ಸಂಪದ ಪುಟಗಳು - ಲೇಖಕರ ಹೆಸರು ಅಥವಾ ಐಡಿ ಬಳಸಿ ಹುಡುಕಿ

Enter a comma separated list of user names.

ರಾಷ್ಟ್ರಪತಿ ಆಡಳಿತವೋ ಅಥವಾ ರಾಷ್ಟ್ರಪತ್ನಿ ಆಡಳಿತವೋ?

ಈಗ ಕರ್ನಾಟಕದಲ್ಲಿ ಹೇರಿರುವುದು, ರಾಷ್ಟ್ರಪತಿ ಆಡಳಿತವೋ ಅಥವಾ ರಾಷ್ಟ್ರಪತ್ನಿ ಆಡಳಿತವೋ? ;)

ಮಹಿಳೆಯೊಬ್ಬರು President Post ಅಲಂಕರಿಸಿದ್ದಾರಲ್ಲ?
ರಾಷ್ಟ್ರಪತ್ನಿ ಆಡಳಿತವಾದರೆ, ರಾಷ್ಟ್ರಪತಿ ಯಾರು?? :)

'ರಾಷ್ಟ್ರಪತಿ' ಎಂಬ ಪದ ಪುಲ್ಲಿಂಗಕ್ಕೇಕೆ ಅಂಟಿದೆ?

President ಎಂಬ ಪದಕ್ಕೆ ಲಿಂಗ ಭೇದವಿಲ್ಲ ಎಂಬುದು ನನ್ನ ಅನಿಸಿಕೆ.

--ಶ್ರೀ

ಬೆಂಗಳೂರಿನ ನೆಲ

ಬೆಂಗಳೂರಿನ ದಾರಿಯಲ್ಲಿ ಸಿಕ್ಕುವ ಸಿಂಗಪುರವೋ, ಕೌಲಾಲಂಪುರವೋ ಬಂದು ಮುಟ್ಟುವವರೆಗೂ ಎಲ್ಲಾ ಯಾಂತ್ರಿಕವಾಗಿ ಆಗತ್ತೆ. ಸಿಡ್ನಿಯಲ್ಲಿ ಬ್ಯಾಗೇಜ್ ಚಕಿನ್, ಸಿಂಗಪುರದಲ್ಲಿ ಇಳಿದು, ಏರ್ಪೋರ್ಟ್‌ ಸುತ್ತಿ, ಮತ್ತೆ ವಿಮಾನ ಹತ್ತುವುದು ಎಲ್ಲ. ಆದರೆ ಅಲ್ಲಿಂದ ಮತ್ತೆ ವಿಮಾನದಲ್ಲಿ ಹಾರುವಾಗ, ನೆಲ ನನ್ನಿಂದ ದೂರ ಸರಿಯುವಾಗ ಅಲ್ಲಿಯವರೆಗಿದ್ದ ಯಾಂತ್ರಿಕತೆ ಮಾಯವಾಗಿ ಒಂದು ರೀತಿಯ ಮಾಂತ್ರಿಕತೆ, ಭಾವುಕತೆ ಆವರಿಸಿಕೊಳ್ಳುವುದು ಪ್ರತಿ ಸಲದ ಅನುಭವ.

ಈ ಸಲವೂ ಸಿಂಗಪುರದಿಂದ ವಿಮಾನ ಮೇಲೇರುತ್ತಿದ್ದಂತೆ ವಿಚಿತ್ರವಾಗಿ ಕವಿಯುವ ಈ ಭಾವ ಏನು ಅಂತ ಪ್ರತಿಸಲದಂತೆ ನೋಡಿಕೊಳ್ಳುತ್ತೇನೆ. ನಾನೀಗ ಇಲ್ಲಿ ಬಿಡುತ್ತಿರುವ ನೆಲವನ್ನ ಮತ್ತೆ ಮುಟ್ಟುವುದು ಇಂಡಿಯಾದಲ್ಲಿ, ನನ್ನ ಪ್ರೀತಿಯ ಬೆಂಗಳೂರಲ್ಲಿ ಅನ್ನುವುದು ದಟ್ಟವಾಗಿ ಸುತ್ತಿಕೊಂಡಿತು. ಎರಡೆರಡು ವರ್ಷಕ್ಕೊಮ್ಮೆ ಬರುತ್ತಿದ್ದರೂ ಇದೇನು ಹೀಗೆ ಅಂತ ತಿಳಿಯುವುದಿಲ್ಲ.

