ಸಂಪದ ಪುಟಗಳು - ಲೇಖಕರ ಹೆಸರು ಅಥವಾ ಐಡಿ ಬಳಸಿ ಹುಡುಕಿ

Enter a comma separated list of user names.

ಸಾಹಿತ್ಯಲೋಕದಲ್ಲಿ ಸ್ತ್ರೀವಾದ

ಪವಿತ್ರ ಭೂಮಿಯ ಹೆಂಗಳೆಯರು ಕಾಣಿಸಿಕೊಂಡಿದ್ದು ಪುತ್ರವಾತ್ಸಲ್ಯದ ಮಾತೃಗಳಾಗಿ, ಭ್ರಾತೃವಾತ್ಸಲ್ಯದ ಭಗಿನಿಗಳಾಗಿ, ಪತಿಭಕ್ತಿಯುಳ್ಳ ಪತ್ನಿಯಾಗಿ, ಮತ್ತು ಅಂತರಂಗದ ಸಖಿಯಾಗಿ. ಇದು ನಮ್ಮ ಸಂಸ್ಕೃತಿ. ಸ್ತ್ರೀ ಮನಸ್ಸು ಇದರಿಂದಾಚೆ ಹೋಗಲಾರದು. ಅವಳು ಭಾವನೆಗಳಿಗೆ ಬೆಲೆಕೊಡುತ್ತಾಳೆ. ಅದರ ಜೊತೆಯಾಗಿಯೇ ಬೆಳೆಯುತ್ತಾಳೆ. ಎಲ್ಲಿಯತನಕ ಭಾವನೆಗಳು ಬದುಕಿರುವುದೋ ಅಲ್ಲಿಯವರೆಗೆ ಸ್ತ್ರೀ ಅಂದರೆ ಒಂದೇ ಅರ್ಥ.

ಝೆನ್ ೧೧: ವಾದದಲ್ಲಿ ಗೆದ್ದಿದ್ದು ಹೀಗೆ

ಅದೊಂದು ಝೆನ್ ದೇವಾಲಯ. ಅಲ್ಲಿನ ನಿವಾಸಿಗಳನ್ನು ಬೌದ್ಧ ಧರ್ಮಕ್ಕೆ ಸಂಬಂಧಿಸಿದ ಚರ್ಚೆಗಳಲ್ಲಿ ಸೋಲಿಸಿದ ಸಂನ್ಯಾಸಿಗೆ ಅಲ್ಲಿರಲು ಅವಕಾಶ ದೊರೆಯುತ್ತಿತ್ತು. ಜಪಾನಿನ ಉತ್ತರಭಾಗದಲ್ಲಿದ್ದ ಆ ದೇವಾಲಯದಲ್ಲಿ ಇಬ್ಬರು ಸನ್ಯಾಸಿಗಳಿದ್ದರು. ದೊಡ್ಡವನು ತುಂಬ ಓದಿಕೊಂಡಿದ್ದ, ಚಿಕ್ಕವನು ಮೂರ್ಖ. ಅವನಿಗೆ ಇದ್ದದ್ದು ಒಂದೇ ಕಣ್ಣು. ಅಲೆಮಾರಿ ಸನ್ಯಾಸಿಯೊಬ್ಬ ಅಲ್ಲಿಗೆ ಬಂದ. ದೇವಾಲಯದಲ್ಲಿ ಉಳಿಯಲು ಅವಕಾಶ ಕೇಳಿದ. ದೊಡ್ಡ ಸನ್ಯಾಸಿ ಅಂದು ದಿನವೆಲ್ಲ ಓದಿ, ಬರೆದು, ವಾದ ಮಾಡಿ ಸುಸ್ತಾಗಿದ್ದ. ಆದ್ದರಿಂದ ಚಿಕ್ಕವನನ್ನು ಕರೆದು ನೀನೇ ವಾದ ಮಾಡು ಎಂದ. ಹುಷಾರು, ಮೌನ ವಾಗ್ವಾದವನ್ನು ಮಾಡುತ್ತೇನೆ ಎಂದು ಮೊದಲೇ ಹೇಳಿಬಿಡು ಎಂದು ಎಚ್ಚರಿಕೆಯನ್ನೂ ನೀಡಿದ.

