ಸಂಪದ ಪುಟಗಳು - ಲೇಖಕರ ಹೆಸರು ಅಥವಾ ಐಡಿ ಬಳಸಿ ಹುಡುಕಿ

Enter a comma separated list of user names.

ದೇವರು ನಕ್ಕುಬಿಟ್ಟ

ಇದು ಓಷೋ ಹೇಳಿದ ಕಥೆ.

ಆ ಊರಿನಲ್ಲಿ ಇದ್ದುದು ಅದೊಂದೇ ಗುಡಿ. ಬಲು ಸುಂದರವೂ ಭವ್ಯವೂ ದಿವ್ಯವೂ ಕಲಾಪೂರ್ಣವೂ ಆಗಿತ್ತದು. ಊರಿನ ಸಕಲ ಸಿರಿವಂತರೂ ದೇಣಿಗೆ ನೀಡಿ ಅದನ್ನು ನಿರ್ಮಿಸಿದ್ದರು. ಅದಕ್ಕೆ ಒಬ್ಬ ಪೂಜಾರಿಯನ್ನೂ ನೇಮಿಸಿದ್ದರು. ಆತ ಗುಡಿಯ ಬದಿಯಲ್ಲೇ ಮನೆ ಮಾಡಿಕೊಂಡು ನಿತ್ಯ ಪಾರಾಯಣ, ಪೂಜೆ, ಮಂಗಳಾಭಿಷೇಕ, ಗಂಟಾನಾದ, ಸುಗಂಧ ಧೂಪಗಳೊಂದಿಗೆ ಮಂದಿರವನ್ನು ಸೊಬಗಿನ ತಾಣವಾಗಿಸಿದ್ದ.
ಹೀಗಿರುವಲ್ಲಿ ಒಂದು ರಾತ್ರಿ ಬಡವನೊಬ್ಬ ಬಂದು ಪೂಜಾರಿಯ ಮನೆಯ ಬಾಗಿಲು ತಟ್ಟಿದ. ಹಗಲಿನ ಬೆಳಕಲ್ಲೇ ಆತ ಬರಬಹುದಿತ್ತು. ಆದರೆ ನಾನು ನಿಮಗೆ ಹೇಳಲು ಮರೆತಿದ್ದೆ. ಅದು ಸಿರಿವಂತರ ಗುಡಿಯಾಗಿತ್ತು. ಬಡವರಿಗೆ ಅಲ್ಲಿ ಪ್ರವೇಶ ನಿಷಿದ್ಧವಿತ್ತು. ನಮ್ಮ ದೇಶದ ಗುಡಿಗಳ ಜಾಯಮಾನವೇ ಹಾಗೆ. ಗುಡಿಗಳ ನಿರ್ಮಾಣಕ್ಕೆ ಹಣ ಒದಗಿಸುವವರು ಸಿರಿವಂತರು. ದುಡಿಮೆ ಬಡವರದು. ಭಕ್ತಿಭಾವದಿಂದ ತನ್ಮಯತೆಯಿಂದ ಬಡವರು ಗುಡಿಕಟ್ಟಿ ಅದರ ಅಂದ ಹೆಚ್ಚಿಸುತ್ತಾರೆ. ಗುಡಿ ಪೂರ್ಣಗೊಂಡ ನಂತರ ಸಿರಿವಂತರು ಅದರಲ್ಲಿ ತುಂಬಿ ಬಡವರಿಗೆ ಪ್ರವೇಶ ನಿರಾಕರಿಸುತ್ತಾರೆ.

ಮಂಕು ನೀಲಿ ಚುಕ್ಕೆ!

ನ್ಯೂಯೋರ್ಕಿನ ಕಾರ್ನೆಲ್ ವಿಶ್ವವಿದ್ಯಾಲಯದಲ್ಲಿ ಅಕ್ಟೋಬರ್ ೧೩, ೧೯೯೪ ರಂದು ಖ್ಯಾತ ಖಗೋಳ ಶಾಸ್ತ್ರಜ್ಞರಾದ ಕಾರ್ಲ್ ಸಗನ್ ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡುತ್ತಾ, ಮೇಲಿನ ಚಿತ್ರವನ್ನು ತೋರಿಸಿದರು..

