ವಿಧ: ರುಚಿ
November 17, 2024
ಮೊದಲು ಒಣ ಮೆಣಸಿನ ಕಾಯಿ, ಕಡ್ಲೇಬೇಳೆ ಕೊತ್ತಂಬರಿ, ಎಳ್ಳು, ಓಮ, ಜೀರಿಗೆ ಇಂಗು ಅಥವಾ ಬೇಳ್ಳುಳ್ಳಿ ಸ್ವಲ್ಪ ಎಣ್ಣೆ ಹಾಕಿ ಹುರಿದು ತೆಂಗಿನ ತುರಿಯ ಜೊತೆ ಪುಡಿ ಮಾಡಿ ಇದಕ್ಕೆ ರುಚಿಗೆ ತಕ್ಕಷ್ಟು ಉಪ್ಪು ಸಕ್ಕರೆ ಹುಳಿಪುಡಿ ಹಾಕಿ ಕಲಸಿಕೊಳ್ಳಿ. ಹಾಗಲಕಾಯಿಯನ್ನು ಕತ್ತರಿಸಿ ಭಾಗ ಮಾಡಿ ಸ್ವಲ್ಪ ಉಪ್ಪು ಹುಳಿ ಹಾಕಿ ಬೇಯಿಸಿಕೊಳ್ಳಿ. ನಂತರ ಇದರೊಳಗಿನ ಬೀಜವನ್ನು ತೆಗೆದು ಇದರೊಳಗೆ ಕಲಸಿದ ಮಸಾಲೆಯನ್ನು ತುಂಬಿ ಎಣ್ಣೆ ಹಾಕಿ ಚೆನ್ನಾಗಿ ಬೇಯಿಸಿ.
-ಕಲ್ಪನಾ ಪ್ರಭಾಕರ ಸೋಮನಳ್ಳಿ
ವಿಧ: ಪುಸ್ತಕ ವಿಮರ್ಶೆ
November 15, 2024
‘ಉರಿಯ ಗದ್ದುಗೆ’ ಬಿ.ಆರ್. ಪೊಲೀಸ್ ಪಾಟೀಲ ಅವರ ಕಾದಂಬರಿಯಾಗಿದೆ. ಇದಕ್ಕೆ ಶಶಿಕಾಂತ ಪಟ್ಟಣ ಅವರ ಬೆನ್ನುಡಿ ಬರಹವಿದೆ; ವಿರಕ್ತಪೀಠ ಪರಂಪರೆಯ ತಾಯಿಬೇರು ಎಡೆಯೂರು ತೋಂಟದ ಸಿದ್ದಲಿಂಗ ಶಿವಯೋಗಿಗಳು. ಅವರ ಬಳಿವಿಡಿದು ಬಂದ ಮಠ ಶ್ರೀ ಜಗದ್ಗುರು ತೋಂಟದಾರ್ಯ ಸಂಸ್ಥಾನಮಠ. ಈ ಮಠದ ೧೯ನೇ ಪೀಠಾಧಿಕಾರಿಗಳಾಗಿ ೧೯೭೪ ಜುಲೈ ೨೯ ರಂದು ಅಧಿಕಾರ ವಹಿಸಿಕೊಂಡ ಪೂಜ್ಯ ಡಾ. ತೋಂಟದ ಸಿದ್ದಲಿಂಗ ಮಹಾಸ್ವಾಮಿಗಳು ಮೊದಲ ದಿನದಿಂದಲೇ ಅನೇಕ ಸವಾಲುಗಳನ್ನು ಎದುರಿಸಬೇಕಾಯಿತು. ಪೀಠಕ್ಕೆ ಬರುವ ಮೊದಲು ಹೊಯ್ದಾಟವಿದ್ದರೂ…
ವಿಧ: ಪುಸ್ತಕ ವಿಮರ್ಶೆ
November 13, 2024
