ಹಿತನುಡಿ
ಸತ್ಯವಾದರು ಅಪ್ರಿಯವಾದುದನ್ನು ಅನವಶ್ಯಕವಾಗಿ ನುಡಿಯಬಾರದು. ಒರಟು ಮಾತುಗಳನ್ನಾಡುವವನ ಸ್ವಭಾವವು ಒರಟಾಗುವುದು.
ಸತ್ಯವಾದರು ಅಪ್ರಿಯವಾದುದನ್ನು ಅನವಶ್ಯಕವಾಗಿ ನುಡಿಯಬಾರದು. ಒರಟು ಮಾತುಗಳನ್ನಾಡುವವನ ಸ್ವಭಾವವು ಒರಟಾಗುವುದು.
ಕಂದಾ, ಅಲ್ಲೇನು ಮಾಡುತಿರುವೆ?
ನಿದ್ದೆಯೋ..? ಇಲ್ಲಾ ಬುದ್ಧನಂತೆ ವಿಶ್ವಶಾಂತಿಗಾಗಿ ತಪವೋ..?
೧೯೮೫ರಲ್ಲಿ ಕ್ಯಾಷ್ ಡಿಪಾರ್ಟ್ಮೆಂಟಿನಿಂದ ಜನರಲ್ ಸೈಡ್ಗೆ ಪೋಸ್ಟ್ ಮಾಡಿದ್ದರು. ಅಲ್ಲಿ ಪಬ್ಲಿಕ್ ಡೆಟ್ ಆಫೀಸ್ ಎನ್ನುವಲ್ಲಿ ಒಂದೂವರೆ ವರ್ಷಗಳ ಕಾಲ ಕೆಲಸ ಮಾಡಿದೆ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಾಲವನ್ನು ತೆಗೆದುಕೊಳ್ಳಲು ಮತ್ತು ಅದರ ಲೆಕ್ಕಾಚಾರದ ಬಗ್ಗೆ ಕೆಲಸ ಮಾಡುವ ವಿಭಾಗ ಇದು. ನನಗೇನೂ ಅಂತಹ ಘನಂದಾರಿ ಕೆಲಸ ಕೊಟ್ಟಿರಲಿಲ್ಲ. ನಾನು ಮಾಡುತ್ತಿದ್ದುದು ಕ್ಲರಿಕಲ್ ಕೆಲಸ. ಮೊದಲಿಗೆ ವಿಭಾಗದ ಬಗ್ಗೆ ತಿಳಿದುಕೊಳ್ಳಲು ತರಬೇತಿ ಕೊಡುವರು. ಇದಕ್ಕಾಗಿ ಚೆನ್ನೈಗೆ ಕಳುಹಿಸಿದ್ದರು. ಅದೇ ಮೊದಲ ಬಾರಿಗೆ ಚೆನ್ನೈಗೆ ಹೋಗಿದ್ದು. ಸ್ವಲ್ಪ ಕಾಲದ ಮೊದಲು ಹೋಗಿದ್ದ ಮುಂಬೈನಲ್ಲಿ ನನಗೆ ಬರುತ್ತಿದ್ದ ಅಲ್ಪ ಸ್ವಲ್ಪ ಹಿಂದಿಯಲ್ಲಿ ಹೇಗೋ ನನ್ನ ಬೇಳೆ ಬೇಯಿಸಿಕೊಂಡಿದ್ದೆ. ಆದರೆ ಈ ಚೆನ್ನೈನಲ್ಲಿ ಹಿಂದಿ ನಡೆಯುವುದಿಲ್ಲ ಎಂದು ತಿಳಿದಿತ್ತು. ಇಲ್ಲಿ ಹಿಂದಿ ಮಾತನಾಡಿದರೆ ಏಟು ಬೀಳುವುದು ಗ್ಯಾರಂಟಿ. ಕನ್ನಡದವರಿಗೆ ತಮಿಳು ಕಲಿಯುವುದು ಸುಲಭ.
ಅವ ಇದ್ದ ದೂರದೂರು ಅಮೇರಿಕದಲ್ಲಿ!
ಸತ್ತು ಬಿತ್ತು ಇಲ್ಲಿ ಅವನ ನೆಚ್ಚಿನ ನಾಯಿ!