ಇದು ೧೯೯೦ರಲ್ಲಿ ಭೂಮಿಯಿಂದ ನಭದತ್ತ ಚಿಮ್ಮಿದ ಅಂತರಿಕ್ಷ ನೌಕೆ ವಾಯೇಜರ್ ೧ ಸುಮಾರು ೪ ಬಿಲಿಯನ್ ಮೈಲುಗಳ ದೂರದಿಂದ ತೆಗೆದದ್ದಾಗಿದೆ. ಅದರ ಮುಖ್ಯ ಉದ್ದೇಶ ಪೂರ್ಣಗೊಂಡ ನಂತರ, ಸೂರ್ಯ ಮಂಡಲದಿಂದ ಹೊರಕ್ಕೆ ತನ್ನ ಯಾನವನ್ನು ಬೆಳಸಿದ್ದ ಅದು ಸೂರ್ಯನ ಸಮತಲದಿಂದ ಸುಮಾರು ೩೨ ಡಿಗ್ರಿ ಮೇಲಿನ ಪಥದಲ್ಲಿದ್ದಾಗ, ಹಿಂದೆ ತಿರುಗಿ ಅದಕ್ಕೆ ಕಂಡ ಎಲ್ಲಾ ಗ್ರಹಗಳ ಚಿತ್ರವನ್ನು ತೆಗೆಯುವಂತೆ ಆದೇಶಿಸಲಾಯಿತು. ಆ ಅನಂತ ದೂರದಿಂದ ವಾಯೇಜರಿನ ಕ್ಯಾಮೆರಾ ಕಣ್ಣಿಗೆ ಭೂಮಿಯು ಒಂದು ಅತಿ ಚಿಕ್ಕ ಬೆಳಕಿನ ಚುಕ್ಕೆಯಾಗಿ, ಈ ಚಿತ್ರದ ಒಂದು ಪಿಕ್ಸೆಲ್ಲಿಗಿಂತ್ ಚಿಕ್ಕದಾಗಿ ಕಾಣಿಸಿತು. ಈ ಚಿತ್ರವನ್ನು ನೋಡಿ ದ ನಿಜಕ್ಕೂ ವಿಚಲಿತಗೊಂಡಿದ್ದ ಡಾ|| ಸಗನ್ ಅವರ ಭಾಷಣದಲ್ಲಿ ಹೀಗೆಂದರು :

