ಸಂಪದ ಪುಟಗಳು - ಲೇಖಕರ ಹೆಸರು ಅಥವಾ ಐಡಿ ಬಳಸಿ ಹುಡುಕಿ

Enter a comma separated list of user names.

ಆಧುನಿಕ ಪ್ರಜಾಪ್ರಭುತ್ವದಲ್ಲಿ ಮಠಗಳು

ಈ ವಿಷಯ ಬರೆಯಲು ಹೊರಟಾಗ ನನಗೆ ಬಂದ ಮೊದಲ ಸಂಶಯ ಇದನ್ನು ಯಾವ ವರ್ಗದಲ್ಲಿ ಸೇರಿಸಬೇಕು ಎಂಬುದು. ರಾಜಕೀಯವೇ ಸೂಕ್ತ ಎಂದು ಅದಕ್ಕೆ ಸೇರಿಸಿದ್ದೇನೆ. ಇತ್ತೀಚೆಗೆ ವಿಜಯ ಕರ್ನಾಟಕ ಪತ್ರಿಕೆಯಲ್ಲಿ ವಿಶ್ವೇಶ್ವರ ಭಟ್ ತಮ್ಮ ನೂರೆಂಟು ಮಾತು ಅಂಕಣದಲ್ಲಿ ಕರ್ನಾಟಕದ ಮಠಗಳ ಬಗ್ಗೆ ಬರೆದಿದ್ದರು. ಈ ಮಠಗಳು ಶಿಕ್ಷಣ ಕ್ಷೇತ್ರಕ್ಕೆ ನೀಡುತ್ತಿರುವ ಕಾಣಿಕೆಗಳು ಇತ್ಯಾದಿಗಳನ್ನು ವಿವರಿಸಿದ್ದ ಲೇಖನದಲ್ಲಿ ಮಠಗಳ ಸಾಧನೆಗಳನ್ನು ಪಟ್ಟಿ ಮಾಡಲಾಗಿತ್ತು.

ಈ ಲೇಖನ ಓದಿದಾಗ ಕೆಲಕಾಲದ ಹಿಂದೆ ನಮ್ಮ ಕಾಲೇಜಿನಲ್ಲಿ ಉಪನ್ಯಾಸ ನೀಡಿದ್ದ ಎ.ನಾರಾಯಣ ಅವರು ಎತ್ತಿದ್ದ ಪ್ರಶ್ನೆಯೊಂದು ನೆನಪಾಯಿತು. ಆಧುನಿಕ ಪ್ರಜಾಪ್ರಭುತ್ವದಲ್ಲಿ ಮಠಗಳಿಗಿರುವ ಇರುವ ಸ್ಥಾನ ಯಾವುದು? ಇವುಗಳನ್ನು ಎನ್.ಜಿ.ಓಗಳು ಎಂದು ಕರೆಯುವಂತೆ ಇಲ್ಲ. ಶಿಕ್ಷಣ ಸಂಸ್ಥೆಗಳೆಂದು ಹೇಳಲೂ ಸಾಧ್ಯವಿಲ್ಲ. ಇವು ರಾಜಕೀಯ ಪಕ್ಷಗಳೂ ಅಲ್ಲ. ಧರ್ಮ ಪ್ರಸಾರವನ್ನು ಮಾಡುವ ಸಂಸ್ಥೆಗಳೆಂದು ವರ್ಗೀಕರಿಸಲೂ ಸಾಧ್ಯವಿಲ್ಲ. ಏಕೆಂದರೆ ಕರ್ನಾಟಕದಲ್ಲಿ ಇರುವ ಎಲ್ಲಾ ಪ್ರಭಾವೀ ಮಠಗಳೂ ರಾಜಕೀಯದಲ್ಲೂ ತಮ್ಮ ಪ್ರಭಾವವನ್ನು ಉಳಿಸಿಕೊಂಡಿವೆ. ಕೆಲವು ಮಠಗಳಂತೂ ಅಭ್ಯರ್ಥಿಗಳ ಸೋಲು ಗೆಲುವನ್ನು ನಿರ್ಧರಿಸುವಷ್ಟು ಪ್ರಬಲ ಎನ್ನಲಾಗುತ್ತಿದೆ. ಹಾಗಿದ್ದರೆ ಈ ಮಠಗಳು ಏನು?

