ಬುದ್ಧಿಯ ಕಥೆಗಳು
ಕನ್ನಡದಲ್ಲಿ ಪೌರಾಣಿಕ ಕಾದಂಬರಿಗಳನ್ನು ರಚಿಸಿದ ಪ್ರತಿಭಾವಂತ ಸಾಹಿತಿ ದೇವುಡು ನರಸಿಂಹ ಶಾಸ್ತ್ರಿ. ತಮ್ಮ ಮೂರು ಬೃಹತ್ ಕಾದಂಬರಿಗಳಾದ “ಮಹಾ ಬ್ರಾಹ್ಮಣ”, “ಮಹಾ ಕ್ಷತ್ರಿಯ” ಮತ್ತು “ಮಹಾ ದರ್ಶನ”ಗಳಿಂದ ಮೇರು ಸದೃಶ ಸಾಹಿತಿಗಳಾಗಿ ಕನ್ನಡದ ಓದುಗರಿಗೆ ಪರಿಚಿತರು.
ಬಹುಮುಖ ಪ್ರತಿಭೆಯ ದೇವುಡು ಅವರು ಮಕ್ಕಳ ಸಾಹಿತ್ಯಕ್ಕೆ ಕೂಡ ಸುಮಾರು 85 ವರುಷಗಳ ಹಿಂದಿನಿಂದಲೂ ಕೊಡುಗೆ ಇತ್ತವರು. ಅವರು ಬರೆದ 49 ಮಕ್ಕಳ ನೀತಿಕತೆಗಳು ಈ ಸಂಕಲನದಲ್ಲಿವೆ. ತೆನಾಲಿ ರಾಮಕೃಷ್ಣನ ವಿಚಾರವಾಗಿ ಜನಜನಿತವಾಗಿರುವ ಒಂದು ದಂತಕಥೆಯನ್ನು ಆಧರಿಸಿದ “ವಿಚಿತ್ರ ಶಿಕ್ಷೆ” ಎಂಬ ಮಕ್ಕಳ ನಾಟಕವೂ ಇದರಲ್ಲಿದೆ.
- Read more about ಬುದ್ಧಿಯ ಕಥೆಗಳು
- Log in or register to post comments