" ಆಗಸದ ಅನಂತದಿಂದ ಕೆಳಬಗ್ಗಿ ತೆಗೆದ ಈಚಿತ್ರವನ್ನು ಗಮನಿಸಿ, ಅದರಲ್ಲಿ ನಿಮಗೆ ಒಂದು ಎದ್ದು ಕಾಣುವ ಸಣ್ಣ ನೀಲಿ ಚುಕ್ಕೆ ಕಾಣಿಸಬಹುದು (ಗುರುತು ಹಾಕಿದಲ್ಲಿ)! ಅದೇ ನಾವು , ಅಲ್ಲಿದೆ ನಮ್ಮ ಮನೆ. ನಮಗೆ ಗೊತ್ತಿರುವ ಎಲ್ಲರೂ, ಪ್ರತಿಯೊಂದು ಮನುಷ್ಯ ಜೀವಿಯೂ, ಇಲ್ಲಿಯೇ ಬದುಕಿದ್ದು, ಇಲ್ಲಿಯೇ ಮಣ್ಣಾದದ್ದು! ನಮ್ಮೆಲ್ಲಾ ಸುಖ ಸಂತೋಷ ಹಾಗು ನೋವುಂಡ ಕ್ಷಣಗಳು, ದೃಢವಾಗಿ ನಂಬಲ್ಪಟ್ಟ ಸಾವಿರಾರು ಧರ್ಮಗಳು, ವಿಚಾರ ಪರಂಪರೆಗಳು, ಆರ್ಥಿಕ ಸಿದ್ಧಾಂತಗಳು, ಹೊಟ್ಟೆ ಪಾಡಿಗಾಗಿ ಬದುಕಿದ ಪ್ರತಿಯೊಂದು ಜೀವಿ, ಪ್ರತಿಯೊಬ್ಬ ನಾಯಕ ಹಾಗು ಹೇಡಿ, ಬದುಕಿದ್ದ ಎಲ್ಲಾ ನಾಗರೀಕತೆಗಳ ಪ್ರತಿಯೊಬ್ಬ ನಿರ್ಮಾರ್ತೃ ಹಾಗು ಧ್ವಂಸಕ, ಪ್ರತೀ ಚಕ್ರಾಧಿಪತಿ ಹಾಗು ಬಂಡುಕೋರ, ಪ್ರೇಮಿಸಿದ ಪ್ರತಿಯೊಂದು ಜೋಡಿಗಳು, ಎಲ್ಲ ಭರವಸೆಯ ಮಕ್ಕಳು, ತಂದೆ ತಾಯಂದಿರು, ಪ್ರತಿಯೊಬ್ಬ ಅನ್ವೇಷಕ ಹಾಗು ಶೋಧಕ, ನೀತಿಯನ್ನು ಭೋಧಿಸಿದ ಪ್ರತಿಯೊಬ್ಬ ಗುರು, ಎಲ್ಲಾ ಭ್ರಷ್ಟ ರಾಜಕಾರಣಿ, ಪ್ರತಿಯೊಬ್ಬ ಸೂಪರ್ ಸ್ಟಾರ್, ಎಲ್ಲ ಧೀಮಂತ ನಾಯಕರು, ಮನುಷ್ಯ ಜಾತಿಯ ಇತಿಹಾಸದಲ್ಲಿ ಬಂದು ಹೋದ ಪ್ರತಿ ಸನ್ಯಾಸಿ ಹಾಗು ಪಾಪಿ, ಎಲ್ಲರೂ ಬದುಕಿದ್ದು, ಸತ್ತಿದ್ದು ಎಲ್ಲವೂ ಸೂರ್ಯ ಪ್ರಕಾಶದಲ್ಲಿ ತೇಲುತ್ತಿರುವ ಈ ಒಂದೇ ಒಂದು ಧೂಳಿನ ಕಣದಲ್ಲಿ!

ಮಳೆ

ಹೋದ ವರ್ಷ ನಾವು ಮನೆ ರಿಪೇರಿ ಮಾಡಿಸಿದೆವು. ರೂಫ್ ಕೂಡ ರಿಪೇರಿ ಮಾಡಿಸಿದೆವು. ರೂಫ್ ಮೇಲಿನ ಸುರ್‍ಕಿ ತೆಗೆದು ಹಾಕಿದ್ದರು ಮಳೆ ಹಿಡಿಯಿತು ನೋಡಿ ಅಬ್ಬ!

ಪುಟ್ಟನ ಪುಟ್ಟಿ Dell Vostro 1500 -> ಪುಟ್ಟನ ಪ್ಯಾಕೆಟ್ ನಲ್ಲಿ

ನನ್ನ ಗೆಳೆಯ ಇವತ್ತು ಹೊಸ ಲ್ಯಾಪ್ಟಾಪ್ ತಗೊಂಡನಂತೆ   ಅವನಿಗೊಸ್ಕರ .   

