ಎಲ್ಲ ಪುಟಗಳು

ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
September 09, 2023
‘ಚೋದ್ಯ’ ಅನುಪಮಾ ಪ್ರಸಾದ್‌ ಅವರ ಕಥಾಸಂಕಲನವಾಗಿದೆ. ಏಕಾಂತಕ್ಕಿಳಿದು ಬರೆಯಲು ತೊಡಗುವುದು.. ನಂತರ ಅದು ಬರೆಸಿಕೊಳ್ಳುತ್ತಾ ಹೋಗುವ ಪ್ರಕ್ರಿಯೆ.. ಮತ್ತೆಲ್ಲೊ ಒಂದು ಕಡೆ ಅದೇ ಕಂಡುಕೊಳ್ಳುವ ನಿಲುಗಡೆ.. ಇದೆಲ್ಲ ಸೇರಿದಾಗ ಸಿಗುವ ಮೊತ್ತವೇ ಕಥೆಯೆಂಬ ಚೋದ್ಯ ಅಂತಹ ಕೆಲವು ಈಗ ಮತ್ತೆ ನಿಮ್ಮ ಓದಿಗಾಗಿ ಕಾಯುತ್ತಿವೆ. ಕೈಗೆತ್ತಿಕೊಳ್ಳುವ ನಿಮಗೆ ಶರಣು. ಇಲ್ಲಿರುವ ಕಥೆಗಳಲ್ಲಿ ಕೆಲವು ಕಥಾ ಸ್ಪರ್ಧೆಗಳಲ್ಲಿ ಬಹುಮಾನ ಪಡೆದಿವೆ ಹಾಗು ಮಯೂರ, ತುಷಾರ, ತರಂಗ ವಿಶೇಷಾಂಕ, ವಿಜಯವಾಣಿ ವಿಶೇಷಾಂಕ, ಸುಧಾ…
ಲೇಖಕರು: addoor
ವಿಧ: ಪುಸ್ತಕ ವಿಮರ್ಶೆ
September 07, 2023
ಭಾರತ ಹಬ್ಬಗಳ ದೇಶ. ಇಲ್ಲಿ ಮಳೆಗಾಲದ ಹೊರತಾಗಿ ವರುಷದುದ್ದಕ್ಕೂ ಹಬ್ಬಗಳ ಸಂಭ್ರಮ. ಈ ಪುಸ್ತಕದಲ್ಲಿ ನಮ್ಮ ದೇಶದಲ್ಲಿ ವಿವಿಧ ಧರ್ಮದವರು ಆಚರಿಸುವ 15 ಹಬ್ಬಗಳನ್ನು ಪರಿಚಯಿಸಲಾಗಿದೆ. ವಿವಿಧ ಲೇಖಕರು ಬರೆದಿರುವ ಮಾಹಿತಿಪೂರ್ಣ ಲೇಖನಗಳನ್ನು ಎ.ಆರ್. ರಂಗರಾವ್ ಸರಳ ಭಾಷೆಯಲ್ಲಿ ಕನ್ನಡಕ್ಕೆ ಅನುವಾದಿಸಿದ್ದಾರೆ. ಬುದ್ಧ ಪೂರ್ಣಿಮಾ, ಬಿಹು, ರಥ ಯಾತ್ರೆ, ರಕ್ಷಾ ಬಂಧನ್, ಓಣಂ, ಈದ್, ಗಣೇಶ ಚತುರ್ಥಿ, ದುರ್ಗಾ ಪೂಜೆ, ದಸರಾ, ದೀಪಾವಳಿ, ಕ್ರಿಸ್‌ಮಸ್, ಲೋಡಿ, ಪೊಂಗಲ್, ಹೋಳಿ, ನವರೋಜ್ - ಈ ಹಬ್ಬಗಳ…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
September 07, 2023