ಸುದ್ಧಿ ಮುಟ್ಟಿತು ಫೋನಲಿ
ಭಾಗ - ೬
೧೯೮೪ರ ಡಿಸೆಂಬರ್ ವೇಳೆಗೆ ನನಗೆ ಎಲ್.ಎಫ್.ಸಿ. (ಲೀವ್ ಫೇರ್ ಕನ್ಸೆಷನ್) ತೆಗೆದುಕೊಳ್ಳುವ ಅವಕಾಶ ಸಿಕ್ಕಿತ್ತು. ಅಂದರೆ ಎಲ್.ಎಫ್.ಸಿ ಯಲ್ಲಿ ಬ್ಯಾಂಕಿನ ಹಣದಲ್ಲಿ ರಜೆಯ ಮೇಲೆ ಬೇರೆ ಊರಿಗೆ ರೈಲಿನಲ್ಲಿ ಹವಾನಿಯಂತ್ರಿತ ಅಥವಾ ಮೊದಲ ದರ್ಜೆಯಲ್ಲಿ ಬೇರೆ ಊರಿಗೆ ಹೋಗಿ ಬರಬಹುದು. ಮೊದಲ ಅವಕಾಶ ಸಿಕ್ಕಿದಾಗ ದೂರದೂರಿಗೆ ಹೋಗುವುದೆಂದರೆ, ನನಗೆ ಮೊದಲು ತೋಚಿದ್ದು ಮುಂಬೈಗೆ ಹೋಗೋಣ ಅಂತ. ಏಕೆಂದರೆ ಅಲ್ಲಿ ಆಗ ನನ್ನಣ್ಣ ಕೆಲಸ ಮಾಡುತ್ತಿದ್ದ. ಅಲ್ಲಿಯವರೆವಿಗೆ ನಾನು ಕರ್ನಾಟಕ ಬಿಟ್ಟು ಆಚೆ ಹೋಗಿದ್ದವನಲ್ಲ.
ಎಲ್ಲಿ ಹೋದಿರಿ ಅಂದಿನ ದಿನಗಳೆ ನೆನಪುಗಳನು ಬಿತ್ತಿ,
ಮನದಲಿ ಸವಿ ನೆನಪುಗಳನು ಬಿತ್ತಿ
ಹೊಂಗೆಯ ನೆರಳಲಿ ಗೋಲಿಯ ಆಡುತ ಕಾಲಕಳೆವ ಬನ್ನಿ
ಹುಣಿಸೆಯ ಕೊಂಬೆಗೆ ಹಗ್ಗವ ಕಟ್ಟಿ ಜೋಕಾಲೆಯಾಡುವ ಬನ್ನಿ
ಮೂಡಣ ಬಾನಲಿ ಸೂರ್ಯನ ಜೊತೆಗೆ ಮೇಲೇರುವ ಬನ್ನಿ
ತುಂಬಿದ ಕೆರೆಗೆ ಕಲ್ಲನು ಎಸೆಯುತ ಮುಸ್ಸಂಜೆ ಸವಿಯ ಬನ್ನಿ
ಚಂದಿರನಿಲ್ಲದ ಬಾನಂಗಳದಲ್ಲಿ ತಾರೆಗಳೆಣಿಸುವ ಬನ್ನಿ
ತಿಂಗಳ ಬೆಳಕಲಿ ಕೈತುತ್ತನು ತಿನ್ನುತ ಹರಟೆ ಹೊಡೆವ ಬನ್ನಿ
ತೋಟಕೆ ನುಗ್ಗಿ ಬಾವಿಗೆ ಧುಮುಕಿ ಈಜು ಕಲಿವ ಬನ್ನಿ
ಮಾವಿನ ಮರಕೆ ಕಲ್ಲನು ಹೊಡೆದು ಹಣ್ಣ ಕೆಡವ ಬನ್ನಿ
ಮನದ ನೆನಪುಗಳು ಮಾಸುವ ಮುನ್ನ
ದೇಹದ ಶಕ್ತಿ ಕುಂದುವ ಮುನ್ನ ಒಮ್ಮೆ ಮರಳಿ ಬನ್ನಿ
ಭಾವ ಗಂಗೆಯಲಿ ಬಂದ ಜೀವ ತರಂಗವಿದು
ಹುಟ್ಟು ಸಾವುಗಳೊಳಗೆ ಬದುಕಬೇಕು
ಬಾಳ ಪುಟಗಳ ತಿರುವಿ ನೋಡಬೇಕು..
೧೩. ನಿಂದಂತು ನೀತಿನಿಪುಣಾ ಯದಿ ವಾ ಸ್ತುವಂತು |
ಲಕ್ಷ್ಮೀ ಸಮಾವಿಶತು ಗಚ್ಛತು ವಾ ಯಥೇಷ್ಟಂ ||
ಇಲ್ಲಿ ಮಾಸ್ತಿಯವರು ಮೂಲ ವಾಲ್ಮೀಕಿ ರಾಮಾಯಣವನ್ನು ಆಧರಿಸಿದ್ದರೂ ತಾವು ನಂಬದ ಸಂಗತಿಗಳನ್ನು ಕೈ ಬಿಟ್ಟಿದ್ದಾರೆ. ಅವರು ಮಾಡಿಕೊಂಡಿರುವ ಬದಲಾವಣೆಗಳನ್ನು ಇತರರು ಒಪ್ಪಲಿಕ್ಕಿಲ್ಲ . ಆದರೆ ಈ ಕಾರಣದಿಂದ ಅವರು ತಮ್ಮ ನಂಬುಗೆಗಳನ್ನು ಬದಲಾಯಿಸಲು ಒಪ್ಪುವದಿಲ್ಲ .ಪವಾಡಗಳನ್ನು ಸಹಜ ಸಂಗತಿಗಳನ್ನಾಗಿ ಇವರು ಮಾರ್ಪಡಿಸಿ ಕಾವ್ಯವನ್ನು ರಚಿಸಿದ್ದಾರೆ. ಈ ಕಾವ್ಯ ಜನರಿಗೆ ರುಚಿಸಿತೇ ತಾವು ಧನ್ಯ; ರುಚಿಸಲಿಲ್ಲ , ದೈವ ತಮಗೆ ಅನುಗ್ರಹಿಸಿದ ಭಾಗ್ಯ ಇಷ್ಟೇ ಎಂದು ಸಮಾಧಾನ ಪಟ್ಟುಕೊಳ್ಳುತ್ತಾರೆ.
ಇಲ್ಲಿ ಇರುವ ಮುದ್ರಣದೋಷಗಳನ್ನು ಕುರಿತು ಹೀಗೆ ಹೇಳುತ್ತಾರೆ- 'ಸಹೃದಯರಾದ ವಾಚಕರು ಇವನ್ನು ಕಂಡಾಗ ಇದು ಏನು ಎಂದು ಯೋಚಿಸಿ ಒಗಟು ಬಿಡಿಸುವಂತೆ ತಪ್ಪನ್ನು ಕಂಡುಹಿಡಿದು ತಿದ್ದಿಕೊಳ್ಳಬೇಕು . ಇದು ಶ್ರಮ; ಆದರೆ ಬುದ್ದಿಗೆ ಒಂದು ರೀತಿಯ ವ್ಯಾಯಾಮ ; ನಾನೂ ಅಚ್ಚಿನ ಮನೆಯ ನನ್ನ ಗೆಳೆಯರೂ ಉದ್ದೇಶಿಸದೆ ಒದಗಿಸಿರುವದು. ಈ ವಿಷಯದಲ್ಲಿ ಓದುಗರ ಕ್ಷಮೆಯನ್ನು ಬೇಡುತ್ತೇನೆ'.
ಇಲ್ಲಿ ಮಾಸ್ತಿಯವರು ಮೂಲ ವಾಲ್ಮೀಕಿ ರಾಮಾಯಣವನ್ನು ಆಧರಿಸಿದ್ದರೂ ತಾವು ನಂಬದ ಸಂಗತಿಗಳನ್ನು ಕೈ ಬಿಟ್ಟಿದ್ದಾರೆ. ಅವರು ಮಾಡಿಕೊಂಡಿರುವ ಬದಲಾವಣೆಗಳನ್ನು ಇತರರು ಒಪ್ಪಲಿಕ್ಕಿಲ್ಲ . ಆದರೆ ಈ ಕಾರಣದಿಂದ ಅವರು ತಮ್ಮ ನಂಬುಗೆಗಳನ್ನು ಬದಲಾಯಿಸಲು ಒಪ್ಪುವದಿಲ್ಲ .ಪವಾಡಗಳನ್ನು ಸಹಜ ಸಂಗತಿಗಳನ್ನಾಗಿ ಇವರು ಮಾರ್ಪಡಿಸಿ ಕಾವ್ಯವನ್ನು ರಚಿಸಿದ್ದಾರೆ. ಈ ಕಾವ್ಯ ಜನರಿಗೆ ರುಚಿಸಿತೇ ತಾವು ಧನ್ಯ; ರುಚಿಸಲಿಲ್ಲ , ದೈವ ತಮಗೆ ಅನುಗ್ರಹಿಸಿದ ಭಾಗ್ಯ ಇಷ್ಟೇ ಎಂದು ಸಮಾಧಾನ ಪಟ್ಟುಕೊಳ್ಳುತ್ತಾರೆ.