ನವರಾತ್ರಿಯ ಐದನೆಯ ದಿನ

ಇವತ್ತು ನವರಾತ್ರಿಯ ಐದನೆಯ ದಿನ. ಇಂದು ಸಂಜೆ ತಿರುವನಂತಪುರದ ಪದ್ಮನಾಭಸ್ವಾಮಿ ದೇವಾಲಯದ ಪಕ್ಕದಲ್ಲಿರುವ ನವರಾತ್ರಿ ಮಂಡಪದಲ್ಲಿ ಪ್ರಮುಖವಾಗಿ ವಿಸ್ತರಿಸುವುದು ಭೈರವಿ ರಾಗ. ಮತ್ತೆ ಅದರಲ್ಲಿ, ಸ್ವಾತಿ ತಿರುನಾಳ್ ಮಹಾರಾಜರ ಜನನೀ ಮಾಮವ ಮೇಯೆ ಎಂಬ ಕೃತಿಯನ್ನು ಹಾಡಲಾಗುತ್ತೆ. ಈ ರಚನೆಯನ್ನು ನೀವು ಮ್ಯೂಸಿಕ್ ಇಂಡಿಯಾ ತಾಣದಲ್ಲಿ, ಬಾಂಬೇ ಸಹೋದರಿಯರ ಧ್ವನಿಯಲ್ಲಿ, ಇಲ್ಲಿ ಕ್ಲಿಕ್ಕಿಸಿ ಕೇಳಬಹುದು.

ಭೈರವಿ ರಾಗ ಕರ್ನಾಟಕ ಸಂಗೀತಕ್ಕೆ ಸೀಮಿತವಾದ ರಾಗ - ಇದಕ್ಕೆ ಹತ್ತಿರವಾದ ರಾಗ, ಹಿಂದೂಸ್ಗಾನಿ ಸಂಗೀತದಲ್ಲಾಗಲಿ, ಅಥವಾ ಪ್ರಪಂಚದ ಬೇರೆ ಯಾವುದೇ ಸಂಗೀತದಲ್ಲೂ ಇದನ್ನು ಹೋಲುವ ರಾಗವಿಲ್ಲ. ನೀವು ತರಾಸು ಅವರ ಹಂಸಗೀತೆಯನ್ನು ಓದಿದ್ದರೆ, ಅದರ ಮೇಲೆ ಆಧಾರಿತವಾದ ಚಲನಚಿತ್ರವನ್ನು ನೋಡಿದ್ದರೆ, ಅದರಲ್ಲಿ ಬರುವ ಭೈರವಿ ವೆಂಕಟಸುಬ್ಬಯ್ಯನ ಪಾತ್ರ ನಿಮಗೆ ತಿಳಿದೇ ಇರುತ್ತೆ. ಇಲ್ಲಿ ಒಂದು ವಿಷಯವನ್ನು ಹೇಳಿಬಿಡುತ್ತೇನೆ. ಈ ಭೈರವಿ ವೆಂಕಟಸುಬ್ಬಯ್ಯ ತರಾಸು ಅವರ್ ಕಲ್ಪನೆಯ ಪಾತ್ರವೇ ಹೊರತು ಚಾರಿತ್ರಿಕ ವ್ಯಕ್ತಿಯಲ್ಲ.

