ಸಂಪದ ಪುಟಗಳು - ಲೇಖಕರ ಹೆಸರು ಅಥವಾ ಐಡಿ ಬಳಸಿ ಹುಡುಕಿ

Enter a comma separated list of user names.

ಜಾತಿನಿವಾರಣೆ ಮತ್ತು ಲೈಂಗಿಕ ಬೋಧನೆ

"ನಮ್ಮ ದೇಶ ಜಾತ್ಯಾತೀತ ದೇಶ", ನಮ್ಮದು "ಧರ್ಮ ನಿರಪೇಕ್ಷ ದೇಶ", ನಾವು "ದೇಶದ ಹಿಂದುಳಿದವರನ್ನು ಉದ್ಧರಿಸಿಬೇಕು" ಎಂಬ ದೊಡ್ಡ ದೊಡ್ಡ ಮಾತುಗಳನ್ನು ಭಾರತದಲ್ಲಿ ಕೇಳುತ್ತಾ ಬೆಳೆಯದ ಮಕ್ಕಳೇ ಇಲ್ಲ ಎಂದುಕೊಳ್ಳುತ್ತೇನೆ. ತಾತ್ವಿಕವಾಗಿ ಇದು ತುಂಬಾ ಘನವಾದ ಮಾತು. ಈ ಮಾತಿನಲ್ಲಿ ತುಂಬಾ ಮೌಲಿಕವಾದ ವಿಚಾರಗಳಿವೆ. ನಮ್ಮನ್ನು ನಾವು ನೋಡಿಕೊಳ್ಳುವ ರೀತಿಯನ್ನು ಇದು ನಿರ್ದೇಶಿಸುತ್ತದೆ, ನಿರೂಪಿಸುತ್ತದೆ. ಯಾವುದೋ ಅಮೂರ್ತವಾದ ನೆಲೆಯಲ್ಲಿ ನಮ್ಮ ದೇಶದ ಹಿರಿಮೆಯನ್ನು ನಾವು ಅರಿಯುವಂತೆ, ಕೊಂಡಾಡುವಂತೆ, ಸಂಭ್ರಮಿಸುವಂತೆ ಪ್ರೇರೇಪಿಸುತ್ತದೆ. ನಮ್ಮ ಮನಸ್ಸಿನಲ್ಲಿ ದೇಶದ ಬಗ್ಗೆ ಅಮೂಲ್ಯವಾದ ಪರಿಕಲ್ಪನೆಗಳನ್ನು ಬಿತ್ತುತ್ತವೆ.

ಆದರೆ ಈ ಎಲ್ಲ ವಿಚಾರವಾಹಿನಿಗಳು ನಮ್ಮ ದೇಶದ ಜಾತಿಯತೆಯನ್ನು, ಜಾತಿವಾದವನ್ನು ಅಳಿಸಲು ಸಾಧ್ಯವಾಗಿದೆಯೆ ಎಂಬುದು ಪ್ರಶ್ನೆ. ಇಂದಿಗೂ ಜಾತೀಯ ರಾಜಕೀಯ ಫಲ ಕೊಡುತ್ತಲೇ ಇರುವುದು, ಮೀಸಲಾತಿಯಿದ್ದೂ ಹಿಂದುಳಿದ ಜನಾಂಗಗಳು ಹಿಂದುಳಿದೇ ಇರುವುದು, ದಲಿತರ ಮತ್ತು ಹಿಂದುಳಿದವರ ಮೇಲೆ ಸಣ್ಣಪುಟ್ಟ ವಿಷಯಕ್ಕೂ ದೌರ್ಜನ್ಯ ನಡೆಯುವುದು ನಮ್ಮ ದೇಶದಲ್ಲಿ ನಡೆಯುತ್ತಲೇ ಬಂದಿದೆ. ಇಪ್ಪತ್ತೊಂದನೆಯ ಶತಮಾನದಲ್ಲೂ ಜಾತೀಯತೆ ನಮ್ಮ ನಡುವೆ ಪಿಡುಗಾಗಿ ಉಳಿದೇ ಇದೆ. ವೈಜ್ಞಾನಿಕವಾಗಿ ಜಾತಿಯ ಅಸಂಬದ್ಧತೆ ಗೊತ್ತಿದ್ದೂ, ಸಾಮಾಜಿಕವಾಗಿ ಅದರ ಕ್ರೌರ ಗೊತ್ತಿದ್ದೂ, ವಯ್ಯುಕ್ತಿಕವಾಗಿ ಅದರ ಪರಿಣಾಮ ಗೊತ್ತಿದ್ದೂ ಯಾಕೆ ಜಾತಿ ಹಾಗೆಯೇ ಉಳಿದಿದೆ? ಬೆಂಕಿ ಸುಡುತ್ತದೆ ಎಂದು ಗೊತ್ತಿದ್ದೂ ಅದರಿಂದ ಯಾಕೆ ದೂರ ಸರಿಯುತ್ತಿಲ್ಲ?

