ಸಂಪದ ಪುಟಗಳು - ಲೇಖಕರ ಹೆಸರು ಅಥವಾ ಐಡಿ ಬಳಸಿ ಹುಡುಕಿ

Enter a comma separated list of user names.

ವಚನ ಚಿಂತನ:೧೦: ದೇವರ ಹಂಗೇಕೆ?

ಆವ ಕಾಯಕವಾದಡೂ ಸ್ವಕಾಯಕವ ಮಾಡಿ ಗುರು ಲಿಂಗ ಜಂಗಮದ ಮುಂದಿಟ್ಟು ಒಕ್ಕುದ ಹಾರೈಸಿ ಮಿಕ್ಕುದ ಕೈಕೊಂಡು ವ್ಯಾಧಿ ಬಂದಡೆ ನರಳು ಬೇನೆ ಬಂದಡೆ ಒರಲು ಜೀವ ಹೋದಡೆ ಸಾಯಿ ಇದಕ್ಕಾ ದೇವರ ಹಂಗೇಕೆ ಭಾಪು ಲದ್ದೆಯ ಸೋಮಾ ನಮ್ಮ ಪಾಲಿಗೆ ಬಂದ ಕಾಯಕ ಯಾವುದಾದರೂ ಸರಿ. ನಾವೇ ಮಾಡಬೇಕಾದ ನಮ್ಮ ಕೆಲಸವನ್ನು ನಿಷ್ಠೆಯಿಂದ ಮಾಡಬೇಕು. ನಮ್ಮ ಕಾಯಕದಿಂದ ಬಂದ ಫಲವನ್ನು ನಮಗಿಂತ ಹಿರಿಯರಾದವರಿಗೆ (ಗುರು), ಲೋಕಕ್ಕೆ (ಲಿಂಗ), ಪ್ರಜ್ಞಾವಂತರಾದವರಿಗೆ (ಜಂಗಮ) ಅರ್ಪಿಸಬೇಕು. ಉಳಿದದ್ದನ್ನು ನಮ್ಮದೆಂದು ಪಡೆದುಕೊಳ್ಳಬೇಕು. ಮಾಡಬೇಕಾದದ್ದು ಇಷ್ಟೇ. ಇದರಾಚೆಗೆ ರೋಗ ಬಂದರೆ ನರಳಬೇಕು, ನೋವಾದರೆ ಒರಲಬೇಕು, ಜೀವ ಹೋದರೆ ಸಾಯಬೇಕು. ಬದುಕು ಇಷ್ಟು. ಇದರಲ್ಲಿ ದೇವರ ಹಂಗು ಯಾಕೆ ಬೇಕು?

