ಸಂಪದ ಪುಟಗಳು - ಲೇಖಕರ ಹೆಸರು ಅಥವಾ ಐಡಿ ಬಳಸಿ ಹುಡುಕಿ

Enter a comma separated list of user names.

ಚಾಂದ್ರಾಯಣ ವ್ರತ

ಚಾಂದ್ರಾಯಣ ಎಂಬ ಪದವು ಚಂದ್ರನ ಚಲನೆಯ ಹಾದಿ ಎಂಬರ್ಥ ಕೊಡುತ್ತದೆ. ಇದೊಂದು ವ್ರತ.

ಕೂರ್ಮ ಪುರಾಣದ ಹರಿ ಭಕ್ತಿ ವಿಲಾಸ ೮.೧೫೮,೧೫೯ರಲ್ಲಿ ವಿವರಿಸಿರುವಂತೆ, ದ್ವಿಜರು (ಎರಡು ಬಾರಿ ಜನ್ಮ ತಳೆದವರು - ಅಂದರೆ ಪಕ್ಷಿಗಳು ಮತ್ತು ಬ್ರಾಹ್ಮಣರು ಎಂಬರ್ಥ) ಅಣಬೆ, ಬಾಳೆಯ ಎಲೆ, ಸೂರ್ಯಕಾಂತಿಯ ಎಲೆ, ಈರುಳ್ಳಿ, ಬೆಳ್ಳುಳ್ಳಿ, ಮರದ ರಸ, ನೆಲದ ಕೆಳಗೆ ಬೆಳೆಯುವ ಪದಾರ್ಥಗಳು ಮತ್ತು ಬಿಳಿ ಕುಂಬಳಕಾಯಿಯನ್ನು ತಿನ್ನಬಾರದು. ಇದನ್ನು ತಿಂದರೆ ಅವರು ಅಧಮರಾಗುವರು. ಮನು ಸಂಹಿತೆಯೂ ಇದನ್ನೇ ಹೇಳುತ್ತದೆ. ಹಾಗೆ ಮಾಡಿದವರಿಗೆ ಪ್ರಾಯಶ್ಚಿತ್ತವನ್ನು ಪದ್ಮ ಪುರಾಣದ ಬ್ರಹ್ಮ ಕಾಂಡದಲ್ಲಿ ತಿಳಿಸಿದೆ.

ಚಿಂತನ

ಒಂದು ಹಾದಿ

ಸಾಮಾನ್ಯವಾಗಿ ಭಾಷಣಗಳಲ್ಲಿ ಒಂದು ಮಾತು ನಮಗೆ ಕೇಳಿಬರುತ್ತದೆ. ಅದೆಂದರೆ ಹಿಂದೆಂದಿಗಿಂತಲೂ ಇಂದು ಪ್ರಸ್ತುತ ವಿಚಾರವಾದ ಇಂಥದನ್ನು ಕುರಿತು ಚಿಂತಿಸುವುದು ಅಗತ್ಯವೆಂದು ನನಗೆ ತೋರಿಬಂದಿದೆ ಎನ್ನುವುದು. ಯಾವ ಯಾವುದನ್ನೋ ಕುರಿತು ಮಾತಾಡುವವರು ಅದೇಕೆ ನಿನ್ನೆ ಅದು ಅಷ್ಟೊಂದು ಪ್ರಸ್ತುತವಾಗಿರಲಿಲ್ಲ ಎಂದು ಹೇಳುವುದಿಲ್ಲ. ಅಷ್ಟೇಕೆ, ಈಗಿನ ಮಾತಿನ ಅಗತ್ಯ ಅವರಿಗೆ ಬೀಳದೆ ಇದ್ದಿದ್ದರೆ ಅವರು ಇಂದು ಆಡಿದ ಮಾತನ್ನೂ ಆಡುತ್ತಿರಲಿಲ್ಲ ಎನ್ನುವುದು ಮಾತ್ರ ಸತ್ಯ. ಹೀಗೆ ಮೂರುಕಾಸಿಗೂ ಬೆಲೆಯಿರದ ಚಿಂತನೆಗಳನ್ನು ನಾವು ಪುಂಖಾನುಪುಂಖವಾಗಿ ಉಚ್ಚರಿಸುತ್ತ ಇರುತ್ತೇವೆ ಮಾತ್ರವಲ್ಲ, ನಮ್ಮ ಮಾತುಗಳನ್ನು ಕೇಳುವವರ ಕಿವಿಗಳಿಗೆ ಹಾದಿ ತಪ್ಪಿಸುವ ಚಿಂತನೆಗಳನ್ನು ಸುರಿಯುತ್ತಿರುತ್ತೇವೆ.

