ಎಲ್ಲ ಪುಟಗಳು

ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
August 09, 2022
ಕೃಷಿ ಪತ್ರಕರ್ತರಾದ ರಾಧಾಕೃಷ್ಣ ಹೊಳ್ಳ ಇವರು ತಾವು ಬಾಳೆ ಬೆಳೆಯ ಬಗ್ಗೆ ಬರೆದ ಲೇಖನಗಳನ್ನು ಸಂಗ್ರಹಿಸಿ ಪುಸ್ತಕ ರೂಪದಲ್ಲಿ ಹೊರತಂದಿದ್ದಾರೆ. ಇವರ ಈ ಪ್ರಯತ್ನಕ್ಕೆ ಸಹಕಾರ ನೀಡಿದ್ದಾರೆ ಕೃಷಿ ಸಂಶೋಧನಾ ಕೇಂದ್ರದ ಪ್ರಾಧ್ಯಾಪಕರಾದ ಪಿ ವಿ ಹೇರಳೆ ಇವರು. ಬಾಳೆ ಬೆಳೆಯ ಬಗ್ಗೆ ಸಮಗ್ರವಾದ ವಿಷಯವನ್ನು ತಿಳಿಸಿಕೊಡುವ ಒಂದು ಕೈಪಿಡಿ ಈ ಪುಸ್ತಕ ಎಂದರೆ ತಪ್ಪಾಗಲಾರದು.  ಬಾಳೆ ಬೆಳೆಯ ಪರಿಚಯದಿಂದ ಪ್ರಾರಂಭಿಸಿ ಅದರ ತಳಿ ವೈವಿಧ್ಯಗಳು, ಬೇಸಾಯ ಕ್ರಮ, ನೆಡು ಸಾಮಾಗ್ರಿ, ಅಧಿಕ ಇಳುವರಿಗೆ ಗೊಬ್ಬರಗಳ…
ಲೇಖಕರು: shreekant.mishrikoti
ವಿಧ: ಬ್ಲಾಗ್ ಬರಹ
August 09, 2022
ಈ ತನಕ ನಾನು ಕೇಳಿ ಇಷ್ಟ ಪಟ್ಟ ಪರಭಾಷೆಗಳ ಅನೇಕ ಗೀತೆಗಳನ್ನು ನನ್ನ ಸಂತೋಷಕ್ಕಾಗಿ ಆದಷ್ಟು ಅನುವಾದ ಮಾಡಿಕೊಂಡು ನಾನೇ ಹಾಡಿಕೊಂಡು ರೆಕಾರ್ಡ್ ಮಾಡಿಕೊಂಡು ಕೇಳುತ್ತ ಖುಷಿ ಪಡುತ್ತಿದ್ದೇನೆ.   ಅವನ್ನು ನೀವೂ ನೋಡಿ. ಇಷ್ಟವಾದರೆ ಬೇಕಾದರೆ ಹಾಡಿಕೊಂಡು ಸಂತೋಷ ಪಡಿ. ರೆಕಾರ್ಡ್ ಮಾಡಿಕೊಂಡ ನನ್ನ ಹಾಡುಗಳ ಅಂತರ್ಜಾಲ ಕೊಂಡಿಯನ್ನು ಕೂಡ ಕೊಟ್ಟಿದ್ದೇನೆ . ಅದನ್ನು ಕೇಳಿ . ಬೇಕಾದರೆ ಅದನ್ನು ನಿಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಗೆ ಉಳಿಸಿಕೊಂಡು ಬೇಕಾದಾಗ ಕೇಳಿ ಸಂತೋಷಪಡಿ.   ಅವುಗಳನ್ನು ಸಾಧ್ಯವಾದರೆ…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
August 06, 2022
