ಹಿತನುಡಿ
"ನಾನು ಅವಧೂತನಾಗಿ ಹೋಗುವುದಿಲ್ಲ. ಕನ್ನಡವು ತನ್ನ ಸ್ಥಾನವನ್ನು ಅಧಿಕೃತವಾಗಿ ಪಡೆಯುವತನಕ, ನನ್ನ ಪ್ರಾಣವಿರುವತನಕ, ಕನ್ನಡಕ್ಕಾಗಿ ದುಡಿಯುವುದು, ಕನ್ನಡಕ್ಕಾಗಿ ವ್ಯಕ್ತಿಗಳನ್ನು ದುಡಿಯಲು ಪ್ರಚೋದಿಸುವುದು, ಅದಕ್ಕಾಗಿ ಭಗವಂತನಲ್ಲಿ ಮೊರೆಯಿಡುವುದು ಮಾಡುತ್ತೇನೆ.
"ನಾನು ಅವಧೂತನಾಗಿ ಹೋಗುವುದಿಲ್ಲ. ಕನ್ನಡವು ತನ್ನ ಸ್ಥಾನವನ್ನು ಅಧಿಕೃತವಾಗಿ ಪಡೆಯುವತನಕ, ನನ್ನ ಪ್ರಾಣವಿರುವತನಕ, ಕನ್ನಡಕ್ಕಾಗಿ ದುಡಿಯುವುದು, ಕನ್ನಡಕ್ಕಾಗಿ ವ್ಯಕ್ತಿಗಳನ್ನು ದುಡಿಯಲು ಪ್ರಚೋದಿಸುವುದು, ಅದಕ್ಕಾಗಿ ಭಗವಂತನಲ್ಲಿ ಮೊರೆಯಿಡುವುದು ಮಾಡುತ್ತೇನೆ.
"ನೀವು ಲೋಕವನ್ನಾಗಲೋ, ಸಮಾಜವನ್ನಾಗಲೀ, ಪುರೋಹಿತಶಾಹಿಯನ್ನಾಗಲೀ ಬದಲಾಯಿಸಲು ಪ್ರಯತ್ನಿಸುವ ಅಗತ್ಯ ಖಂಡಿತ ಇಲ್ಲ.
ಅಖಂಡ ಕರ್ನಾಟಕ:
ಅಲ್ತೊ ನಮ್ಮ ಬೂಟಾಟದ ರಾಜಕೀಯ ನಾಟಕ!
ಇಂದು ಬಂದು ನಾಳೆ ಸಂದು
ಹೋಹ ಸಚಿವ ಮಂಡಲ
ಜಾನಪದ ಶಿಷ್ಟಿಯಲಿ, ಸಂಪತ್ಸಮಷ್ಟಿಯಲಿ |
ಜ್ಞಾನಸಂಧಾನದಲಿ, ಮೌಲ್ಯ ಗಣನೆಯಲಿ ||
ಮಾನವತೆ ಮಾನುಷ್ಯ ಧಾರ್ಮಿಕತೆಯೆದ್ದುನಿಲೆ |
ಪ್ರತ್ಯಕ್ಷವಿಲ್ಲದಾ ಸ್ವಾಮಿಯಂ ನೆನೆನೆನೆದು |
ಸತ್ಯಭಕ್ತಿಯ ಸೇವೆಗೆಯ್ದವಂ ಭರತಂ ||
ನಿತ್ಯಜೀವನದಿ ನೀನಾ ನಯವನನುಸರಿಸೊ |
ಏನಾದೊಡೆಯುಮಪ್ಪುದುಂಟು, ಸಿದ್ಧನಿರದಕೆ |
ಭಾನು ತಣುವಾದಾನು; ಸೋಮ ಸುಟ್ಟಾನು ||
ಕ್ಷೋಣಿಯೇ ಕರಗೀತು, ಜಗ ಶೂನ್ಯವಾದೀತು |
ಶ್ರಧ್ಧೆಯಿಂದ ಏಕಾಗ್ರಗೊಳಿಸುವ ಶಕ್ತಿ ಮತ್ತು ಸಮಯದ ಸರಿಯಾದ ಉಪಯೋಗ ಇವೆರಡೇ ಯಶಸ್ಸಿಗೆ ದಾರಿ.
...ಕೊನೆಗೆ ವ್ಯಾಪಾರವನ್ನು ಹೀಗೆ ಪರಿಗಣಿಸಬಹುದು, ಗ್ರಾಹಕ, ಉತ್ಪನ್ನ ಮತ್ತು ಲಾಭ. - ಲೀ ಅಯಾಕ್ಕೊಕಾ
[ನಮ್ಮ ಮಕ್ಕಳ ಶಿಕ್ಷಣದ ಬಗ್ಗೆ ನಾವು ಯೋಚಿಸುವ ರೀತಿಯನ್ನು ನೆನಪಿಸಿಕೊಳ್ಳಿ!]