ರಿಲಯನ್ಸ್‌ನಲ್ಲಿ ಕನ್ನಡ

ನಿನ್ನೆ ನನ್ನ ರಿಲಯನ್ಸ್ ಫೋನಿಗೆ ಒಂದು ಸಂದೇಶ ಬಂತು. ಅದನ್ನು ತೆರದು ನೋಡಿದಾಗ ಆಶ್ವರ್ಯವಾಯಿತು. ಅದು ಅಚ್ಚ ಕನ್ನಡದಲ್ಲಿತ್ತು. ಚಿತ್ರ ನೋಡಿ.


ರಿಲಯನ್ಸಿನಲ್ಲಿ ಕನ್ನಡ

ಈಗಾಗಲೇ ಹಚ್ ಕಂಪೆನಿಯವರ ಕನ್ನಡ ವಿರೋಧಿ ನೀತಿ ಬಗ್ಗೆ ಚರ್ಚೆ ನಡೆದುದು ಎಲ್ಲರಿಗೂ ತಿಳಿದಿದೆ. ಈ ಸಂದರ್ಭದಲ್ಲಿ ರಿಲಯನ್ಸ್‌ನವರು ಒಳ್ಳೆಯ ಕೆಲಸ ಮಾಡಿದ್ದಾರೆ ಎನ್ನಬಹುದು. ಹಾಗೆಂದು ಹೇಳಿ ನಾನು ರಿಲಯನ್ಸ್ ಪರ ಇದ್ದೇನೆ ಎಂದು ತಿಳಿದುಕೊಳ್ಳಬೇಡಿ. ಅವರ ಸೇವೆ ಬಗ್ಗೆ ನನಗೆ ಹಲವು ಅಸಮಾಧಾನಗಳಿವೆ. ಅವುಗಳ ಬಗ್ಗೆ ಈಗ ಬೇಡ. ಇನ್ನೂ ಒಂದು ವಿಷಯ. ರಿಲಯನ್ಸ್ ಅವರ ಗ್ರಾಹಕ ಸೇವಾ ಕೇಂದ್ರಕ್ಕೆ ಫೋನ್ ಮಾಡಿ ಕನ್ನಡ ಭಾಷೆಯನ್ನು ಆಯ್ಕೆ ಮಾಡಿ ಕೇಳಿ. ಅಪ್ಪಟ ಸ್ಪಷ್ಟ ಕನ್ನಡದಲ್ಲಿ ಮಾತನಾಡುತ್ತಾರೆ!

ಕನ್ನಡ: ಬರೇ ಪುಳಿಚಾರ್ ಭಾಷೆ?

ಹಾರುವವುಗಳಲ್ಲಿ ವಿಮಾನವನ್ನೂ, ಎರಡು ಕಾಲಿನವುಗಳಲ್ಲಿ ಮನುಷ್ಯರನ್ನೂ, ನಾಲ್ಕು ಕಾಲಿನವುಗಳಲ್ಲಿ ಕುರ್ಚಿ, ಮೇಜುಗಳನ್ನು ಮಾತ್ರ ತಿನ್ನದೇ ಬಿಟ್ಟಿರುವ ನನ್ನಂಥ ಕನ್ನಡಿಗರಿಗೆ ಈ ಪ್ರಶ್ನೆ ಆಗಾಗ ಕಾಡುತ್ತಿರುತ್ತದೆ. ಹಾಗಾಗಿ ಆಹಾರದ ವಿಷಯದಲ್ಲಿ ನಮ್ಮ ಕನ್ನಡಾಭಿಮಾನ ಸ್ವಲ್ಪ ಕಡಿಮೆಯೇ. ಇಲ್ಲಿ ನಾವು ಕನ್ನಡಾಭಿಮಾನಿಗಳಾಗಿಬಿಟ್ಟರೆ ಕೇವಲ ಮಾಂಸದ ‘ಸಾರು’, ಮಾಂಸದ ‘ಪಲ್ಯ’ ಇಲ್ಲವೇ ಮೀನಿನ ‘ಸಾರು’, ‘ಪಲ್ಯ’ಗಳನ್ನೇ ತಿನ್ನಬೇಕಾಗುತ್ತದೆ.

