ವಿಧ: ಪುಸ್ತಕ ವಿಮರ್ಶೆ
July 12, 2022
ಕಥೆಗಳ ರಚನೆಯಲ್ಲಿ ಆಸಕ್ತಿ ಹೊಂದಿರುವ ರವೀಂದ್ರ ಶೆಟ್ಟಿ ಕುತ್ತೆತ್ತೂರು ಅವರ ಚೊಚ್ಚಲ ಕಥಾ ಸಂಕಲನೇ 'ಪುನರ್ಜನ್ಮ'. ವಿವಿಧ ಪತ್ರಿಕೆ, ನಿಯತಕಾಲಿಕೆಗಳಲ್ಲಿ ಬೆಳಕು ಕಂಡಿರುವ ೧೦ ಉತ್ತಮ ಕಥೆಗಳನ್ನು ಆರಿಸಿ ಪುಟ್ಟ ಪುಸ್ತಕವನ್ನಾಗಿಸಿ ಓದುಗರ ಕೈಗಿರಿಸಿದ್ದಾರೆ. ಈ ಕೃತಿಗೆ ಮುನ್ನುಡಿ ಬರೆದಿದ್ದಾರೆ ಪತ್ರಕರ್ತರಾದ ಕೆ. ಆನಂದ ಶೆಟ್ಟಿ ಇವರು. ಅವರ ಅಭಿಪ್ರಾಯದಂತೆ "ರವೀಂದ್ರ ಶೆಟ್ಟಿಯವರು ಬರೆದ ಹಲವಾರು ಕಥೆಗಳು ವಿವಿಧ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡು ಓದುಗರ ಗಮನ ಸೆಳೆದಿದೆ…
ವಿಧ: ಪುಸ್ತಕ ವಿಮರ್ಶೆ
July 08, 2022
ನರಹಳ್ಳಿ ಬಾಲಸುಬ್ರಹ್ಮಣ್ಯ ಇವರು ಕನ್ನಡದ ಪ್ರಮುಖ ವಿಮರ್ಶಕರಲ್ಲಿ ಒಬ್ಬರು. ಇವರು ಹಲವಾರು ವಿಮರ್ಶಾ ಕೃತಿಗಳನ್ನು, ಪ್ರಬಂಧ ಸಂಕಲನಗಳನ್ನು ರಚಿಸಿದ್ದಾರೆ. ಇವರ ನೂತನ ಕೃತಿ 'ಅರಿವಿನ ಬಂಡಾಯ'ವನ್ನು ಕಣ್ಣ ಕೈದೀವಿಗೆಯ ಬೆಳಕು ಎಂದಿದ್ದಾರೆ. ಪುಸ್ತಕದ ಒಳಪುಟಗಳಿಂದ ಆಯ್ದ ಕೆಲವು ಸಾಲುಗಳೂ ಇಲ್ಲಿವೆ…
"...ಇಂದು ಜಗತ್ತನ್ನು ಗಾಢವಾಗಿ ಪ್ರಭಾವಿಸುತ್ತಿರುವ ಮೂರು ಪ್ರಭಾವೀ ಶಕ್ತಿಗಳೆಂದರೆ ರಾಜಕೀಯ, ಧರ್ಮ ಹಾಗೂ ತಂತ್ರಜ್ಞಾನ. ಇವುಗಳಲ್ಲಿ ರಾಜಕೀಯ ಹಾಗೂ ಧರ್ಮ ಅಧಿಕಾರ ಕೇಂದ್ರಗಳಾಗಿದ್ದು ಅಧೀನ…
ವಿಧ: ಪುಸ್ತಕ ವಿಮರ್ಶೆ
July 06, 2022
ಭಾರತದ ಚರಿತ್ರೆ ಎಡ-ಬಲಗಳ ಅತಿರೇಕದ ನಡುವೆ ಸಿಕ್ಕು ತತ್ತರಿಸಿದೆ. ನಿರ್ಮಲ ಚಿತ್ತದಿಂದ, ವಸ್ತುನಿಷ್ಟವಾಗಿ, ಕಲೆ, ಸಾಹಿತ್ಯ ಚರಿತ್ರೆಗಳನ್ನೆಲ್ಲ ಪೃಥಕ್ಕರಿಸಿ ಸತ್ಯಶೋಧನೆಗೆ ತೊಡಗಬೇಕೆಂಬ ಆದ್ಯತೆಯನ್ನು ಬಹುತೇಕರು ಮರೆತು, ತಾವು