ಡೆವಲಪ್ ಮೆಂಟ್ ಸ್ಟಡೀಸ್ ಎಂದು ಕರೆಯುವ ಅಧ್ಯಯನ ವಿಭಾಗದಲ್ಲಿ ಈಗ ರಿಲಿಜನ್ ಮತ್ತು ಡೆವಲಪ್ ಮೆಂಟ್ ಗಳ ಮಧ್ಯೆ ಇರುವ ಸಂಬಂಧದ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಆಧುನಿಕ ಪ್ರಜಾಪ್ರಭುತ್ವದಲ್ಲಿ ಮಠಗಳ ಸ್ಥಾನ ಏನು ಎಂಬುದನ್ನು ನಿರ್ಧರಿಸಬೇಕಾದ ಅಗತ್ಯವಿದೆ. ಮಠಗಳು ಶಿಕ್ಷಣ ಕ್ಷೇತ್ರದಲ್ಲಿ ಬಹಳ ಕೆಲಸ ಮಾಡುತ್ತಿವೆ ಎಂಬುದು ನಿಜ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಈ ಕೆಲಸ ಮಾಡಬೇಕಿರುವುದು ಸರಕಾರ. ಸರಕಾರ ಅದನ್ನು ಮಾಡದೇ ಇದ್ದರೆ ಅದು ಅದರ ವೈಫಲ್ಯವನ್ನು ಸೂಚಿಸುತ್ತದೆ. ಈ ವೈಫಲ್ಯವನ್ನು ಸರಿಪಡಿಸುವಂತೆ ಒತ್ತಡ ಹೇರಬೇಕಾದ ಸಮುದಾಯಕ್ಕೆ ಚಾರಿಟಿಯ ಮೂಲಕ ಆ ಸವಲತ್ತನ್ನು ಒದಗಿಸುವುದು ಪ್ರಜಾಪ್ರಭುತ್ವದ ಅಡಿಗಲ್ಲನ್ನೇ ಸಡಿಲಗೊಳಿಸುವುದಿಲ್ಲವೇ?

ಕನ್ನಡಕ್ಕೆ ಬಂದ ಕಿಟ್ಟೆಲ್ ಸಂಪತ್ತು

Rev Ferdinand Kittelರೆವೆರೆಂಡ್ ಎಫ್. ಕಿಟ್ಟೆಲ್ ರ ಕನ್ನಡ- ಇಂಗ್ಲೀಷ್ ನಿಘಂಟಿನಷ್ಟು ಅಪೂರ್ವವಾದದ್ದು ಕನ್ನಡದಲ್ಲಿ ಇನ್ನೊಂದಿಲ್ಲ. ಅದರ ಗಾತ್ರ, ಘನತೆ, ಸಂಗ್ರಹ, ಪದ್ಧತಿಗಳು ಅನನ್ಯವಾದವುಗಳು. ಅದರ ಪ್ರಕಟಣೆ ನೂರುವರ್ಷದ ಮೇಲಾದಾಗ್ಯೂ ಇಂದಿನ ಸಂದರ್ಭದಲ್ಲೂ ಕಿಟೆಲ್ ರು ಕನ್ನಡ ಸಾರಸ್ವತಕ್ಕೆ ಸಲ್ಲಿಸಿದ ಅಮೋಘ ಸೇವೆಯ ಸ್ಮರಣೆ ಮಾಡುವುದು ಔಚಿತ್ಯಪೂರ್ಣವಾಗಿದೆ.

ಅವರು ಕ್ರೈಸ್ತ ಮತ ಪ್ರಚಾರಕ್ಕಾಗಿಯೇ ೧೮೫೩ ರಲ್ಲಿ ಬಾರತಕ್ಕೆ ಬಂದವರು. ಮೊದಲು ಧಾರವಾಡ, ಮಂಗಳೂರು, ಹುಬ್ಬಳ್ಳಿ ಯಲ್ಲಿ ಮತಪ್ರಚಾರದ ಕಾರ್ಯ ನಡೆಸಿದರು. ಭಾಷಾ ಪ್ರಚಾರಕ್ಕೆ ಮುಖ್ಯವಾದದ್ದು ಅಲ್ಲಿನ ದೇಸಿ ಭಾಷೆ. ಅದಕ್ಕಾಗಿ ಅವರು ಎಲ್ಲಕ್ಕಿಂತ ಮೊದಲೇ ಕನ್ನಡಭಾಷೆಯನ್ನು ಕಲಿತರು. ಧರ್ಮಪ್ರಚಾರವನ್ನು ಸ್ವಲ್ಪ ಕಾಲ ಬದಿಗಿಟ್ಟು ದೇಸಿ ಭಾಷೆ, ಸಾಹಿತ್ಯ, ಸಂಸ್ಕೃತಿ ಇತ್ಯಾದಿಗಳನ್ನು ಕಲಿತಿದ್ದಲ್ಲದೆ ಅದರಲ್ಲಿ ಪ್ರಾವೀಣ್ಯತೆಯನ್ನೂ ಪಡೆದರೆಂಬುದು ಇಲ್ಲಿ ನಾವು ಗಮನಿಸಬೇಕಾದ ಸಂಗತಿ.

