ಎಲ್ಲ ಪುಟಗಳು

ಲೇಖಕರು: addoor
ವಿಧ: ಪುಸ್ತಕ ವಿಮರ್ಶೆ
January 05, 2023
ಆಫ್ರಿಕಾದ ಮೂಲನಿವಾಸಿಗಳಿಂದ ಸಂಗ್ರಹಿಸಿದ 30 ಕತೆಗಳನ್ನು ಈ ಪುಸ್ತಕದಲ್ಲಿ ನಿರೂಪಿಸಿದ್ದಾರೆ ನಿಕ್ ಗ್ರೀವ್ಸ್. ಇಂಗ್ಲೆಂಡಿನಲ್ಲಿ ಜನಿಸಿದ ಅವರು ಕಾಲೇಜು ಶಿಕ್ಷಣ ಪಡೆದದ್ದು ಭೂಗರ್ಭಶಾಸ್ತ್ರ ಮತ್ತು ಪರಿಸರ ವಿಜ್ನಾನದಲ್ಲಿ. ಅನಂತರ ದಕ್ಷಿಣ ಆಫ್ರಿಕಾದ ದೊಡ್ಡ ಗಣಿಪ್ರದೇಶದಲ್ಲಿ ದುಡಿಯಲು ಹೋದರು. ತಮ್ಮ ಉದ್ಯೋಗದ ಸಲುವಾಗಿ ಅವರು ದಕ್ಷಿಣ ಆಫ್ರಿಕಾ, ಜಿಂಬಾಬ್ವೆ, ಬೊಟ್ಸ್-ವಾನಾ ಹಾಗೂ ನೈಋತ್ಯ ಆಫ್ರಿಕಾದ ಕುಗ್ರಾಮಗಳಿಗೆ ಹೋಗಬೇಕಾಯಿತು. ಈ ಅವಧಿಯಲ್ಲಿ ಅವರು ವನ್ಯಜೀವಿಗಳ ವೈವಿಧ್ಯತೆ ಮತ್ತು…
ಲೇಖಕರು: shreekant.mishrikoti
ವಿಧ: ಬ್ಲಾಗ್ ಬರಹ
January 05, 2023
ಇದನ್ನು ಬರೆದವರು ಮೂಗೂರು ಹನುಮಂತಾಚಾರ್ಯ. ಪ್ರಕಟಣೆಯ ವರ್ಷ - 1930 . ಪುಟಗಳ ಸಂಖ್ಯೆ 120.   ಇದು ಕನ್ನಡದಲ್ಲಿ ಕಾದಂಬರಿಗಳು ಆರಂಭವಾಗುವ ಕಾಲದ ಪುಸ್ತಕ. ಮುನ್ನುಡಿಯಲ್ಲಿ ಕಾದಂಬರಿ ಎಂದರೇನು? ಅದರ ಇತಿಹಾಸವೇನು? ಎಂದು ಕಾದಂಬರಿ ಪ್ರಕಾರದ ಪರಿಚಯ ಮಾಡಿಕೊಡಲಾಗಿದೆ. ಮತ್ತು 'ಈ ಪುಸ್ತಕದಲ್ಲಿ ಮಹಮ್ಮದೀಯ ದೊರೆಯಾದ ಬಾಬರ್ ನನ್ನು ಒಂದು ಪಾತ್ರವನ್ನಾಗಿ ಮಾಡಿ ಆತನು ತನ್ನ ಹಿಂದೂ ಪ್ರಜೆಗಳಲ್ಲಿ ತೋರಿಸುತ್ತಿದ್ದ ಅಸ ದೃಶವಾದ ಪ್ರೀತಿಯನ್ನು ಅಷ್ಟು ಚೆನ್ನಾಗಿ ವರ್ಣಿಸಿರುವುದು ನಮ್ಮ ದೇಶ…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
January 03, 2023