ವಿಜಯನಗರದ ಸಾಮ್ರಾಟರಾಗಿದ್ದ ಕೃಷ್ಣ ದೇವರಾಯರಿಗೆ ಭಾರತದ ಇತಿಹಾಸದಲ್ಲಿ ತಮ್ಮದೇ ಆದ ಸ್ಥಾನವಿದೆ. ಇವರ ಬಗ್ಗೆ ಈಗಾಗಲೇ ಹಲವಾರು ಪುಸ್ತಕಗಳು ಬಂದಿದ್ದರೂ ಸು ರುದ್ರಮೂರ್ತಿಯವರು ಬರೆದ ‘ಶ್ರೀ ಕೃಷ್ಜದೇವರಾಯ’ ಮರೆಯಲಾಗದ ಸಾಮ್ರಾಜ್ಯದ ಸಾಮ್ರಾಟ ಎನ್ನುವ ಕಾದಂಬರಿ ಅವರ ಬಗ್ಗೆ ಹೊಸ ಲೋಕವನ್ನೇ ತೆರೆದಿಡುತ್ತದೆ. ಈ ಕಾದಂಬರಿಗೆ ಮುನ್ನುಡಿಯನ್ನು ಬರೆದಿದ್ದಾರೆ ಖ್ಯಾತ ಬರಹಗಾರರಾದ ಆರ್ ಶೇಷಶಾಸ್ತ್ರಿ. ಅವರು ಬರೆದ ಮುನ್ನುಡಿಯಿಂದ ಆಯ್ದ ಭಾಗ ನಿಮ್ಮ ಓದಿಗಾಗಿ…
“ಭಾರತದ ಅರಸರುಗಳಲ್ಲಿ…
ವಿಧ: ರುಚಿ
November 13, 2024
ಕಾಯಿತುರಿಯ ಜೊತೆ ಮಾವಿನ ಹೂವು ಮತ್ತು ಚಿಟಕಿ ಉಪ್ಪು, ಹಸಿಮೆಣಸಿನ ಚೂರು, ಹಾಕಿ ನುಣ್ಣಗೆ ರುಬ್ಬಿ ಪಾತ್ರಗೆ ಹಾಕಿ. ಇದಕ್ಕೆ ಕಡೆದ ಮಜ್ಜಿಗೆ, ರುಚಿಗೆ ಬೇಕಾದಷ್ಟು ಉಪ್ಪು, ಹಾಕಿ ಹದ ಮಾಡಿ, ಎಣ್ಣೆ, ಉದ್ದಿನ ಬೇಳೆ, ಒಣ ಮೆಣಸಿನ ಚೂರುಗಳು, ಕರಿಬೇವು, ಸಾಸಿವೆ, ಚಿಟಕಿ ಇಂಗು ಹಾಕಿ ಒಗ್ಗರಣೆ ಮಾಡಿ. ಊಟಕ್ಕೆ ಉಪಯೋಗಿಸಲು ಚೆನ್ನಾಗಿರುತ್ತದೆ.
-ಕಲ್ಪನಾ ಪ್ರಭಾಕರ ಸೋಮನಳ್ಳಿ
ವಿಧ: ಪುಸ್ತಕ ವಿಮರ್ಶೆ
November 11, 2024
ಐತಿಚಂಡ ರಮೇಶ ಉತ್ತಪ್ಪ ಅವರ ‘ಕುಶಾ ಕೀ ಕಹಾನಿ’ ಕೃತಿಯು ಲೇಖನಗಳ ಸಂಕಲನ. ಈ ಕೃತಿಗೆ ಬೆನ್ನುಡಿ ಬರೆದಿರುವ ಕವಿರಾಜ್ ಅವರು, ಕುಶಾ ಬರೀ ಕತೆಯಷ್ಟೇ ಹೇಳದೆ ನಾವೆಲ್ಲ ಬಲ್ಲ ದಸರಾ ಪಡೆಯ ಅಭಿಮನ್ಯು, ಬಲರಾಮ ಮುಂತಾದವರ ಕೆಲವು ಮಜಾ ತರುವ ಘಟನೆಗಳನ್ನು ವಿವರಿಸುವಾಗ, ಯಾರೋ ನಮ್ಮವರ ಬಗ್ಗೆಯೇ ಗಾಸಿಪ್ ಮಾಡಿದಂತೆ ಕಿವಿ, ಮನಸ್ಸುಗಳಿಗೆ ಆಪ್ತವೆನ್ನಿಸುತ್ತದೆ. ನಿಜವಾಗಿಯೂ ಆನೆಗಳಿಗೆ ಅದರಲ್ಲೂ ಕಥಾನಾಯಕ ಕುಶನಿಗೆ ಇಷ್ಟು ಹಾಸ್ಯ ಪ್ರಜ್ಞೆ ಇದೆಯೋ ಗೊತ್ತಿಲ್ಲ. ಆದರೆ ಕುಶನ ಮಾತು ಕಟ್ಟುತ್ತಾ ಹೋಗಿರುವ…