ರೆವರೆಂಡ್ .ಕಿಟ್ಟಲ್ ಅದರಲ್ಲಿ ಅಗ್ರೇಸರು ಎಂದು ಖಂಡಿತವಾಗಿ ಹೇಳಬಹುದು. ಕಿಟ್ಟೆಲ್ ರು ಜರ್ಮನಿಯ 'ಹ್ಯಾನ್ ವರ್ 'ನಲ್ಲಿ ೧೮೩೨ ನೆಯ ಏಪ್ರಿಲ್ ೭ ರಂದು ಜನಿಸಿದರು. ಅವರ ಫಾಸ್ಟರ್ ತಂದೆಯೂ ಮತಪ್ರಚಾರ ಮಾಡುತ್ತಿದ್ದರು. ಹೀಗೆ ತಮ್ಮ ಚಿಕ್ಕಂದಿನಲ್ಲೇ ಅವರು ಮತಪ್ರಚಾರವನ್ನು ಸ್ವೀಕರಿಸಲೇಬೇಕಾಯಿತು. ಕಿಟ್ಟಲ್ ಮಂಗಳೂರಿನ 'ಪಾಲೆನಿತ್'' ಎಂಬ ಹುಡುಗಿಯೊಡನೆ ೧೮೬೦ ರಲ್ಲಿ ವಿವಾಹವಾದರು. ಈ ಮದುವೆ ೪ ವರ್ಷಗಳಲ್ಲೇ ಅಂತ್ಯವಾಯಿತು. ಬಹುಬೇಗ ಅವರ ಹೆಂಡತಿ ತೀರಿಕೊಂಡರು. ಸುಮಾರು ೧೪ ವರ್ಷಗಳಕಾಲ ಮತಪ್ರಚಾರದ ಕೆಲಸ ಮುಂದುವರೆಸಿ, ಜರ್ಮನಿಗೆ ತೆರಳಿದರು. ಅವರು ಮತ್ತೆ ಭಾರತಕ್ಕೆ ಮರಳಿ ಬಂದಿದ್ದು ೧೮೬೭ ರಲ್ಲಿ. ಈ ಬಾರಿ ಅವರು ಮರು ಮದುವೆಯಾದರು. ಆಕೆ ತಮ್ಮ ಮೊದಲನೆಯ ಪತ್ನಿ ಯ ತಂಗಿ- 'ಜೂಲಿಯ' ಎಂಬುವಳೊಡನೆ.

ಹೆಲನ್ ಕೆಲ್ಲರ್

ನಾನು ಎಲ್ಲ ಕೆಲಸಗಳನ್ನೂ ಸಾಧಿಸಲಾರೆ ನಿಜ; ಆದರೆ ಕೆಲವನ್ನಾದರೂ ಖಂಡಿತ ಸಾಧಿಸಬಲ್ಲೆ. ನನ್ನಿಂದ ಎಲ್ಲ ಕೆಲಸಗಳನ್ನೂ ಮಾಡಲಾಗುವುದಿಲ್ಲ ಎಂದು ನಿರಾಶಳಾಗಿ ನಾನು ನನ್ನಿಂದಾಗುವ ಕೆಲವು ಕೆಲಸಗಳನ್ನಾದರೂ ಮಾಡದೇ ಕೈಕಟ್ಟಿ ಕೂರುವುದಿಲ್ಲ.

ಹೆಲನ್ ಕೆಲ್ಲರ್

ಯಾವುದಾದರೂ ಉನ್ನತ ಧ್ಯೇಯವನ್ನು ಮನಸ್ಸಿನಲ್ಲಿಟ್ಟುಕೊಂಡು ಮಾಡಿದ ಯಾವುದೇ ಪ್ರಯತ್ನವೂ ಎಂದಿಗೂ ವ್ಯರ್ಥವಾಗುವುದಿಲ್ಲ. ಇಂದಲ್ಲ ನಾಳೆ ಅವು ಖಂಡಿತ ಫಲಿಸುತ್ತವೆ.

