ಚಾಂದ್ರಾಯಣ ವ್ರತ
ಚಾಂದ್ರಾಯಣ ಎಂಬ ಪದವು ಚಂದ್ರನ ಚಲನೆಯ ಹಾದಿ ಎಂಬರ್ಥ ಕೊಡುತ್ತದೆ. ಇದೊಂದು ವ್ರತ.
ಕೂರ್ಮ ಪುರಾಣದ ಹರಿ ಭಕ್ತಿ ವಿಲಾಸ ೮.೧೫೮,೧೫೯ರಲ್ಲಿ ವಿವರಿಸಿರುವಂತೆ, ದ್ವಿಜರು (ಎರಡು ಬಾರಿ ಜನ್ಮ ತಳೆದವರು - ಅಂದರೆ ಪಕ್ಷಿಗಳು ಮತ್ತು ಬ್ರಾಹ್ಮಣರು ಎಂಬರ್ಥ) ಅಣಬೆ, ಬಾಳೆಯ ಎಲೆ, ಸೂರ್ಯಕಾಂತಿಯ ಎಲೆ, ಈರುಳ್ಳಿ, ಬೆಳ್ಳುಳ್ಳಿ, ಮರದ ರಸ, ನೆಲದ ಕೆಳಗೆ ಬೆಳೆಯುವ ಪದಾರ್ಥಗಳು ಮತ್ತು ಬಿಳಿ ಕುಂಬಳಕಾಯಿಯನ್ನು ತಿನ್ನಬಾರದು. ಇದನ್ನು ತಿಂದರೆ ಅವರು ಅಧಮರಾಗುವರು. ಮನು ಸಂಹಿತೆಯೂ ಇದನ್ನೇ ಹೇಳುತ್ತದೆ. ಹಾಗೆ ಮಾಡಿದವರಿಗೆ ಪ್ರಾಯಶ್ಚಿತ್ತವನ್ನು ಪದ್ಮ ಪುರಾಣದ ಬ್ರಹ್ಮ ಕಾಂಡದಲ್ಲಿ ತಿಳಿಸಿದೆ.
- Read more about ಚಾಂದ್ರಾಯಣ ವ್ರತ
- 1 comment
- Log in or register to post comments