ಎಲ್ಲ ಪುಟಗಳು

ಲೇಖಕರು: tvsrinivas41
ವಿಧ: ಬ್ಲಾಗ್ ಬರಹ
September 07, 2005
ಸಂಪದದಲ್ಲೀಗ ೩೧೬ ಸದಸ್ಯರಿದ್ದಾರೆ ಎಂದರೆ ಆಶ್ಚರ್ಯವೇನಲ್ಲ. ಅದರಲ್ಲಿ ಸರಿ ಸುಮಾರು ಸದಸ್ಯರು ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದಾರೆ. ಯಾವುದೇ ತಾಣದಲ್ಲಿ ಸೇರುವ ಸದಸ್ಯರು ಆಗೊಮ್ಮೆ ಈಗೊಮ್ಮೆ ಮಾತ್ರ ಇಣುಕಿ ನೋಡಿ ಕಣ್ಮರೆಯಾಗುವರು. ಆದರಿಲ್ಲಿ ಇದಕ್ಕೆ ವ್ಯತಿರಿಕ್ತ ಪರಿಸ್ಥಿತಿ. ಈ ಕೂಸಿಗಿನ್ನೂ ಒಂದು ತಿಂಗಳು ಕಳೆದಿಲ್ಲ. ಇದರ ಕರ್ತೃವಿಗೆ ತಾಣವನ್ನು ಸಂಭಾಳಿಸುವುದೇ ಸಮಸ್ಯೆ ಆಗಿದೆ. ಉಂಹೂಂ! ಹಣದ ಸಮಸ್ಯೆಯಲ್ಲ. ಬ್ಯಾಂಡ್‍ವಿಡ್ತಿನ ಸಮಸ್ಯೆ. ಇಷ್ಟು ಸದಸ್ಯರು ಬಂದು ಸೇರುವರೆಂದು…
ಲೇಖಕರು: Rohit
ವಿಧ: ಚರ್ಚೆಯ ವಿಷಯ
September 06, 2005
ಈಗಾಗ್ಲೇ, ವಿಧಾನಸೌಧವೇ ಕಾಣಿಸದಷ್ಟು ಪ್ರತಿಮೆಗಳು ಅದನ್ನು ಮುತ್ತಿಕೊಂಡಿರುವಾಗ, ಇನ್ನೊಂದು ಹೊಸ ಪ್ರತಿಮೆ ಸ್ಥಾಪಿಸ್ತಾರಂತೆ. ನಮ್ಮ ಕನ್ನಡಿಗರ ಪ್ರತಿಮೆಗಳಿಗೆ ವಿಧಾನಸೌಧದ ಹಿಂದೆ ಜಾಗ, ಕನ್ನಡೇತರ ನಾಯಕರುಗಳ ಮೂರ್ತಿಗಳಿಗೆ ವಿಧಾನ ಸೌಧದೆದುರಿನ ಜಾಗ!...ಈ ಸಾಲಿಗೆ ಹೊಸ ಸೇರ್ಪಡೆ 'ಬಾಬು ಜಗಜೀವನ ರಾಂ'. ಆಗ್ಲೇ ಕನ್ನಡನಾಡಿನ ರಾಜಧಾನಿಯಲ್ಲಿ ಕನ್ನಡದ ಸ್ಥಿತಿ ಪಾತಾಳ ಮುಟ್ಟಿರುವಾಗ ಇದು ಬೇಕಿತ್ತಾ?