ನಂಬಿದ ಸಿದ್ಧಾಂತಕ್ಕೆ ಆಕರಗಳನ್ನು ಹುಡುಕಿದ್ದಾರೆ ಅಥವಾ ಜೋಡಿಸಿದ್ದಾರೆ. ಭಾರತದಂತ ಬಹುಮುಖಿ ಸಂಸ್ಕೃತಿಯ ದೇಶವನ್ನು ಕುರಿತು ಅಧ್ಯಯನ ಮಾಡುವಾಗ ಎಷ್ಟು ವ್ಯವಧಾನವಿದ್ದರು ಅದು ಅಲ್ಪವೇ. ವ್ಯವಧಾನದ ಜೊತೆಗೆ ಬಹುಜ್ಞಾತ ವ್ಯುತ್ಪತ್ತಿ ಹಾಗೂ ಚಿಕಿತ್ಸ ಬುದ್ಧಿಗಳು…
ವಿಧ: ಪುಸ್ತಕ ವಿಮರ್ಶೆ
July 04, 2022
'ದೇಶದ ಪಥ ಬದಲಿಸಿದ ೨೫ ಪ್ರಮುಖ ತೀರ್ಪುಗಳು' ಪುಸ್ತಕದ ಲೇಖಕ ವೈ ಜಿ ಮುರಳೀಧರನ್ ಅವರು ಕಳೆದ ೨೫ ವರ್ಷಗಳಿಂದ ಗ್ರಾಹಕ ಜಾಗೃತಿ, ಮಾನವ ಹಕ್ಕು, ವ್ಯಕ್ತಿತ್ವ ವಿಕಸನ ಮುಂತಾದ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಪುಸ್ತಕ ರಚನೆ ಮತ್ತು ಮಾಧ್ಯಮವನ್ನು ಸಮರ್ಥವಾಗಿ ಬಳಸಿಕೊಂಡಿದ್ದಾರೆ. ಇವರ ೫೦೦೦ಕ್ಕೂ ಹೆಚ್ಚು ಲೇಖನಗಳು ನಾಡಿನ ಹೆಸರಾಂತ ಪತ್ರಿಕೆಗಳಲ್ಲಿ ಪ್ರಕಟವಾಗಿವೆ.
ಕೆಲವು ಘಟನೆಗಳು, ಪುಸ್ತಕಗಳು, ವ್ಯಕ್ತಿಗಳು ಮತ್ತು ಪ್ರಸಂಗಗಳು ಮಾನವ ಸಮಾಜದ ದಿಕ್ಕನ್ನು ಬದಲಿಸಿರುವುದನ್ನು…
ವಿಧ: ಪುಸ್ತಕ ವಿಮರ್ಶೆ
July 01, 2022
ನೀರಿನ ಮೌಲ್ಯ ಗೊತ್ತಾಗುವುದು ಅದರ ಕೊರತೆಯಾದಾಗಲೇ. ಇದನ್ನು ಇಸ್ರೇಲ್ ದೇಶದವರು ಚೆನ್ನಾಗಿ ಅರಿತುಕೊಂಡಿದ್ದಾರೆ. ಹೇಳಿ ಕೇಳಿ ಇಸ್ರೇಲ್ ದೇಶದ ಬಹುಪಾಲು ಭೂಮಿ ಮರಳುಗಾಡು. ಮಳೆಯಾಗುವುದು ಬಹಳ ಕಡಿಮೆ. ಆದರೂ ನೀರಾವರಿ ತಂತ್ರಜ್ಞಾನ, ಕೃಷಿಯಲ್ಲಿ ಅವರು ಬಹಳ ಮುಂದುವರಿದಿದ್ದಾರೆ. ಇಸ್ರೇಲ್ ಜನರ ನೀರಾವರಿ ತಂತ್ರಗಳ ಬಗ್ಗೆ ಈಗಾಗಲೇ ಹಲವಾರು ಪುಸ್ತಕಗಳು ಬಂದಿವೆ. ಅಂತಹದ್ದೇ ಒಂದು ಪುಸ್ತಕ 'ನಾಳೆಗೂ ಇರಲಿ ನೀರು' ಇದು ಜಲದಾಹದಿಂದ ತತ್ತರಿಸುತ್ತಿರುವ ಜಗತ್ತಿಗೆ ಇಸ್ರೇಲ್ ನ ಪರಿಹಾರ ಎಂದಿದ್ದಾರೆ…