ಮುಂಬೈ ಕನ್ನಡಿಗನ ದಿನಚರಿ

ಕಳೆದ ಮಂಗಳವಾರ ಮತ್ತು ಭಾನುವಾರದ ಮಳೆಯ ಆರ್ಭಟದಿಂದ ತತ್ತರಿಸಿದ್ದ ಜನರ ದೈನಂದಿನ ಕೆಲಸ ಕಾರ್ಯಗಳು ಇಂದಿಗೆ ಸಾಮಾನ್ಯ ಸ್ಥಿತಿಗೆ ಬಂದಿತು. ಅದು ಹೇಗೆ ಇಂದೇ ಸಾಮಾನ್ಯ ಸ್ಥಿತಿಗೆ ಬಂದಿತು ಅಂತ ಹೇಳ್ತೀರಿ ಅಂತ ನೀವು ಕೇಳಬಹುದು. ಇಂದು ಲೋಕಲ್ ಟ್ರೈನಿನಲ್ಲಿ ತುಂಬಾ ಜನಸಂದಣಿ ಇತ್ತು. ಮತ್ತು ನನ್ನ ಸ್ನೇಹಿತನೊಬ್ಬನ ಜೇಬಿಗೆ ಕತ್ತರಿ ಬಿದ್ದಿತ್ತು. ಪ್ರತಿದಿನ ಟ್ರೈನ್ ಹತ್ತುವಾಗ, ಹತ್ತಿದ ಮೇಲೆ, ಇಳಿಯುವಾಗ ತುಂಬಾ ಕಷ್ಟ ಕೋಟಲೆಗಳನ್ನು ಅನುಭವಿಸುತ್ತೀವಿ. ನನಗೇನೋ ಅದು ಆಭ್ಯಾಸವಾಗಿ ಹೋಗಿದೆ. ಆದರೆ ಹೊಸಬರಿಗೆ ಇಲ್ಲಿಯವರೆವಿಗೆ ಇದ್ದ ಧೈರ್ಯವೆಲ್ಲಾ ಕಳೆದು ತಮ್ಮ ತಮ್ಮ ಊರುಗಳಿಗೆ ಮರಳೋಣ ಅಥವಾ ಕೆಲಸವೇ ಬಿಟ್ಟುಬಿಡೋಣ ಅಥವಾ ಆತ್ಮಹತ್ಯೆ (!) ಮಾಡಿಕೊಳ್ಳೋಣ ಎನ್ನುವಷ್ಟು ಬೇಸರವಾಗುತ್ತದೆ. ಅದೇ ಕೆಲವರಿಗೆ ಹಾಗೇನೂ ಅನ್ನಿಸುವುದಿಲ್ಲ. ಅವರು ವಿ.ಐ.ಪಿ. ಏನೋ ಅನ್ನುವಂತೆ ಅವರಿಗೆ ಕುಳಿತುಕೊಳ್ಳಲು ಸ್ಥಾನ ಸಿಕ್ಕುವುದು, ಒಳಗೆ ಹೋಗಲು ಅನುವಾಗುವುದು. ಅದು ಹೇಗೆ ಎನ್ನುವುದು ನನಗೆ ಚಿದಂಬರ ರಹಸ್ಯದಂತಾಗಿತ್ತು. ಇಂದು ಅದನ್ನು ಹತ್ತಿರದಿಂದ ಅನುಭವಿಸಿದೆ. ಅವರು ಅನುಸರಿಸುವ 3 ಅತ್ಯಂತ ಮುಖ್ಯ ಅಂಶವನ್ನು ಅನುಸರಿಸುವರು. ಒಂದು - ತಲೆಗೆ ಚೆನ್ನಾಗಿ ಎಣ್ಣೆ ಹಚ್ಚಿರುವರು. ಆದೂ ಜಿಗುಟು ಜಿಗುಟಾಗಿರುವ ಹರಳೆಣ್ಣೆ. ಅವರು ಹತ್ತಿರ ಬಂದರೇ ಎಲ್ಲರೂ ದೂರ ಸರಿಯುವರು.

ಮುಕ್ತ ಜ್ಞಾನ ಭಂಡಾರ - ಕನ್ನಡ ವಿಕಿಪೀಡಿಯ

ಮುಕ್ತ ಜ್ಞಾನ ಭಂಡಾರ - ಕನ್ನಡ ವಿಕಿಪೀಡಿಯ

ಹಿಂದೊಮ್ಮೆ ವಸ್ತುಗಳ ಬಗ್ಗೆ, ವಿಷಯಗಳ ಬಗ್ಗೆ ಮಾಹಿತಿ ಹುಡುಕಲು ಗ್ರಂಥಾಲಯವೇ ಬೀಡು. ಅಲ್ಲಿರುವ ಪುಸ್ತಕಗಳನ್ನೆಲ್ಲಾ ಹೆಕ್ಕಿ ತೆಗೆದು, ಮಾಹಿತಿ ಹುಡುಕಬೇಕಿತ್ತು. ಮಾಹಿತಿ ತಂತ್ರಜ್ಞಾನದಲ್ಲಿ ಬೆಳವಣಿಗೆಗಳಾದಂತೆ, ಅಂತರಜಾಲ ಮನೆಮನೆಗಳನ್ನು ಪ್ರವೇಶಿಸಿದಂತೆ ಮಾಹಿತಿ ಹುಡುಕುವುದು ಈಗಾದರೋ ಅತಿ ಸುಲಭವಾಗಿದೆ. ಈಗ ಮಾಡಬೇಕಾದದ್ದು ಇಷ್ಟೆ: ಗಣಕದಲ್ಲಿ ತಮ್ಮ ನೆಚ್ಚಿನ ಬ್ರೌಸರ್ ತೆರೆದು ನೆಚ್ಚಿನ Search engineನಲ್ಲಿ ಟೈಪ್ ಮಾಡಿ ಬಟ್ಟನ್ ಕ್ಲಿಕ್ ಮಾಡುವುದು!