ವಿಧ: ರುಚಿ
November 11, 2024
ಬೀಟ್ ರೂಟ್ ತುರಿದು ಸ್ವಲ್ಪ ನೀರು ಹಾಕಿ ಬೇಯಿಸ ಬೇಕು. ಅದಕ್ಕೆ ಮಾವಿನ ಹಣ್ಣು, ಬೆಳ್ಳುಳ್ಳಿ, ಉಪ್ಪು, ಬೆಲ್ಲ, ಒಳ್ಳೆಮೆಣಸು ಹುಡಿ, ಹಾಕಿ ಚೆನ್ನಾಗಿ ಕುದಿಸಬೇಕು. ತೆಳ್ಳಗಿರಬೇಕಾದರೆ ಸ್ವಲ್ಪ ನೀರು ಸೇರಿಸಿ ಕುದಿಸಿ ಒಗ್ಗರಣೆ ಹಾಕಿದರೆ ಸಾರು ಸಿದ್ದ.
-ಅಶ್ವಿನಿ ಮೂರ್ತಿ ಅಯ್ಯನಕಟ್ಟೆ, ಸುಳ್ಯ
ವಿಧ: ರುಚಿ
November 10, 2024
ನೆನೆಸಿದ ಅಕ್ಕಿಯನ್ನು ನೀರು ಸೇರಿಸದೆ ಒಂದು ಕಪ್ ಮುಳ್ಳುಸೌತೆ ಹೋಳು, ಉಪ್ಪು ಸೇರಿಸಿ ಬಾಂಬೆ ರವೆಯ ಹದಕ್ಕೆ ರುಬ್ಬಿ. ಈ ಹಿಟ್ಟಿಗೆ ಉಳಿದ ಮುಳ್ಳುಸೌತೆ ಹೋಳು ಬೆರೆಸಿ. ನಂತರ ಬಾಡಿಸಿದ ಬಾಳೆಲೆಯ ಮೇಲೆ ಈ ಮಿಶ್ರಣವನ್ನು ಎರಡು ಸೌಟು ಹಾಕಿ ಬಾಳೆಲೆ ಮಡಚಿ ಒಂದು ಗಂಟೆ ಹಬೆಯಲ್ಲಿ ಬೇಯಿಸಿ. ಕಾಯಿಚಟ್ನಿಯೊಂದಿಗೆ ಸವಿಯಿರಿ.
- ಸಹನಾ ಕಾಂತಬೈಲು, ಬಾಲಂಬಿ
ವಿಧ: ಪುಸ್ತಕ ವಿಮರ್ಶೆ
November 09, 2024
ಇದೊಂದು ರೋಚಕ ಕಥೆ. ಕೇವಲ ರೋಚಕ ಕಥೆ ಮಾತ್ರವಲ್ಲ ಸತ್ಯ ಕಥೆ. ಲೇಖಕ ಸುರೇಶ ಸೋಮಪುರ ಸ್ವತಃ ಕರ್ಣ- ಪಿಶಾಚಿಯನ್ನು ಸಾಕ್ಷಾತ್ಕಾರ ಮಾಡಿಕೊಳ್ಳಲು ಮನೆ-ಮಠ, ಹೆಂಡತಿ-ಮಕ್ಕಳು, ಬಂಧುಗಳು ಎಲ್ಲರನ್ನೂ ಬಿಟ್ಟು ದೀದಿ ಅಂಬಿಕಾದೇವಿಯ ಸಹಾಯದಿಂದ ಶ್ರೀ ಚೈತನ್ಯಾನಂದರನ್ನು ಭೇಟಿಯಾಗುತ್ತಾರೆ. ಅವರ ಮಾರ್ಗದರ್ಶನದಲ್ಲಿ ತಂತ್ರ-ಮಂತ್ರ ಶವಸಾಧನೆ ಇತ್ಯಾದಿ ನಡೆಸುತ್ತಾರೆ. ಅಂತಿಮವಾಗಿ ‘ಕರ್ಣ-ಪಿಶಾಚಿ’ ಅವರ ವಶವಾಗುತ್ತದೆ.