ವಿಧ: ಪುಸ್ತಕ ವಿಮರ್ಶೆ
June 29, 2022
'ಸುಡು ಬಯಲು' ಎನ್ನುವುದು ಒಂದು ಅಂಕಣ ಬರಹಗಳ ಸಂಗ್ರಹ. ೭೨ ಬರಹಗಳು ಈ ಪುಸ್ತಕದಲ್ಲಿವೆ. ಈ ಪುಸ್ತಕವು ಕೊರೊನಾ ಸಾಂಕ್ರಾಮಿಕದ ಸಮಯದ ಜನರ ತಲ್ಲಣಗಳು, ವೈದ್ಯರ ಶ್ರಮ, ಮಾಧ್ಯಮದವರ ಅತಿರೇಕ ಎಲ್ಲವುದರ ಕುರಿತು ಬೆಳಕು ಚೆಲ್ಲುತ್ತದೆ. ಅದಕ್ಕೇ ಮಣಿ ಅವರು ಪುಸ್ತಕದ ಮುಖಪುಟದಲ್ಲೇ 'ಸತ್ಯಾನ್ವೇಷಣೆಯ ಬೆನ್ನೇರಿ...' ಎಂದು ಮುದ್ರಿಸಿದ್ದಾರೆ. ಪತ್ರಕರ್ತರಾಗಿರುವ ಮಣಿ ಅವರು ಕೊರೊನಾ ಸಂದರ್ಭದ ವಾಸ್ತವಾಂಶಗಳನ್ನು ಕಟ್ಟಿಕೊಡುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ.
ಬೆಂಗಳೂರಿನ ಹಿರಿಯ ಪತ್ರಕರ್ತರೂ,…
ವಿಧ: ಪುಸ್ತಕ ವಿಮರ್ಶೆ
June 28, 2022
ರೈತ ಹೋರಾಟಗಾರ ಹೆಚ್ ಆರ್ ಬಸವರಾಜಪ್ಪನವರ ಐದು ದಶಕಗಳ ಹೋರಾಟದ ಹಿನ್ನೋಟವೇ 'ಹಸಿರು ಹಾದಿಯ ಕಥನ' ಎಂಬ ಕೃತಿ. ಬಸವರಾಜಪ್ಪನವರ ಮಾತುಗಳನ್ನು ಗಿರೀಶ್ ತಾಳೀಕಟ್ಟೆ ಹಾಗೂ ಕೆ ಎಲ್ ಅಶೋಕ್ ಅವರು ಸೊಗಸಾಗಿ ನಿರೂಪಿಸುತ್ತಾ ಅಕ್ಷರರೂಪಕ್ಕೆ ಇಳಿಸಿದ್ದಾರೆ. ೮೦ರ ದಶಕದಲ್ಲಿ ಆರಂಭವಾದ ರೈತ ಚಳುವಳಿಯಲ್ಲಿ ಮುಂಚೂಣಿ ನಾಯಕತ್ವ ವಹಿಸಿದ್ದ ಬಸವರಾಜಪ್ಪನವರು ಇಂದಿಗೂ ಅಷ್ಟೇ ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದ್ದಾರೆ. ರೈತರ ಮನೆ ಜಪ್ತಿಗೆ ಪ್ರತಿಯಾಗಿ ಬಸವರಾಜಪ್ಪನವರ ನೇತೃತ್ವದಲ್ಲಿ ಭದ್ರಾವತಿಯ ತಹಶೀಲ್ದಾರ್…
ವಿಧ: ರುಚಿ
June 28, 2022
