ಸಂಪದ ಪುಟಗಳು - ಲೇಖಕರ ಹೆಸರು ಅಥವಾ ಐಡಿ ಬಳಸಿ ಹುಡುಕಿ

Enter a comma separated list of user names.

ಕರ್ನಾಟಕ Vs ಕನ್ನಡ : ಕೆಲವು ಅನುಮಾನಗಳು

ಬರವಣಿಗೆಯ ತಲೆಬರೆಹವು ಅನೇಕ ಓದುಗರ ಹುಬ್ಬುಗಳು ಮೇಲೇರುವಂತೆ ಮಾಡುತ್ತದೆ. ಕರ್ನಾಟಕ ಮತ್ತು ಕನ್ನಡಗಳು ಒಂದೇ ಎಂದು ತಿಳಿದವರಿಗೆ, ಇದು ಅಚ್ಚರಿಯನ್ನು ಉಂಟುಮಾಡುತ್ತದೆ. ಆದರೆ ನಮ್ಮ ಈ ನಾಡಿನ ನಿಜವಾದ ಸ್ಥಿತಿಗತಿಗಳನ್ನು ಗಮನಿಸಿದಾಗ ಅಂತಹ ಆಶ್ಚರ್ಯಕ್ಕೆ ಕಾರಣವಿರುವಂತೆ ತೋರುವುದಿಲ್ಲ. ಕರ್ನಾಟಕ ಎನ್ನುವುದು ಒಂದು ಭೌಗೋಳಿಕ ಪ್ರದೇಶ. ಇಲ್ಲಿನ ಬಹುಪಾಲು ಜನರು ಬಳಸುವ ಭಾಷೆಯು ಕನ್ನಡ. ಆದರೆ, ಇಲ್ಲಿ ಬೇರೆ ಬೇರೆ ಭಾಷೆಗಳನ್ನು ಮಾತನಾಡುವ ಜನರೂ ಇದ್ದಾರೆ. ಅಲ್ಲದೆ, ಕನ್ನಡಕ್ಕಿಂತ ಹೆಚ್ಚಾಗಿ ಬೇರೆ ಬೇರೆ ಭಾಷೆಗಳನ್ನು ಉಪಯೋಗಿಸುವ ಕೆಲವು ಪ್ರದೇಶಗಳೂ ಇಲ್ಲಿವೆ. ಇವುಗಳಲ್ಲಿ ಕೆಲವು ಭಾಷೆಗಳಿಗೆ, ಕರ್ನಾಟಕದ ಹೊರಗೆ ಯಾವ ಅಸ್ತಿತ್ವವೂ ಇಲ್ಲ. ತುಳು, ಕೊಡಗು, ಸೋಲಿಗ ಮುಂತಾದ ಹಲವು ಭಾಷೆಗಳು ಈ ಗುಂಪಿಗೆ ಸೇರುತ್ತವೆ. ಉರ್ದು, ತಮಿಳು, ಕೊಂಕಣಿ, ತೆಲುಗು ಮುಂತಾದ ಭಾಷೆಗಳಿಗೆ ಅಂತಹ ಅಸ್ತಿತ್ವವಿದೆ. ಆದರೆ, ಇಲ್ಲಿ ಆ ಭಾಷೆಗಳನ್ನು ಬಳಸುವವರಿಗೆ, ತಮ್ಮ ಮೂಲ ರಾಜ್ಯಗಳ ನೊಕಟ ಸಂಪರ್ಕವೇನೂ ಇಲ್ಲ. ಅವರಲ್ಲಿ ಬಹುಪಾಲು ಜನರು, ತಲೆಮಾರುಗಳಿಂದ ಕರ್ನಾಟಕದಲ್ಲಿಯೇ ಇರುವವರು. ಅವರು ನೂರಕ್ಕೆ ನೂರರಷ್ಟು ಕರ್ನಾಟಕದ ಪ್ರಜೆಗಳು. ತಾಯಿನುಡಿಯ ಅಗತ್ಯದ ಬಗ್ಗೆ ಇಷ್ಟೆಲ್ಲ ಮಾತನಾಡುವ ನಮಗೆ, ಅವರ ತಾಯಿನುಡಿಗಳನ್ನು ಕಾಪಾಡುವ ಹೊಣೆಗಾರಿಕೆಯೂ ಇದೆ. ನಾವು ಇಂಗ್ಲಿಷ್, ಹಿಂದಿ, ಸಂಸ್ಕೃತ ಮುಂತಾದ ಭಾಷೆಗಳನ್ನು ಎದುರಿಸುವಾಗ, ಮಾತೃಭಾಷೆಯೆಂಬ ಆಯುಧವನ್ನು ಬಳಸಿದರೆ, ನಮ್ಮೊಳಗೇ ಇರುವ ಇತರ ಭಾಷೆಗಳ ಪ್ರಶ್ನೆ ಬಂದಾಗ ಪ್ರಾದೇಶಿಕ ಭಾಷೆಯ ಪರವಾದ ವಾದವನ್ನು ಮಂಡಿಸುತ್ತೇವೆ. ಕರ್ನಾಟಕದಲ್ಲಿಯೇ ಇರುವ ಅನ್ಯ ಮಾತೃಭಾಷಿಕರ ಬಗ್ಗೆ ಹೆಚ್ಚಿನ ಕಾಳಜಿ ತೋರಿಸುವುದಿಲ್ಲ. ಈಚಿನ ದಿನಗಳಲ್ಲಿ, ಈ ಅನ್ಯಭಾಷಿಕರ ಸಂಸ್ಕೃತಿ ಮತ್ತು ಕಲೆಗಳನ್ನು ನಮ್ಮದಾಗಿ ಮಾಡಿಕೊಳ್ಳುವ ಪ್ರಯತ್ನದಲ್ಲಿ ಕನ್ನಡಿಗರ ಪ್ರಧಾನ ವಾಹಿನಿಯು ಅಷ್ಟೊಂದು ಆಸಕ್ತವಾಗಿಲ್ಲ.