'ಸಂಪದ'ದ ಸದಸ್ಯರಿಂದ ಬರೆಯಲ್ಪಟ್ಟ ಪುಸ್ತಕಗಳು ಈಗ ಲಭ್ಯ...

ಕೆಲವು ದಿನಗಳ ಹಿಂದೆ [:http://sampada.net/user/modmani|ಮಂಜುನಾಥ್] "ನಾನೊಂದು ಪುಸ್ತಕ ಬರೆದಿರುವೆ. ಎಲ್ಲಿ ಹಾಕಬಹುದು?" ಎಂದು ಕೇಳಿದರು. ಅದರ ಪರಿಣಾಮ [:http://sampada.net/books|ಸಂಪದ ಸದಸ್ಯರ ಪುಸ್ತಕಗಳ ಪುಟ] ಹಾಗೂ ಪಟ್ಟಿ.

ಸದ್ಯಕ್ಕೆ ಅಲ್ಲಿ ಲಭ್ಯವಿರುವ ಸಂಪೂರ್ಣ ಪುಸ್ತಕ ಮಂಜುನಾಥರ [:http://sampada.net/books/3222/Huckleberry_Finn|ಹಕಲ್ಬೆರಿ ಫಿನ್] ಅನುವಾದ. ಉಳಿದೆಲ್ಲ ಪುಸ್ತಕಗಳ ಪುಟಗಳನ್ನು ಇನ್ನೂ ಒಟ್ಟುಗೂಡಿಸಲಾಗುತ್ತಿದೆ.

ಮಂಜುನಾಥರ ಪುಸ್ತಕ ಓದಿ ಹೇಗಿದೆಯೆಂದು ಕಾಮೆಂಟ್ ಮೂಲಕ ಅವರಿಗೆ ತಿಳಿಸಿ. ಅವರು ಬಹಳ ಖುಷಿ ಪಡುವರು.

ಸಂಪದದಲ್ಲಿ ಕೆಲವು ಬದಲಾವಣೆಗಳನ್ನು ಹಮ್ಮಿಕೊಂಡಿರುವುದರಿಂದ ಮುಂಬರುವ ವಾರಗಳಲ್ಲಿ ಎಲ್ಲ ಸಂಪದ ಸದಸ್ಯರಿಗೂ ತಮ್ಮ ತಮ್ಮ ಪುಸ್ತಕಗಳನ್ನು ಸಂಪದದಲ್ಲಿ ಪ್ರಕಟಿಸವ ಸವಲತ್ತು ನೀಡಲಾಗುವುದು (ಈಗಿನಂತೆಯೇ ಪ್ರಕಟಿಸಬೇಕೆಂದಿದ್ದರೆ ನನಗೊಂದು ಸಂದೇಶ ಕಳುಹಿಸಿ).

ಹಾಗೆ ಪ್ರಕಟಿಸಿದ ಪುಸ್ತಕದ ಸ್ವತ್ತು ನಿಮ್ಮದೇ. ಪುಸ್ತಕದಲ್ಲಿರುವ ಬರಹಗಳ ಜವಾಬ್ದಾರಿಯೂ ನಿಮ್ಮದೆ. ಓದಲು ಮಾತ್ರ ಸಂಪದ ಸಮುದಾಯವಲ್ಲದೆ ಸಂಪದದ ಮೂಲಕ ಎಲ್ಲ ಅಂತರ್ಜಾಲದ ಓದುಗರಿಗೂ ಲಭ್ಯ.

