ನಾದಲೀಲೆ: ಬೇಂದ್ರೆ ಕಾವ್ಯ ವಾಚನ ಕಾರ್ಯಕ್ರಮದ ವರದಿ
'ದೀಪದ ಮಲ್ಲಿ' ಎಂಬ ನನ್ನ ಪದ್ಯದಲ್ಲಿ 'ಮೌನ'ದ ಮಾತು ಬರುತ್ತದೆ. ಆ ದೀಪದ ಮಲ್ಲಿ ನನ್ನ ಹತ್ತಿರಿರುವ ಒಂದು ಗೊಂಬೆ; ಶಿವಮೊಗ್ಗದಲ್ಲಿ ಒಬ್ಬರು ಅದನ್ನು ನನಗೆ ಕೊಟ್ಟರು. ಕೈಯಲ್ಲಿ ಒಂದು ಆರತಿ ಹಿಡಕೊಂಡು ನಿಂತುಬಿಟ್ಟಿದೆ 'ದೀಪದ ಮಲ್ಲಿ'ಯ ಗೊಂಬೆ! ಅದಕ್ಕೆ ನಾನು ಕೇಳಿಯೇ ಕೇಳುತ್ತೇನೆ: "ಯಾರ ಸಲುವಾಗಿ ಈ ಪ್ರಣತಿಯನ್ನು ಹಿಡಿದು ನಿಂತುಬಿಟ್ಟಿದ್ದೀಯಾ? ಒಳಗೆ ಎಣ್ಣೆ ಇಲ್ಲ, ಬತ್ತಿ ಇಲ್ಲ, ದೀಪವಂತೂ ಇಲ್ಲವೇ ಇಲ್ಲ! ಆದರೆ ನಿನ್ನ ಮುಖದ ಮೇಲೆ ಸ್ಮಿತ ಇದೆಯಲ್ಲ; ಆ ಸ್ಮಿತದಲ್ಲಿ ಎಲ್ಲ ಇದೆ- ಆ ದೀಪ, ಆ ಸ್ನೇಹ, ಆ ಪ್ರಣತಿ, ಆ ವರ್ತಿಕಾ. ಈ ಆರತಿ ಯಾರಿಗೆ ಎತ್ತಿರುವೆ, ತಾಯಿ?" ಹೀಗೆ ಕೇಳಿದರೆ, ಅದು ಕೊನೆಗೆ ಹೇಳುತ್ತದೆ: "ಶ್...! ನಾನು ಹ್ಯಾಂಗ ಸುಮ್ಮನಿದ್ದೀನಿ, ಹಾಗೆ ಸ್ವಲ್ಪ ಸುಮ್ಮನಿರು." ಸುಮ್ಮನಿದ್ದಾಗ ಕಾಣುವಂಥಾದ್ದು- ಆ ಸ್ನೇಹ, ಆ ಪ್ರಣತಿ, ಆ ವರ್ತಿಕಾ, ಆ ದೀಪಶಿಖೆ!
- Read more about ನಾದಲೀಲೆ: ಬೇಂದ್ರೆ ಕಾವ್ಯ ವಾಚನ ಕಾರ್ಯಕ್ರಮದ ವರದಿ
- 2 comments
- Log in or register to post comments