ಲೇಖಕರು: hpn
ವಿಧ: ಚರ್ಚೆಯ ವಿಷಯ
September 06, 2005
ಮಲಯಾಳಮ್ ಚಿತ್ರರಂಗದ ಅಡೂರು ಗೋಪಾಲಕೃಷ್ಣನ್ ರವರನ್ನು ಈ ಬಾರಿಯ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸುದ್ದಿ [:http://www.hindu.com/2005/09/06/stories/2005090614170100.htm|ಇಂದಿನ ಹಿಂದೂ ಪತ್ರಿಕೆಯಲ್ಲಿ], ಓದಿ. "ಈ ಪ್ರಶಸ್ತಿ ಮತ್ತಷ್ಟು ಜನರು ನನ್ನ ಸಿನಿಮಾಗಳನ್ನು ನೋಡುವಂತೆ ಮಾಡಿದರೆ, ಅದೇ ಸಂತೋಷ" ಎಂದಿದ್ದಾರೆ, ಗೋಪಾಲಕೃಷ್ಣನ್
ಲೇಖಕರು: hpn
ವಿಧ: ಚರ್ಚೆಯ ವಿಷಯ
September 06, 2005
ಫೋಟೊ ಕೃಪೆ: [:http://prajavani.net|ಪ್ರಜಾವಾಣಿ] ನಿನ್ನೆ ದಿನ ವಿಟಿಯು ಸಿ ಇ ಓ (ಆಕಾ ಕುಲಪತಿ - ಬಲವೀರರೆಡ್ಡಿ) ಕೆಲವರೊಂದಿಗೆ ಬಿ ಎಮ್ ಎಸ್ ಹಾಗು ಇನ್ನೊಂದು ಇಂಜಿನೀಯರಿಂಗ್ ಕಾಲೇಜಿಗೆ ಲಗ್ಗೆ ಇಟ್ಟು ಕ್ಲಾಸಿನಲ್ಲಿದ್ದ ಮೊಬೈಲ್ ಫೋನುಗಳನ್ನೆಲ್ಲ ವಶಪಡಿಸಿಕೊಂಡರಂತೆ! ವಿಟಿಯು ಪ್ರಕಾರ ಕಾಲೇಜು ಪ್ರಾಂಗಣಕ್ಕೆ ಮೊಬೈಲ್ ತರುವುದೇ ತಪ್ಪಂತೆ, ಹಾಗೂ ಹಾಗೆ ಮಾಡುವುದಕ್ಕೆ ನಿಷೇಧ ಹೇರಲಾಗಿದೆಯಂತೆ. ಎಲ್ಲಾದರೂ 'ಸುರಕ್ಷಿತ' ಜಾಗದಲ್ಲಿ ಮೊಬೈಲ್ ಇಟ್ಟು ಕಾಲೇಜು ಪ್ರವೇಶಿಸಬೇಕಂತೆ ;) "ಏನಪ್ಪಾ…
ಲೇಖಕರು: gvmt
ವಿಧ: ಬ್ಲಾಗ್ ಬರಹ
September 06, 2005
ಅಥವಾ ಇದೂ ಒಂದು ಬ್ಲಾಗು. ನನ್ನ ಬ್ಲಾಗು ಬೇರೊಂದು ಇದೆ. ಅಲ್ಲಿ ನಾನೂ ನನ್ನವಳೂ ಇಬ್ಬರೂ ಬ್ಲಾಗಿಸುತ್ತೇವೆ. ಆದ್ದರಿಂದ ಇಲ್ಲಿ ಹೆಚ್ಚಾಗಿ ಬರೆಯುಲಾರೆ. ಆದರೆ ಆಗಾಗ ಅಲ್ಲಿಂದ ಇಲ್ಲಿಗೆ ತಂದು ಹಾಕಿಯೇನು. ಅದು ಕೃತಿಚೌರ್ಯವೆನಿಸುವುದಿಲ್ಲವಷ್ಟೆ. ಆದರೆ ಸಂಪದವನ್ನು ದಿನಕ್ಕೊಮ್ಮೆಯಾದರೂ ಓದುತ್ತೇನೆ. ಆಗಾಗ ಪ್ರತಿಕ್ರಯಿಸುತ್ತೇನೆ. ಸಂಪದದಂಥ ತಾಣದಲ್ಲಿ ಬ್ಲಾಗ್‌ಗಳು ಇರಬೇಕೆ? ನಾನು ಕಂಡ ಹಾಗೆ ಬ್ಲಾಗುಗಳಲ್ಲಿ ಎರಡು ಬಗೆ: "ನಾನು ಈಹೊತ್ತು ಇಲ್ಲಿಗೆ ಹೋದೆ; ಅದು ಮಾಡಿದೆ/ಮಾಡಲಿಲ್ಲ; ಹೀಗಾಯಿತು/…
ಲೇಖಕರು: gvmt
ವಿಧ: Basic page
September 06, 2005
[ ಈ ಕಿರುಬರಹವನ್ನು ಹಿಂದೆ ನನ್ನ ಸ್ವಂತ ಬ್ಲಾಗಿನಲ್ಲಿ ಪ್ರಕಟಿಸಿದ್ದೆ. ಸಂಪದದ ಓದುಗರಿಗೆಂದು ಮತ್ತೆ ಇಲ್ಲಿ ಹಾಕುತ್ತಿದ್ದೇನೆ. - ವೆಂ ] ನೆಲ್ಲಿಕಾಯಿಯ ಗಾತ್ರ. ಅಂಗೈಯಲ್ಲಿ ಹಿಡಿಯಲು ಸುಲಭಸಾಧ್ಯ. ಆದರೆ ಅದಕ್ಕೂ ಇದಕ್ಕೂ ಅಜಗಜಾಂತರ. ಇದೊ ಅಬನೇರೊ ([w:Habanero|Habanero]). [:node/289/#indian_tezpur|ಅಸ್ಸಾಮಿನ ಮೆಣಸಿನಕಾಯಿಯ] ಬಗ್ಗೆ ಇರುವ ಚರ್ಚೆ ಇಲ್ಲಿಲ್ಲ. ಸದ್ಯಕ್ಕಂತೂ ಇದರಷ್ಟು ಖಾರದ ಮೆಣಸಿನಕಾಯಿ ಜಗತ್ತಿನಲ್ಲಿ ಬೇರೆ ಇಲ್ಲ. ಎಷ್ಟು ಖಾರ? ಗುಂಟೂರಿನ ಕಾಯಿಯಷ್ಟೆ? ಎಂದೀರಿ.…
ಲೇಖಕರು: ismail
ವಿಧ: ಬ್ಲಾಗ್ ಬರಹ
September 05, 2005
ಕನ್ನಡಿಗರ ಅತಿದೊಡ್ಡ ಸಮಸ್ಯೆ ಎಂದರೆ ತಮ್ಮೊಳಗೇ ಮಾತನಾಡಿಕೊಳ್ಳಲು ಕಷ್ಟಪಡುವುದು. ಇ-ಕನ್ನಡಿಗರು ಈ ದೌರ್ಬಲ್ಯವನ್ನು ಮೀರಿದ್ದಾರೆ ಎಂಬುದು ನನ್ನ ನಂಬಿಕೆಯಾಗಿತ್ತು. ಈಗ ಅವರನ್ನೂ ಸಾಮಾನ್ಯ ಕನ್ನಡಿಗರ ರೋಗ ಬಾಧಿಸುತ್ತಿದೆ. ಪತ್ರಿಕೆಗಳಲ್ಲಿ ಓದುಗರ ಕಾಲಂ ತುಂಬಿಸಲು ಉಪ ಸಂಪಾದಕರು ಪಡುವ ಪಾಡು ಅರಿತವರಿಗೆ ಕನ್ನಡಿಗರ ಪ್ರತಿಕ್ರಿಯಿಸುವ ಗುಣದ ಬಗ್ಗೆ ತಿಳಿದಿರುತ್ತದೆ. ಸಂಪದದಲ್ಲಿ ಲೇಖನ ಬರೆಯುವವರು ಮತ್ತು ಪ್ರತಿಕ್ರಿಯಿಸುವವರನ್ನು ನೋಡಿದರೇ ಇದು ಅರ್ಥವಾಗುತ್ತದೆ. ಈ ಎಲ್ಲರ ಹೆಸರುಗಳನ್ನೂ…
