ಕಾಲಚಕ್ರ - ಕನ್ನಡ ಬ್ಲಾಗ್
ಟೈಮ್ ಇದ್ದಾಗ್ ನೋಡ್ರಿ!
- Read more about ಕಾಲಚಕ್ರ - ಕನ್ನಡ ಬ್ಲಾಗ್
- Log in or register to post comments
ಟೈಮ್ ಇದ್ದಾಗ್ ನೋಡ್ರಿ!
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಜಾನಪದ ಗಾರುಡಿಗ, ನಾಡೋಜ, ಕಲಾ ತಪಸ್ವಿ, ಹಿರಿಯ ಗಾಂಧೀವಾದಿ ಡಾ ಎಸ್.ಕೆ. ಕರೀಂಖಾನ್ ಇಹಲೋಕಕ್ಕೆ ವಿದಾಯ ಹೇಳಿದ್ದಾರೆ. ಇದರೊಂದಿಗೆ ನಾಡಿನ ಹಳೆಯ ತಲೆಮಾರಿನ ಜಾನಪದ ಮತ್ತು ಸಾಂಸ್ಕೃತಿಕ ಪರಂಪರೆಯ ಕೊಂಡಿಯೊಂದು ಕಳಚಿಕೊಂಡಂತಾಗಿದೆ. ತೊಂಬತ್ತೆಂಟು ವರ್ಷಗಳ ಸಾರ್ಥಕ ಬಾಳುವೆ ನಡೆಸಿದ ಈ ಬ್ರಹ್ಮಚಾರಿ ಇಂದು(ಜುಲೈ 29) ಬೆಳಿಗ್ಗೆ 11.50 ರ ಸುಮಾರಿಗೆ ಚಿರನಿದ್ರೆಗೆ ಜಾರಿದರು.
ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಜೂನ್ 10ರಂದು ಬೌರಿಂಗ್ ಆಸ್ಪತ್ರೆಯಿಂದ ಭಗವಾನ್ ಮಹಾವೀರ್ ಜೈನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನ್ಯೂಮೋನಿಯಾಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು ಗಂಟಲಲ್ಲಿ ಉಂಟಾದ ಸೋಂಕಿನಿಂದಾಗಿ ಉಸಿರಾಟದ ತೊಂದರೆಗೆ ಒಳಗಾದರು. ಕೂಡಲೇ ಅವರನ್ನು ತುರ್ತು ನಿಗಾ ಘಟಕಕ್ಕೆ ವರ್ಗಾಹಿಸಿ ಕೃತಕ ಉಸಿರಾಟದ ವ್ಯವಸ್ಥೆ ಕಲ್ಪಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರೆಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ಮೃತರ ಅಂತ್ಯಕ್ರಿಯೆ ನಗರದ ಹಲಸೂರು ಸ್ಮಶಾನದಲ್ಲಿ ರಾತ್ರಿ 8 ಗಂಟೆ ಸುಮಾರಿಗೆ ನೆರವೇರಿತು. ಇದಕ್ಕೆ ಮುನ್ನ ಕರೀಂಖಾನ್ ಕಿರಿಯ ಸಹೋದರನ ನಿವಾಸದಲ್ಲಿ ಮೃತರಿಗೆ ರಾಜ್ಯವು ಸಕಲ ಸರ್ಕಾರಿ ಗೌರವ ನೀಡಿತು.
ಇದು ನಾನು ಕೇಳಿದ್ದು. ಪೂನಾದಲ್ಲಿ ಒಂದು ದಂಪತಿ. ಮೂಲ ಊರು ಬೆಳಗಾಂವ. ಪೂನಾದಲ್ಲಿ ಬಹಳ ವರ್ಷಗಳಿಂದ ವಸತಿ. ಇಬ್ಬರೂ ಕನ್ನಡ ಹಾಗೂ ಮರಾಠಿ ಮಾತಾಡುತ್ತಾರೆ. ಆದರೆ, ಗಂಡನಿಗೆ ಮರಾಠಿ ಓದಲು, ಬರೆಯಲು ಅಷ್ಟೇನೂ ಚೆನ್ನಾಗಿ ಬರದು. ಹೆಂಡತಿಗೆ ಕನ್ನಡ ಓದಲು, ಬರೆಯಲು ಅಷ್ಟಾಗಿ ಬರದು. ಗಂಡ ಕನ್ನಡ ಓದಿ ಅವಳಿಗೂ, ಹೆಂಡತಿ ಮರಾಠಿ ಓದಿ ಅವನಿಗೂ ಹೇಳುತ್ತಾರೆ. ಹೀಗೆ ಇಬ್ಬರೂ ಎರಡೂ ಭಾಷೆಯ ಸಾಹಿತ್ಯವನ್ನು ಬಲುವಾಗಿ ಓದಿಕೊಂಡಿದ್ದಾರೆ.
