್ ದೀಪದ ಸಹಾಯದಿಂದ ಕತ್ತಲಲ್ಲಿ ದೋಣಿಯಲ್ಲಿ ಹಿನ್ನೀರು ದಾಟುವುದು.

ಸಂಸದರಾಗಿದ್ದ ದಿವಂಗತ ವಸಂತ ಕುಮಾರ್ ಅಸ್ನೋಟಿಯವರು ದೇವಕಾರಿನ ಪುನರ್ವಸತಿಗೆ ಪ್ರಯತ್ನ ಮಾಡುತ್ತಿದ್ದರು. ಅವರ ಮರಣದ ನಂತರ ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ರಾಕೇಶ್ ಶರ್ಮರವರು ಜನರ ಪುನರ್ವಸತಿಗೆ ಯತ್ನಿಸುತ್ತಿದ್ದರು. ಇವರಿಗೆ ವರ್ಗವಾದ ನಂತರ ಯಾರಿಗೂ ದೇವಕಾರದಲ್ಲಿರುವವರ ಬಗ್ಗೆ ಆಸಕ್ತಿ ಇಲ್ಲ. ಹತ್ತು ವರ್ಷಗಳ ಮೊದಲು ಕೈಗಾ ಕೇವಲ ಒಂದು ತಾಸಿನ ನಡಿಗೆಯಾಗಿತ್ತು. ಆದರೆ ಅಣುಸ್ಥಾವರ ಬಂದ ಮೇಲೆ ಆ ದಾರಿಯಲ್ಲಿ ತಿರುಗಾಟ ನಿಷೇಧಿಸಲಾಗಿದೆ. ಕದ್ರಾಗೆ ಇದ್ದ ನೇರ ರಸ್ತೆ ಸಂಪರ್ಕವನ್ನು ಕದ್ರಾ ಆಣೆಕಟ್ಟು ನುಂಗಿಹಾಕಿತು. ಯಲ್ಲಾಪುರಕ್ಕೆ ಇದ್ದ ಸಂಪರ್ಕ ಕೊಡಸಳ್ಳಿ ಆಣೆಕಟ್ಟಿನಿಂದ ಕಡಿದುಹೋಯಿತು. ದೇವಕಾರದ ಈ ತ್ರಿಶಂಕು ಸ್ಥಿತಿಗೆ ತನ್ನ ಆಣುಸ್ಥಾವರ ಪರೋಕ್ಷವಾಗಿ ಕಾರ್‍ಅಣವಾಗಿದೆ ಎಂಬುದನ್ನು ಅರಿತಿರುವ ಕೈಗಾ ಅಣುಸ್ಥಾವರ ಸಂಸ್ಥೆ ಒಂದಷ್ಟು ಮೊತ್ತವನ್ನು ಜಿಲ್ಲಾಧಿಕಾರಿ ಕಛೇರಿಯಲ್ಲಿ ಇಡುಗಂಟು ರೂಪದಲ್ಲಿ, ಪುನರ್ವಸತಿ ಸಮಯದಲ್ಲಿ ಬಳಸುವ ಸಲುವಾಗಿ ಇರಿಸಿದೆ. ಆದರೆ ಎರಡು ಆಣೆಕಟ್ಟುಗಳನ್ನು ನಿರ್ಮಿಸಿ ದೇವಕಾರಿನ ಇಂದಿನ ಸ್ಥಿತಿಗೆ ಪ್ರತ್ಯಕ್ಷವಾಗಿ ಕಾರಣವಾಗಿರುವ ಕರ್ನಾಟಕ ವಿದ್ಯುತ್ ನಿಗಮ ಮಾತ್ರ ತೆಪ್ಪಗೆ ಕುಳಿತಿದೆ. ಇರುವ ಒಂದೇ ಬಸ್ಸನ್ನು ರದ್ದುಮಾಡಲು ಕ.ರಾ.ರ.ಸಾ.ಸಂ ಕಾರಣವನ್ನು ಹುಡುಕುತ್ತಿದೆ.