ಅನೇಕ ಬಿಲ್ಲುಗಾರಿಕೆಯ ಸ್ಪರ್ಧೆಗಳಲ್ಲಿ ಬಹುಮಾನ ಗೆದ್ದಿದ್ದ ಅಹಂಕಾರಿ ಯುವಕನೊಬ್ಬ ಧನುರ್ವಿದ್ಯೆಯಲ್ಲಿ ಪರಿಣತನಾಗಿದ್ದ ಝೆನ್ ಗುರುವಿನ ಬಳಿ ಬಂದು ಪಂದ್ಯ ಕಟ್ಟಿದ.
ಯುವಕ ಚತುರ ಬಿಲ್ಲುಗಾರ. ದೂರದಲ್ಲಿದ್ದ ಗುರಿಗೆ ಸರಿಯಾಗಿ ಬಾಣ ಬಿಟ್ಟ. ಎರಡನೆಯ ಬಾಣದಿಂದ ಮೊದಲ ಬಾಣವನ್ನು ಸರಿಯಾಗಿ ಎರಡು ಭಾಗವಾಗುವಂತೆ ಸೀಳಿದ. "ನಿಮ್ಮ ಕೈಯಲ್ಲಿ ಆಗುವುದೋ ನೋಡಿ" ಎಂದ ಹೆಮ್ಮೆಯಿಂದ.
ಗುರು ವಿಚಲಿತನಾಗಲಿಲ್ಲ. ಹಾಗೆಂದು ಕೂಡಲೆ ಬಿಲ್ಲು ಎತ್ತಿ ಬಾಣ ಬಿಡಲೂ ಇಲ್ಲ. ಬಾ ನನ್ನೊಡನೆ ಎಂದು ಹೇಳಿ ಬೆಟ್ಟ ಏರ ತೊಡಗಿದ. ವೃದ್ಧನ ಉದ್ದೇಶ ಏನಿರಬಹುದೆಂದು ಅಚ್ಚರಿ ಪಡುತ್ತಾ ಯುವಕ ಹಿಂದೆಯೇ ಸಾಗಿದ.
ಬೆಟ್ಟದ ತುದಿ ಬಂದಿತು. ಅಲ್ಲೊಂದು ಆಳವಾದ ಕಮರಿ. ಅದಕ್ಕೆ ಅಡ್ಡಲಾಗಿ ಲಡ್ಡು ಹಿಡಿದಿದ್ದ ಮರದ ತುಂಡೇ ಸೇತುವೆ. ಕಾಲಿಟ್ಟರೆ ಸಾಕು ಅಲುಗಾಡುತ್ತಿತ್ತು. ಗುರು ಆ ಮರದ ದಿಮ್ಮಿಯ ಮಧ್ಯ ಭಾಗಕ್ಕೆ ನಡೆದು ಸ್ಥಿರವಾಗಿ ನಿಂತ. ದೂರ ಮರದಲ್ಲಿದ್ದ ಹಣ್ಣಿಗೆ ಗುರಿ ಇಟ್ಟು ಬಾಣ ಬಿಟ್ಟ. ಹಣ್ಣು ಬಿತ್ತು. " ಮತ್ತೆ ಹಿಂದಿರುಗಿ ಈಗ ನಿನ್ನ ಸರದಿ" ಎಂದ ಯುವಕನತ್ತ ನೋಡುತ್ತಾ.
ಆಳವಾದ ಕಮರಿಯನ್ನು ನೋಡುತ್ತ ಯುವಕ ಭಯ ಭೀತನಾಗಿದ್ದ. ಲಡ್ಡು ಹಿಡಿದ ಮರದ ದಿಮ್ಮಿಯ ಮೇಲೆ ಕಾಲಿಡುವುದಕ್ಕೇ ಅವನಿಗೆ ಧೈರ್ಯವಾಗಲಿಲ್ಲ. ಅಲ್ಲಿ ನಿಂತು ಬಾಣಬಿಡುವ ಮಾತು ದೂರವೇ ಉಳಿಯಿತು.
"ನಿನಗೆ ಬಿಲ್ಲುಗಾರಿಕೆಯ ಕೌಶಲವಿದೆ. ಆದರೆ ಬಾಣವನ್ನು ಎಸೆಯುವ ಬಿಲ್ಲನ್ನೂ, ಬಾಣವನ್ನು ಬಿಡುವ ಕೈಯನ್ನೂ ನಿಯಂತ್ರಿಸುವ ಮನಸ್ಸನ್ನು ನೀನು ಹೇಳಿದಂತೆ ಕೇಳುವಹಾಗೆ ಮಾಡುವ ಕೌಶಲ ಬಂದಿಲ್ಲ" ಎಂದ ಗುರು.