ಸಂಪದ ಪುಟಗಳು - ಲೇಖಕರ ಹೆಸರು ಅಥವಾ ಐಡಿ ಬಳಸಿ ಹುಡುಕಿ

Enter a comma separated list of user names.

ಕರ್ನಾಟಕ ಕ್ರಿಕೆಟ್ - ೩

ಯೆರೆ ಗೌಡ - ಇವರ ಪೂರ್ಣ ಹೆಸರು ಯೆರೆ ಕಾರೆಕಲ್ಲು ತಿಪ್ಪಣ್ಣ ಗೌಡ. ರಾಯಚೂರಿನಿಂದ ಉದ್ಭವಿಸಿದ ಅತ್ಯುತ್ತಮ ಸೆಲ್ಫ್ ಮೇಡ್ ಆಟಗಾರ. ಹೆಚ್ಚಿನ ಪ್ರತಿಭೆ ಇಲ್ಲದೆ ಸ್ವಂತ ಪರಿಶ್ರಮದಿಂದ ಕಷ್ಟಪಟ್ಟು ಕ್ರಿಕೆಟ್ ಜಗತ್ತಿನಲ್ಲಿ ಮೇಲೇರಿದ ಅಸಾಧಾರಣ ಶ್ರಮಜೀವಿ. ಪ್ರಸಕ್ತ ರಣಜಿ ಋತುವಿನಲ್ಲಿ ಕರ್ನಾಟಕ ತಂಡದ ನಾಯಕರಾಗಿರುವ ಗೌಡರಿಗೆ ೩೫ ವರ್ಷ ವಯಸ್ಸು.

ರಾಬ್ಡಿದೇವಿಗೆ ತಾನು ಸತ್ತಂತೆ ಕನಸು ಬಿದ್ದಾಗ...

   ರಾಬ್ಡಿದೇವಿಗೆ (ಅದೇಪ್ಪಾ, ಶ್ರೀಮತಿ ಲಾಲೂ) ಒಮ್ಮೆ ತಾನು ಸತ್ತಂತೆ ಕನಸು ಬಿತ್ತಂತೆ. ಕೇವಲ ಕನಸು ಸ್ವಾಮೀ; ನೂರಲ್ಲ, ಇನ್ನೂರು ವರ್ಷ ಬದುಕಲಿ ಬಿಡಿ, ನಮಗೇನು? ರಾಬ್ಡಿಗೆ ಕನಸು ಬಿದ್ದಾಗ ನಮ್ಮ ಲಾಲೂ ಸಾಹೇಬರು ಮಾತ್ರ ಇನ್ನೂ ಗುಂಡುಕಲ್ಲಿನ ಹಾಗೆ ಬದುಕಿದ್ದಾರೆ ಅನ್ನೋದು ನೆನಪಿಡಲೇಬೇಕಾದ ವಿಚಾರ. ಸತ್ತಮೇಲೆ ಇನ್ನೇನು, ಕೊನೆಯ ವಿಚಾರಣೆ ಆಗಲೇಬೇಕಲ್ಲ. ರಾಬ್ಡಿ ಕೂಡಾ ಯಮಲೋಕದಲ್ಲಿ ಯಮಧರ್ಮನ ಮುಂದೆ ಹಾಜರಾದಳು. ಆಕೆಗೂ ಸಿನೆಮಾ ನೋಡಿ, ಪುಸ್ತಕ-ಪುರಾಣ ಓದಿ, ಯಮಲೋಕ ಅಂದರೆ ಹೀಗಿರುತ್ತೆ ಅಂತ ಒಂದು ಕಲ್ಪನೆಯಿತ್ತು. ಆದರೆ ಆಶ್ಚರ್ಯ ಅಂದರೆ ಯಮಲೋಕ ಹಾಗಿರಲೇ ಇಲ್ಲ! ಕಾಲಕ್ಕೆ ತಕ್ಕಂತೆ ಇದೂ ಬದಲಾಗಿದೆ ಅಂತಂದುಕೊಂಡಳು ರಾಬ್ಡಿದೇವಿ.