ಝೆನ್: ಕಿರು ಪರಿಚಯ

ಸಂಸ್ಕೃತದ ಧ್ಯಾನ ಎಂಬ ಪದ ಚೀನೀ ಭಾಷೆಯಲ್ಲಿ ಛಾನ್ ಎಂದಾಗಿ, ಅಲ್ಲಿಂದ ಜಪಾನೀ ಸಂಸ್ಕೃತಿಯಲ್ಲಿ ಝೆನ್ ಎಂದು ಪರಿಚಯಗೊಂಡಿತು. ಇದು ಜಪಾನಿನ ಬೌದ್ಧಧರ್ಮದ ಒಂದು ಪ್ರಮುಖ ಧಾರೆಯಾಗಿ ಬೆಳೆಯಿತು. ಧ್ಯಾನದ ಮುಖಾಂತರ “ಬೋಧಿ” ಸತ್ವವನ್ನು ಹೊಂದಬಹುದೆಂಬುದು ಈ ಪಂಥದ ನಂಬಿಕೆ. ಗೌತಮನಾದ ಬುದ್ಧನು ಧ್ಯಾನದ ಮೂಲಕವೇ ತನ್ನ ಬೋಧಿ-ಸತ್ವವನ್ನು ಪಡೆದವನು. ಧ್ಯಾನ ಮುಖ್ಯವಾದ ಈ ಪಂಥವು ಕ್ರಿಶ ೬ನೆಯ ಶತಮಾನದಲ್ಲಿ ಮಹಾಯಾನ ಬೌದ್ಧರ ಮೂಲಕ ಛಾನ್ ಎಂಬ ಹೆಸರಿನಲ್ಲಿ ಪ್ರಚಾರಕ್ಕೆ ಬಂದಿತು. ಹಲವಾರು ಶತಮಾನಗಳ ತರುವಾಯ ಈ ಪಂಥವು ಜಪಾನನ್ನು ಪ್ರವೇಶಿಸಿತು. ಹನ್ನೆರಡನೆಯ ಶತಮಾನದ ಜಪಾನಿನನಲ್ಲಿ ಸಮೃದ್ಧವಾಗಿ ಬೆಳೆಯಿತು.

'ಸಂಪದ' wish list

ಸಂಪದ 'ವಿಷ್ ಲಿಸ್ಟ್'ಗೆ ಸ್ವಾಗತ. ಮಾನ್ಯ [:http://sampada.net/node/59|ಓ ಎಲ್ ಎನ್ ಸ್ವಾಮಿಯವರ ಸಲಹೆಯಂತೆ] ಈ ವಿಶ್ ಲಿಸ್ಟ್ ಪ್ರಾರಂಭಿಸಲಾಗಿದೆ. ಸಂಪದದಲ್ಲಿ ಭವಿಷ್ಯದಲ್ಲಿ ನೀವೇನು ಕಾಣಲು ಬಯಸುವಿರೆಂಬುದನ್ನು ಇಲ್ಲಿ ಸೇರಿಸಿ. ಸಂಪದದಲ್ಲೀಗಾಗಲೇ ಇರುವ ಫೀಚರ್‌ಗಳನ್ನು ಇಂಪ್ರೂವ್ ಮಾಡುವ ಬಗ್ಗೆಯಾಗಲೀ ಅಥವಾ ಹೊಸ ವಿಭಾಗಗಳನ್ನು ತೆರೆಯುವ ಬಗ್ಗೆಯಾಗಲೀ ನಿಮ್ಮಲ್ಲಿ ಸಲಹೆಗಳಿದ್ದರೆ ಇಲ್ಲಿ ಕಾಮೆಂಟ್ ಮೂಲಕ ಸೇರಿಸಿ.

