ಸಂಪದ ಪುಟಗಳು - ಲೇಖಕರ ಹೆಸರು ಅಥವಾ ಐಡಿ ಬಳಸಿ ಹುಡುಕಿ

Enter a comma separated list of user names.

ಕಾವೇರಿಯಿಂದಮಾ ಗೋದಾವರಿ.....

ಕೇಳಿದ್ದೆ , ಓದಿದ್ದೆ . ಕಾವೇರಿಯಿಂದ ಗೋದಾವರಿವರೆಗೆ ಕನ್ನಡನಾಡು ವ್ಯಾಪಿಸಿತ್ತು ಮತ್ತು ಇದು 'ಕವಿರಾಜಮಾರ್ಗ'ದಲ್ಲಿದೆ ಎಂದಷ್ಟೇ ಗೊತ್ತಿತ್ತು. ಇದರಲ್ಲಿ 'ಮಾ' ಎಂದರೇನು ಗೊತ್ತಿರಲಿಲ್ಲ . ವಸುಧಾ-ವಲಯ-ವಿಲೀನ, ವಿಶದ-ವಿಷಯ-ವಿಶೇಷಂ ಎಂದೇನೋ ನಂತರದ ಸಾಲು ಇದೆ ಎಂದು ಗೊತ್ತಿತ್ತು ಅದರರ್ಥ ಗೊತ್ತಿರಲಿಲ್ಲ . ಈಗ ನನಗೆ ಈ ಬಗ್ಗೆ ಶ್ರೀ ಕೆ.ವಿ.ಸುಬ್ಬಣ್ಣ ಅವರ ಲೇಖನವೊಂದರಲ್ಲಿ ಮಾಹಿತಿ ಸಿಕ್ಕಿತು. ಅದನ್ನು ನಿಮ್ಮೊಂದಿಗೆ ಹಂಚಿಕೊಳ್ಳಬಯಸುವೆ.

ಶಹಬ್ಬಾಶ್ ಮುಂಬೈಕಾರ್!

ಮುಂಬೈನಲ್ಲಿ ಜೂನ್ 11, 2006 ರ ಸಂಜೆ 6-20 ರಿಂದ 6-32 ರ ವರೆಗೆ ಕೇವಲ ಹನ್ನೆರಡೇ ನಿಮಿಷಗಳಲ್ಲಿ 7 ಬಾರಿ ಸಂಭವಿಸಿದ ಭಾರಿ ಸ್ಫೋಟಕ್ಕೆ 200ಕ್ಕೂ ಹೆಚ್ಚು ಮುಗ್ಧ ಜನರು ಸಾವನ್ನಪ್ಪಿರುವ ಸುದ್ದಿ ಬೆಳಗಿನ ಪತ್ರಿಕೆಗಳಲ್ಲಿ ಅಚ್ಚಾಗಿ ಅದರ ಶಾಯಿ ಆರುವ ಮುನ್ನವೇ ಜುಲೈ 12ರ ಬೆಳಗ್ಗೆ ಅಲ್ಲಿನ ಜನಜೀವನ ಮಾಮೂಲಿ ಸ್ಥಿತಿಗೆ ಬಂದಾಗಿತ್ತು.

ಆಲೂರು ವೆಂಕಟರಾಯರು - ೧೨೬ನೇ ಜನ್ಮ ದಿನ

 

ವಿಜಯ ಕರ್ನಾಟಕದ ದಿನ ವಿಶೇಷ ಗಮನಿಸುತ್ತಿದ್ದಾಗ ಮೇಲಿನ ವಿಚಾರ ಅರಿವಿಗೆ ಬಂತು. ೧೮೮೦ರಲ್ಲಿ ಈ ದಿನ ವಿಜಾಪುರದಲ್ಲಿ 'ಕರ್ನಾಟಕ ಕುಲಪುರೋಹಿತ' ಆಲೂರು ವೆಂಕಟರಾಯರ ಜನನವಾಗಿತ್ತು.

