ಸಂಪದ ಪುಟಗಳು - ಲೇಖಕರ ಹೆಸರು ಅಥವಾ ಐಡಿ ಬಳಸಿ ಹುಡುಕಿ

Enter a comma separated list of user names.

ಕನ್ನಡ ಸಾಹಿತ್ಯ ಪರಿಷತ್, ಗಣಕ ಪರಿಷತ್ - ಪತ್ರಕರ್ತರು, ಸಾಹಿತಿಗಳು, ಚಲನ ಚಿತ್ರ ವಲಯದಿಂದ ಕನ್ನಡಸಾಹಿತ್ಯಡಾಟ್‌ಕಾಂ ಮನವಿಗೆ ಅಭೂತಪೂರ್ವ ಬೆಂಬಲ...!

ಕಂಪ್ಯೂಟರ್ ಪರಿಸರದಲ್ಲಿ ದೇಸಗತಿ ಭಾಷೆಗಳ ಅಳವಡಿಕೆಯ ಕುರಿತಂತೆ ಕನ್ನಡಸಾಹಿತ್ಯ.ಕಾಂ ಹಾಗು ಎಲ್ಲ ಬೆಂಬಲಿಗರ ಪರವಾಗಿ ಸಹಿ ಸಂಗ್ರಹ ಆಂದೋಳನಕ್ಕೆ ಅಪಾರವಾದ ಬೆಂಬಲ ವ್ಯಕ್ತವಾಗುತ್ತಿದೆ. ರಾಜ್ಯದ ಪ್ರಮುಖ ಪತ್ರಿಕೆಗಳ ಬಹುತೇಕ ಎಲ್ಲ ಪತ್ರಕರ್ತರು ಬೆಂಬಲ ಸೂಚಿಸಿ ಸಹಿ ಮಾಡಿದ್ದಾರೆ. ಜೊತೆಗೆ, ಸಾರ್ವಜನಿಕ ಜೀವನದಲ್ಲಿ, ಸಾಂಸ್ಕೃತಿಕ ಮುಂಚೂಣಿಯಲ್ಲಿರುವ ಅನೇಕರು, ಚಲನಚಿತ್ರ ರಂಗದ ಪ್ರಮುಖರೂ ಸಹ ಸಹಿ ಮಾಡಿ ಬೆಂಬಲ ಸೂಚಿಸಿದ್ದಾರೆ.ಅವರುಗಳ ವಿವರ ಈ ಕೆಳಕಂಡಂತಿದೆ:

ಕನ್ನಡ ಕಲಿಯುವದು ಕಷ್ಟವೇ?

ಹೀಗೆಂದು ಒಂದು ಲೇಖನವನ್ನು ಓದಿದ್ದ ನೆನಪು . ಬೇರೆ ಭಾಷಿಕರು ಕನ್ನಡ ಕಲಿಯಲಿ ಎಂದು ಅಪೇಕ್ಷಿಸುವ ನಮಗೆ ಕಲಿಯುವವರ ಕಷ್ಟ ಹೇಗೆ ಗೊತ್ತಾದೀತು? ಕನ್ನಡ ಕಲಿಸ ಹೊರಟ ಲೇಖಕಿಯೊಬ್ಬರಿಗೆ ಸುಸ್ತಾಗಿ - ಕನ್ನಡ ಬಹಳ ಸಂಕೀರ್ಣ ಭಾಷೆ ಎಂದೆನ್ನಿಸಿ , ಜಪಾನೀಸ್ ಭಾಷೆ ತುಂಬ ಸುಲಭ , ಸರಳ ಎಂದೆನಿಸಿ ಅದನ್ನೇ ನಮ್ಮ ತಾಯಿನುಡಿ ಮಾಡಬಾರದೇಕೆಂದು ಸೂಚನೆಯನ್ನೂ -ಸೀರಿಯಸ್ಸಾಗಿ ಅಲ್ಲ- ಕೊಟ್ಟಿದ್ದರು!

