ಕರ್ಮಯೋಗಿ-ಭಾಗ ೨(ಚಿತ್ತ)
ಅಷ್ಟು ಸಣ್ಣ ಹುಡುಗನ ಬಾಯಿಂದ ಈ ತರಹದ ಮಾತುಗಳನ್ನು ಕೇಳಿದ ಭಾಗೀರಥಮ್ಮನವರು, ಮಗ ಎಷ್ಟು ಬೇಗ ಮಾನಸಿಕವಾಗಿ ಬೆಳೆದು ಬಿಟ್ಟಿದ್ದಾನೆ,ನಮ್ಮೆಲ್ಲರ ಕಷ್ಟಗಳನ್ನು, ದುಃಖವನ್ನೂ ಅರಿತು ಈ ರೀತಿಯ ಮಾತನಾಡುತ್ತಿದ್ದಾನೆ ಎಂದು ಮನಗಂಡು, ಆನಂದದಿಂದ ಕಣ್ಣಲ್ಲಿ ನೀರು ತುಂಬಿಕೊಂಡು ಗದ್ಗದಿತರಾಗಿ ಹೇಳಿದರು "ಬೇಡ ಕಣೋ ಮಾರುತಿ.ಈ ತರ ಎಲ್ಲಾ ಮಾತಾಡಬೇಡ. ನೀನು ನಮ್ಮಗಳಿಗೋಸ್ಕರ ಇಲ್ಲಿಯ ತನಕ ಪಟ್ಟ ಶ್ರಮವೇ ಸಾಕಪ್ಪ. ನಮ್ಮದು ಹೇಗೋ ನಡೆಯುತ್ತೆ.ನೀನಿನ್ನೂ ಬೆಳೆದು ಫಲ ನೀಡಬೇಕಾದ ಮರ. ಈ ಸಸಿಯನ್ನ ಇಲ್ಲಿಯೇ ಚಿವುಟಿದರೆ ಆ ದೇವನೂ ನಮ್ಮನ್ನ ಮೆಚ್ಚಲಾರ. ಆದ್ದರಿಂದ ನೀನು ಶಿವಮೊಗ್ಗಾಕ್ಕೋ, ಮೈಸೂರಿಗೋ ಹೋಗಿ ಕಾಲೇಜು ಸೇರಿಕೊಂಡು ನಿನ್ನ ಓದನ್ನು ಮುಂದುವರೆಸು. ಒಳ್ಳೆಯ ಕೆಲಸಕ್ಕೆ ಸೇರಿಕೊಂಡು ನಿನ್ನ ಬಾಳನ್ನು ಹಸನು ಮಾಡಿಕೋ. ಆಮೇಲೆ ನಮ್ಮ ಬಗ್ಗೆ ಯೋಚನೆ ಮಾಡು.ಅಲ್ಲಿಯವರೆಗೆ ನಮ್ಮಗಳ ಯೋಚನೆಯನ್ನು ಬಿಟ್ಟುಬಿಡು".
- Read more about ಕರ್ಮಯೋಗಿ-ಭಾಗ ೨(ಚಿತ್ತ)
- 1 comment
- Log in or register to post comments