ಟೀಮ್ ಮಂಗಳೂರಿನ ಗಾಳಿಪಟ ಗಾಥೆ - ೨

ಟೀಮ್ ಮಂಗಳೂರಿನ ರೂವಾರಿಗಳೆಂದರೆ ಕೇವಲ ನಾಲ್ಕು ಮಂದಿ. ಸರ್ವೇಶ್ ರಾವ್, ಪ್ರಶಾಂತ್, ದಿನೇಶ್ ಹೊಳ್ಳ ಮತ್ತು ಗಿರಿಧರ್ ಕಾಮತ್. ಕಷ್ಟದ ದಿನಗಳಿಂದ, ಯಾರೂ ಕೇಳುವವರಿಲ್ಲದ ಸಮಯದಿಂದ ಏಳು ಬೀಳುಗಳನ್ನು ಅನುಭವಿಸುತ್ತ ತಂಡ ತನ್ನ ದೂರದೃಷ್ಟಿಯನ್ನು ಕಳಕೊಳ್ಳದಂತೆ ಪ್ರವಾಹದ ವಿರುದ್ಧ ಸಾಗಿ ಬಂದವರೆಂದರೆ ಈ ನಾಲ್ಕು ಮಂದಿ ಮಾತ್ರ. ಈ ನಾಲ್ವರ ಪ್ರಯತ್ನದಿಂದಲೇ ಟೀಮ್ ಮಂಗಳೂರು ತನ್ನ ಈಗಿನ ಯಶಸ್ಸಿನ ಹೊಸ್ತಿಲನ್ನು ತಲುಪಿದೆಯಲ್ಲದೇ ಬೇರೆ ಯಾರದೇ ಯಾವುದೇ ರೀತಿಯ ಕೊಡುಗೆ ಇಲ್ಲ.

ಕಾವೇರಿ ಪ್ರತಿಭಟನೆ ಮತ್ತು ಕರಾವಳಿ ಜಿಲ್ಲೆಗಳು

ಕಾವೇರಿ ನ್ಯಾಯ ಮಂಡಳಿಯ ತೀರ್ಪು ಬಂದ ನಂತರ 'ಕರ್ನಾಟಕಾದ್ಯಂತ ಪ್ರತಿಭಟನೆಗಳು ನಡೆದವು' ಆದರೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಮಾತ್ರ ಇದಕ್ಕೆ ಸಂಬಂಧಿಸಿ ಏನೂ ನಡೆಯಲಿಲ್ಲ. ಸರಕಾರ ಪರೋಕ್ಷ ಬೆಂಬಲ ನೀಡಿದ್ದ ಬಂದ್ ನಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳು ಭಾಗವಹಿಸಲಿಲ್ಲ. ಅರ್ಥಾತ್ ಯಾರೂ ಬಂದ್ ಮಾಡಲಿಲ್ಲ. ಇದೆಲ್ಲಾ ಏನನ್ನು ತೋರಿಸುತ್ತದೆ?

ಕರಾವಳಿ ಜಿಲ್ಲೆಗಳವರಿಗೆ ಕರ್ನಾಟಕದ ಹಿತದ ಕುರಿತು ಯಾವ ಕಾಳಜಿಯೂ ಇಲ್ಲವೇ?

ಈ ಮೊದಲು ವರ ನಟ ಡಾ.ರಾಜ್ ಕುಮಾರ್ ರನ್ನು ಕಾಡುಗಳ್ಳ ವೀರಪ್ಪನ್ ಅಪಹರಿಸಿದಾಗಲೂ ಕರಾವಳಿ ಜಿಲ್ಲೆಗಳು ಹೆಚ್ಚು ಕಡಿಮೆ ಇಂಥದ್ದೇ ಪ್ರತಿಕ್ರಿಯೆಯನ್ನು ತೋರಿದ್ದವು. ಇದನ್ನು ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ಸಾ.ರಾ. ಗೋವಿಂದು ಅವರು ಕರಾವಳಿ ಜಿಲ್ಲೆಯ ಜನಗಳ ವರ್ತನೆಯನ್ನು ಖಂಡಿಸಿದ್ದರು. ಕಾವೇರಿ ವಿಷಯದಲ್ಲಿ ಕರಾವಳಿ ಜಿಲ್ಲೆಗಳ ಜನರು ತೋರಿಸಿದ ನಿರ್ಲಿಪ್ತ ಮನೋಭಾವವನ್ನೂ ಹಲವರು ಖಂಡಿಸಿದರು. ಆದರೆ ಇದು ಹಿಂದಿನಷ್ಟು ಸುದ್ದಿಯಾಗಲಿಲ್ಲ.