ಪೋನ್ ಮುಂದೆ ಬಾಯಿಬಿಟ್ಟರೆ ಬಣ್ನಗೇಡು!

ವಿಜಯಕರ್ನಾಟಕ

ವೆಲ್‍ನೆಸ್ ಇಂಡಿಕೇಟರ್ ಸೆಲ್‍ಪೋನ್ ಎಂದರೇನು ಓದಿ..ಮೊಬೈಲ್ ನಿಮ್ಮ ಆರೋಗ್ಯದ ಬಗ್ಗೆ ಗಮನ ಕೋಡಲಿದೆಯಂತೆ.ಹೇಗೆ?

ಸುಧೀಂದ್ರ ಹಾಲ್ದೊಡ್ಡೇರಿಯವರ ಲೇಖನ

'ಪನ್‌'ಚವಾರ್ಷಿಕಯೋಜನೆ ಸಮಾಪ್ತಿ;ವಿಚಿತ್ರಾನ್ನಕ್ಕೆ ಶುಭಂ

``ಗಜಮುಖನೆ ಗಣಪತಿಯೆ ನಿನಗೆ ಒಂದಾಣೆ... ಬಾಕಿ ಉಳಿದ ನಾಲ್ಕಾಣೆ ನಾಳೆ ಕೊಡ್ತೇನೆ..." -ಈ ಸಾಲುಗಳೊಂದಿಗೆ ಆರಂಭವಾದದ್ದು ವಿಚಿತ್ರಾನ್ನ ಅಂಕಣದ ಪ್ರಪ್ರಥಮ ಸಂಚಿಕೆ. ಅದು ಪ್ರಕಟವಾದದ್ದು 2002ರ ಅಕ್ಟೋಬರ್ 15ರಂದು ಮಂಗಳವಾರ.

ಮಳೆ ನಿಂತರು ಮರದ ಹನಿ ಬಿಡದು - 2

ಹಾಗೆ ನೊಡಿದರೆ ರಾಮನ ನಿಖರವಾದ ವಯಸ್ಸು ಎಸ್ಟೆಂಬುದು ಇಡಿ ಊರಿಗೆ ಗೊತ್ತಿರದ ವಿಶಯ.ಎಂಬತ್ತು ಧಾಟಿದೆ ಯೆಂದು ಎಲ್ಲರು ಎಧೆ ತಟ್ಟಿ ಹೇಳಿದರು, ಅದರ ಮೇಲಿನ ಅಂಕಿ ಅಂಶಗಳು ಅವರವರ ಅನುಭವಕ್ಕೆ ಬಿಟ್ಟಿದ್ದು.ಯಾರನ್ನಾದರು ಕೆಳಿದರೆ "ನೋಡು ,ನಿಮ್ಮಪ್ಪನಿಗೆ ಈಗ 56,ನಿಮ್ಮ ಅಪ್ಪನಿಗೆ ಆಡಿಸಿ ಇಜು ಕಲಿಸಿದ್ದನೆಂದರೆ ಅವನಿಗೆ ಆಗ 20 ಆದರು ಇರಬೆಕು,ನಿಮ್ಮ ಅಪ್ಪ ಎನು , ನಿಮ್ಮ ದೊಡ್ಡ

ಪದಬಂಧ

ಪದಬಂಧ
=====

ಪದಗಳ ಆಟವೇ
ಪದಬಂಧ
ಎನಿತೋ ವರುಷದ
ಸಂಬಂಧ

ಸುಳಿವಿನ ರಾಶಿಯು
ಗೋಜಲೋ ಗೊಜು
ಗಾಳಕೆ ಸಿಕ್ಕರೆ
ಮೋಜೋ ಮೊಜು

ಪದಗಳು ಸಿಗದಿರೆ
ಬಲು ತಿಕ್ಕಾಟ
ಸಿಕ್ಕರೆ ಇವುಗಳು
ಇದೆ ಗೆದ್ದಾಟ

ಮುಖವಾಡದ ಪದಗಳ
ಅಟ್ಟಹಾಸ!
ಕಳಚಿರೆ ಇವನು
ಅರೆ! ಸುಹಾಸ!

