Kannada on Windows 98
- Read more about Kannada on Windows 98
- Log in or register to post comments
ಝೆನ್ ಸಂನ್ಯಾಸಿನಿ ಎಶುನ್ ಅರುವತ್ತು ವರ್ಷ ದಾಟಿದ್ದಳು. ಈ ಲೋಕವನ್ನು ಬಿಡುವ ಕಾಲ ಬಂದಿತ್ತು. ಶಿಷ್ಯರನ್ನೆಲ್ಲ ಕರೆದು ಅಂಗಳದಲ್ಲಿ ಸೌದೆಗಳನ್ನು ಜೋಡಿಸುವಂತೆ ಹೇಳಿದಳು.
ಸೌದೆಗಳ ನಡುವೆ ಸ್ಥಿರವಾಗಿ ಕುಳಿತು ಕಟ್ಟಿಗೆ ರಾಶಿಗೆ ಬೆಂಕಿ ಇಕ್ಕುವಂತೆ ಹೇಳಿದಳು. ಬೆಂಕಿ ಉರಿಯಿತು.
"ಬೆಂಕಿ ಸುಡುತ್ತಿಲ್ಲವೇ?" ಎಂದು ಸಂನ್ಯಾಸಿಯೊಬ್ಬ ಕೂಗಿ ಕೇಳಿದ.
"ನಿನ್ನಂಥ ಮೂರ್ಖನಿಗೆ ಮಾತ್ರ ಇಂಥ ಪ್ರಶ್ನೆ ಹೊಳೆಯುತ್ತದೆ" ಎಂದಳು ಎಶುನ್.
ಸ್ವಾತಂತ್ರ್ಯ ದಿನಾಚರಣೆ ಹತ್ತಿರ ಬಂದಂತೆ ಬೆಂಗಳೂರಿನಲ್ಲಿ ಪ್ಲಾಸ್ಟಿಕ್ ಬಾವುಟಗಳು ಎಲ್ಲೆಲ್ಲೂ ಕಾಣಿಸಿಕೊಳ್ಳುತ್ತವೆ. ಟ್ರಾಫಿಕ್ ಸಿಗ್ನಲ್ ಗಳ ಬಳಿ ದಿನಪತ್ರಿಕೆಗಳನ್ನೋ ಮತ್ತೇನನ್ನೋ ಮಾರುವ ಹುಡುಗರ ಕೈಯಲ್ಲಿ ಪ್ಲಾಸ್ಟಿಕ್ ಬಾವುಟಗಳು ಮಾರಾಟಕ್ಕೆಂದು ರಾರಾಜಿಸುತ್ತವೆ. ಕೆಲೆವೆಡೆ ಪೆಟ್ರೋಲ್ ಬಂಕುಗಳ ಬಳಿಯೂ ಹಿಡಿದು ನಿಂತಿರುತ್ತಾರೆ. ಚಿಣ್ಣರಿಗೆ ಇದು ಬೇಕೇ ಬೇಕು!
ಅಮೆರಿಕಾಕ್ಕೆ ಹೋದ ಮೊಟ್ಟಮೊದಲ ಝೆನ್ ಗುರು ಸೋಯೆನ್ ಶಾಕು "ನನ್ನ ಹೃದಯ ಬೆಂಕಿಯಂತೆ ಉರಿಯುತ್ತಿದೆ, ನನ್ನ ಕಣ್ಣು ಮಾತ್ರ ಬೂದಿಯ ಹಾಗೆ ತಣ್ಣಗಿದೆ" ಎಂದ. ಅವನು ಕೆಲವು ನಿಯಮಗಳನ್ನಿಟ್ಟುಕೊಂಡು ಹಾಗೆಯೇ ಬದುಕಿದ್ದ. ಆ ನಿಯಮಗಳು ಇವು:
ಬೆಳಗ್ಗೆ ಎದ್ದು ಬಟ್ಟೆ ಹಾಕಿಕೊಂಡು ಸಿದ್ಧವಾಗುವ ಮೊದಲು ಧೂಪವನ್ನು ಹಾಕಿ ಧ್ಯಾನಮಾಡು.
ನಿಗದಿಯಾದ ಸಮಯದಲ್ಲಿ ಮಲಗು. ನಿಗದಿಯಾದ ಹೊತ್ತಿನಲ್ಲಿ ಊಟಮಾಡು. ಹೊಟ್ಟೆ ತುಂಬಿ ತೃಪ್ತಿಯಾಗುವಷ್ಟು ತಿನ್ನಬೇಡ.