ಉದಯೋನ್ಮುಖ ಲೇಖಕಿ ರಜನಿ ಭಟ್ ಕಲ್ಮಡ್ಕ ಇವರ ಮೊದಲ ಪ್ರಕಟಿತ ಕಾದಂಬರಿಯೇ ಸಂಧ್ಯಾದೀಪ. ಕ್ಷಣ ಕ್ಷಣಕ್ಕೂ ಕುತೂಹಲ ಕೆರಳಿಸಿ ಓದಿಸಿಕೊಂಡು ಹೋಗುವ ಈ ಕಾದಂಬರಿ ಮುಗಿದದ್ದೇ ಗೊತ್ತಾಗುವುದಿಲ್ಲ. ಲೇಖಕರೇ ತಮ್ಮ ಮುನ್ನುಡಿಯಲ್ಲಿ ಹೇಳಿದಂತೆ “ ನನಗೆ ಬಹಳಷ್ಟು ಕಾಡಿದ ಮನೆಯೆಂದರೆ ಉಪ್ಪರಿಗೆ ಮನೆ. ಚಿಕ್ಕಂದಿನಲ್ಲಿ ನನ್ನ ಅಜ್ಜನ ಮನೆಯಲ್ಲಿ ಕಣ್ಣಾಮುಚ್ಚಾಲೆ ಆಡುವಾಗ ನಾವು ಅಡಗುತ್ತಿದ್ದುದು ಇದೇ ಉಪ್ಪರಿಗೆಯಲ್ಲಿ. ಅಲ್ಲಿ ಅಡಿಕೆ ಮಿಶ್ರಿತ ವಾತಾವರಣದ ಪರಿಮಳ, ತುಂಬಿದ ಭತ್ತದ ಚೀಲಗಳ ಪರಿಮಳ. ಮಳೆ ಬಂದರೆ…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
December 31, 2022
ಮುಂಬಯಿ ಬದುಕಿನ ಒಳಜಗತ್ತನ್ನು ಮಾರ್ಮಿಕವಾಗಿ ಚಿತ್ರಿಸುವ "ವಡಪಾವ್ ಕಟಿಂಗ್ ಚಾಯ್", "ಅನಾಥನಾಥ" ಹಾಗೂ "ಮುಂಬಯಿ ನಮ್ದೇ" ಕಥೆಗಳಿಗೆ ಮುಖಾಮುಖಿಯಾಗುವ ಊರಿನ "ಸೌದಾಮಿನಿ ಪ್ರಸಂಗ", "ಬದುಕು ಜಟಕಾ ಬಂಡಿ", "ಅವಲಂಬ", "ಭ್ರಾಂತ", "ಅಪರಾಧಿ" ಮೊದಲಾದ ಕಥೆಗಳು ಒಟ್ಟೂ ಬದುಕಿನ ಕಠೋರ ಸತ್ಯಗಳನ್ನು ಅನಾವರಣಗೊಳಿಸುವ ರೀತಿ ಅನನ್ಯವಾಗಿದೆ ಎನ್ನುತ್ತಾರೆ ಕವಿ ಸುಬ್ರಾಯ ಚೊಕ್ಕಾಡಿ. ಲೇಖಕ ಕುಮಾರಸ್ವಾಮಿ ತೆಕ್ಕುಂಜಯವರ ‘ವಡಾಪಾವ್ ಕಟಿಂಗ್ ಚಾಯ್’ ಕೃತಿಯಲ್ಲಿ ಅವರು ಬರೆದ ಬೆನ್ನುಡಿ ನಿಮ್ಮ ಓದಿಗಾಗಿ.. “…
ವಿಧ: ರುಚಿ
December 30, 2022
ಬೇಸಿಗೆ ಕಾಲದಲ್ಲಿ ಧಾರಾಳವಾಗಿ ಮಾವಿನಹಣ್ಣುಗಳು ಸಿಗುತ್ತದೆ. ಮಾವಿನ ಹಣ್ಣುಗಳನ್ನು ಸ್ವಚ್ಛಗೊಳಿಸಿ ಸಿಪ್ಪೆ ತೆಗೆದು ತಿರುಳನ್ನು ಒಂದು ಕುಕ್ಕರಿಗೆ ಹಾಕಬೇಕು. ವಿಸಲ್ ಹಾಕದೆ ಸಣ್ಣ ಉರಿಯಲ್ಲಿ ಅರ್ಧಗಂಟೆ ಬೇಯಿಸಬೇಕು. ಅನಂತರ ಒಂದು ಬಾಣಲೆಗೆ ಹಾಕಿ ಪುನ: ಹತ್ತು ನಿಮಿಷ ಸಣ್ಣ ಉರಿಯಲ್ಲಿಡಬೇಕು. ಸ್ವಲ್ಪ ಉಪ್ಪು, ಬೆಲ್ಲದ ಹುಡಿ, ತುಪ್ಪ ಸೇರಿಸಿ ಸೌಟಿನಲ್ಲಿ ಮಗುಚುತ್ತಿರಬೇಕು. ಸಾಧಾರಣ ಗಟ್ಟಿಯಾದಾಗ ಕೆಳಗಿಳಿಸಿ, ತಣಿದಾಗ ಬಾಟಲಿಯಲ್ಲಿ ತುಂಬಿಸಿ ಫ್ರೀಜರಿನಲ್ಲಿಡಬೇಕು. ಮನೆಯ ಸದಸ್ಯರ…