ವಿಶಿಷ್ಟ, ವಿನೂತನ ಪುಸ್ತಕಗಳ ಸರಮಾಲೆಗಳನ್ನು ಹೊರತರುತ್ತಿರುವ ಅಯೋಧ್ಯಾ ಪ್ರಕಾಶನವು ರೋಹಿತ್ ಚಕ್ರತೀರ್ಥ ಅವರ 'ನೂರಾರು ಯಹೂದಿ ಕಥೆಗಳು' ಎಂಬ ಪುಟ್ಟ ಪುಸ್ತಕವನ್ನು ಹೊರತಂದಿದೆ. ಯಹೂದಿ ಕಥೆಗಳನ್ನು ನೀವು ಅಲ್ಲೊಂದು ಇಲ್ಲೊಂದು ಓದಿರಬಹುದು. ಆದರೆ ಒಂದೇ ಗುಕ್ಕಿಗೆ ಇಷ್ಟೊಂದು ಕಥೆಗಳನ್ನು ಓದುವ ಅವಕಾಶ ಸಿಗುವುದು ಅಪರೂಪ. ನೂರ ಆರು ಕಥೆಗಳನ್ನು 'ಮಂದಹಾಸ ಮಿನುಗಿಸುವ ನಗೆಮಿಂಚುಗಳು' ಎಂದು ಲೇಖಕರು ಕರೆದಿದ್ದಾರೆ. ರೋಹಿತ್ ಚಕ್ರತೀರ್ಥ ಇವರು ತಮ್ಮ ಮುನ್ನುಡಿಯಲ್ಲಿ ಯಹೂದ್ಯರ ಜನಪದ ಕತೆಗಳ…
ಲೇಖಕರು: shreekant.mishrikoti
ವಿಧ: ಬ್ಲಾಗ್ ಬರಹ
August 06, 2022
  ಈ ತನಕ ನಾನು ಕೇಳಿ ಇಷ್ಟ ಪಟ್ಟ ಪರಭಾಷೆಗಳ ಅನೇಕ ಗೀತೆಗಳನ್ನು ನನ್ನ ಸಂತೋಷಕ್ಕಾಗಿ ಆದಷ್ಟು ಅನುವಾದ ಮಾಡಿಕೊಂಡು ನಾನೇ ಹಾಡಿಕೊಂಡು ರೆಕಾರ್ಡ್ ಮಾಡಿಕೊಂಡು ಕೇಳುತ್ತ ಖುಷಿ ಪಡುತ್ತಿದ್ದೇನೆ.   ಅವನ್ನು ನೀವೂ ನೋಡಿ. ಇಷ್ಟವಾದರೆ ಬೇಕಾದರೆ ಹಾಡಿಕೊಂಡು ಸಂತೋಷ ಪಡಿ. ರೆಕಾರ್ಡ್ ಮಾಡಿಕೊಂಡ ನನ್ನ ಹಾಡುಗಳ ಅಂತರ್ಜಾಲ ಕೊಂಡಿಯನ್ನು ಕೂಡ ಕೊಟ್ಟಿದ್ದೇನೆ . ಅದನ್ನು ಕೇಳಿ . ಬೇಕಾದರೆ ಅದನ್ನು ನಿಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಗೆ ಉಳಿಸಿಕೊಂಡು ಬೇಕಾದಾಗ ಕೇಳಿ ಸಂತೋಷಪಡಿ.     1) ಮೂಲ ಹಾಡು - ದಿಲ…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
August 05, 2022
ಛತ್ರಪತಿ ಶಿವಾಜಿ ಮಹಾರಾಜರ ಬಗ್ಗೆ ಹಲವಾರು ಪುಸ್ತಕಗಳು ಈಗಾಗಲೇ ಹೊರಬಂದಿವೆ. ಆದರೆ 'ಕ್ಷತ್ರಿಯ ಕುಲಾವತಂಸ' ಎಂಬ ಈ ಹೊಸ ಕೃತಿ ಶಿವಾಜಿಯ ಭಿನ್ನ ವ್ಯಕ್ತಿತ್ವವನ್ನು ವಿಭಿನ್ನ ದೃಷ್ಟಿಕೋನದಿಂದ ಬಿಂಬಿಸುತ್ತದೆ. ಲೇಖಕಿ ಶೋಭಾ ರಾವ್ ಅವರು ಈ ಕೃತಿಯನ್ನು ಹುಲಿಯ ಹೆಜ್ಜೆಯ ಗುರುತು... ಎಂದು ಹೆಸರಿಸಿದ್ದಾರೆ. ಖ್ಯಾತ ಲೇಖಕ ಸೇತುರಾಮ್ ಅವರು ತಮ್ಮ ಮುನ್ನುಡಿಯಲ್ಲಿ ".... ಸಹಜವಾಗಿ ಇಲ್ಲಿಯ ಜನ ಸಮುದಾಯ ದಾಸ್ಯ ಮನಸ್ಥಿತಿಯಲ್ಲಿಯೇ ಮುಂದುವರೆದಿದೆ. ಆಳುವವರಿಗೆ ಅವಶ್ಯಕತೆ ಕಂಡಿಲ್ಲ. ಹಾಗಾಗಿ…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