ಇಂಗ್ಲಿಷ್ ಭಾಷೆಯನ್ನು ಯಾವ ತರಗತಿಯಿಂದ ಕಲಿಸಬೇಕು ಎಂಬ ಚರ್ಚೆಗೆ ದಿನದಿಂದ ದಿನಕ್ಕೆ ಕಾವೇರುತ್ತಲೇ ಇದೆ. ಭಾಷಾ ಬೋಧನೆಯ ಸಾಧ್ಯತೆ ಮತ್ತು ಮಿತಿಗಳನ್ನು ಅರಿತವರಿಗಿಂತ ಹೆಚ್ಚಾಗಿ ಇಡೀ ವಿಷಯವನ್ನು ಭಾವನಾತ್ಮಕವಾಗಿ ಗ್ರಹಿಸಿದವರು ಮಾತ್ರ ಈ ವಿಷಯದ ಚರ್ಚೆಯ ಮುಂಚೂಣಿಯಲ್ಲಿದ್ದಾರೆ. ಪರಿಣಾಮವಾಗಿ ಯಾವುದು ಚರ್ಚೆಯಾಗಬೇಕಿತ್ತೋ ಅದು ಚರ್ಚೆಯಾಗದೆ ಕನ್ನಡದ ಬಳಕೆ ಎಂಬುದು ವರ್ಗ, ವರ್ಣ, ಜಾತಿ ಮುಂತಾದುವುಗಳ ಚರ್ಚೆಯಾಗಿ ಬದಲಾಗುತ್ತಿದೆ. ಭಾಷೆಯೊಂದರ ಕಲಿಕೆಯ ಹಿಂದೆ ಈ ಎಲ್ಲಾ ಸಾಮಾಜಿಕ ಅಸಮಾನತೆಗಳು ಪರಿಣಾಮ ಬೀರುತ್ತವೆಯಾದರೂ ಕೇವಲ ಅವುಗಳನ್ನಷ್ಟೇ ಪರಿಗಣಿಸಿ ಭಾಷೆಯೊಂದರ ಕಲಿಕೆಗೆ ಸಂಬಂಧಿಸಿದ ನೀತಿ ರೂಪಿಸಲು ಸಾಧ್ಯವಿಲ್ಲ.
ಯೋಗವೆಂದರೆ ಆಸನಗಳಲ್ಲ. ಆಸನಗಳು ಪತಂಜಲಿಯ ೮ ಅಂಗಗಳುಳ್ಳ ಅಷ್ಟಾಂಗಯೋಗದ ಒಂದು ಭಾಗ ಮಾತ್ರ. ಆದರೆ ರೂಢಿಯಲ್ಲಿ ಯೋಗ ಎಂದರೆ ಆಸನಗಳು ಎಂಬ ತಪ್ಪು ಅಭಿಪ್ರಾಯ ಮೂಡಿದೆ. ಸರಿಯಾಗಿ ಹೇಳಬೇಕೆಂದರೆ ಅದು ಯೋಗಾಸನ ಮಾತ್ರ. ಮನಸ್ಸಿನ ನಿಯಂತ್ರಣ ಹಾಗೂ ವೃತ್ತಿಗಳು ಮನಸ್ಸಿನಲ್ಲಿ ಏಳುವುದನ್ನು ಕಮ್ಮಿಮಾಡಿ ಕೊನೆಗೆ ಅದರ ನಿರೊಧವೇ ಪತಂಜಲಿಯ ಯೋಗ. ಪತಂಜಲಿಯ ಯೋಗ ಸೂತ್ರಗಳಲ್ಲಿ ನಾಲ್ಕು ಪಾದಗಳಿವೆ.
ಕರ್ನಾಟಕದಲ್ಲಿ ನಕ್ಸಲೀಯರ ಸಮಸ್ಯೆ ಆರಂಭವಾಗಿ ಆಗಲೇ ಒಂದು ವರ್ಷ ಕಳೆಯಿತು. ಈ ಹೊತ್ತಿನವರೆಗೂ ಇದರ ಮೂಲ ಕಾರಣಗಳನ್ನು ಶೋಧಿಸುವ ಪ್ರಯತ್ನಗಳು ಮಾತ್ರ ನಡೆದಿಲ್ಲ. ಯಾವುದೇ ಸಮಸ್ಯೆಯ ಮೂಲ ಕಾರಣವನ್ನು ಶೋಧಿಸುವ ‘ಬುದ್ಧಿ’ ನಮ್ಮ ರಾಜಕಾರಣಿಗಳಿಗಂತೂ ಇಲ್ಲ. ಅದಕ್ಕಿಂತ ದೊಡ್ಡ ದುರಂತವೆಂದರೆ ಪ್ರಜಾಪ್ರಭುತ್ವದ ಕಾವಲುಗಾರರಂತೆ ವರ್ತಿಸಬೇಕಾದ ಪತ್ರಿಕೆಗಳು ಮತ್ತು ನಾಗರಿಕ ಸಮಾಜ (civil society)ಕೂಡಾ ‘ಸಿದ್ಧ ಮಾದರಿ’ಗಳ (stereo types) ಮೂಲಕ ಸಮಸ್ಯೆಯನ್ನು ಗ್ರಹಿಸುತ್ತಿರುವುದು. ಇದರಿಂದಾಗಿ ನಕ್ಸಲೀಯರ ಚಟುವಟಿಕೆಗಳಿರುವ ಪ್ರದೇಶದ ಸಾಮಾನ್ಯ ಜನರ ಸ್ಥಿತಿ ಎಲ್ಲಿಯೂ ಬೆಳಕು ಕಾಣುತ್ತಿಲ್ಲ. ಈ ಜನರು ಒಂದೋ ನಕ್ಸಲೀಯರ ಬೆಂಬಲಿಗರಾಗಿ ಪೊಲೀಸರ ಹಿಂಸೆಗೆ ಗುರಿಯಾಗುವುದು ಇಲ್ಲವೇ ನಕ್ಸಲೀಯರ ವಿರೋಧಿಗಳಾಗಿ ನಕ್ಸಲೀಯರಿಂದ ಹತರಾಗುವುದರಲ್ಲಿ ಒಂದನ್ನು ಆರಿಸಿಕೊಳ್ಳುವ ಅನಿವಾರ್ಯವನ್ನು ಎದುರಿಸುತ್ತಿದ್ದಾರೆ.