ನಾಗರೀಕ ಜವಾಬ್ದಾರಿಗಳು

ದಿನನಿತ್ಯದ ಜೀವನದಲ್ಲಿ ನಾವು ತೊಂದರೆಗಳಾದಾಗ ಹಲವು ಬಾರಿ ಸರ್ಕಾರವನ್ನು, ಸುತ್ತಮುತ್ತವಿರುವವರನ್ನು ಆಗಾಗ ದೂಷಿಸುತ್ತ, ಬೈದುಕೊಳ್ಳುತ್ತಾ ಇರುವುದು ಸರ್ವೇಸಾಮಾನ್ಯ. ತಕ್ಷಣದ ವಿವೇಚನೆಗೆ, ಕಾಮನ್ ಸೆನ್ಸಿಗೆ ಇವುಗಳಿಗೆಲ್ಲ ನಾವು ಜವಾಬ್ದಾರರಲ್ಲ ಅನ್ನಿಸುತ್ತದೆ, ಉದಾಹರಣೆಗೆ ನೀರು ಪೋಲು ಮಾಡುವುದು, ರಸ್ತೆಯನ್ನು ಅಗೆದು ಸರಿಯಾಗಿ ಮುಚ್ಚದೇ ಹೋಗುವುದು, ಕಂಡ ಕಂಡ ಹೊತ್ತಿನಲ್ಲಿ ವಿದ್ಯುತ್ ಕಡಿತ, ವಾಹನ ಸಂಚಾರ ನಿಯಮಗಳನ್ನು ಪಾಲಿಸದೇ ಇರುವುದು ಇತ್ಯಾದಿ..

ಆದರೆ ಅವುಗಳ ಬಗ್ಗೆ ಸ್ವಲ್ಪ ನಿಧಾನಕ್ಕೆ ಯೋಚಿಸಿದಾಗ ನೇರವಾಗಿಯೋ/ಪರೋಕ್ಷವಾಗಿಯೋ ಇದೇ ಆರೋಪಗಳಲ್ಲಿ ದೋಷಮುಕ್ತರಲ್ಲವೆನ್ನುವುದು ನಾಗರೀಕರಿಗೆ ಸುಮಾರು ಪಾಲಿಗೆ ಸತ್ಯ.

ಇಲ್ಲಿ ಕೆಲವು ಉದಾಹರಣೆಗಳನ್ನು ಕೊಡುತ್ತೇನೆ.
೧. ಮನೆಯಲ್ಲಿನ ಬೋರ್‍ವೆಲ್ ನೀರಿನ ಬಳಕೆಯನ್ನು ಗಮನಿಸಿ: ಸೈಟ್ ನಿಮ್ಮದೇ, ಬಾವಿ ತೆಗೆಸಿದ್ದು ನೀವೇ , ಪಂಪು ವಿದ್ಯುತ್ತಿನ ಖರ್ಚು ನಿಮ್ಮದೇ ಇರಬಹುದು,ಆದರೆ ಅಂತರ್ಜಲ ನಿಮ್ಮದೇ? ಅದನ್ನು ಸ್ವಂತ ಆಸ್ತಿಯಂತೆ ಉಪಯೋಗಿಸುವುದು ಎಷ್ಟು ಸರಿ, ಅದೂ ಅಲ್ಲದೆ ಅಂತರ್ಜಲಕ್ಕೆ ನೀರು ವಾಪಾಸಾಗಲು ನಿಮ್ಮ ಯಾವುದೇ ಚಟುವಟಿಕೆ ಕಾರಣವಲ್ಲದಿದ್ದಾಗ ಎಲ್ಲರಿಗೂ ಸೇರಬೇಕಾಗಿರುವ ಅಂತರ್ಜಲವನ್ನು ಬೋರಿನ ಒಡೆಯಾರಿಗಿ ನಾವು ಒಬ್ಬರೇ ದೋಚಿದಂತಾಗುವುದಿಲ್ಲವೇ? ಬೇಕಿದ್ದರೆ ಎಲ್ಲರೂ ಹಾಗೆಯೇ ಉಪಯೋಗಿಸಿಕೊಳ್ಳಲಿ ಎನ್ನುವುದು ಧಿಮಾಕಿನ ಮಾತಲ್ಲವೇ?
೨. ಪದೇ ಪದೇ ಕರೆಂಟ್ ಹೋಗುತ್ತದೆ, ಇನ್ವರ್ಟರ್/ಬ್ಯಾಟರಿ ಉಪಯೋಗಿಸುತ್ತೇವೆ: ಅಲ್ಲ, ಲೋಡ್ ಶೆಡ್ಡಿಂಗ್ ಮಾಡುವುದು ಯಾಕೆ? ನಮ್ಮಲ್ಲಿರುವ ಸಂಪನ್ಮೂಲಗಳು ಕೆಲವೊಮ್ಮೆ ನಮ್ಮ ವಿದ್ಯುತ್ ಬೇಡಿಕೆಯನ್ನು ಪೂರೈಸಲು ಸಾಕಾಗುವುದಿಲ್ಲ, ಅದಕ್ಕೆ