ಭಾಷಾಇಂಡಿಯ ಕನ್ನಡದಲ್ಲಿ

ಭಾಷಾಇಂಡಿಯ ಅಂತರಜಾಲ ತಾಣ ಈಗ ಕನ್ನಡದಲ್ಲೂ ಲಭ್ಯ. ಕನ್ನಡ ಆವೃತ್ತಿಯ ವಿಳಾಸ - [http://www.bhashaindia.com/Patrons/PatronsHome.htm?lang=Kn|http://www.bhashaindia.com/Patrons/PatronsHome.htm?lang=Kn]. ಚರ್ಚಾ ವೇದಿಕೆಯಲ್ಲಿ ಕನ್ನಡಕ್ಕಾಗಿ ನಾಲ್ಕು ವಿಭಾಗಗಳನ್ನು ಮಾಡಲಾಗಿದೆ. ಚರ್ಚೆಗಳಲ್ಲಿ ಭಾಗವಹಿಸಲು ಭೇಟಿ ನೀಡಿ - [http://bhashaindia.com/ForumV2/displaygroup.aspx?GroupID=5|http://bhashaindia.com/ForumV2/displaygroup.aspx?GroupID=5]

ವಾಲ್ಟ್ ಡಿಸ್ನಿ

ಡಿಸ್ನಿಲ್ಯಾಂಡ್ ಎನ್ನುವುದು ಎಂದಿಗೂ ಪೂರ್ಣಗೊಳ್ಳುವ ಯೋಜನೆಯಲ್ಲ. ಎಲ್ಲಿಯವರೆಗೆ ಮನುಷ್ಯನ ಕಲ್ಪನಾಶಕ್ತಿ ಇರುತ್ತದೆಯೋ, ಅಲ್ಲಿಯವರೆಗೆ ಡಿಸ್ನಿಲ್ಯಾಂಡ್‌ನಲ್ಲಿ ಏನಾದರೂ ಹೊಸ ಬದಲಾವಣೆಗಳು ಆಗುತ್ತಲೇ ಇರುತ್ತವೆ.

ತತ್ತರ ಪ್ರದೇಶ : ಮುಲಾಮು ಟ್ಯೂಬ್‌ಗೆ ಪಿನ್ ಚುಚ್ಚಿದ ಕಾಂ-guess!

ಬೊಗಳೂರು, ಜ.18- ಮಕ್ಕಳ ಮೂಳೆ ಮಾಂಸಗಳು ದೊರೆತು ತತ್ತರ ಪ್ರದೇಶವಾಗಿರುವ ಉತ್ತರ ಪ್ರದೇಶದಲ್ಲಿ, ಐದು ವರ್ಷಗಳ ಆಡಳಿತದ ಸವಿಯನ್ನು ಸಂಪೂರ್ಣವಾಗಿ ಸವಿದು, ತಿಂದು ತೇಗಿದ ಬಳಿಕ, ಶೀಘ್ರವೇ ಚುನಾವಣೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ತಾವು ಮುಲಾಮು ಸಿಂಗ ಸರಕಾರಕ್ಕೆ ಬೆಂಬಲ ಹಿಂತೆಗೆದುಕೊಂಡಿರುವುದಾಗಿ ಸತ್ತವರ ಪ್ರದೇಶ ಕಾಂ-guess ಸಮಿತಿ ಸ್ಪಷ್ಟಪಡಿಸಿದೆ.(bogaleragale.blogspot.com)

ಜೀನ್ ಪಾಲ್ ಸಾರ್ತ್ರೆ

ನಾವು ಏನು ಮಾಡಬೇಕೆಂದು ಬಯಸಿದ್ದೆವೋ ಅದನ್ನು ಮಾಡಲಿಲ್ಲ; ಆದರೂ ನಾವು ಏನಾಗಿದ್ದೇವೋ ಅದಕ್ಕೆ ನಾವೇ ಹೊಣೆಯಾಗಿದ್ದೇವೆ. ಅದೇ ವಾಸ್ತವ ಸಂಗತಿಯಾಗಿದೆ. -ಜೀನ್ ಪಾಲ್ ಸಾರ್ತ್ರೆ