(ಅದೇ ಈ  ಕವನದಲ್ಲಿರೊ ಪುಟ್ಟಿ ಅಪಾರ್ಥಮಾಡ್ಕೊಬೇಡಿ ಪ್ಲೀಸ್)

ಬಾಗಲಕೋಟೆಯ ಸುತ್ತ ಮುತ್ತ - ೧

Aihole Temple

ಬಾಗಲಕೋಟೆಯಿಂದ ಗೆಳೆಯ ಅನಿಲ್ ಢಗೆ 'ಬಾಲೇ, ಒಂದೆರಡು ದಿನ ಇದ್ದೋಗ್ವಿಯಂತೆ', ಎಂದು ಬಹಳ ದಿನದಿಂದ ಕರೆಯುತ್ತಿದ್ದ. ಅಲ್ಲಿವರೆಗೆ ಬಂದು ಸುಮ್ನೆ ಮನೆಯಲ್ಲಿ ಕೂತ್ಕೊಳ್ಳುದು ನನ್ನಿಂದ ಆಗದು, ಅಲ್ಲಿಲ್ಲಿ ಅಡ್ದಾಡಬೇಕು ಎಂದು ನಾನಂದಾಗ, 'ದುನಿಯಾ ತೋರಿಸ್ತೀನಿ ಮಗನ, ದುನಿಯಾ. ನೀ ಬಾ ಮೊದ್ಲ' ಎಂದು ಕೊಚ್ಚಿಕೊಂಡ. ೨೦೦೪ರ ಜೂನ್ ತಿಂಗಳ ಅದೊಂದು ಶುಕ್ರವಾರ ಮುಂಜಾನೆ ೫ಕ್ಕೆ ಬಾಗಲಕೋಟೆಯ ನವನಗರದಲ್ಲಿಳಿದು ಈ ದುನಿಯಾ ತೋರಿಸುವವನಿಗೆ ಫೋನಾಯಿಸಿದರೆ, 'ಯಾರ, ಯಾರ' ಎಂದು ತೊದಲತೊಡಗಿದ. ಒಂದೆರಡು ಝಾಡಿಸಿದೊಡನೇ 'ಯಾವಾಗ್ ಬಂದಿಲೇ, ಬಂದೆ ತಡಿ', ಎನ್ನುತ್ತಾ ೫ ನಿಮಿಷದಲ್ಲಿ ಹಾಜರಾದ.

ಆ ದಿನ ನಾವು ಭೇಟಿ ನೀಡಬೇಕೆಂದಿದ್ದು ಬದಾಮಿ, ಬನಶಂಕರಿ, ಮಹಾಕೂಟ, ಹುಲಿಗೆಮ್ಮನಕೊಳ್ಳ, ಪಟ್ಟದಕಲ್ಲು, ಸಿದ್ಧನಕೊಳ್ಳ ಮತ್ತು ಐಹೊಳೆಗೆ. ಇವುಗಳಲ್ಲಿ ಬದಾಮಿ, ಪಟ್ಟದಕಲ್ಲು ಮತ್ತು ಐಹೊಳೆಗಳನ್ನು ಬಿಟ್ಟರೆ ಉಳಿದ ಸ್ಥಳಗಳ ಬಗ್ಗೆ ಅನಿಲನೇ ನನಗೆ ತಿಳಿಸಿದ್ದು. ಬದಾಮಿಗೆ ೫ಕಿಮಿ ದೂರವಿರುವಾಗ ನಮ್ಮ ಬೈಕಿನ ಟಯರ್ ಪಂಕ್ಚರ್! ಒಂದು ನರಪಿಳ್ಳೆಯೂ ಕಾಣಿಸುತ್ತಿರಲಿಲ್ಲ. ಅನಿಲ್ ಫುಲ್ ಮೂಡ್ ಆಫ್. 'ಆನಿ ಕುಂತಂಗೆ ಕುಂತಿ, ಪಂಕ್ಚರ್ ಆಗದೇ ಇನ್ನೇನ' ಎಂದು ನನಗೇ ಬಯ್ಯತೊಡಗಿದ್ದ. ಟಯರ್ ಕಳಚಲು ಪ್ರಯತ್ನ ಮಾಡತೊಡಗಿದೆವು. ನಮ್ಮಿಂದೆಲ್ಲಿ ಅದು ಸಾಧ್ಯ? ಅರ್ಧ ಗಂಟೆ ಕಳೆದಿರಬಹುದು, ಒಂದು ಗೂಡ್ಸ್ ರಿಕ್ಷಾ ನಮ್ಮತ್ತ ಬರತೊಡಗಿತು. ಅದನ್ನು ನಿಲ್ಲಿಸಿ, ಬೈಕನ್ನು ಅದರ ಹಿಂದೆ ಏರಿಸಿ, ನಾವೂ ಏರಿ, ಬದಾಮಿಯೆಡೆ ಹೊರಟೆವು.