ಕರ್ನಾಟಕದ ಇತಿಹಾಸ ಮತ್ತು ರಾಜಕಾರಣದ ಕುರಿತು ಬಹಳ ಅಧ್ಯಯನ ನಡೆಸಿರುವ ಜೇಮ್ಸ್ ಮೇನರ್ ಕೂಡಾ ಒಮ್ಮೆ ಕರಾವಳಿ ಜಿಲ್ಲೆಗಳನ್ನು ಸೋಷಿಯಲೀ ಎಕ್ಸೆಂಟ್ರಿಕ್ ಡಿಸ್ಟ್ರಿಕ್ಟ್ಸ್ ಎಂದು ಹೇಳಿದ್ದರು. ಕರಾವಳಿ ಜಿಲ್ಲೆಗಳು ಕರ್ನಾಟಕದ ಮುಖ್ಯವಾಹಿನಿಯ ಜತೆಗೆ ಒಂದಾಗಿಲ್ಲ ಎಂಬುದನ್ನು ಈ ಎಲ್ಲಾ ಅಂಶಗಳು ಎತ್ತಿ ತೋರಿಸುತ್ತಿವೆ. ಆದರೆ ಇದರ ಕಾರಣಗಳು ಮೈನ್ ಲ್ಯಾಂಡ್ ಕರ್ನಾಟಕ ಎಂದು ಕರೆಯಬಹುದಾದ ಪ್ರದೇಶಗಳ ಸಾಮಾಜಿಕ ಮನಸ್ಥಿತಿಯಲ್ಲಿದೆ ಎಂದು ನನಗನ್ನಿಸುತ್ತದೆ.

ಅನುಭವಾಮೃತ

ಸುಲಿದ ಬಾಳೆಯ ಹಣ್ಣಿನಂದದಿ
ಕಳಿದ ಸಿಗುರಿನ ಕಬ್ಬಿನಂದದಿ
ಅಳಿದ ಉಷ್ಣದ ಹಾಲಿನಂದದಿ ಸುಲಭವಾಗಿರ್ಪ
ಲಲಿತವಹ ಕನ್ನಡದ ನುಡಿಯಲಿ
ತಿಳಿದು ತನ್ನೊಳು ತನ್ನ ಮುಕ್ತಿಯ
ಗಳಿಸಿಕೊಂಡರೆ ಸಾಲದೇ?

ಮೋಜು-ಗೋಜು: ಕಪ್ಪು ಕುಂಕುಮ...

ಮೊನ್ನೆ ಟಿವಿಯಲ್ಲಿ ಮಕ್ಕಳ ಕಾರ್ಯಕ್ರಮವೊಂದರಲ್ಲಿ ಇಂಗ್ಲೀಷಿನ ನಾಲಗೆ ತಿರುಚೊಂದು (ಟಂಗ್ ಟ್ವಿಸ್ಟರ್) ಬರುತ್ತಿತ್ತು. "ಬಿಟ್ಟಿ ಬಾಟ್ ಸಮ್ ಬಟರ್, ಬಟ್ ದ ಬಟರ್ ವಾಸ್ ಬಿಟ್ಟರ್..." ಹೀಗೆ ಸಾಗುತ್ತದೆ ಆ ಸಾಲು. ಆಗ ನನ್ನ ಗಮನ ಕನ್ನಡದಲ್ಲಿನ ನಾಲಗೆ ತಿರುಚುಗಳ ಬಗ್ಗೆ ಹರಿಯಿತು. ನನಗೆ ಕನ್ನಡದ ಎರಡು ಸರಳವಾದ, ಆದರೆ ಬಹಳ ಸೊಗಸಾದ ನಾಲಗೆ ತಿರುಚುಗಳು ಗೊತ್ತು.

೧. ಕಪ್ಪು ಕುಂಕುಮ, ಕೆಂಪು ಕುಂಕುಮ
೨. ಕಾಗೆ ಪುಕ್ಕ, ಗುಬ್ಬಿ ಪುಕ್ಕ

ಎಲ್ಲಿ, ಮೇಲಿನ ಸಾಲುಗಳಲ್ಲಿ ಯಾವುದಾದರೂ ಒಂದನ್ನು ವೇಗವಾಗಿ ಹೇಳಲು ಪ್ರಯತ್ನಿಸಿ. ನಿಧಾನವಾಗಿ ಹೇಳಿದರೆ ಏನೂ ಗಮ್ಮತ್ತಿರುವುದಿಲ್ಲ. ಸಾಧ್ಯವಾದಷ್ಟೂ ವೇಗವಾಗಿ ಹೇಳಬೇಕು. ಆದರೆ, ವೇಗ ಹೆಚ್ಚಿಸಬೇಕೆ ಹೊರತು ಪದಗಳು ಕಲಸಿಕೊಂಡು ಹೋಗಬಾರದು; ನಾಲಗೆ ತಡವರಿಸಬಾರದು. ಇದು ನಾಲಗೆ ತಿರುಚುಗಳ ಮೂಲ ನಿಯಮ. ಸುಮಾರು ಮೂರು ಅಥವ ನಾಲ್ಕನೇ ಸಾರಿ ವೇಗವಾಗಿ ಹೇಳುವಷ್ಟರಲ್ಲಿ ನಿಮ್ಮ ನಾಲಗೆ ಹೇಗೆ ತೊಡರಿಕೊಳ್ಳುತ್ತೆ ಅಂತ ನೀವೇ ಅನುಭವಿಸಿ, ಆನಂದಿಸಿ! ಅಂದಹಾಗೆ, ಈ ತಮಾಷೆಯ ನಾಲಗೆ ತಿರುಚಿನ ಆಟ ಹೇಗಿತ್ತು ಅಂತ ಹೇಳೋದನ್ನು ಮರೆಯದಿರಿ.