ಎಲ್ಲರಿಗೂ ನಮಸ್ಕಾರ,
ದಯವಿಟ್ಟು ಯಾರಾದರೂ ಚಿದಂಬರ ರಹಸ್ಯ ಎನ್ನುವ ಪದದ ವಿವಪಣೆಯನ್ನು ಕೊಡುವಿರಾ?
ನೀವು ಭಾರತೀಯರಾಗಿದ್ದರೆ ಈಗ ಮತ್ತೊಂದು ಅಸಾಧ್ಯ ಕಲ್ಪನೆಗೆ ಮುಂದಾಗಿ. ಹೀಗೆ ಹೇಳಿದನೆಂದು ಸಿಟ್ಟಾಗದಿರಿ. ಕನ್ನಡ ಓದಿಯೂ ಭಾರತೀಯನಲ್ಲದವರಾಗಿದ್ದರೆ ನೀವು ಎನ್.ಆರ್.ಐಗಳೇ ಇರಬೇಕು. ಅಂತಹವರಿಗೆ ಘಟ್ಟವೇಕೆ, ಬೆಂಗಳೂರು, ಮೈಸೂರೂ ಮಜ ಎನ್ನಿಸುತ್ತದೆ-ಏಕೆಂದರೆ, ತಾವು ಎಂದಿದ್ದರೂ ಯುರೋಪ್, ಯು.ಎಸ್.ಆಫ್ ಎಗೆ ಹಿಂದಿರುಗುತ್ತೇವೆ ಎಂಬ ನಂಬಿಕೆಯಿಂದಾಗಿ.
ನಮ್ಮ ಓದು ಹೆಚ್ಚಿದಂತೆ , ನಮ್ಮ ತಿಳಿವಳಿಕೆಯೂ , ಅದರಿಂದ ಸಿಗುವ ಸಂತೋಷವೂ ಹೆಚ್ಚುತ್ತದೆ. ಬಹುಶ್ರುತರಾಗುವುದರ ಲಾಭ ಅದು . ( ನಾನು ಈ ಭಾಷೆಯ ಚಿತ್ರ ನೋಡುವದಿಲ್ಲ , ಈ ಕುರಿತು ತಿಳಿದುಕೊಳ್ಳಲೊಲ್ಲೆ ಎಂದರೆ ನಷ್ಟ ಯಾರಿಗೆ ? ನಮಗೇ ತಾನೆ?)
ಕಳೆದ ಹಲವಾರು ದಿನಗಳಿಂದ ಸಂಪದ ಪುಟಗಳನ್ನು ಓದುತ್ತಿದ್ದೇನೆ. ಸ್ವಾರಸ್ಯಕರವಾದ ಅನೇಕ ಬರಹಗಳನ್ನು ಓದಿದೆ. ನನಗೆ ಸಾಹಿತ್ಯದಲ್ಲಿ ಆಸಕ್ತಿ ಇದೆಯಾದ್ದರಿಂದ ಆ ಕುರಿತ ಬ್ಲಾಗ್ ಗಳು, ಲೇಖನಗಳು ಇಷ್ಟವಾದವು. ವಿಶೇಷವಾಗಿ, ಓಎಲ್ ನಾ ಸ್ವಾಮಿ ಹಾಗೂ ಅನಂತಮೂರ್ತಿಯವರ ಪುಟಗಳು. ಪರಾಗ ಎಂಬ ಬೇಂದ್ರೆ ಕವನದ ವಿಶ್ಲೇಷಣೆ (ಸ್ವಾಮಿ) ತುಂಬ ಚೆನ್ನಾಗಿದೆ.
ನಮ್ಮ ಓದು ಹೆಚ್ಚಿದಂತೆ , ನಮ್ಮ ತಿಳಿವಳಿಕೆಯೂ , ಅದರಿಂದ ಸಿಗುವ ಸಂತೋಷವೂ ಹೆಚ್ಚುತ್ತದೆ. ಇಲ್ಲದಿದ್ದರೆ ನಮಗೆ ಎಷ್ಟೋ ವಿಷಯಗಳು ತಿಳಿಯದೇ ಹೋಗುವವು.
ಅಭಿವೃದ್ಧಿ ಪತ್ರಿಕೋದ್ಯಮ
(ಮುಂದುವರಿದ ಭಾಗ)
ನಮ್ಮ ಮಾಧ್ಯಮದಲ್ಲಿನ ವರದಿಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದರೆ ಇವು ನಗರದ ಗಡಿ ಬಿಟ್ಟು ಆಚೆಗೆ ಹೋಗುತ್ತಿರುವಂತೆ ಕಾಣುವುದಿಲ್ಲ.