ತಿಣುಕಿದೆ ಏಕೋ?
ಅಯ್ಯೋ ಪೆದ್ದೆ!
ಎಲ್ಲವೂ ಸಿಕ್ಕರೆ
ನೀನೇ ಗೆದ್ದೆ

ಆಡಿವೆ ಏಕೆ,
ಕಣ್ಣು ಮುಚ್ಚಾಲೆ?
ಬರದಿಹೆ ಪ್ರೀತಿಯ

ನವರಾತ್ರಿಯ ನಾಲ್ಕನೇ ದಿನ

ಇವತ್ತು ದಸರಾ ಹಬ್ಬದ ನಾಲ್ಕನೇ ದಿನ. ಈಗಾಗಲೇ ಮೊದಲ ಮೂರು ದಿನಗಳಲ್ಲಿ, ತ್ಯಾಗರಾಜರ, ಮುತ್ತಯ್ಯಭಾಗವತರ ಮತ್ತು ಶಾಮಾಶಾಸ್ತ್ರಿ ಅವರ ಒಂದೊಂದು ರಚನೆಗಳ ಬಗ್ಗೆ ಬರೆದಿದ್ದೆ. ಕೇಳಿಲ್ಲದವರು ಕೇಳಿ ಆನಂದಿಸಿ.

ನವರಾತ್ರಿಯ ನಾಲ್ಕನೇ ದಿನ ತಿರುವನಂತಪುರದ ನವರಾತ್ರಿ ಮಂಡಪದಲ್ಲಿ ಹಾಡುವ ಸ್ವಾತಿ ತಿರುನಾಳರ ಕೃತಿ ತೋಡಿ ರಾಗದಲ್ಲ್ರಿರುವ ಭಾರತಿ ಮಾಮವ ಎಂಬ ರಚನೆ. ಅಂದಹಾಗೆ, ಸಂಗೀತದ ಸೊಗಸು ಬರೀ ಮಾತಾಡಿದಾಗ- ಬರೆದಾಗ ಸಿಗುವುದಿಲ್ಲವಲ್ಲ? ಹಾಗಾಗಿ, ನೆನ್ನೆ ಇಲ್ಲಿ ನಡೆದ ಸಂಗೀತ ಕಚೇರಿಗೆ ಹೋಗುವ ಅವಕಾಶ ಸಿಕ್ಕಿತು ನನಗೆ- ಹಾಗಾಗಿ ನನ್ನ ಬರೀ ಮಾತುಗಳಲ್ಲೂ ಸ್ವಲ್ಪ ಅರ್ಥ ಕೂಡಿದಂತಾಯಿತು ನನಗೆ. ನನ್ನ ಬಾಲ್ಯದಲ್ಲಿ, ನನ್ನ ಊರಿನಲ್ಲಿ ನಡೆಯುತ್ತಿದ್ದ ನವರಾತ್ರಿ-ಗಣೇಶೋತ್ಸವದ ನೆನಪು ಮರುಕಳಿಸಿತು.

ಇವತ್ತು ನಾನು ವಿವರಿಸಹೊರಡಲಿರುವ ದೇವೀ ಪರವಾದ ಕೃತಿ ೨೦ನೇ ಶತಮಾನದಲ್ಲಿ ಬಂದ ಒಬ್ಬ ಮಹಾನ್ ಕಲಾವಿದರ ರಚನೆ. ಇವರು ಸಂಗೀತಗಾರರಷ್ಟೇ ಅಲ್ಲದೆ, ತಮಿಳು ಸಿನಿಮಾ ರಂಗದಲ್ಲೂ ಹೆಸರು ಮಾಡಿದ್ದವರು. ಇವರೇ ಜಿ.ಎನ್.ಬಿ. ಎಂಬ ಹೆಸರಿನಲ್ಲೇ ಚಿರಪರಿಚಿತರಾದ ಜಿ.ಎನ್.ಬಾಲಸುಬ್ರಮಣಿಯನ್.

