ಎಲ್ಲ ಪುಟಗಳು

ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
April 17, 2024
ಪ್ರಚಲಿತ ವಿದ್ಯಮಾನಗಳ ಕುರಿತಾಗಿ ಬರೆಯುವ ಲೇಖಕ ಪರಕಾಲ ಪ್ರಭಾಕರ್ ಅವರು ಆಂಗ್ಲ ಭಾಷೆಯಲ್ಲಿ ಬರೆದ ಕೃತಿಯನ್ನು ‘ರಾಹು' ಅವರು ‘ಹೆಣವಾಗುತ್ತಿರುವ ಗಣರಾಜ್ಯ' ಎಂಬ ಹೆಸರಿನಲ್ಲಿ ಕನ್ನಡಕ್ಕೆ ಅನುವಾದ ಮಾಡಿದ್ದಾರೆ. ಈ ಕೃತಿಗೆ ಮುನ್ನುಡಿಯನ್ನು ಬರೆದಿದ್ದಾರೆ ಖ್ಯಾತ ರಾಜಕೀಯ ವಿಶ್ಲೇಷಕ ಮತ್ತು ಬರಹಗಾರ ಸಂಜಯ್ ಬಾರು. ಅವರು ತಮ್ಮ ಮುನ್ನುಡಿಯಲ್ಲಿ ವ್ಯಕ್ತ ಪಡಿಸಿದ ಕೆಲವೊಂದು ಅನಿಸಿಕೆಗಳ ಆಯ್ದ ಭಾಗ ಇಲ್ಲಿದೆ... “ಪರಕಾಲ ಪ್ರಭಾಕರ್ ಅವರು ಪುನರುಜ್ಜೀವಕ ಪುರುಷರು: ಒಬ್ಬ ವಿಖ್ಯಾತ…
ಲೇಖಕರು: addoor
ವಿಧ: ಪುಸ್ತಕ ವಿಮರ್ಶೆ
April 16, 2024
ಭಾರತದ ದಟ್ಟ ಕಾಡುಗಳ ಜನರ ಮತ್ತು ನರಭಕ್ಷಕ ಪ್ರಾಣಿಗಳ ಬದುಕನ್ನು ಆಪ್ತವಾಗಿ, ಮನಸೂರೆಗೊಳ್ಳುವ ಸಾಹಿತ್ಯವಾಗಿ ದಾಖಲಿಸಿದ ಕೆನೆತ್ ಆಂಡರ್ಸನ್ ಅವರ ಅನುಭವಗಳ ಸಂಗ್ರಹ ರೂಪಾಂತರ ಇದು. ಇದರಲ್ಲಿವೆ ನಾಲ್ಕು ಕಥನಗಳು. “ದಿಗುವಮೆಟ್ಟದ ಕೊಲೆಗಡುಕ” ಮೊದಲನೆಯ ಕಥನ. ಆಂಧ್ರಪ್ರದೇಶದ ಗುಂತಕಲ್ ರೈಲ್ವೆ ಜಂಕ್ಷನಿನಿಂದ ಪೂರ್ವಕ್ಕೆ ರೈಲಿನಲ್ಲಿ ಸಾಗಿದರೆ ಸಿಗುವ ಪಟ್ಟಣ ನಂದ್ಯಾಲ್. ಮುಂದುವರಿದರೆ, ಬಸವಪುರ ಸ್ಟೇಷನಿನ ನಂತರ ಒಂದು ಚಿಕ್ಕ ಮತ್ತೊಂದು ಬಹಳ ಉದ್ದದ ಸುರಂಗಗಳು ಸಿಗುತ್ತವೆ. ತದನಂತರ ಸಿಗುವ…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
April 15, 2024