ಮೇಲಿನ ಸಾಲುಗಳು ನೋಡಲು ಎಷ್ಟು ಚಿಕ್ಕದಾಗಿ, ಸರಳವಾಗಿ ಕಂಡರೂ, ಅದರ ಪೂರ್ಣ ರೂಪ ನಮ್ಮ ಅರಿವಿಗೆ ಬರುವುದು ವೇಗವಾಗಿ ಹೇಳಿದಾಗ ಮಾತ್ರ.

ಆದರೆ, ಬೇಸರವಾಗುತ್ತಿರುವ ವಿಚಾರವೆಂದರೆ ನನಗೆ ಕನ್ನಡದಲ್ಲಿ ಈ ರೀತಿಯ ಒಂದೆರಡು ನಾಲಗೆ ತಿರುಚುಗಳು ಮಾತ್ರ ಗೊತ್ತು. ನಿಮ್ಮಲ್ಲಿ ಯಾರಿಗಾದರೂ ಇನ್ನೂ ಹಲವಾರು ಕನ್ನಡದ ನಾಲಗೆ ತಿರುಚುಗಳು ತಿಳಿದಿದ್ದಲ್ಲಿ, ದಯವಿಟ್ಟು ಹಂಚಿಕೊಳ್ಳುತ್ತೀರಾ?

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯೂ ನಾಯಿಯೂ

ಕೊನೆಗೂ ಬೆಂಗಳೂರು ಮಹಾನಗರ ಪಾಲಿಕೆಯು ನಾಯಿಗಳ ಮಹಾ ಮಾರಣ ಹೋಮಕ್ಕೆ ಸಜ್ಜಾಗಿದೆ.. ದುಃಖದ ವಿಷಯವೆಂದರೆ ಮನೇಕಾ ಗಾಂಧಿಯವರು ನಾಯಿಗಳನ್ನು ಸಾಯಿಸ ಬಾರದೆಂದು ಹೇಳಿದ್ದಾರೆ. ಅಂದರೆ ಮಕ್ಕಳ ಜೀವಕ್ಕಿಂತ ನಾಯಿಗಳ ಜೀವ ಅಮೂಲ್ಯವಾದದ್ದು. ಇಲ್ಲಿ ಮುಖ್ಯವಾಗಿ ನಾವು ಚಿಂತಿಸಬೇಕಾದ ವಿಷಯ ನಾಯಿಗಳು ಯಾಕೆ ಮಕ್ಕಳ ಮೇಲೆ ದಾಳಿ ಮಾಡುತ್ತಿವೆ? ಇಂದಿನ ನಗರ ಜೀವನದಲ್ಲಿ ಪ್ರಿಡ್ಜ ಸಂಕೃತಿಯಲ್ಲಿ ,ಕಸದ ತೊಟ್ಟಿ ಕಾಣೆಯಾಗುತ್ತಿರುವ ಈ ದಿನಗಳಲ್ಲಿ ಅವಕ್ಕೆ ಸಾಕಷ್ಟು ಆಹಾರ ಸಿಗುತ್ತಿಲ್ಲ. ಅಲ್ಲದೇ ನಗರ ಪಾಲಿಕೆಯವರೇ ಹೇಳುವಂತೆ ಮಾಂಸದ ಅಂಗಡಿಯವರು ಚುರು ಪಾರುಗಳನ್ನು ಬಿಸಾಡಿ ಅವನ್ನು ರಕ್ತಪಿಪಾಸುಗಳನ್ನಾಗಿ ಮಾಡಿರುವದು.

ನಮಸ್ತೆ

ನಮಸ್ಕಾರ,
ಸಂಪದವನ್ನು ತುಂಬಾ ಚೆನ್ನಾಗಿ ನಡೆಸುತ್ತಿರುವ ಆಡಳಿತ ವರ್ಗದವರಿಗೂ, ಪಾಲ್ಗೊಳ್ಳುತ್ತಿರುವ ಸಹೃದಯಿ ಮಿತ್ರರಿಗೂ ವಂದನೆಗಳು.