ಕರ್ನಾಟಕ ಕ್ರಿಕೆಟ್ - ೩

ಯೆರೆ ಗೌಡ - ಇವರ ಪೂರ್ಣ ಹೆಸರು ಯೆರೆ ಕಾರೆಕಲ್ಲು ತಿಪ್ಪಣ್ಣ ಗೌಡ. ರಾಯಚೂರಿನಿಂದ ಉದ್ಭವಿಸಿದ ಅತ್ಯುತ್ತಮ ಸೆಲ್ಫ್ ಮೇಡ್ ಆಟಗಾರ. ಹೆಚ್ಚಿನ ಪ್ರತಿಭೆ ಇಲ್ಲದೆ ಸ್ವಂತ ಪರಿಶ್ರಮದಿಂದ ಕಷ್ಟಪಟ್ಟು ಕ್ರಿಕೆಟ್ ಜಗತ್ತಿನಲ್ಲಿ ಮೇಲೇರಿದ ಅಸಾಧಾರಣ ಶ್ರಮಜೀವಿ. ಪ್ರಸಕ್ತ ರಣಜಿ ಋತುವಿನಲ್ಲಿ ಕರ್ನಾಟಕ ತಂಡದ ನಾಯಕರಾಗಿರುವ ಗೌಡರಿಗೆ ೩೫ ವರ್ಷ ವಯಸ್ಸು.

ರಾಬ್ಡಿದೇವಿಗೆ ತಾನು ಸತ್ತಂತೆ ಕನಸು ಬಿದ್ದಾಗ...

   ರಾಬ್ಡಿದೇವಿಗೆ (ಅದೇಪ್ಪಾ, ಶ್ರೀಮತಿ ಲಾಲೂ) ಒಮ್ಮೆ ತಾನು ಸತ್ತಂತೆ ಕನಸು ಬಿತ್ತಂತೆ. ಕೇವಲ ಕನಸು ಸ್ವಾಮೀ; ನೂರಲ್ಲ, ಇನ್ನೂರು ವರ್ಷ ಬದುಕಲಿ ಬಿಡಿ, ನಮಗೇನು? ರಾಬ್ಡಿಗೆ ಕನಸು ಬಿದ್ದಾಗ ನಮ್ಮ ಲಾಲೂ ಸಾಹೇಬರು ಮಾತ್ರ ಇನ್ನೂ ಗುಂಡುಕಲ್ಲಿನ ಹಾಗೆ ಬದುಕಿದ್ದಾರೆ ಅನ್ನೋದು ನೆನಪಿಡಲೇಬೇಕಾದ ವಿಚಾರ. ಸತ್ತಮೇಲೆ ಇನ್ನೇನು, ಕೊನೆಯ ವಿಚಾರಣೆ ಆಗಲೇಬೇಕಲ್ಲ. ರಾಬ್ಡಿ ಕೂಡಾ ಯಮಲೋಕದಲ್ಲಿ ಯಮಧರ್ಮನ ಮುಂದೆ ಹಾಜರಾದಳು. ಆಕೆಗೂ ಸಿನೆಮಾ ನೋಡಿ, ಪುಸ್ತಕ-ಪುರಾಣ ಓದಿ, ಯಮಲೋಕ ಅಂದರೆ ಹೀಗಿರುತ್ತೆ ಅಂತ ಒಂದು ಕಲ್ಪನೆಯಿತ್ತು. ಆದರೆ ಆಶ್ಚರ್ಯ ಅಂದರೆ ಯಮಲೋಕ ಹಾಗಿರಲೇ ಇಲ್ಲ! ಕಾಲಕ್ಕೆ ತಕ್ಕಂತೆ ಇದೂ ಬದಲಾಗಿದೆ ಅಂತಂದುಕೊಂಡಳು ರಾಬ್ಡಿದೇವಿ.