ತಮಿಳು ಚಿತ್ರದಲ್ಲಿ ಸಂಗೊಳ್ಳಿ ರಾಯಣ್ಣನ ಅವಮಾನ

ದಿನಾಂಕ ೧೨ ರಂದು ವಿಜಯ ಕರ್ನಾಟಕ ಪತ್ರಿಕೆಯಲ್ಲಿ ತಮಿಳು ಸಿನಿಮಾವೊಂದರಲ್ಲಿ ಬ್ರಿಟೀಷರ ವಿರುದ್ಧ ಹೋರಾಡಿ ಪ್ರಾಣ ತೆತ್ತ ಗಂಡುಗಲಿ ಸಂಗೊಳ್ಳಿ ರಾಯಣ್ಣನ ಹೆಸರನ್ನು ದೇಶದ್ರೋಹಿ ಪಾತ್ರವೊಂದಕ್ಕೆ ಕೊಟ್ಟಿದ್ದಾರಂತೆ ನೋಡಿ ಇವರ ಉದ್ಧಟತನ. ನನ್ನ ಲೇಖನಗಳಲ್ಲಿ ದೋಷ ಕ್ಂಡು ಬಂದಲ್ಲಿ ನನ್ನನ್ನು ಕ್ಷಮಿಸಬೇಕು ಏಕೆಂದರೆ, ನನ್ನ ಆಪರೇಟಿಂಗ್ ಸಿಸ್ಟಮ್ windows 2000 ಇದರಲ್ಲಿ ಕನ್ನಡ ಫ಼ಾಂಟ್ ಸರಿಯಾಗಿ ಬರೋದಿಲ್ಲ, ಆದರೂ ಆದಷ್ಟು ತಪ್ಪುಗಳನ್ನು ಮಾಡದಿರಲು ಪ್ರಯತ್ನಿಸುತ್ತೇನೆ.......

ಸುಕೃತಿ

                          ಸುಕೃತಿ

                     ಅಕಾರದಿಂದ ಆಕೃತಿ,
                     ಉಕಾರದಿಂದ ಪ್ರಕೃತಿ,
                     ಮಕಾರದಿಂದ ಸಂಸ್ಕೃತಿ,
                     ಓಂ ಕಾರದಿಂದ ಸುಕೃತಿ.//ಪ//

ಬಾಂಬೆ ಡೈಯಿಂಗ್!

ದೇಶದ ವಾಣಿಜ್ಯ ನಗರಿ ಬಾಂಬೆ ಅಲಿಯಾಸ್ ಮುಂಬೈ ವರುಣನ ರೌದ್ರಾವತಾರದಿಂದ ಚೇತರಿಸಿಕೊಳ್ಳುವಷ್ಟರಲ್ಲೇ ಮತ್ತೊಂದು ಅನಾಹುತ. ಬೃಹನ್ನಗರದ ಜೀವನಾಡಿ ಲೋಕಲ್ ಟ್ರೇನಿನಲ್ಲಿ ದಿನದ ಕೆಲಸ ಮುಗಿಸಿ ಸಂಜೆ ಮನೆಗೆ ತೆರಳುತ್ತಿದ್ದ ಮುಗ್ಧ ನಾಗರಿಕರ ಮಾರಣಹೋಮ. ಕೇವಲ ಹನ್ನೆರಡೇ ನಿಮಿಷಗಳಲ್ಲಿ ಏಳು ಕಡೆ ಏಕಕಾಲಕ್ಕೆ ಜುಲೈ 11, 2006 ರಂದು ಸಂಭವಿಸಿದ ಸ್ಫೋಟದಲ್ಲಿ ನೂರಾರು ಮುಗ್ಧರು ಮಸಣದ ಹಾದಿ ಹಿಡಿದಿದ್ದಾರೆ.

ಕನ್ನಡ ಉಳಿಸುವಿಕೆ: ಭಿನ್ನ ನಿಲುವು

 

ಕನ್ನಡದ ಕೊರತೆ ಚರ್ಚೆಯ ಸರಣಿಯಲ್ಲಿ ನಾನು ಮಂಡಿಸಿದ ಅಭಿಪ್ರಾಯವೊಂದಕ್ಕೆ ಶ್ರೀ ಬೆನಕ ಸ್ವಲ್ಪ ದೀರ್ಘವಾದ ಪ್ರತಿಕ್ರಿಯೆಯನ್ನೇ ನೀಡಿದ್ದಾರೆ. ನನ್ನ ಪ್ರತಿಕ್ರಿಯೆ ನಿರೀಕ್ಷಿಸಿದ್ದಕ್ಕಿಂತ ದೊಡ್ಡದಾಗಿದೆ ಎನಿಸಿದ್ದರಿಂದ ಲೇಖನವಾಗಿ ಪ್ರಕಟಿಸಿದ್ದೇನೆ.