ಕೇವಲ ೫೨ ಪುಟಗಳಲ್ಲಿ ಬಹಳ ಸೊಗಸಾದ ಕವಿತೆಗಳನ್ನು ಕಟ್ಟಿಕೊಟ್ಟಿದ್ದಾರೆ ಉದಯೋನ್ಮುಖ ಕವಯತ್ರಿ ಡಿ. ಅರುಂಧತಿ. ಇವರು ಬರೆದ ಕವನಗಳ ಸಂಕಲನ “ಜೀವಜಾಲದ ಸಗ್ಗ” ದ ಬಗ್ಗೆ ಲೇಖಕರಾದ ಜಿ ವಿ ಆನಂದಮೂರ್ತಿ ತಮ್ಮ ಮುನ್ನುಡಿಯಲ್ಲಿ ಹೀಗೆ ಅಭಿಪ್ರಾಯವನ್ನು ವ್ಯಕ್ತ ಪಡಿಸಿದ್ದಾರೆ... “ಸಾರ್ವಜನಿಕ ಜೀವನ, ದಲಿತ ಮತ್ತು ರೈತ ಚಳವಳಿಗಳೊಂದಿಗಿನ ನಿರಂತರ ಸಂಪರ್ಕ, ಮಹಿಳಾ ಸಂಘಟನೆ, ಸಾಹಿತಿ ಕಲಾವಿದರೊಂದಿಗೆ ಬೆರೆವ ಗುಣ, ನಿರ್ಲಕ್ಷಿತ ಸಮುದಾಯಗಳಿಗೆ ತೋರುವ ಕಾರುಣ್ಯ ಹಾಗೂ ವೈದ್ಯ ವೃತ್ತಿಯಲ್ಲಿ ಹಲವಾರು…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
September 05, 2023
ನೀಲಿ ನಕ್ಷೆ’ ಅಮಿತಾ ಭಾಗವತ್‌ ಅವರ ರಚನೆಯ ಕಾದಂಬರಿಯಾಗಿದೆ. ಕಡಲ ಕಿನಾರೆಯಲ್ಲೆ ಹುಟ್ಟಿದ ನದಿಯಂಥ ಸರಯೂಳ, ಕಾಣದ ಕಡಲ ಕಡೆಗಿನ ತುಡಿತದ ಹೊಳಪಿನ ಕಥನ ಇದು. ಲವಲವಿಕೆಯ ಸಣ್ಣ ಊರಾದ ಕಾರವಾರದಿಂದ, ಹತ್ತನೇ ತರಗತಿಯ ನಂತರ, ಕೇವಲ ಸಿನೆಮಾದಲ್ಲಷ್ಟೆ ಕಂಡಿದ್ದ ಮುಂಬಯಿ ಶಹರಕ್ಕೆ ಬಂದ ಹುರುಪಿನ ಕಿಶೋರಿ ಸರಯೂ, ಆ ಮಹಾನಗರದ 'ಮಗಜಮಾರಿ'ಯ ಗೌಜಿಯಲ್ಲಿ ತನ್ನ ಹೆಜ್ಜೆ ದನಿಗಳನ್ನು ಹೊಸದಾಗಿ ಆಲಿಸುತ್ತ, 'ಕಿಟಕಿಯನ್ನು ಒದ್ದೆ ಬಟ್ಟೆಯಿಂದ ಒರೆಸುತ್ತ', ರೂಪುಗೊಂಡ ನಿಬಿಡ ಆವರಣ ಇದು. ಸಮಾಜ ಹೇರುವ ಅಯಾಚಿತ…
ಲೇಖಕರು: Kavitha Mahesh
ವಿಧ: ರುಚಿ
September 03, 2023
ಮೊದಲು ಪಾಲಕ್ ಸೊಪ್ಪನ್ನು ಚೆನ್ನಾಗಿ ತೊಳೆದು ಕಾಲು ಕಪ್ ನೀರಿನ ಜೊತೆ ಬೇಯಿಸಿ. ಪಾಲಕ್ ಬೆಂದು ತಣ್ಣಗಾದ ನಂತರ ಅದರ ಜೊತೆ ಹಸಿಮೆಣಸನ್ನು ಮಿಕ್ಸಿ ಜಾರಿಗೆ ಹಾಕಿ ರುಬ್ಬಿಕೊಳ್ಳಿ. ನಂತರ ಒಂದು ಪಾತ್ರೆಯಲ್ಲಿ ಗೋಧಿ ಹಿಟ್ಟು, ಓಂ ಕಾಳು, ಉಪ್ಪು, ರುಬ್ಬಿಕೊಂಡ ಪಾಲಕ್ ಮಿಶ್ರಣವನ್ನು ಹಾಕಿ ಚೆನ್ನಾಗಿ ಕಲಸುತ್ತಾ ನಿಧಾನಕ್ಕೆ ನೀರನ್ನು ಸೇರಿಸಿ ಹದವಾಗಿ ಹಿಟ್ಟನ್ನು ಕಲಸಿಕೊಳ್ಳಿ . ಹೀಗೆ ಹಲಸಿದ ಹಿಟ್ಟನ್ನು ಹತ್ತು ನಿಮಿಷ ಹಾಗೆಯೇ ಇಟ್ಟುಬಿಡಿ. ನಂತರ ಆ ಹಿಟ್ಟಿನಿಂದ ಸಣ್ಣ ಸಣ್ಣ ಉಂಡೆಗಳನ್ನಾಗಿ ಮಾಡಿ…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