ಝೆನ್ ೨: ಶೌನ್ ಮತ್ತು ಅವನ ತಾಯಿ

ಶೌನ್ ಸೊತೊ ಝೆನ್ ಪಂಥದ ಒಬ್ಬ ಗುರು. ಅವನಿನ್ನೂ ವಿದ್ಯಾರ್ಥಿಯಾಗಿದ್ದಾಗಲೇ ಅವನ ತಂದೆ ತೀರಿಹೋದ. ವಯಸ್ಸಾದ ತಾಯಿಯನ್ನು ನೋಡಿಕೊಳ್ಳುವ ಜವಾಬ್ದಾರಿ ಶೌನ್‌ನ ಪಾಲಿಗೆ ಬಂತು. ಶೌನ್ ಧ್ಯಾನಕ್ಕೆ ಹೋದಾಗಲೆಲ್ಲ ತಾಯಿಯನ್ನೂ ಜೊತೆಗೆ ಕರೆದುಕೊಂಡು ಹೋಗುತ್ತಿದ್ದ. ಅವನ ಅಲೆದಾಟದಲ್ಲಿ ಯಾವ ಮಠದಲ್ಲೂ ತಂಗಲು ಆಗುತ್ತಿರಲಿಲ್ಲ. ಹೆಂಗಸರನ್ನು ಮಠದೊಳಗೆ ಸೇರಿಸಿಕೊಳ್ಳುತ್ತಿರಲಿಲ್ಲ. ಅದಕ್ಕೇ ಒಂದು ಪುಟ್ಟ ಮನೆಯನ್ನು ಕಟ್ಟಿ ತಾಯಿಯೊಡನೆ ಇರತೊಡಗಿದ ಶೌನ್. ಬುದ್ಧನ ಸೂತ್ರಗಳನ್ನು ಬರೆದು, ಭಕ್ತರಿಗೆ ಕೊಟ್ಟು, ಅವರಿಂದ ಪಡೆದ ದುಡ್ಡಿನಲ್ಲಿ ಜೀವನ ಸಾಗಿಸುತ್ತಿದ್ದ.

ದ ರೋಡ್ ನಾಟ್ ಟೇಕನ್ - ಅನುವಾದ

ಹಳದಿ ಕಾಡಿನಲೊಂದು ಕವಲೊಡೆದ ಹಾದಿ, ಹೋಗಲಾಗದು ಎರಡರಲೂ ಒಂದೇ ಬಾರಿ ಏನು ಮಾಡಲಿ ಒಂಟಿ ಪಯಣಿಗ ನಿಂತು ನೋಡಿದೆ ಕಣ್ಣು ಹೋಗುವರೆಗೆ ದಾರಿಯೊಂದು ಸುತ್ತಿಸುಳಿದು ಮರೆಯಾಗುವರೆಗೆ ಮತ್ತೊಂದರೆಡೆ ಕಣ್ಣು ಹಾಯಿಸಿದರೆ ಅದೂ ಹಾಗೆ ಹುಲ್ಲು ಬೆಳೆದ ಹಾದಿ; ಹೊಸತಂತೆ ಕಾಣುತಿದೆ. ಮತ್ತೊಂದರದಕಿಂತ ಸ್ವಲ್ಪ ಒಳಿತಿರಬಹುದು ಬಳಸಿದಾ ಜನಸಂಖ್ಯೆ ಕಡಿಮೆಯಿರಬಹುದು ಕಣ್ಣೋಟಕೆರಡೂ ಕಾಣುವುದೂ ಒಂದೇ ಬಗೆ

ವಚನ ಚಿಂತನ: ೯: ಸುಮ್ಮಸುಮ್ಮನೆ ದುಃಖ!

ಆರಕ್ಕೆಯ ಸಿರಿಗೆ ಆರಕ್ಕೆ ಚಿಂತಿಸುವರು ಆರಕ್ಕೆಯ ಬಡತನಕ್ಕೆ ಆರಕ್ಕೆ ಮರುಗುವರು ಇದಾರಕ್ಕೆ ಆರಕ್ಕೆ ಇದೇನಕ್ಕೆ ಏನಕ್ಕೆ ಮಾಯದ ಬೇಳುವೆ ಹುರುಳಿಲ್ಲ ಕೊಂದು ಕೂಗಿತ್ತು ನೋಡಾ ಗುಹೇಶ್ವರ ಯಾರಿಗೋ ಸಂಪತ್ತು ಬಂದರೆ ಯಾರೋ ಯಾತಕ್ಕೋ ಚಿಂತಿಸುತ್ತಾರೆ, ಯಾರಿಗೋ ಬಡತನ ಬಂದರೆ ಯಾಕೋ ಸುಮ್ಮನೆ ಮರುಗುತ್ತಾರೆ. ಇದು ಯಾಕೆ, ಇದು ಏಕೆ, ಇದೇ ಮಾಯೆ. ಎಲ್ಲರನ್ನೂ ಕಾಡಿಸುವ ಮಾಯೆ.