ಗಣೇಶ ಪಂಚರತ್ನ
ಸಂಸ್ಕೃತ-ಕನ್ನಡ ಉಭಯಭಾಷಾ ಕೋವಿದರಾದ ನನ್ನ ಅಜ್ಜ ಬೀರೂರು ಚಿದಂಬರ ಜೋಯಿಸರು ವನಸುಮದಂತೆ ಬಾಳಿ-ಬದುಕಿದವರು. ಕಾಶೀಪಂಡಿತಸಭಾದಿಂದ "ಸಂಸ್ಕೃತಕವಿಕಂಠೀರವ" ಎಂಬ ಬಿರುದನ್ನೂ, ಕರ್ನಾಟಕ ಸರ್ಕಾರ-ಗಾಂಧೀ ಸ್ಮಾರಕ ನಿಧಿಯ ವತಿಯಿಂದ ಸುವರ್ಣ ಪದಕವನ್ನೂ ಗಳಿಸಿದ್ದ ಅಜ್ಜನ ಲೇಖನಿಯಿಂದ ಹಲವಾರು ಅತ್ಯುತ್ತಮ ಕೀರ್ತನೆ,ಭಜನೆ,ಕಾವ್ಯಗಳು ಹೊರಹೊಮ್ಮಿವೆ. ಇವರ ಆಯ್ದ ಭಜನೆ-ಕೀರ್ತನೆಗಳ ಸಂಕಲನವಾದ "ಭಜನಮಣಿಮಾಲಾ" ಈಗಾಗಲೇ ನಾಲ್ಕು ಮುದ್ರಣಗಳನ್ನು ಕಂಡಿದೆ. ಇದರಿಂದ ಆಯ್ದ ಗಣಪತಿಯನ್ನು ಸ್ತುತಿಸುವ ಕೀರ್ತನೆ "ಗಣೇಶ ಪಂಚರತ್ನ"ವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಬಯಸುತ್ತೇನೆ. ಸಂಪೂರ್ಣ "ಗಣೇಶ ಅಥರ್ವಶೀರ್ಷ"ದ ಸಾರವನ್ನು ಈ ಭಜನೆಯ ಐದು ಚರಣಗಳಲ್ಲಿ ಕಾಣಬಹುದಾಗಿದೆ.
- Read more about ಗಣೇಶ ಪಂಚರತ್ನ
- Log in or register to post comments