ಮನುಷ್ಯನ ಜೀವನ ಎಂಬ ಬಾಣಕ್ಕೆ ಒಂದೇ ಗುರಿ ಇರುತ್ತದೆ....

ಕರ್ನಾಟಕ ಕುಲ ಪುರೋಹಿತ ಆಲೂರು ವೆಂಕಟರಾಯರ ಬಗ್ಗೆ...ನಾನು ಬರೆದು ಹಾಕಬೇಕಿದೆ ..
ಆಲೂರು ವೆಂಕಟರಾಯರು ಅವರು ಕುಲ ಪುರೋಹಿತ ಆದದ್ದು ಹೇಗೆ? ಏಕೆ ?

ಕಿಟ್ಟೆಲ್ ಬಗ್ಗೆ ನಿಮಗೆಷ್ಟು ಗೊತ್ತು?

ಒಮ್ಮೆ ಕಿಟ್ಟೆಲ್ ಬಗ್ಗೆ ಯಾರಿಗಾದರೂ ಹೆಚ್ಚು ತಿಳಿದಿದ್ದರೆ ತಿಳಿಸಿ ಎಂದು ಬರೆದಿದ್ದೆ. ಯಾರೂ ಉತ್ತರಿಸಿರಲಿಲ್ಲ.

ಕನ್ನಡ ಪುಸ್ತಕಗಳು - Getting Started

ನಮ್ಮಲ್ಲಿ ಎಷ್ಟೋ ಜನಕ್ಕೆ ಕನ್ನಡ ಪುಸ್ತಕಗಳನ್ನ ಓದೋಕ್ಕೆ ಆಸಕ್ತಿ ಇದ್ರೂ "ಯಾವುದನ್ನ ಓದೋದು ?" ಅನ್ನೋದೇ ದೊಡ್ಡ ಪ್ರಷ್ಣೆ. ನನಗೂ ಅದೇ ಪ್ರಷ್ಣೆ ಕಾಡ್ತಾ ಇತ್ತು. ಆದ್ರೆ ನನ್ನ ಗೆಳೆಯ ಮಂಜು ನಮ್ಮಂತವರಿಗಾಗಿನೇ ಕನ್ನಡ ಪುಸ್ತಕಗಳ ಒಂದು ಪಟ್ಟಿ ತಯಾರ್ಸಿದಾರೆ. ಈ ಪಟ್ಟಿ Sampleಗೆ ಮಾತ್ರ, ಇನ್ನೂ ತುಂಬಾ ಪುಸ್ತಕಗಳಿವೆ. ಪಟ್ಟಿನ ಡೌನ್ಲೋಡ್ ಮಾಡುವ ಲಿಂಕ್