ಈ ಬದಾಮಿ ಕೊಳಕು ಊರು. ಗುಹಾದೇವಸ್ಥಾನಗಳು ಇರುವ ಪ್ರಾಂಗಣ ಬಿಟ್ಟರೆ ಉಳಿದೆಲ್ಲಾ ಕಡೆ ಅಸಹ್ಯ. ಇಲ್ಲಿರುವ ಮಂಗಗಳು ಬಹಳ 'ನೊಟೋರಿಯಸ್'. ಕೈಯಲಿದ್ದನ್ನು ಕಸಿದುಕೊಳ್ಳುವುದು, ವಾಹನದೊಳಗೆ ನೂರಿ ಬ್ಯಾಗ್ ಇತ್ಯಾದಿಗಳನ್ನು ಲಪಟಾಯಿಸುವುದು, ಇತ್ಯಾದಿಗಳಲ್ಲಿ ಇವುಗಳು ಪರಿಣಿತ. ಈ ಗುಹಾದೇವಸ್ಥಾನಗಳ ಬಗ್ಗೆ ಎಲ್ಲರಿಗೂ ಗೊತ್ತಿರುವಂತದ್ದೇ. ಒಂದಕ್ಕಿಂತ ಒಂದು ಚೆನ್ನಾಗಿರುವ ಗುಹಾದೇವಸ್ಥಾನಗಳು. ಇದೊಂದು ದೊಡ್ಡ ಕೆಂಪುಬಣ್ಣದ ಬಹೂ ದೂರದವರೆಗೂ ಹಬ್ಬಿರುವ ಬೆಟ್ಟ. ಈ ಬೆಟ್ಟದ ಒಂದು ಪಾರ್ಶ್ವದಲ್ಲಿ ಈ ದೇವಸ್ಥಾನಗಳನ್ನು ಕೆತ್ತಲಾಗಿದೆ. ಬೆಟ್ಟದ ಮೇಲಕ್ಕೆ ತೆರಳಲು ಮೆಟ್ಟಿಲುಗಳಿವೆ. ಈಗ ಅಲ್ಲೊಂದು ಗೇಟನ್ನು ಹಾಕಿ ಬೀಗ ಜಡಿಯಲಾಗಿದೆ. ಕೆಲವು ವರ್ಷಗಳ ಹಿಂದೆ ವಿದೇಶಿ ಮಹಿಳೆಯೊಬ್ಬಳನ್ನು, ಬೆಟ್ಟದ ಮೇಲೆ ಅತ್ಯಾಚಾರಗೈದು ಕೊಲೆ ಮಾಡಲಾಗಿದ್ದರಿಂದ, ಈ ಮುನ್ನೆಚ್ಚರಿಕೆಯ ಕ್ರಮ. ಮೇಲೊಂದು ತುಪಾಕಿಯಿದ್ದು, ಅದನ್ನು ನೋಡುವ ಇರಾದೆ ಇದ್ದ ನನಗೆ, ಬೀಗ ಜಡಿದದ್ದನ್ನು ನೋಡಿ ನಿರಾಸೆ. ಮೇಲೆ ಹೋಗಲೇಬೇಕೆಂಬ ಇಚ್ಛೆ ಇದ್ದಲ್ಲಿ, ಗುಹಾದೇವಸ್ಥಾನಗಳು ಇರುವ ಪ್ರಾಂಗಣದಿಂದ ಹೊರಬಂದು, ಬೆಟ್ಟದ ಬುಡದಲ್ಲೇ ಸ್ವಲ್ಪ ದೂರ ನಡೆದು ನಂತರ ಯಾವುದೇ ಶಿಖರ ಏರುವಂತೆ ಒಂದೆರಡು ತಾಸು ನಡೆದು ಮೇಲೆ ತುಪಾಕಿ ಇದ್ದಲ್ಲಿ ತಲುಪಬಹುದು. ಆದರೆ ನನ್ನಲ್ಲಿ ಅಷ್ಟು ಸಮಯವಿರಲಿಲ್ಲ.