ಜಿ.ಎನ್.ಬಿ. (೧೯೧೦- ೧೯೬೫) ಸಂಗೀತ ರಂಗಕ್ಕೆ ಪರಿಚಿತರಾಗಿದ್ದು ಒಂದು ವಿಶಿಷ್ಟ ಸಂದರ್ಭದಲ್ಲಂತೆ. ಒಮ್ಮೆ, ಯಾರೋ ವಿದ್ವಾಸರು ಒಂದು ಕಚೇರಿಗೆ ಬರಲಾಗಲಿಲ್ಲ. ಆಗ, ಆ ಸಮಯದಲ್ಲಿ ಹೈಸ್ಕೂಲ್ ವಿದ್ಯಾರ್ಥಿಯಾಗಿದ್ದ ಜಿ.ಎನ್.ಬಿ. ಅವರನ್ನು, ಅವರ ಸ್ಥಾನ ತುಂಬಲು ಕಳಿಸಲಾಯಿತಂತೆ. ಅಂದು ತಮ್ಮ ಶೈಲಿಯಿಂದ ಇವರು ಎಲ್ಲ ರಸಿಕರ ಮನಗೆದ್ದುಬಿಟ್ಟ ಜಿ.ಎನ್.ಬಿ. ಮತ್ತೆ ಹಿಂತಿರುಗಿ ನೋಡಲಿಲ್ಲ.

ಕೇವಲ ಐವತ್ತೈದು ವರ್ಷದ ಕಿರಿಯ ವಯಸ್ಸಿನಲ್ಲೇ ರಸಿಕರು ಇವರನ್ನು ಕಳೆದುಕೊಳ್ಳಬೇಕಾಯಿತು. ಆದರೆ, ಇವರ ಹಲವಾರು ಶಿಷ್ಯರು ಇವರ ಪರಂಪರೆಯನ್ನು ಮುಂದುವರೆಸಿಕೊಂಡುಹೋಗಿದ್ದಾರೆ. ಪ್ರಸಿದ್ಧ ಸಂಗೀತಗಾರರಾದ ಎಮ್.ಎಲ್.ವಸಂತಕುಮಾರಿ, ತ್ರಿಶೂರು ರಾಮಚಂದ್ರನ್, ರಾಧಾ-ಜಯಲಕ್ಷ್ಮಿ ಇವರೆಲ್ಲ ಜಿ.ಎನ್.ಬಿ. ಪರಂಪರೆಯವರೇ.

ಜಿ.ಎನ್.ಬಿ. ಅವರು ಸುಮಾರು ಐವತ್ತಕ್ಕೂ ಹೆಚ್ಚು ರಚನೆಗಳನ್ನು ಸಂಸ್ಕೃತ, ತೆಲುಗು ಹಾಗೂ ತಮಿಳು ಭಾಷೆಯಲ್ಲಿ ರಚಿಸಿದ್ದಾರೆ. ಹಿಂದೆ ಕೇಳಿಲ್ಲದ ಹೊಸ ರಾಗಗಳನ್ನು ಸೃಷ್ಟಿಸಿ, ಅದರಲ್ಲಿ ಕೃತಿಗಳನ್ನು ಮಾಡಿದ್ದಾರೆ. ಆದರೆ, ಇವರು ತಮ್ಮ ಕಚೇರಿಗಳಲ್ಲಿ ತಮ್ಮ ಕೃತಿಗಳನ್ನು ಹೆಚ್ಚಾಗಿ ಹಾಡುತ್ತಿರಲಿಲ್ಲ ಎಂದು ಕೇಳಿದ್ದೇನೆ.