August 02, 2022
'ಭಾರತೀಯ ವೈದ್ಯ ವಿದ್ಯೆಯ ಪಿತಾಮಹ ಸುಶ್ರುತ' ಎಂಬ ಸೊಗಸಾದ ಮಾಹಿತಿಪೂರ್ಣ ಪುಸ್ತಕವನ್ನು ಬರೆದಿದ್ದಾರೆ ಬೆಂಗಳೂರಿನ ಮೀರಾ ಬಿ ಕೆ ಇವರು. "ರೋಗಿಗೆ ದ್ರಾಕ್ಷಾ ರಸ ಕುಡಿಸಿ ಪ್ರಜ್ಞೆ ತಪ್ಪಿಸಿ, ಆತನ ಕೆನ್ನೆಯ ಭಾಗವನ್ನೇ ಕೊಯ್ದು ತೆಗೆದು, ಹರಿದ ಮೂಗಿನ ಮೇಲಿಟ್ಟು, ಯಶಸ್ವಿಯಾಗಿ 'ಸುರೂಪ ಶಸ್ತ್ರಚಿಕಿತ್ಸೆ' ಮಾಡಿ, 'ಪ್ಲಾಸ್ಟಿಕ್ ಶಸ್ತ್ರ ಚಿಕಿತ್ಸೆಯ ಪಿತಾಮಹ' ನೆಂದೇ ಹೆಸರಾದ ಮಹಾವೈದ್ಯ ಸುಶ್ರುತ. ಎರಡುವರೆ ಸಾವಿರ ವರ್ಷಗಳಿಗೆ ಹಿಂದೆಯೇ ವೈದ್ಯಶಾಸ್ತ್ರದ ಇಂತಹ ಅದ್ಭುತವನ್ನು ಮಾಡಿತೋರಿಸಿದ ಈತ…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
July 30, 2022
ಸೋದೆ ಸದಾಶಿವರಾಯರ ನಿಗೂಢ ಆತ್ಮಕಥನವಾದ 'ಅನುರಾಯ ಶಾಲ್ಮಲೆ' ಇದರ ಲೇಖಕರು ಖ್ಯಾತ ಇತಿಹಾಸಕಾರರೂ, ವಾಗ್ಮಿಗಳೂ ಆದ ಡಾ. ಲಕ್ಷ್ಮೀಶ್ ಹೆಗಡೆ ಸೋಂದಾ ಇವರು. ಇವರು ಕಳೆದ ೧೫ ವರ್ಷಗಳಿಂದ ಇತಿಹಾಸ ಶೋಧನೆಯಲ್ಲಿ ಸಕ್ರಿಯರಾಗಿ ಹಲವಾರು ಶಾಸನಗಳು, ವೀರಗಲ್ಲುಗಳು, ಐತಿಹಾಸಿಕ ಕುರುಹುಗಳನ್ನು ಸಂಶೋಧಿಸಿ ಅವುಗಳನ್ನು ಅಭ್ಯಸಿಸಿ ಸಮಾಜಕ್ಕೆ ಪರಿಚಯಿಸಿದ್ದಾರೆ.  "'ಅನುರಾಯ ಶಾಲ್ಮಲೆ' ಎಂಬ ಈ ಐತಿಹಾಸಿಕ ಕಾದಂಬರಿಯ ಮೂಲವಸ್ತು ಸದಾಶಿವರಾಯ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸೋದೆ ಎಂಬ ಪ್ರದೇಶವನ್ನು…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
July 28, 2022