ಹಬ್ಬಗಳ ಮೂಲಕ ಪಾಡ್ಯ, ಬಿದಿಗೆ, ತದಿಗೆ... ಬಾಯಿಪಾಠ

     ಚಿಕ್ಕಂದಿನಲ್ಲಿ ನಾವೆಲ್ಲ "ಪಾಡ್ಯ, ಬಿದಿಗೆ, ತದಿಗೆ.....ಹುಣ್ಣಿಮೆ/ಅಮಾವಾಸ್ಯೆ" ಅಂತ ಹದಿನೈದು ದಿನಗಳ ಬಾಯಿಪಾಠ ಮಾಡಿರುತ್ತೀವಿ ಅಲ್ಲವೇ? ಮನೆಯಲ್ಲಿ ಅಜ್ಜ ಅಥವಾ ಅಜ್ಜಿ ಇದ್ದರಂತೂ, ಈ ಬಾಯಿಪಾಠಗಳು ಬಹುತೇಕ "ಕಂಪಲ್ಸರಿ"ಯೇ ಬಿಡಿ! ಸುಮ್ಮನೆ ಪಾಡ್ಯ, ಬಿದಿಗೆ ಅಂತ ಬಾಯಿಪಾಠ ಮಾಡಿಸುವುದು ಒಂದು ರೂಢಿಯಾದರೆ, ಪ್ರತಿ ತಿಥಿ(ದಿನ)ಗೂ ಒಂದು ಹಬ್ಬವನ್ನು ತಳಕು ಹಾಕಿ ಅದರ ಮೂಲಕ ಬಾಯಿಪಾಠದಲ್ಲಿ ಇನ್ನಷ್ಟು ಆಸಕ್ತಿ ಚಿಗುರುವಂತೆ ಮಾಡುವುದು ಇನ್ನೊಂದು ಪದ್ಧತಿ. ನಮ್ಮಲ್ಲಿ ಹಬ್ಬಗಳಿಗೇನು ಕೊರತೆ ಹೇಳಿ? ಅದರಲ್ಲಿ ಪ್ರಸಿದ್ಧವಾದ ಹಬ್ಬಗಳನ್ನು ಆಯಾ ದಿನಕ್ಕೆ ಜೋಡಿಸಿ ಬಾಯಿಪಾಠದಲ್ಲಿ ಅಳವಡಿಸಿರುತ್ತಾರೆ.

ಹನ್ನೆರಡು ಹುಣ್ಣಿಮೆಗಳು: ದಯವಿಟ್ಟು ವಿವರ ತಿಳಿಸಿ.

ಕನ್ನಡದಲ್ಲಿ ವರ್ಷದ ಪ್ರತಿಯೊಂದು ಹುಣ್ಣಿಮೆಗೂ ಬೇರೆ ಬೇರೆ ಹೆಸರುಗಳಿವೆ. ಈ ಹೆಸರುಗಳು ಕನ್ನಡದ ಮನಸ್ಸು ಹುಣ್ಣಿಮೆಯನ್ನು ಯಾವ ಬಗೆಯ ಶ್ರೀಮಂತಿಕೆಯಲ್ಲಿ ಗ್ರಹಿಸಿಕೊಂಡಿದೆ ಅನ್ನುವುದನ್ನೂ ಸೂಚಿಸುವಂತಿದೆ.

ಜನವರಿ-ಬನದ ಹುಣ್ಣಿಮೆ
ಫೆಬ್ರವರಿ-ಭಾರತ ಹುಣ್ಣಿಮೆ
ಮಾರ್ಚ್-ಹೋಳಿ ಹುಣ್ಣಿಮೆ
ಏಪ್ರಿಲ್-ದವನದ ಹುಣ್ಣಿಮೆ
ಮೇ-ಆಗಿ ಹುಣ್ಣಿಮೆ ಮತ್ತು (ಅಧಿಕ) ಕಾರಹುಣ್ಣಿಮೆ
ಜೂನ್- ಕಾರ ಹುಣ್ಣಿಮೆ
ಜುಲೈ-ಕಡ್ಲಿ ಕಡುಬು ಹುಣ್ಣಿಮೆ [ಗುರುಪೂರ್ಣಿಮಾ]
ಆಗಸ್ಟ್-ನೂಲ ಹುಣ್ಣಿಮೆ
ಸೆಪ್ಟೆಂಬರ್-ಅನಂತ ಹುಣ್ಣಿಮೆ
ಅಕ್ಟೋಬರ್-ಸೀಗೆ ಹುಣ್ಣಿಮೆ
ನವೆಂಬರ್-ಗೌರಿ ಹುಣ್ಣಿಮೆ
ಡಿಸೆಂಬರ್-ಹೊಸ್ತಿಲ ಹುಣ್ಣಿಮೆ

ಷೇಕ್ಸ್‌ಪಿಯರ್

ಪ್ರತಿಯೊಬ್ಬರೂ ತಮ್ಮ ಮೂಗಿನ ನೇರಕ್ಕೆ ಇನ್ನೊಬ್ಬರ ಸರಿ-ತಪ್ಪುಗಳನ್ನು ತೂಗಿ ನೋಡಿ ಚಾವಟಿಯಿಂದ ಬಾರಿಸಲು ಪ್ರಾರಂಭಿಸಿದಲ್ಲಿ, ಜಗತ್ತಿನಲ್ಲಿ ಪ್ರತಿ ವ್ಯಕ್ತಿಯೂ ಇನ್ನೊಬ್ಬನಿಂದ ಚಾಟಿಯೇಟು ತಿನ್ನಲೇ ಬೇಕಾಗುತ್ತದೆ!

ಮಂಕುತಿಮ್ಮನ ಕಗ್ಗ

ತಿದ್ದಿಕೊಳೊ ನಿನ್ನ ನೀಂ; ಜಗವ ತಿದ್ದುವುದಿರಲಿ|
ತಿದ್ದಿಕೆಗಮೊಂದು ಮಿತಿಯುಂಟು ಮರೆಯದಿರು||
ಉದ್ದ ನೀಂ ಬೆರಳನಿತು ಬೆಳೆದೀಯೆ ಸಾಮಿಂದೆ|
ಸ್ಪರ್ಧಿಯೆ ತ್ರಿವಿಕ್ರಮಗೆ? - ಮಂಕುತಿಮ್ಮ||