ವಿಧ: ಪುಸ್ತಕ ವಿಮರ್ಶೆ
December 30, 2022
ನಾಡಿನ ಖ್ಯಾತ ವಿಮರ್ಶಕರಾದ ನಟರಾಜ್ ಹುಳಿಯಾರ್ ಬರೆದ ಕಾಮನ ಹುಣ್ಣಿಮೆ ಎನ್ನುವ ಕಾದಂಬರಿ ಓದಿ ಮುಗಿಸಿದೆ. ಕಾದಂಬರಿ ಒಳ್ಳೆಯ ರೀತಿಯಿಂದ ಅದ್ಭುತವಾಗಿ ಹೊರಬಂದಿದೆ. ಓದುತ್ತಾ ಹೋದಂತೆ ಇನ್ನೂ ಮುಂದೆ ಏನಿದೆ ಎಂಬ ಕುತೂಹಲ ಹುಟ್ಟುತ್ತದೆ. ಕಾದಂಬರಿ ಸೂತ್ರಧಾರಿಯಾದ ಚಂದ್ರಣ್ಣ ಮಿಂಟ್ರಿಯವನ ಮಗ. ಆದರೆ ಮಿಂಟ್ರಿಗೆ ಹೋದ ತಂದೆ ಮರಳಿ ಊರಿಗೆ ಬರದಿದ್ದದ್ದು ಒಂದು ಆಘಾತಕಾರಿಯ ಸುದ್ದಿ. ಆದರೂ ತಾಯಿ ಶಾಂತಮ್ಮ ತನ್ನ ಮಗ ಚಂದ್ರಣ್ಣನನ್ನು ಕಣ್ಣು ರೆಪ್ಪೆಯಂತೆ ನೋಡಿಕೊಂಡು ಮಗನಿಗೆ ಸರಿಯಾಗಿ ಓದಿಸುತ್ತಾಳೆ…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
December 29, 2022
“ಸಮಾಜದ ಅನಿಷ್ಟಗಳಿಗೆ ಪ್ರಸ್ತುತ ವ್ಯವಸ್ಥೆ ಯಾವುದೇ ಪರಿಹಾರವನ್ನು ನೀಡಲು ಸಾಧ್ಯವಿಲ್ಲ ಎಂಬುದು ಸುಸ್ಪಷ್ಟ" ಎಂದು ಹೇಳುವ ಕೋಬಾಡ್ ಗಾಂಧಿಯವರು “ಒಳಿತಿನ ಮತ್ತು ಭರವಸೆಯ ಬೀಜಗಳು ಮಾನವಕುಲದಲ್ಲಿ ಅಂತರ್ಗತವಾಗಿದೆ. ಒಂದಲ್ಲ ಒಂದು ದಿನ ಅವು ಹೂವಾಗಿ ಅರಳುತ್ತವೆ” ಎಂಬ ಆಶಾಭಾವನೆಯನ್ನು ವ್ಯಕ್ತಪಡಿಸುವುದನ್ನು ಕಾಣಬಹುದು ಎಂದು ಅನುವಾದಕಿ ಜ್ಯೋತಿ. ಎ ಅವರು ‘ಅತಂತ್ರ ಸ್ವಾತಂತ್ಯ್ರ’ ಕೃತಿಗೆ ಬರೆದ ಅನುವಾದಕರ ನುಡಿ ನಿಮ್ಮ ಓದಿಗಾಗಿ ನೀಡಲಾಗಿದೆ. “ಕೆಲವು ವರ್ಷಗಳಿಂದೀಚೆಗೆ ನಮ್ಮ ದೇಶದಲ್ಲಿ…
ಲೇಖಕರು: addoor
ವಿಧ: ಪುಸ್ತಕ ವಿಮರ್ಶೆ
December 29, 2022
