ಸರ್ವಭಾಷಾ ಸರಸ್ವತಿ
ದಿವ್ಯವಾದ ವಾಕ್ ಅನ್ನು ದೇವತೆಗಳು ಸೃಜಿಸಿದರು. ಅದನ್ನು ನಾನಾರೂಪದ ಜೀವಿಗಳು ನುಡಿಯುತ್ತವೆ. ಇದು ಋಗ್ವೇದದ ಒಂದು ಸೂಕ್ತಿ. ನಾಗವರ್ಮನ 'ಕರ್ಣಾಟಕಭಾಷಾಭೂಷಣ'ದಲ್ಲಿ ಮಂಗಳಶ್ಲೋಕದ ಅರ್ಥ ಹೀಗಿದೆ. ಯಾವ ಪರಂಜ್ಯೋತಿಯಿಂದ ಸರ್ವಭಾಷಾರೂಪವಾದ ವಾಣಿ ಹೊರಹೊಮ್ಮಿತೋ ಅದಕ್ಕೆ ವಂದನೆ. 'ಕರ್ಣಾಟಕ ಶಬ್ದಾನುಶಾಸನ' ಕರ್ತನಾದ ಭಟ್ಟಾಕಳಂಕನು ಗ್ರಂಥಾರಂಭದಲ್ಲಿ ಮಾಡಿದ ಜಿನೇಶ್ವರಸ್ತುತಿಯೂ ಇದೇ ಅರ್ಥದ್ದಾಗಿದೆ. ಅಲ್ಲಿ ಭಾಷೆಯು ಸರ್ವಭಾಷಾಮಯಿ ಎಂದು ಹೇಳಲಾಗಿದೆ.
- Read more about ಸರ್ವಭಾಷಾ ಸರಸ್ವತಿ
- Log in or register to post comments