ಹಿತನುಡಿ

ಉತ್ತಮ ಗುರು ತನ್ನ ಶಿಷ್ಯರಿಂದಲೇ ಕಂಡು ಹಿಡಿಯಲ್ಪಡುತ್ತಾನೆ. ಯಾವ ಶಿಷ್ಯ ಗುರುವಿಗಿಂತ ಮುಂದೆ ಹೋಗುತ್ತಾನೋ ಅವನೇ ಉತ್ತಮ ಗುರು.

ಹಿತನುಡಿ

ಮೇಘವೃಷ್ಟಿಯಂತೆ (ಮಳೆಯಂತೆ) ಉಪದೇಶ ಕೊಡು. ಗುರು ಯಾರನ್ನೂ ಶಿಷ್ಯನನ್ನಾಗಿ ಮಾಡಿಕೊಳ್ಳುವುದು ಬೇಡ. ಶಿಷ್ಯನಾದರೆ ಅವನ ಕರ್ಮದ ಅರ್ಧಾಂಶವನ್ನು ಗುರು ಅನುಭವಿಸಬೇಕು.

ವಿಜ್ಞೇಶ್ವರನನ್ನು ಚಿತ್ರಿಸುವ ಕಲೆ

ಸರಿಯಾಗಿ ಒಂದು ವರ್ಷದ ಹಿಂದೆ ಚಿತ್ರಕಲೆ, ಕಂಪ್ಯೂಟರ್ ಗ್ರಾಫಿಕ್ಸಿಗೆ ಸೂರೆ ಹೋಗಿ 'ಕಂಜ್ಯೂರರ್' ಎಂಬ ಹೆಸರಲ್ಲಿ [:http://conjurer.deviantart.com/|ಡೀವಿಯೆಂಟ್ ಆರ್ಟ್ ತಾಣದಲ್ಲಿ ಖಾತೆಯೊಂದನ್ನು ತೆರೆದಿದ್ದೆ]. ಆಗ ಪರಿಚಯವಾದವರು ಹಲವು ಚಿತ್ರಕಾರರು, ಕಲಾಕಾರರು, ಗ್ರಾಫಿಕ್ಸ್ ಪಂಡಿತರು. ನನ್ನ ಇದೆಲ್ಲದರ ತಿಳುವಳಿಕೆ ಎಷ್ಟರ ಮಟ್ಟಿಗೆ (ಕಳಪೆಯಾಗಿ) ಇರುವುದೆಂಬ ಪರಿಚಯ ಮಾಡಿಕೊಟ್ಟದ್ದು ಅದೇ ಸಮುದಾಯವೆ!

ಪು ತಿ ನ

ಸತ್ ಆವುದೋ ಅದ ಸ೦ಪರ್ಕಿಸದಿರೆ ಹತ್ತಿರ ಸುಳಿಯದು ಆನ೦ದ ಸತ್ ಇಗು ಆನ೦ದಕು ಕಲೆ ಸೇತುವೆ ಉತ್ತಾನಿಪನರಿವಿನ ಛ೦ದ.

ಪು ತಿ ನ - ೪

ಪದದೊಳಿಲ್ಲ ತಾನರ್ಥದೊಳಿಲ್ಲವು ಪದಾರ್ಥ ಸ೦ಘಾತದೊಳಿಲ್ಲ ಎದೆಎದೆಯನು ಪಿಸು ಮಾತೊಳಗರಳಿಸಿ ಮುದ ಹರಡುವ ಕಲೆ ಋಷಿ ಬಲ್ಲ.

ಪು ತಿ ನ - ೬

ಒ೦ದೇ ಜನ್ಮದಿ ಬಹು ಜನ್ಮ೦ಗಳ ಚೆ೦ದವಗಾಣಿಸುವಮಳ ಕಲೆ ಮ೦ದಿಗೆ ದೇವರ ವರವಲೆ ಅದುವೇ ಮು೦ದಿನ ಬಿಡುಹುಕು ಹಾನಿಯಲೆ.