ಝೆನ್ ಕಥೆ ೩೪: ಜ್ಞಾನೋದಯ

ಶಿಷ್ಯನೊಬ್ಬ ಗುರುವನ್ನು ಕೇಳಿದ: "ಗುರುವೇ, ಜ್ಞಾನೋದಯ ಎಂದರೆ ಏನು?"

ಗುರು ಹೇಳಿದ: "ಹಸಿವಾದಾಗ ಉಣ್ಣು, ಬಾಯಾರಿದಾಗ ನೀರು ಕುಡಿ, ನಿದ್ರೆ ಬಂದಾಗ ಮಲಗು"

ಭಾಗ - ೫

೧೯೮೪ ರ ಅಕ್ಟೋಬರ್ ೩೧ನೇ ತಾರ್‍ಈಖು, ಸಿ.ಎ.ಐ.ಐ.ಬಿ ಪರೀಕ್ಷೆಯಿದ್ದಿತು. ಮನೆಯ ಎದುರೇ ಇದ್ದ ನಾಷ್ಯನಲ್ ಕಾಲೇಜಿಗೆ ಹೋಗಿ ಪರೀಕ್ಷೆಯನ್ನು ಬರೆಯಬೇಕಿತ್ತು. ನಾಲ್ಕೈದು ದಿನಗಳ ಹಿಂದೆಯಷ್ಟೇ ಹಲ್ಲಿಗೆ ಸಿಲ್ವರ್ ತುಂಬಿಸಿದ್ದ ಸಮಯ. ಆಗ ನನಗೆ ಸ್ವಲ್ಪ ಜ್ವರವಿದ್ದಿತ್ತು. ಅಂದು ಪರೀಕ್ಷೆ ಇದ್ದುದರಿಂದ ಹೋಗಲೇ ಬೇಕಿತ್ತು. ಏನನ್ನೂ ತಿನ್ನಲು ಮನಸ್ಸಿರಲಿಲ್ಲ. ಅಷ್ಟು ಹೊತ್ತಿಗೆ ಸ್ನೇಹಿತ ರಾಘವೇಂದ್ರ (ಕಾಲೇಜಿನಿಂದ ಸ್ನೇಹಿತನಾಗಿದ್ದು ಒಟ್ಟಿಗೇ ಬ್ಯಾಂಕು ಸೇರಿದವನು), ಅವರ ತಾಯಿ ಕಳುಹಿಸಿದರೆಂದು ರವೆ ಗಂಜಿಯನ್ನು ತಂದಿದ್ದ. ಬೇರೆಯ ದಿನಗಳಲ್ಲಿ ಗಂಜಿಯನ್ನು ನೋಡಲೂ ಅಸಹ್ಯ ಪಡುತ್ತಿದ್ದವನು ಅಂದು ಚಪ್ಪರಿಸಿಕೊಂಡು ತಿಂದಿದ್ದೆ. ಅವನೊಡನೆ ನಾನು ಪರೀಕ್ಷೆಗೆ ಹೊರಟೆ. ಸರಿಯಾಗಿ ಓದಿರಲಿಲ್ಲ. ಏನು ಬರೆಯುವುದು ಎಂದು ಯೋಚಿಸುತ್ತಿರುವಷ್ಟರಲ್ಲೇ ಅಂದಿನ ಪರೀಕ್ಷೆ ಮುಂದೆ ಹೋಗಿದೆಯೆಂದೂ ತಿಳಿದಿತ್ತು. ಅಬ್ಬಾ! ಕೊನೆಗೂ ಓದಲು ಸಮಯ ಸಿಕ್ಕಿತು ಎಂದು ಸಂತಸ ಪಟ್ಟಿದ್ದೆ. ಏಕೆ ಪರೀಕ್ಷೆ ಮುಂದೆ ಹೋಗಿದೆ ಎಂದು ತಿಳಿಯಲೂ ವ್ಯವಧಾನವಿರಲಿಲ್ಲ.

ಭಾವನೆ

ಭಾವನೆ

ಇದೇನಿದು ಹೊಸ ಪರಿ
ಪ್ರೀತಿಯಲ್ಲ, ಪ್ರೇಮವಲ್ಲ
ಪ್ರಣಯವಂತೂ ಇಲ್ಲಿ ಸಲ್ಲ||

ಸ್ನೇಹಿತನೆನಲು ತುಂಬು ಪರಿಚಯವಿಲ್ಲ