'ಶಿಕ್ಷಕರೇ, ಮರಳಿ ಬನ್ನಿ' ಯೋಜನೆ ಜಾರಿಗೆ

ಬೊಗಳೂರು, ನ.16- ಮಕ್ಕಳ ಹಾಜರಾತಿ ಕೊರತೆಯಿಂದಾಗಿ ಸರ್ವ ಶಿಕ್ಷಾ ಅಭಿಯಾನದಡಿ 'ಮರಳಿ ಬನ್ನಿ ಶಾಲೆಗೆ' ಎಂಬ ಯೋಜನೆ ಹಮ್ಮಿಕೊಂಡು ಮಕ್ಕಳಿಗೆ ಹಾಲು, ಮೊಟ್ಟೆ, ಅಕ್ಕಿ... ಇತ್ಯಾದಿ ಹಾಳು ಮೂಳು ಕೊಡಲು ಆರಂಭಿಸಿದ್ದು ಹಳೆ ಕಥೆ. (Bogaleragale.blogspot.com)

ಬಾಲ ಅಲ್ಲಾಡಿಸಲು ಜಾಗದ ಕೊರತೆ

(ಬೊಗಳೂರು ಶ್ವಾನಾನ್ವೇಷಿ ಬ್ಯುರೋದಿಂದ)
ಬೊಗಳೂರು, ನ.15- ಹಿಂದೊಂದು ಕಾಲವಿತ್ತು, ಬಸ್ಸಿಂದ ಕೆಳಗೆ ಕಾಲಿಟ್ಟ ತಕ್ಷಣ ನಾಯಿಗಳು ಇರುವೆಗಳಂತೆ ಮುತ್ತಿಕೊಳ್ಳುತ್ತಿದ್ದವು. ಆದರೆ ಈಗ ಕಾಲ ಬದಲಾಗಿದೆ. ನಾಯಿಗಳು ನಗರ ಜೀವನದಿಂದ ರೋಸಿ ಹೋಗಿವೆ. ಅವುಗಳು ಬೇರೆ ಪುಟ್ಟ ಪಟ್ಟಣಗಳಿಗೆ ಮತ್ತು ಗ್ರಾಮಾಂತರ ಪ್ರದೇಶಗಳಿಗೆ ವಲಸೆ ಹೋಗುತ್ತಿವೆ.(bogaleragale.blogspot.com)

(ಹಿಂ)ಬಾಲಕರಿಗೂ ಸೈಕಲ್: ಸರ್ಕಾರಿ ಯೋಜನೆ ವಿಫಲ

ಬೊಗಳೂರು, ನ.14- ಎಸ್ಸೆಸ್ಸೆಲ್ಸಿ, ಪಿಯುಸಿ ಫಲಿತಾಂಶ ಪ್ರಕಟವಾದಾಗ ಹುಡುಗಿಯರೇ ಮೇಲುಗೈ ಸಾಧಿಸುತ್ತಿದ್ದಾರೆ ಎಂಬುದು ಎಲ್ಲರಿಗೂ ವೇದ್ಯವಾದ ಸಂಗತಿ. ಇತ್ತೀಚೆಗೆ ಕರ್ನಾಟಕ ಸರಕಾರವು ವಿದ್ಯಾರ್ಥಿನಿಯರಿಗೆ ಉಚಿತ ಸೈಕಲ್‌ಗಳನ್ನು ವಿತರಿಸಿ ಅವರನ್ನು ಮತ್ತಷ್ಟು ವೇಗವಾಗಿ ಮುಂದುವರಿಯುವಂತೆ ಮಾಡಿರುವುದರಿಂದ ಆತಂಕಗೊಂಡಿರುವ ಹುಡುಗ ವಿದ್ಯಾರ್ಥಿ ಸಮುದಾಯವು ಸರಕಾರಕ್ಕೆ ಮೊರೆ ಹೋಗಿದೆ. ಒಟ್ಟಿನಲ್ಲಿ ಸರಕಾರದ ಯೋಜನೆಯೊಂದು ಅಸಫಲವಾಗುವ ಮೂಲಕ ಬಾಲಕರು ಹಿಂ-ಬಾಲಕರೇ ಆಗಿಯೂ, ಬಾಲಕಿಯರು ಮುಂ-ಬಾಲಕಿಯರೇ ಆಗಿಯೂ ಉಳಿಯುವಂತಾದ ಕತೆಯಿದು. (Bogaleragale.blogspot.com)