ನೀವು ಪುಸ್ತಕ ಸೆಲೆಕ್ಷನ್ ಹೇಗೆ ಮಾಡುತ್ತಿರಾ ?

ನೀವು ಪುಸ್ತಕ ಸೆಲೆಕ್ಷನ್ ಹೇಗೆ ಮಾಡುತ್ತಿರಾ ?

ನೀವು ಪುಸ್ತಕದ ಅಂಗಡಿಗೆ ಹೋದಾಗ, ಹೊಸ ಪುಸ್ತಕ ಬಂದಿರುತ್ತೆ,  ಅದರ ವಿಮರ್ಶೆ ಎಲ್ಲ ಬಂದಿರೊಲ್ಲ ಅಂತ ತಿಳ್ಕೊಳ್ಳಿ .

ಆ ಪುಸ್ತಕ ತಗೊಬೇಕೊ , ಬೇಡವೋ ಅಂತ ಹೇಗೆ ನಿರ್ಧಾರ ಮಾಡ್ತಿರಾ !?!

- ಪುಸ್ತಕದ ಮುಖಪುಟ ?
- ಪುಸ್ತಕದ ಪೀಠಿಕೆ  ?
- ಲೇಖಕರನ್ನು ?

:)

ಪೇಪರ್ ಲೆಸ್ ಆಫಿಸ್

ಪೇಪರ್ ಲೆಸ್ ಆಫಿಸ್

ಇದು ಒಂದು ಉತ್ತಮ ಪ್ರಯತ್ನ. ಈ ಪೇಪರ್ ಬಳಕೆಯಿಂದ ಮಿಲ್ಲಿಯನ್ ಮರಗಳು ನಾಶವಾಗುತ್ತಿವೆ. ನಮ್ಮ ಬ್ಯಾಂಕ್ ಸ್ಟೆಟ್ಮೆಂಟುಗಳು, ಬಿಲ್ಲುಗಳು, ಫ಼್ಯಾಕ್ಸ,  ಪುಸ್ತಕಗಳು ಆನ್ಲೈನ್ ಇನ್ನು ಹೆಚ್ಚು ಆದರೆ, ಮರಗಳನ್ನು ಉಳಿಸಿದ ಭಾಗ್ಯ ಎಲ್ಲರಿಗು ಸಿಗುತ್ತದೆ.

ನಿಮ್ಮಗೆ ಏನು ಅನ್ನಿಸುತ್ತೆ !?!

 

ಮುಕ್ತಾಯ

"ಕಾಲಚಕ್ರ ಉರುಳಿದಂತೆ
ಬದುಕಲ್ಲಿ ಬಂದದ್ದು ಹೋಗುತ್ತದೆ,
ಹೋದದ್ದು ಬರುತ್ತದೆ"
ಎಂಬ ಅವನ ಉಪದೇಶ ಕೇಳಿ
-"ಆ ಚಕ್ರದ ನಡು ಎಲ್ಲಿದೆ?"
-"ಯೌವ್ವನ ಯಾವಾಗ ಮರಳತ್ತೆ?"
ಎಂದೆಲ್ಲಾ ಅವನನ್ನು ಮುದ್ದಿಸಿ
ಚರ್ಚೆಯನ್ನೇ ನಾಚಿಸಿಬಿಟ್ಟಳು ತುಂಟಿ.