ಉಡುಪಿ ಜಿಲ್ಲೆಯ ಸಾಮಾಜಿಕ ಕಾರ್ಯಕರ್ತರು ಹಾಗೂ ಮಾಹಿತಿ ಹಕ್ಕು ಕಾರ್ಯಕರ್ತರೂ ಆಗಿರುವ ಪತ್ರಕರ್ತ ಅಶ್ವಿನ್ ಲಾರೆನ್ಸ್ ಇವರು ಬರೆದ ಪುಟ್ಟ, ಆದರೆ ಅಪರೂಪದ ಅದ್ಭುತ ವ್ಯಕ್ತಿಯ ಚಿತ್ರಣವನ್ನು ಕಟ್ಟಿಕೊಡುವ ಪುಸ್ತಕ ‘ಜಾತಿವ್ಯಾಧಿ ಚಿಕಿತ್ಸಕ ಡಾ. ಪದ್ಮನಾಭನ್ ಪಲ್ಪು’. ಈ ಕೃತಿಗೆ ಮಾಹಿತಿಪೂರ್ಣವಾದ ಮುನ್ನುಡಿಯನ್ನು ಬರೆದಿದ್ದಾರೆ ಪತ್ರಕರ್ತರಾದ ಶ್ರೀರಾಮ ದಿವಾಣರು. ಇವರು ತಮ್ಮ ಮುನ್ನುಡಿಯಲ್ಲಿ ವ್ಯಕ್ತ ಪಡಿಸಿದ ಕೆಲವು ಅಭಿಪ್ರಾಯಗಳ ಕೆಲವು ಸಾಲುಗಳು ನಿಮ್ಮ ಓದಿಗಾಗಿ… “ಕ್ರಾಂತಿ ಎಂದರೆ ಹಿಂಸೆ…
ಲೇಖಕರು: Kavitha Mahesh
ವಿಧ: ರುಚಿ
April 14, 2024
ಒಂದು ಪಾತ್ರೆಗೆ ಎಲ್ಲ ಹಿಟ್ಟಿನ ಜೊತೆಗೆ ತುರಿದ ಸೌತೇಕಾಯಿ, ಹಸಿ ಮೆಣಸಿನಕಾಯಿ ಪೇಸ್ಟ್, ಅರಶಿನ ಹುಡಿ, ಇಂಗು, ಉಪ್ಪು, ಕೊತ್ತಂಬರಿ ಸೊಪ್ಪು ಇವೆಲ್ಲವನ್ನು ಬೆರೆಸಿ ನೀರು ಹಾಕಿ ಚಪಾತಿ ಹಿಟ್ಟಿನ ಹದಕ್ಕೆ ಬರುವಂತೆ ಕಲಸಿ. ೫ ನಿಮಿಷ ಬಿಟ್ಟು ಕೈಯಿಂದ ತಟ್ಟಿ ರೊಟ್ಟಿ ಮಾಡಿ ಎರಡು ಬದಿ ಕೆಂಪಗೆ ಬೇಯಿಸಿದರೆ ಬಿಸಿ ಬಿಸಿ ರೊಟ್ಟಿ ಸಿದ್ಧ. ಉತ್ತರ ಕರ್ನಾಟಕದ ಕಡೆ ಇದನ್ನು ತಾಲಿಪಟ್ಟು ಎನ್ನುತ್ತಾರೆ. ಇದನ್ನು ಬೆಣ್ಣೆ ಅಥವಾ ಮೊಸರಿನ ಜೊತೆ ತಿಂದರೆ ತುಂಬಾ ರುಚಿಯಾಗಿರುತ್ತದೆ.
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
April 12, 2024
ಕಾಡು ಕಾಡ್ತು’ ರೇಖಾ ಹೆಗಡೆಯವರು ಕಾಡಿನ ಅನುಭವಗಳ ಕುರಿತು ಬರೆದ ಕೃತಿಯಾಗಿದೆ. ಇದಕ್ಕೆ ಅವರದ್ದೇ ಮುನ್ನುಡಿ ಬರಹವಿದೆ: ಅಡವಿಯೆಂದರೆ ಅದೇನು ಹುಚ್ಚೋ.. ನನ್ನ ಬಾಲ್ಯ, ಹದಿಹರೆಯ ದಿನಗಳಲ್ಲಿ ಪುಸ್ತಕಗಳನ್ನು ಬಿಟ್ಟರೆ ನಾನು ಅತಿಹೆಚ್ಚು ಪ್ರೀತಿಸಿದ್ದು ಅಡವಿಯನ್ನು ಮುಗಿಲಿಗೆ ಏಣಿ ಚಾಚುವ ಸಾಗವಾನಿ, ಮತ್ತಿ, ಹೆದ್ದೇಗ, ಬೀಟೆ ಮರಗಳು, ಗಾಳಿ ಬೀಸಿದಾಗೆಲ್ಲ. ಒಂಥರಾ 'ಸುಂಯ್' ಎಂದು ಸದ್ದು ಮಾಡುವ ಬಿದಿರು ಮಟ್ಟಿಗಳು, ಆ ಮಟ್ಟಿಗಳ ಬುಡದಲ್ಲಿ ಬಿದ್ದಿರುತ್ತಿದ್ದ ಪುಟ್ಟ ಪುಟ್ಟ ನವಿಲು ಗರಿಗಳು.…
ಲೇಖಕರು: Palahalli Vishwanath
