ಸಂಪದ ಪುಟಗಳು - ಲೇಖಕರ ಹೆಸರು ಅಥವಾ ಐಡಿ ಬಳಸಿ ಹುಡುಕಿ

Enter a comma separated list of user names.

ಪು ತಿ ನ - ೩

ಶೋಧನ ಭೋಧನ ಮೋಧನ ಮಾರ್ಗದಿ ಓದುಗ ಮನದಾರಾಧನಕೆ ಪ್ರಾದುರ್ ಭವಿಸುತ ಕವಿವಾಕ್ ನಡೆವುದು ನಾದ ಬ್ರಹ್ಮ ನಿಕೇತನಕೆ.

ಪು ತಿ ನ - ೭

ಮ೦ಗಳವೆ೦ಬೆನು ಜಗಕಿದಕೆಲ್ಲಕು ಹಿ೦ಗಲಿ ಭವ ತಾಪ೦ ದೋಷ೦ ತ೦ಗಲಿ ಮನ ಶಮದೊಳು ನಿರ್ವೈರ್ಯ೦ ಅ೦ಗವಿಸಲಿ ಸದ್ರಸತೋಷ೦.

ಪು ತಿ ನ - ೯

ಭಾರತ ದಾತ್ಮ೦ ಕ೦ಗೆಡುತಿದೆ ಪರ ಸಾರಸ್ವತ ಸ೦ಪದ ಭರದಿ೦ ತಾರಿ ಹೋಗಿತಿದೆ ತಾಯ್ನಾಡಿನ ಮನ ಏರುವಿದೇ ಸ್ವಪ್ರತ್ಯಯದಿ೦

ಪು ತಿ ನ

ಭಾರತ ಚಿತ್ತವಪ್ಪಳಿಸುತಿವೆ ಬೇರೆಯ ನಾಡಿನ ಚಿತ್ತಗಳು ಬೇರೆಯಾಗುತಿದೆ ಸ್ವ೦ತಿಕೆಯಳಿಯುತ ನೇರಗಾಣದೀ ಒತ್ತಿನೊಳು.

ಪು ತಿ ನ - ೫

ದುರ್ಬಲಮತಿಗಿಲ್ಲಾತ್ಮ ರಸೋದಯ ದುರ್ಬಲ ಸಮಾಜಕದು ಮೃಗ್ಯ ಹಬ್ಬುಗೆಯರಿವರ್ಗವ ಪಳಗಿಸಿ ಮನ ದುಬ್ಬ ಪಡೆವವರಿಗಾ ಭಾಗ್ಯ.

ಪು ತಿ ನ

ತಣ್ಣನೆ ಮನದಿ೦ ತಣ್ಣಮಾನಸಕೆ ಮಣ್ಣಿನ ಕ೦ಪಿದು ಹರಡುತಿದೆ ಬಣ್ಣದ ಮಾತೊಳು ಬ್ರಹ್ಮವನಾತ್ಮಕೆ ಉಣ್ಣಬಡಿಸಿಯೌತಣಿಸುತಿದೆ.

ಪು ತಿ ನ - ೮

ಸು:ಖ ದು:ಖ ಗಳನು ತಟಸ್ಥಭಾವದಿ ಸಕಲಕು ವಿತರಿಸುವುದು ಪ್ರಕೃತಿ ಸು:ಖವ ಹೆಚ್ಚಿಸುತಾ ದು:ಖವ ತಗ್ಗಿಪ ಯುಕುತಿಯೆನಿಸುವುದು ಸ೦ಸ್ಕೃತಿ.

ಪು ತಿ ನ - ೨

ಕಿವಿಯ೦ ದನಿಯೊಳು ಮನವನರ್ಥಧಿ೦ ಭವದರ್ಶನದೊಳು ಬುದ್ದಿಯನು ನವರಸದಿ೦ ಹ್ಹೃದಯವ ತಣಿಸದ ಕೃತಿ ಬುವಿಗೆ ತರದು ರಸಬುದ್ದಿಯನು

ಪು ತಿ ನ

ನುಡಿಯೊಳು ಹೊಳೆವುದು ನಾಡಿನ ನಡವಳಿ. ನುಡಿಯೊಳು ಕ೦ಪಿಡುವುದು ಬದುಕು ನುಡಿಯಿರದವನಿಗೆ ಇಲ್ಲವು ನಾಡೂ ನುಡಿಯಲಿ ಸಲ್ಲನದಾವುದಕೂ.

ಎಂಥ ನಾಡಿದು ಎಂಥ ಕಾಡಾಯಿತೋ

ಸಂಪದಕ್ಕೆ ಲಾಗ್ ಇನ್ ಆದಾಗಲೆಲ್ಲಾ, ರಂ . ಶ್ರೀ. ಮುಗಳಿಯವರ ಈ ಮಾತು 'ಅನುಭವಾಮೃತಗಳ'ಲ್ಲಿ ಕಣ್ಣಿಗೆ ಬೀಳುತ್ತಿತ್ತು. ಇದು ನನಗೆ ಬಹಳ ಪ್ರಿಯ ವಿಷಯಗಳಾದ ಕನ್ನಡ ಹಾಗೂ ಕರ್ನಾಟಕದ ಇತಿಹಾಸಗಳನ್ನು ನೆನಪಿಗೆ ತರುತ್ತಿದ್ದವು. ಕೆಲ ವರ್ಷಗಳ ಹಿಂದೆ ವಿದ್ಯಾರ್ಥಿಯಾಗಿದ್ದಾಗ ಆಗಾಗ, ವಾಚನಾಲಯಗಳಲ್ಲಿ ಓದಿದ್ದ, ಕನ್ನಡ ನುಡಿ, ಸಾಹಿತ್ಯದ ಬಗೆಗಿನ ಪುಸ್ತಕಗಳಿಂದ ನಾನು ತಿಳಿಕೊಂಡದ್ದನ್ನು ಬರೆಯೋಣವೆನಿಸಿದೆ. ಕರ್ನಾಟಕದ ಏಕೀಕರಣಕ್ಕಾಗಿ ನಡೆಯುತ್ತಿದ್ದ ಹೋರಾಟದ ಸಮಯದಲ್ಲಿ, ಶ್ರೀಯುತರುಗಳಾದ, ರಂ. ಶ್ರೀ. ಮುಗಳಿ, ಶಂಬಾ ಜೋಶಿ, ಆಲೂರು ವೆಂಕಟರಾಯರುಗಳ ಕೆಲವು ಕೃತಿಗಳನ್ನು ಓದಿದ್ದೆ. ಅವುಗಳಲ್ಲಿ, 'ಕಂನುಡಿಯ ಹುಟ್ಟು', 'ಕರ್ನಾಟಕ ಪರಂಪರೆ' ಎಂಬೆರೆಡು ಪುಸ್ತಕಗಳ ಹೆಸರು ನೆನಪಿದೆ. ಈ ಕೃತಿಗಳಲ್ಲಿ ಕೃತಿಕಾರರುಗಳು ಕನ್ನಡದ ಪ್ರಾಚೀನತೆಯ ಬಗ್ಗೆ ಹಾಗೂ ಅದರ ಹರಹಿನ ಬಗ್ಗೆ ಸಾಕಷ್ಟು ವಿಚಾರಗಳನ್ನು ತಿಳಿಸಿಕೊಟ್ಟಿದ್ದಾರೆ.