ಲೇಖಕರು: tvsrinivas41
ವಿಧ: Basic page
September 05, 2005
ಎಂದಿಗೂ ನಗುತ ನಗಿಸುತಿಹ ನಗೆ ಬುಗ್ಗೆ ಹಿರಿಯ ಕಿರಿಯರೆಲ್ಲರ ಮನ ತಣಿಸುವ ಕಣ್ಮಣಿ ಕಪ್ಪಾದರೂ ಕಡೆದಿಟ್ಟ ಕರಿಬಂಡೆಯಂತಿಹ ತರುಣ ಸಹೃದಯರಿಗೆ ತೋರಿಸುವ ತನ್ನಲಿರುವ ಕರುಣ ಕೆಟ್ಟವರಿಗೆ ಕೆಟ್ಟವನಾಗಿ ದುಷ್ಟರ ಸದೆಬಡಿಯುವ ವೀರ ದಾಂಡಿಗರೂ ಇವನ ಹತ್ತಿರ ಬರಲು ಹೆದರಿಯಾರು ಒಳ್ಳೆಯವರಿಗೆ ಒಳ್ಳೆಯವನಾಗಿ ಸಹಾಯ ಹಸ್ತ ಚಾಚುವ ಧೀರ ಓಣಿಯ ಮಕ್ಕಳಿಗೆಲ್ಲ ಅಚ್ಚು ಮೆಚ್ಚಿನ ಅಣ್ಣ ಸ್ನೇಹಿತರ ನಗಿಸುತ ದಾಟಲು ಹೋದ ರೈಲ್ವೇ ಹಳಿ ದೈತ್ಯಾಕಾರದ ಬಂಡಿ ಬಂದೇ ಬಿಟ್ಟಿತು ಇವನ ಬಳಿ ಇವನ ಸಹೃದಯತನವ ಹೇಗೆ ಅರಿಯಬೇಕಾ…
ಲೇಖಕರು: ismail
ವಿಧ: ಚರ್ಚೆಯ ವಿಷಯ
September 05, 2005
ಕನ್ನಡದಲ್ಲಿ ಕತೆಗಳೇ ಇಲ್ಲ. ಕನ್ನಡದಲ್ಲಿ ಒಳ್ಳೆಯ ಚಿತ್ರಕತೆ ಬರೆಯುವವರಿಲ್ಲ. ಹೀಗೆ ಕನ್ನಡ ಚಿತ್ರ ನಿರ್ಮಾಪಕರು ಹೇಳುತ್ತಾ ಹೋಗುತ್ತಾರೆ. ನಿಜಕ್ಕೂ ಕನ್ನಡದಲ್ಲಿ ಸಿನಿಮಾಗಳಿಗೆ ಅಗತ್ಯವಿರುವ ಕತೆಗಳ ಕೊರತೆ ಇದೆಯೇ? ಗಾಂಧಿನಗರದ ದೊಡ್ಡ ಸಮಸ್ಯೆ ಎಂದರೆ ಯಶಸ್ಸಿನ ಹಿಂದೆ ಸಾಗುವುದು. ಪ್ರತೀ ಯಶಸ್ಸೂ ತನ್ನಷ್ಟಕ್ಕೇ ವಿಶಿಷ್ಟ ಎನ್ನುವುದನ್ನು ಗಾಂಧಿನಗರ ಒಪ್ಪುವುದಿಲ್ಲ. ತೆಲುಗು ರಿಮೇಕ್ ಸಿನಿಮಾ ಒಂದು ಯಶಸ್ವಿಯಾದರೆ ಕನ್ನಡದ ನಿರ್ಮಾಪಕರೆಲ್ಲಾ ದಂಡು ದಂಡಾಗಿ ಆಂಧ್ರಪ್ರದೇಶ ಯಾತ್ರೆ…
ಲೇಖಕರು: hpn
ವಿಧ: ಚರ್ಚೆಯ ವಿಷಯ
September 04, 2005
ಪ್ರಜಾವಾಣಿಯ ಇಂದಿನ ಸಾಪ್ತಾಹಿಕ ಪುರವಣಿಯಲ್ಲಿ ತ ಸು ಶಾಮರಾಯರ ಬಗ್ಗೆ ಜಿ ಎಸ್ ಶಿವರುದ್ರಪ್ಪರವರ ಲೇಖನ ಪ್ರಕಟವಾಗಿದೆ. ಓದಿ: [:http://www.prajavan…|ಲಿಂಕ್]