ಸೌತೆಕಾಯಿ ಹೋಳಿನೊಂದಿಗೆ ಹಲಸಿನಕಾಯಿ ಸೊಳೆ, ನೀರುಳ್ಳಿ ಕತ್ತರಿಸಿ ಸೇರಿಸಿ. ಉಪ್ಪು, ಚಿಟಿಕೆ ಅರಶಿನ ಪುಡಿ, ಸ್ವಲ್ಪ ಬೆಲ್ಲ ಹಾಕಿ ಬೇಯಿಸಬೇಕು. ತೆಂಗಿನಕಾಯಿ ತುರಿಗೆ ಸ್ವಲ್ಪ ಹುಣಿಸೇಹುಳಿ ಸೇರಿಸಿ. ಒಣಮೆಣಸು, ಜೀರಿಗೆ, ಉದ್ದಿನಬೇಳೆ, ಮೆಂತೆ, ಕಾಲು ಚಮಚ ಅರಶಿನಪುಡಿ, ಚಿಟಿಕೆ ಇಂಗು, ಕರಿಬೇವು ಹುರಿದು ಸೇರಿಸಿ ನುಣ್ಣಗೆ ರುಬ್ಬಿಕೊಂಡು ,ಬೆಂದ ಹೋಳಿಗೆ ಸೇರಿಸಿ, ಸಣ್ಣ ಉರಿಯಲ್ಲಿ ಕುದಿಸಬೇಕು. ಬೆಳ್ಳುಳ್ಳಿ ಒಗ್ಗರಣೆ ಹಾಕಬೇಕು. ಇದಕ್ಕೆ ಬೇಯಿಸಿದ ಹಲಸಿನಬೀಜ ಸೇರಿಸಿದರೆ ತುಂಬಾ ರುಚಿ.…
ವಿಧ: ಪುಸ್ತಕ ವಿಮರ್ಶೆ
June 25, 2022
ದೀಪಾ ಹಿರೇಗುತ್ತಿ ಇವರು ಬರೆದ ವ್ಯಕ್ತಿತ್ವ ವಿಕಸನದ ಬರಹಗಳೇ 'ಸೋಲೆಂಬ ಗೆಲುವು' ಈ ಪುಸ್ತಕವನ್ನು ಪ್ರಕಾಶಿಸಿದವರು ವೀರಲೋಕ ಪ್ರಕಾಶನ ಇವರು. ಇದರ ಮಾಲಕರಾದ ವೀರಕಲೋಕ ಶ್ರೀನಿವಾಸ ಇವರು ತಮ್ಮ ಬೆನ್ನುಡಿಯಲ್ಲಿ ಈ ಪುಸ್ತಕ ಪ್ರಕಾಶನದ ಹೇಳಿಕೊಂಡದ್ದು ಹೀಗೆ..." "ನಿಮ್ಮ ನಾಲಿಗೆ ಬಯಸುವ ಚಾಕೋಲೆಟೊಂದು ಸಲೀಸಾಗಿ ನಿಮ್ಮನ್ನು ತಲುಪುವಂತೆ, ನಿಮ್ಮ ಬುದ್ಧಿ ಇಷ್ಟ ಪಡುವ ಪುಸ್ತಕವೊಂದು ನಿಮ್ಮ ಗೂಡಿಗೆ ತಲುಪಿಸಲು ಹರಸಾಹಸ ಪಡಬೇಕಾದ ಸ್ಥಿತಿ ಕನ್ನಡದಲ್ಲಿದೆ. ಅದನ್ನು ಮನಗಂಡು ನೀವು ಇರುವಲ್ಲೇ, ನೀವು…
ವಿಧ: ಪುಸ್ತಕ ವಿಮರ್ಶೆ
June 24, 2022
ಈ ಪುಸ್ತಕದ ಒಂದೊಂದೇ ಲೇಖನ ಓದುತ್ತ ಹೋದಂತೆ, ಪರಿಸರ ನಮ್ಮ ಬದುಕನ್ನು ತಟ್ಟುವ ವಿವಿಧ ಪರಿಗಳು ತೆರೆದುಕೊಳ್ಳುತ್ತ ಹೋಗುತ್ತವೆ. ಊರಿಗೆ ಮಂಜೂರಾದ ಮೂರು ಟ್ಯೂಬ್ಲೈಟ್ಗಳನ್ನು ಗ್ರಾಮ ಪಂಚಾಯತಿಯ ಸದಸ್ಯರ ಮನೆ ಮುಂದೆಯೇ ಹಾಕಬೇಕೆಂದು ಕೆಇಬಿ ಲೈನ್ಮನ್ಗೆ ತಾಕೀತು ಮಾಡುವ ಒಬ್ಬ ಗ್ರಾಮ ಪಂಚಾಯತಿ ಸದಸ್ಯನ ಉದಾಹರಣೆಯೊಂದಿಗೆ ಪುಸ್ತಕದ "ಮುನ್ನುಡಿ"ಯನ್ನು ಆರಂಭಿಸುತ್ತಾರೆ ಸಂಪಾದಕರು.
"ಹಳ್ಳಿಗಳಲ್ಲಿನ ರಾಜಕೀಯ ಮತ್ತು ಇಂದಿನ ಪರಿಸ್ಠಿತಿಗಳ ಬಗ್ಗೆ ಗೊತ್ತಿರುವ ಯಾರೂ ಆ ಕಡೆ ಸುಳಿಯದಂಥ ವಾತಾವರಣ…