ವಿಧ: ಬ್ಲಾಗ್ ಬರಹ
April 11, 2024
ರೈಲು ಬೆಳಿಗ್ಗೆ 8 ಗಂಟೆಗೆ ಊರಿಗೆ ಬಂದು ಸೇರಲಿತ್ತು. ಊರಿನ ಖ್ಯಾತ ನಾಯಕ ಮೋಹನದಾಸ್ ಅವರು ರಾಜಧಾನಿಯಿಂದ ವಾಪಸ್ಸು ಬರಲಿದ್ದರು. ಎಲ್ಲರಿಗೂ ಕುತೂಹಲ! ಇಂದು ಅವರ ಕೊರಳಿನಲ್ಲಿ ಯಾವ ಹೂವಿನ ಹಾರ ಇರುತ್ತದೆ? ಸಂಪಿಗೆಯೇ? ಮಲ್ಲಿಗೆಯೇ? ಗೋಪಾಲದಾಸರು ತಾವು ರೈಲಿನಿಂದ ಇಳಿಯುವಾಗ ತಮ್ಮ ಇತ್ತೀಚಿನ ಪಕ್ಷದ ಹೂವಿನ ಹಾರವನ್ನು ಹಾಕಿಕೊಂಡಿರುತ್ತೇನೆ ಎಂದು ಪೋನ್ ಮಾಡಿದ್ದರು ನಮ್ಮ ರಾಜ್ಯದಲ್ಲಿ ಎರಡು ರಾಜಕೀಯ ಪಕ್ಷಗಳು – ಸಂಪಿಗೆ ಮತ್ತು ಮಲ್ಲಿಗೆ – ಇರುವುದು ನಿಮಗೆ ಗೊತ್ತು. ಹಳೆಯವರನ್ನು ಕೇಳಿದರೆ…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
April 10, 2024
ಲೇಖಕ, ತಾಳಮದ್ದಳೆ ಅರ್ಥಧಾರಿ, ಉಪನ್ಯಾಸಕ ಹೀಗೆ ಹಲವು ಮುಖಗಳಿಂದ ಪ್ರಸಿದ್ಧರಾಗಿರುವವರು ರಾಧಾಕೃಷ್ಣ ಕಲ್ಚಾರ್. ಅವರ ಹಲವು ಕೃತಿಗಳು ಈಗಾಗಲೇ ಪ್ರಕಟವಾಗಿದ್ದು ಜನಪ್ರಿಯತೆ ಗಳಿಸಿವೆ. ತನ್ನದೇ ಆದ ಓದುಗರನ್ನು ಪಡೆದುಕೊಂಡ ಕಲ್ಚಾರ್ ಅವರು ಅಂಕಣಕಾರರಾಗಿಯೂ ಜನಪ್ರಿಯರು. ‘ಕೂಡುಮನೆ' ಎಂಬ ಈ ಪುಟ್ಟ ಕಾದಂಬರಿ ಸುಮಾರು ಮೂರು ದಶಕಗಳ ಹಿಂದೆ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಗಳಿಸಿತ್ತು. ಸದ್ಯ ಮುದ್ರಿತ ಪ್ರತಿಗಳೆಲ್ಲ ಮುಗಿದಿರುವುದರಿಂದ ಎರಡನೆಯ ಬಾರಿಗೆ ಪ್ರಕಟವಾಗುತ್ತಿದೆ. ಒಂದು…
ಲೇಖಕರು: Kavitha Mahesh
ವಿಧ: ರುಚಿ
April 07, 2024
ಕಡಲೆ ಹಿಟ್ಟು, ಅಕ್ಕಿ ಹಿಟ್ಟುಗಳನ್ನು ಒಂದು ಚಮಚ ಬಿಸಿ ಎಣ್ಣೆ ಸೇರಿಸಿ ಕಲಸಿಡಿ. ತೆಂಗಿನ ತುರಿ, ಕರಿಬೇವಿನ ಎಲೆಗಳು, ಅರಶಿನ, ಮೆಣಸಿನ ಹುಡಿ, ಉಪ್ಪು, ಗರಮ್ ಮಸಾಲೆಗಳನ್ನು ಸೇರಿಸಿ ತರಿತರಿಯಾಗಿ ಅರೆದು, ಬ್ರೆಡ್ ತುಂಡುಗಳೊಂದಿಗೆ ಬೆರೆಸಿ. ಕಡಲೆ ಹಿಟ್ಟಿನ ಹಾಗೂ ಬ್ರೆಡ್ ಮಿಶ್ರಣಗಳನ್ನು ಸೇರಿಸಿ ಸ್ವಲ್ಪ ನೀರು ಹಾಕಿ ಗಟ್ಟಿಯಾಗಿ ವಡೆಯ ಹದಕ್ಕೆ ಕಲಸಿಡಿ. ಮಿಶ್ರಣದಿಂದ ನಿಂಬೆಯ ಗಾತ್ರದ ಹಿಟ್ಟು ತೆಗೆದುಕೊಂಡು ವಡೆಯಾಕಾರದಲ್ಲಿ ತಟ್ಟಿ, ಕಾಯಿಸಿದ ಎಣ್ಣೆಯಲ್ಲಿ ಕರಿದರೆ ಸ್ವಾದಿಷ್ಟವಾದ ಬ್ರೆಡ್…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
April 05, 2024
ವೃತ್ತಿಯಲ್ಲಿ ದೈಹಿಕ ಶಿಕ್ಷಕರೂ, ಪ್ರವೃತ್ತಿಯಲ್ಲಿ ಸಾಹಿತಿಯೂ ಆಗಿರುವ ಹಾ ಮ ಸತೀಶರು ಬರೆದ ‘ಕೊನೆಯ ನಿಲ್ದಾಣ' ಎನ್ನುವ ಕವನ ಸಂಕಲನವು ಕಥಾಬಿಂದು ಪ್ರಕಾಶನದ ಮೂಲಕ ಬಿಡುಗಡೆಯಾಗಿದೆ. ಹರಿನರಸಿಂಹ ಉಪಾಧ್ಯಾಯ (ವಿಹಾರಿ) ಇವರು ಈ ಕೃತಿಗೆ ಬಹಳ ಸೊಗಸಾದ ಮುನ್ನುಡಿಯನ್ನು ಬರೆದಿದ್ದಾರೆ. ಅವರು ತಮ್ಮ ಮುನ್ನುಡಿಯಲ್ಲಿ ಸತೀಶರ ಪರಿಚಯ ಮಾಡಿಕೊಡುತ್ತಾ ಅವರ ಕವನಗಳ ಮಾಹಿತಿಯನ್ನೂ ಹಂಚಿಕೊಂಡಿದ್ದಾರೆ. ಅವರು ವ್ಯಕ್ತ ಪಡಿಸಿದ ಕೆಲವು ಭಾವಗಳ ಆಯ್ದ ಸಾಲುಗಳು ಇಲ್ಲಿವೆ… “ಇನ್ನೂ ಒಂದು ಹೆಜ್ಜೆ ಮುಂದಿಟ್ಟು…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
April 03, 2024
‘ವರ್ತಮಾನ ಭಾರತ' ಎನ್ನುವ ನೂತನ ಕೃತಿಯಲ್ಲಿ ಖ್ಯಾತ ಚಿಂತಕ, ಲೇಖಕ ಪುರುಷೋತ್ತಮ ಬಿಳಿಮಲೆ ಇವರು ಪ್ರಕಟ ಮಾಡಿದ್ದಾರೆ. ಸಮಕಾಲೀನ ಘಟನೆಗಳ ಬಗ್ಗೆ ಇವರು ಬರೆದ ಪುಟ್ಟ ಪುಟ್ಟ ಬರಹಗಳೇ ಸಂಗ್ರಹಗೊಂಡು ‘ವರ್ತಮಾನ ಭಾರತ’ ಎನ್ನುವ ಕೃತಿಯಾಗಿ ಹೊರಬಂದಿದೆ. ಈ ಕೃತಿಗೆ ಬರೆದ ಲೇಖಕರ ಮಾತಿನಲ್ಲಿ ಪುರುಷೋತ್ತಮ ಬಿಳಿಮಲೆ ಅವರು ವ್ಯಕ್ತ ಪಡಿಸಿದ ಕೆಲವು ಮಾತುಗಳು ನಿಮ್ಮ ಓದಿಗಾಗಿ... “ಸಂಸ್ಥೆಗಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದುದರಿಂದ ವೈಯಕ್ತಿಕವಾಗಿ ಹೆಚ್ಚು ಬರೆಯಲಾಗಲಿಲ್ಲ. ೨೦೨೦ರಲ್ಲಿ…