ಮುಂಬೈಯಲ್ಲಿ ಕನ್ನಡದ ಪ್ರಚಾರ!
ಇವತ್ತು ಮುಂಬೈಯಲ್ಲಿ ನಾನು ಮನೆ ಬಿಟ್ಟು ಹೊರಬೀಳುವಾಗ 'ಹೊಸಗನ್ನಡ ಸಾಹಿತ್ಯದ ಉದಯಕಾಲ( ಉತ್ತರ ಕರ್ನಾಟಕವನ್ನು ಅನುಲಕ್ಷಿಸಿ)' ಎಂಬ ಪುಸ್ತಕವೊಂದನ್ನು ಇಟ್ಟುಕೊಂಡೆ. ಅದರಲ್ಲಿನ ಅನೇಕವಿಷಯಗಳು ಬಹುತೇಕ ಕನ್ನಡಿಗರಿಗೆ ಗೊತ್ತಿಲ್ಲ. ಅದನ್ನು ಸಂಪದದಲ್ಲಿ ಹಾಕಬೇಕೆಂದು ರೈಲಿನಲ್ಲಿ ಓದಲು ಹೊರತೆಗೆದೆ. ಅದರಲ್ಲಿ ಮುಖ್ಯವಾಗಿ ಕನ್ನಡ ಭಾಷೆಯ ಪ್ರಾರಂಭಿಕ ಬೆಳವಣಿಗೆಯ ಸಂಕ್ಷಿಪ್ತ ಪರಿಚಯದ ನಂತರ ೩-೪ ಶತಮಾನ ಹೇಗೆ ಕತ್ತಲಯುಗವನ್ನು ಕಂಡಿತು ( ವಿಶೇಷತ: ಉತ್ತರ ಕರ್ನಾಟಕದಲ್ಲಿ ) , ಅದರಿಂದ ಹೇಗೆ ಹೊರಬಂದು ಇಂದಿನ ಸ್ಥಿತಿ ತಲುಪಿತು . ಅದಕ್ಕೆ ಯಾರು ಯಾರು ಕೊಡುಗೆ ಸಲ್ಲಿಸಿದರು . ಎಂಬ ಬಗ್ಗೆ ಕುತೂಹಲಕರ ವಿವರಗಳಿವೆ. ಈ ಪುಸ್ತಕವನ್ನು ಶ್ರೀ ರಾ.ಯ.ಧಾರವಾಡಕರ ಅವರು ಬರೆದಿದ್ದು . ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಪ್ರಕಟಣೆಯಾಗಿದೆ. ( ಈ ಪುಸ್ತಕ ಯಾರದೋ ಮನೆಯಲ್ಲಿ ಸುಮ್ಮನೆ ಬಿದ್ದಿತ್ತು. ಅವರು ನನ್ನ ಮೂಲಕ ಅನೇಕ ಪುಸ್ತಕಗಳನ್ನು ವಿಲೇವಾರಿ ಮಾಡುತ್ತಿದ್ದಾಗ ನಾನು ಎತ್ತಿಟ್ಟುಕೊಂಡಿದ್ದೇನೆ ಅಂದರೆ ಕದ್ದಿದ್ದೇನೆ. - ಬೆಗ್, ಬೈ , ಬಾರೋ ಆರ್ ಸ್ಟೀಲ್ ಎಂದು ನಾಣ್ಣುಡಿಯೇ ಇದೆಯಲ್ಲ?!) . ತುಂಬ ಅಮೂಲ್ಯ ಪುಸ್ತಕವೇ ಸರಿ.
- Read more about ಮುಂಬೈಯಲ್ಲಿ ಕನ್ನಡದ ಪ್ರಚಾರ!
- 2 comments
- Log in or register to post comments