ಸುರೇಶ್ ಸೋಮಪುರ ತಮ್ಮ ಆಧ್ಯಾತ್ಮಿಕ ಶಕ್ತಿಯಿಂದ ಗಳಿಸಿದ ಚಮತ್ಕಾರಗಳನ್ನು ಮಾನವ…
ವಿಧ: ರುಚಿ
November 08, 2024
ಸೋರೆಕಾಯಿ ತುಂಡು, ಉಪ್ಪು, ಬೆಲ್ಲ, ಸ್ವಲ್ಪ ನೀರು ಹಾಕಿ ಬೇಯಿಸಿ. ತಣ್ಣಗಾದ ಮೇಲೆ ತೆಂಗಿನ ತುರಿ, ಹಸಿಮೆಣಸು ಸೇರಿಸಿ ನುಣ್ಣಗೆ ರುಬ್ಬಿ ಸೇರಿಸಿ. ಮೊಸರು ಹಾಕಿ. ನಂತರ ಎಣ್ಣೆಯಲ್ಲಿ ಸಾಸಿವೆ, ಒಣಮೆಣಸು, ಕರಿಬೇವು ಹಾಕಿ ಒಗ್ಗರಣೆ ಕೊಡಿ. ಬೇಸಿಗೆಯ ಬಿಸಿಲ ಝಳಕ್ಕೆ ಈ ಮೊಸರು ಗೊಜ್ಜು ಹೊಟ್ಟೆಗೆ ಹಿತ.
- ಸಹನಾ ಕಾಂತಬೈಲು, ಬಾಲಂಬಿ
ವಿಧ: ಪುಸ್ತಕ ವಿಮರ್ಶೆ
November 07, 2024
ಹಳೆಮನೆ ರಾಜಶೇಖರ ಅವರು ಬರೆದ ವಿಭಿನ್ನ ಕಾದಂಬರಿ ‘ಒಡಲುಗೊಂಡವರು’. ಈ ಕಾದಂಬರಿಗೆ ಮುನ್ನುಡಿಯನ್ನು ಬರೆದಿದ್ದಾರೆ ಲೇಖಕಿ ಅನುಪಮಾ ಪ್ರಸಾದ್ ಅವರು. ಮುನ್ನುಡಿಯ ಕೆಲವು ಸಾಲುಗಳು ನಿಮ್ಮ ಓದಿಗಾಗಿ…
“ಸ್ನೇಹಮಯಿ ರಾಜಶೇಖರ ಅವರೆ ನೀವು ಬರೆದ ಕಾದಂಬರಿಯ ಹಸ್ತ ಪ್ರತಿ ಓದಿ ಅಭಿಪ್ರಾಯ ಬರೆಯಬೇಕೆಂದು ಕೇಳಿದ ನಿಮ್ಮ ವಿಶ್ವಾಸಕ್ಕೆ ಶರಣು. ನೀವು ಮಿಂಚಂಚೆಯಲ್ಲಿ ಕಾದಂಬರಿ ಕಳುಹಿಸಿದ ಸಮಯದಲ್ಲಿ ನಾನು ಮತ್ತೊಮ್ಮೆ ನನ್ನ ಮನೆ ಬದಲಿಸುವ ತರಾತುರಿಯಲ್ಲಿದ್ದೆ. ಇರಲಿ ಬಿಡಿ. ಮನೆಯ ಸಾಮಗ್ರಿಗಳ ಮಾರಾಪು…