September 02, 2023
ಪತ್ರಕರ್ತ, ಲೇಖಕ ವಿಶ್ವೇಶ್ವರ ಭಟ್ ಅವರು ತಮ್ಮ ಸಂಪಾದಕತ್ವದ ‘ವಿಶ್ವವಾಣಿ' ಪತ್ರಿಕೆಯ ಸಂಪಾದಕೀಯ ಕಾಲಂನ ಕೊನೆಯಲ್ಲಿ ಬರೆಯುತ್ತಿರುವ ಪುಟ್ಟ ಪುಟ್ಟ ಬರಹಗಳೇ 'ಸಂಪಾದಕರ ಸದ್ಯಶೋಧನೆ'. ಈ ಬರಹಗಳನ್ನು ತಲಾ ನೂರು ಅಧ್ಯಾಯಗಳಂತೆ ಸಂಗ್ರಹಿಸಿ ಮೂರು ಪುಸ್ತಕಗಳನ್ನು ಹೊರತಂದಿದ್ದಾರೆ. ಈ ಮೂರೂ ಪುಸ್ತಕಗಳಲ್ಲಿ ಯಾವುದನ್ನು ಬೇಕಾದರೂ ಮೊದಲು ಓದಬಹುದು. ಪುಸ್ತಕದಲ್ಲೂ ಯಾವ ಪುಟದಿಂದಲೂ ನಿಮ್ಮ ಓದನ್ನು ಪ್ರಾರಂಭಿಸಬಹುದಾಗಿದೆ ಎಂದು ಲೇಖಕರೇ ಹೇಳಿಕೊಂಡಿದ್ದಾರೆ. ಇದು ನಿಜವೂ ಹೌದು.  ಕಡಿಮೆ…
ಲೇಖಕರು: addoor
ವಿಧ: ಪುಸ್ತಕ ವಿಮರ್ಶೆ
September 01, 2023
ಕರಕುಶಲ ಕಲೆಗಳು ಅಥವಾ ಗುಡಿಗಾರಿಕೆ ನಮ್ಮ ಸಂಪನ್ನ ಪರಂಪರೆಯ ಭಾಗ. ಭಾರತದ ಪ್ರತಿಯೊಂದು ರಾಜ್ಯವೂ ಅಲ್ಲಿನ ವಿಶೇಷ ಕರಕುಶಲ ಕಲೆಗೆ ಜಗತ್ಪ್ರಸಿದ್ಧ. ಕರಕುಶಲಗಾರರು ರಚಿಸುವ ಕರಕುಶಲ ವಸ್ತುಗಳು ನೋಡಲು ಚಂದ ಮಾತ್ರವಲ್ಲ ಬಳಕೆಗೂ ಅನುಕೂಲವಾದವುಗಳು. ಅವು ಬದುಕಿಗೂ ಒಂದು ಅರ್ಥ ಕೊಡುತ್ತವೆ ಎಂಬುದೇ ಅವುಗಳ ವಿಶೇಷತೆ. ಈ ಪುಟ್ಟ ಪುಸ್ತಕದಲ್ಲಿ ನಮ್ಮ ದೇಶದ ವಿವಿಧ ರಾಜ್ಯಗಳ ಕರಕುಶಲ ಕಲೆ ಹಾಗೂ ಆ ಕುಶಲಕರ್ಮಿಗಳು ನಿರ್ಮಿಸುವ ವಸ್ತುಗಳ ಬಗ್ಗೆ ಸಂಕ್ಷಿಪ್ತ ಮಾಹಿತಿ ನೀಡಲಾಗಿದೆ. ರಾಮಾಯಣ ಕಾಲದಿಂದಲೂ…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
August 31, 2023
