ದೇವರು ನಕ್ಕುಬಿಟ್ಟ
ಇದು ಓಷೋ ಹೇಳಿದ ಕಥೆ.
ಆ ಊರಿನಲ್ಲಿ ಇದ್ದುದು ಅದೊಂದೇ ಗುಡಿ. ಬಲು ಸುಂದರವೂ ಭವ್ಯವೂ ದಿವ್ಯವೂ ಕಲಾಪೂರ್ಣವೂ ಆಗಿತ್ತದು. ಊರಿನ ಸಕಲ ಸಿರಿವಂತರೂ ದೇಣಿಗೆ ನೀಡಿ ಅದನ್ನು ನಿರ್ಮಿಸಿದ್ದರು. ಅದಕ್ಕೆ ಒಬ್ಬ ಪೂಜಾರಿಯನ್ನೂ ನೇಮಿಸಿದ್ದರು. ಆತ ಗುಡಿಯ ಬದಿಯಲ್ಲೇ ಮನೆ ಮಾಡಿಕೊಂಡು ನಿತ್ಯ ಪಾರಾಯಣ, ಪೂಜೆ, ಮಂಗಳಾಭಿಷೇಕ, ಗಂಟಾನಾದ, ಸುಗಂಧ ಧೂಪಗಳೊಂದಿಗೆ ಮಂದಿರವನ್ನು ಸೊಬಗಿನ ತಾಣವಾಗಿಸಿದ್ದ.
ಹೀಗಿರುವಲ್ಲಿ ಒಂದು ರಾತ್ರಿ ಬಡವನೊಬ್ಬ ಬಂದು ಪೂಜಾರಿಯ ಮನೆಯ ಬಾಗಿಲು ತಟ್ಟಿದ. ಹಗಲಿನ ಬೆಳಕಲ್ಲೇ ಆತ ಬರಬಹುದಿತ್ತು. ಆದರೆ ನಾನು ನಿಮಗೆ ಹೇಳಲು ಮರೆತಿದ್ದೆ. ಅದು ಸಿರಿವಂತರ ಗುಡಿಯಾಗಿತ್ತು. ಬಡವರಿಗೆ ಅಲ್ಲಿ ಪ್ರವೇಶ ನಿಷಿದ್ಧವಿತ್ತು. ನಮ್ಮ ದೇಶದ ಗುಡಿಗಳ ಜಾಯಮಾನವೇ ಹಾಗೆ. ಗುಡಿಗಳ ನಿರ್ಮಾಣಕ್ಕೆ ಹಣ ಒದಗಿಸುವವರು ಸಿರಿವಂತರು. ದುಡಿಮೆ ಬಡವರದು. ಭಕ್ತಿಭಾವದಿಂದ ತನ್ಮಯತೆಯಿಂದ ಬಡವರು ಗುಡಿಕಟ್ಟಿ ಅದರ ಅಂದ ಹೆಚ್ಚಿಸುತ್ತಾರೆ. ಗುಡಿ ಪೂರ್ಣಗೊಂಡ ನಂತರ ಸಿರಿವಂತರು ಅದರಲ್ಲಿ ತುಂಬಿ ಬಡವರಿಗೆ ಪ್ರವೇಶ ನಿರಾಕರಿಸುತ್ತಾರೆ.
- Read more about ದೇವರು ನಕ್ಕುಬಿಟ್ಟ
- 7 comments
- Log in or register to post comments