ಈಗಿನ ಜಗತ್ತನ್ನೂ ನಮ್ಮ ಬದುಕನ್ನೂ ಗಮನಿಸಿದರೆ ನಾವು ಹಲವಾರು ಅನುಕೂಲಗಳನ್ನು ಅನುಭವಿಸುತ್ತಿರುವುದು ನಮ್ಮ ಅರಿವಿಗೆ ಬರುತ್ತದೆ. ಉದಾಹರಣೆಗೆ ವೇಗದ ಪ್ರಯಾಣ, ಪತ್ರಿಕೆ ಮತ್ತು ಪುಸ್ತಕಗಳ ಮೂಲಕ ಸುಲಭ ಲಭ್ಯ ಮಾಹಿತಿ, ಕೊರೊನಾ ವೈರಸಿನಂತಹ ಅಪಾಯಕಾರಿ ಸೂಕ್ಷ್ಮಜೀವಿಯನ್ನೂ ನಿಯಂತ್ರಿಸಿದ ವೈದ್ಯಕೀಯ ಬೆಳವಣಿಗೆಗಳು ಇತ್ಯಾದಿ. ಇವುಗಳಲ್ಲಿ ಏನೇನೂ ವಿಶೇಷವಿಲ್ಲ; ಇವೆಲ್ಲ ದಿನನಿತ್ಯದ ಬದುಕಿನ ಅವಿಭಾಜ್ಯ ಅಂಗ ಎಂದು ನಮಗೆ ಅನಿಸುತ್ತದೆ. ಆದರೆ, ಐದಾರು ಶತಮಾನಗಳ ಮುಂಚೆ ಪರಿಸ್ಥಿತಿ ಹೇಗಿದ್ದಿರಬಹುದು?…
ವಿಧ: ಪುಸ್ತಕ ವಿಮರ್ಶೆ
December 28, 2022
ಆರತಿಯವರ ಬರೆಹದಲ್ಲಿ ಸ್ತ್ರೀ ಪರವಾದ ಧೋರಣೆಯಿದೆ. ಅದು ಸಹಜ ಮತ್ತು ನ್ಯಾಯ ಸಮ್ಮತ ಕೂಡ. ನಾವು ಬಹಳ ಆಧುನಿಕರಾಗಿದ್ದೇವೆ ಎಂಬ ಹೆಮ್ಮೆಯ ಒಳಗೆ ಅವಿತ ನೂರಾರು ಕರಾಳಮುಖಗಳನ್ನು, ವಿಷ ಹೃದಯಗಳನ್ನು ಕಾಣಲಾರೆವು. ಈ ಒಣ ಹೆಮ್ಮೆಯ ಬಣವೆಗೆ ಸಣ್ಣ ಕಿಡಿಸೋಕಿಸುತ್ತಾರೆ, ಲೇಖಕಿ ಎಂಬುದು ಲೇಖಕ ರಾಧಾಕೃಷ್ಣ ಕಲ್ಚಾರ್ ಅವರ ಮಾತು. ಲೇಖಕಿ ಆರತಿ ಪಟ್ರಮೆ ಅವರ ‘ಒಂದು ಕಪ್ ಚಹಾ ಸಿಗಬಹುದೇ ?’ ಎಂಬ ಲಲಿತ ಪ್ರಬಂಧ ಸಂಕಲದಲ್ಲಿ ಅವರು ಬರೆದ ಮುನ್ನುಡಿಯಾದ “ನಲ್ನುಡಿ" ಇಲ್ಲಿದೆ...  “ಲೇಖಕಿಯಾಗಿ, ಯಕ್ಷಗಾನ…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
December 27, 2022
“ನಮ್ಮ ತಾಯ್ನುಡಿ ಕನ್ನಡದಲ್ಲಿ ಕ್ರಿಕೆಟ್ ಗೆ ಒತ್ತು ಕೊಟ್ಟು ಹೊರಬಂದಿರುವ ಈ ಬಗೆಯ ಪುಸ್ತಕವನ್ನು ನಾನೆಂದು ಕಂಡಿಲ್ಲ. ಆದುದರಿಂದ ಇದು ಒಂದು ವಿಶೇಷ ಹಾಗೂ ವಿಭಿನ್ನ ಪ್ರಯತ್ನ ಎನಿಸಿಕೊಂಡು ಒಬ್ಬ ಕ್ರಿಕೆಟಿಗನಾದ ನನ್ನ ಮನಸ್ಸಿಗೆ ಇನ್ನೂ ಹತ್ತಿರ ಆಗಿದೆ. ಕನ್ನಡದಲ್ಲಿ ಕ್ರಿಕೆಟ್ ನ ಟೆಕ್ನಿಕಲ್ ವಿಷಯಗಳನ್ನು ಈ ಪುಸ್ತಕದಲ್ಲಿ ಸರಳವಾಗಿ ಬರೆದಿರುವುದರಿಂದ ಕನ್ನಡಿಗರು ಆಟವನ್ನು ಇನ್ನೂ ಚೆನ್ನಾಗಿ ಅರ್ಥ ಮಾಡಿಕೊಳ್ಳಲು ಖಂಡಿತ ಸಹಕಾರಿಯಾಗಲಿದೆ ಎಂದೆನಿಸುತ್ತಿದೆ” ಎನ್ನುತ್ತಾರೆ ಮಾಜಿ…