ನಾಟಕಗಳನ್ನು ಬರೆದು, ಮುದ್ರಿಸಿ ಹೊರತರುವ ನಾಟಕಕಾರರ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಕಡಿಮೆಯಾಗುತ್ತಿದೆ. ಬಹುಷಃ ಇದಕ್ಕೆ ಕಾರಣ ಬರೆದ ನಾಟಕಗಳು ರಂಗದ ಮೇಲೆ ಪ್ರದರ್ಶನ ಕಾಣುವುದು ಬಹಳ ಕಡಿಮೆ. ಈ ಕಾರಣದಿಂದ ಬರೆದ ನಾಟಕಗಳು ಪ್ರದರ್ಶನದ ಭಾಗ್ಯವಿಲ್ಲದೆ ಸೊರಗತೊಡಗಿವೆ. ದಶಕಗಳ ಹಿಂದೆ ರಂಗ ಮಂದಿರಗಳಲ್ಲಿ ಬಹಳಷ್ಟು ನಾಟಕಗಳು ಪ್ರದರ್ಶನಗೊಳ್ಳುತ್ತಿದ್ದವು. ಆದರೆ ಈಗ ಇವುಗಳ ಸಂಖ್ಯೆ ಬೆರಳೆಣಿಕೆಯಷ್ಟು.  ಭರವಸೆಯ ನಾಟಕಕಾರ ಎನ್ ಸಿ ಮಹೇಶ್ ಅವರು ಬರೆದ ‘ಸಾಕು ತಂದೆ ರೂಮಿ' ಎಂಬ ನಾಟಕ ಪುಸ್ತಕ…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
August 29, 2023
೨೦೧೮ನೇ ಸಾಲಿನ ಸಾಹಿತ್ಯ ಅಕಾಡೆಮಿಯ ಚಿ.ಶ್ರೀನಿವಾಸರಾಜು ದತ್ತಿ ಪ್ರಶಸ್ತಿ ಪಡೆದ ಕೃತಿ ಕವಯತ್ರಿ ಸ್ಮಿತಾ ಮಾಕಳ್ಳಿ ಅವರ ‘ಒಂದು ಅಂಕ ಮುಗಿದು’. ಈ ಕೃತಿಗೆ ಡಾ.ಹೆಚ್.ಎಲ್. ಪುಷ್ಪ ಅವರ ಮುನ್ನುಡಿ ಹಾಗೂ ಸುಬ್ಬು ಹೊಲೆಯಾರ್ ಅವರ ಬೆನ್ನುಡಿ ಬರಹಗಳಿವೆ. ಸುಮಾರು ೧೦೬ ಪುಟಗಳ ಈ ಚೊಚ್ಚಲ ಕವನ ಸಂಕಲನದ ಕವಿತೆಗಳು ಬಹಳ ಸೊಗಸಾಗಿವೆ. ಕೃತಿಗೆ ಮುನ್ನುಡಿ ಬರೆದ ಡಾ ಹೆಚ್ ಎಲ್ ಪುಷ್ಪ ಅವರ ಮಾತುಗಳನ್ನು ಆಯ್ದು ಇಲ್ಲಿ ನೀಡಲಾಗಿದೆ... “ಸ್ಮಿತಾ ಮಾಕಳ್ಳಿಯವರ ಚೊಚ್ಚಲ ಕವನ ಸಂಕಲನದಲ್ಲಿ ಇಂತಹ ನಿರ್ಜನ…
ಲೇಖಕರು: Kavitha Mahesh
ವಿಧ: ರುಚಿ
August 27, 2023
ಮೈದಾಹಿಟ್ಟಿಗೆ ಉಪ್ಪು, ಅಜ್ವಾನ, ಎರಡು ಚಮಚ ಅಡುಗೆ ಎಣ್ಣೆ ಹಾಗೂ ಸ್ವಲ್ಪ ಸ್ವಲ್ಪ ನೀರು ಸೇರಿಸಿ ಚಪಾತಿ ಹಿಟ್ಟಿನ ಹದಕ್ಕೆ ಕಲಸಿಕೊಂಡು ಇಪ್ಪತ್ತು ನಿಮಿಷಗಳ ಕಾಲ ತೆಗೆದಿಡಿ. ಕೊತ್ತಂಬರಿ ಕಾಳು (ಧನಿಯಾ), ಜೀರಿಗೆ ಹಾಗೂ ಸೋಂಪನ್ನು ಹುಡಿ ಮಾಡಿ. ಪಾತ್ರೆಯೊಂದಕ್ಕೆ ಮೂರು ಚಮಚ ಅಡುಗೆ ಎಣ್ಣೆ, ಈರುಳ್ಳಿ, ಹಸಿಮೆಣಸು, ಶುಂಠಿ-ಬೆಳ್ಳುಳ್ಳಿ ಪೇಸ್ಟ್, ಕಡಲೆ ಹಿಟ್ಟು, ಮೆಣಸಿನ ಹುಡಿ, ಗರಂ ಮಸಾಲೆ, ಕಾಳುಮೆಣಸಿನ ಹುಡಿ, ಅರಸಿನ ಹುಡಿ, ಇಂಗು ಹಾಗೂ ಈಗಾಗಲೇ ಹುಡಿ ಮಾಡಿಟ್ಟುಕೊಂಡ ಹುಡಿಗಳನ್ನು ಸೇರಿಸಿ…