ನಾಗರೀಕ ಜವಾಬ್ದಾರಿಗಳು

ದಿನನಿತ್ಯದ ಜೀವನದಲ್ಲಿ ನಾವು ತೊಂದರೆಗಳಾದಾಗ ಹಲವು ಬಾರಿ ಸರ್ಕಾರವನ್ನು, ಸುತ್ತಮುತ್ತವಿರುವವರನ್ನು ಆಗಾಗ ದೂಷಿಸುತ್ತ, ಬೈದುಕೊಳ್ಳುತ್ತಾ ಇರುವುದು ಸರ್ವೇಸಾಮಾನ್ಯ. ತಕ್ಷಣದ ವಿವೇಚನೆಗೆ, ಕಾಮನ್ ಸೆನ್ಸಿಗೆ ಇವುಗಳಿಗೆಲ್ಲ ನಾವು ಜವಾಬ್ದಾರರಲ್ಲ ಅನ್ನಿಸುತ್ತದೆ, ಉದಾಹರಣೆಗೆ ನೀರು ಪೋಲು ಮಾಡುವುದು, ರಸ್ತೆಯನ್ನು ಅಗೆದು ಸರಿಯಾಗಿ ಮುಚ್ಚದೇ ಹೋಗುವುದು, ಕಂಡ ಕಂಡ ಹೊತ್ತಿನಲ್ಲಿ ವಿದ್ಯುತ್ ಕಡಿತ, ವಾಹನ ಸಂಚಾರ ನಿಯಮಗಳನ್ನು ಪಾಲಿಸದೇ ಇರುವುದು ಇತ್ಯಾದಿ..

ಆದರೆ ಅವುಗಳ ಬಗ್ಗೆ ಸ್ವಲ್ಪ ನಿಧಾನಕ್ಕೆ ಯೋಚಿಸಿದಾಗ ನೇರವಾಗಿಯೋ/ಪರೋಕ್ಷವಾಗಿಯೋ ಇದೇ ಆರೋಪಗಳಲ್ಲಿ ದೋಷಮುಕ್ತರಲ್ಲವೆನ್ನುವುದು ನಾಗರೀಕರಿಗೆ ಸುಮಾರು ಪಾಲಿಗೆ ಸತ್ಯ.

ಇಲ್ಲಿ ಕೆಲವು ಉದಾಹರಣೆಗಳನ್ನು ಕೊಡುತ್ತೇನೆ.
೧. ಮನೆಯಲ್ಲಿನ ಬೋರ್‍ವೆಲ್ ನೀರಿನ ಬಳಕೆಯನ್ನು ಗಮನಿಸಿ: ಸೈಟ್ ನಿಮ್ಮದೇ, ಬಾವಿ ತೆಗೆಸಿದ್ದು ನೀವೇ , ಪಂಪು ವಿದ್ಯುತ್ತಿನ ಖರ್ಚು ನಿಮ್ಮದೇ ಇರಬಹುದು,ಆದರೆ ಅಂತರ್ಜಲ ನಿಮ್ಮದೇ? ಅದನ್ನು ಸ್ವಂತ ಆಸ್ತಿಯಂತೆ ಉಪಯೋಗಿಸುವುದು ಎಷ್ಟು ಸರಿ, ಅದೂ ಅಲ್ಲದೆ ಅಂತರ್ಜಲಕ್ಕೆ ನೀರು ವಾಪಾಸಾಗಲು ನಿಮ್ಮ ಯಾವುದೇ ಚಟುವಟಿಕೆ ಕಾರಣವಲ್ಲದಿದ್ದಾಗ ಎಲ್ಲರಿಗೂ ಸೇರಬೇಕಾಗಿರುವ ಅಂತರ್ಜಲವನ್ನು ಬೋರಿನ ಒಡೆಯಾರಿಗಿ ನಾವು ಒಬ್ಬರೇ ದೋಚಿದಂತಾಗುವುದಿಲ್ಲವೇ? ಬೇಕಿದ್ದರೆ ಎಲ್ಲರೂ ಹಾಗೆಯೇ ಉಪಯೋಗಿಸಿಕೊಳ್ಳಲಿ ಎನ್ನುವುದು ಧಿಮಾಕಿನ ಮಾತಲ್ಲವೇ?
೨. ಪದೇ ಪದೇ ಕರೆಂಟ್ ಹೋಗುತ್ತದೆ, ಇನ್ವರ್ಟರ್/ಬ್ಯಾಟರಿ ಉಪಯೋಗಿಸುತ್ತೇವೆ: ಅಲ್ಲ, ಲೋಡ್ ಶೆಡ್ಡಿಂಗ್ ಮಾಡುವುದು ಯಾಕೆ? ನಮ್ಮಲ್ಲಿರುವ ಸಂಪನ್ಮೂಲಗಳು ಕೆಲವೊಮ್ಮೆ ನಮ್ಮ ವಿದ್ಯುತ್ ಬೇಡಿಕೆಯನ್ನು ಪೂರೈಸಲು ಸಾಕಾಗುವುದಿಲ್ಲ, ಅದಕ್ಕೆ