ರಂಜಿತ, ಬಾಗಿಲ್ತೆಗಿ ಪುಟ್ಟಾ........!

ಈಗಾಗಲೇ ೨೫-೩೦ ವರ್ಷಗಳು ಸಂದಿವೆ. ಮಕ್ಕಳು ದೊಡ್ಡವರಾಗಿ ಬೆಳೆದು, ರೆಕ್ಕೆ-ಪುಕ್ಕಗಳು ಬಂದು ಎಲ್ಲೆಲ್ಲೊ ಹಾರಿಹೋಗಿದ್ದಾರೆ. ಒಟ್ಟು ೪೦ ವರ್ಷಗಳಕಾಲ ಮುಂಬೈವಾಸ. ಈಗ ೨೩ ವರ್ಷಗಳಿಂದ ನಮ್ಮ ಸ್ವಂತ ಮನೆಯಲ್ಲಿ ಘಾಟ್ಕೋಪರ್, ನಲ್ಲಿದ್ದೇವೆ. ಆದರೂ ನಾವು ಬೊಂಬಾಯಿನ ಶಿವಾಜಿ ಪಾರ್ಕ್ ನಲ್ಲಿ ಕಳೆದ ೧೦ ವರ್ಷಗಳು ನಿಜಕ್ಕೂ ಅವಿಸ್ಮರಣನೀಯ. ಏಕೆಂದರೆ ಇಲ್ಲಿ ನಮ್ಮ ಇಬ್ಬರು ಮಕ್ಕಳ ಮೊದಲ ಪ್ರಾಥಶಾಲೆಯ ವಿದ್ಯಾಭ್ಯಾಸದ 'ವಿಧಿ' ನಡೆಯಿತು. ೨-೩ ಕನ್ನಡ ಪರಿವಾರಗಳು ನಮ್ಮ ಸಹವರ್ತಿಗಳು ನಮ್ಮೊಡನೆ ವಾಸವಾಗಿದ್ದರು. ಮೇಲಾಗಿ ಕರ್ನಾಟಕಸಂಘ ನಮಗೆ ಅತಿ ಸಮೀಪ. ಎಲ್ಲಾ ಕಾರ್ಯಕ್ರಮಗಳಿಗೂ ಬಿಡದೆ ಹೋಗುತ್ತಿದ್ದೆವು.

ವಿನೂತನ ಉದ್ಯೋಗ ಯೋಜನೆ: ನಿಧಾನಿ ಪ್ರಶಂಸೆ

(ಬೊಗಳೂರು ಕೆಲಸವಿಲ್ಲದ ಬ್ಯುರೋದಿಂದ)
ಬೊಗಳೂರು, ನ.13- ದೇಶವನ್ನು ಕಾಡುತ್ತಿರುವ ನಿರುದ್ಯೋಗ ಎಂಬ ಪಿಡುಗು ನಿವಾರಣೆಗೆ ಪೂರ್ಣ ಪ್ರಮಾಣದಲ್ಲಿ ಸಹಕರಿಸುತ್ತಿರುವ ಉಗ್ರಗಾಮಿಗಳಿಗೆ ಭಾರತದ ನಿಧಾನಿಗಳು ಅಭಿನಂದನೆ ಸಲ್ಲಿಸಿದ್ದಾರೆ. Bogaleragale.blogspot.com