ಕಥೆಗಾರ, ಪತ್ರಕರ್ತ ರವೀಂದ್ರ ಶೆಟ್ಟಿ ಕುತ್ತೆತ್ತೂರು ಇವರ ಎರಡನೇ ಕಥಾ ಸಂಕಲನವೇ 'ಅಂತಿಮವಾದ'. ಕರ್ಮವೀರ, ಹೊಸದಿಗಂತ, ಕುಂದಪ್ರಭ ಮೊದಲಾದ ಪತ್ರಿಕೆಗಳಲ್ಲಿ ಪ್ರಕಟವಾದ ಹತ್ತು ಕಥೆಗಳು ಈ ಸಂಕಲನದಲ್ಲಿವೆ. ಈ ಕಥಾ ಸಂಕಲನದಲ್ಲಿ ಅಂತಿಮವಾದ, ದೊಡ್ಮನೆ ನಾಯಿ, ಆಧುನಿಕ ಭಸ್ಮಾಸುರ, ಸೀಮಾ, ತೀರಗಳು, ಕೊರಡು ಕೊನರುವುದೇ?, ಬಲಿ, ದಾರಿ ತೋರಿಸಿದಾಕೆ, ಭ್ರಮೆ, ಹೀಗೊಬ್ಬ ಕಥೆಗಾರ ಎಂಬ ಹತ್ತು ಕಥೆಗಳಿವೆ. ಪುಸ್ತಕಕ್ಕೆ ಮುನ್ನುಡಿ ಬರೆದಿದ್ದಾರೆ ಖ್ಯಾತ ಸಾಹಿತಿ ಅಮೃತ ಸೋಮೇಶ್ವರ. ಇವರು ತಮ್ಮ ನುಡಿಯಲ್ಲಿ…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
July 26, 2022
ಜನರಲ್ ಬಿಪಿನ್ ರಾವತ್ ಅವರು ಭಾರತದ  ಮೊದಲ ಸಿಡಿಎಸ್ (Chief of Defence Staff) ಆಗಿದ್ದರು. ಈ ಹುದ್ದೆಯಲ್ಲಿರುವಾಗಲೇ ಇವರು ಒಂದು ದುರ್ಘಟನೆಯಲ್ಲಿ ಹುತಾತ್ಮರಾದರು. ಇದಕ್ಕೂ ಮುನ್ನ ಇವರು ಭಾರತೀಯ ಸೇನೆಯ ಮುಖ್ಯಸ್ಥರಾಗಿಯೂ ಸೇವೆ (೩೧-೧೨-೨೦೧೬ ರಿಂದ ೩೧-೧೨-೨೦೧೯ರವರೆಗೆ) ಸಲ್ಲಿಸಿದ್ದರು. ಸಿಡಿಎಸ್ ಆಗಿದ್ದ ಸಂದರ್ಭದಲ್ಲಿ ಇವರು ತಮ್ಮ ಪತ್ನಿ ಮಧುಲಿಕ ರಾವತ್ ಹಾಗೂ ೧೨ ಸೇನಾ ಸಿಬ್ಬಂದಿಗಳ ಜತೆ ಹೆಲಿಕಾಪ್ಟರ್ ನಲ್ಲಿ ತಮಿಳುನಾಡಿನ ನೀಲಗಿರಿ ಪರ್ವತದ ಪ್ರದೇಶದಲ್ಲಿ ಸಂಚರಿಸುತ್ತಿರುವಾಗ…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
July 23, 2022
ಡಾ. ಸತ್ಯನಾರಾಯಣ ಭಟ್ ಅವರು ಬರೆದ 'ಹಳ್ಳಿ ಮರಗಳಲ್ಲಿ ಬೆಳ್ಳಿ ಬಂಗಾರ' ಎಂಬ ಸಸ್ಯಲೋಕದ ವೈದ್ಯಕೀಯ ಗುಣಲಕ್ಷಣಗಳುಳ್ಳ ಮರ ಗಿಡಗಳ ಸಚಿತ್ರ ಪರಿಚಯವನ್ನು ನೀಡುವ ಕೃತಿ. ಪುಸ್ತಕದ ಬಗ್ಗೆ ಪ್ರಾಥಮಿಕ ವಿವರಗಳನ್ನು ನೀಡಬಹುದಾದ ಯಾವುದೇ ಮುನ್ನುಡಿ, ಬೆನ್ನುಡಿಗಳು ಈ ಪುಸ್ತಕದಲ್ಲಿಲ್ಲ. ಲೇಖಕರ ಪರಿಚಯವೂ ಇಲ್ಲವಾದುದರಿಂದ ಈ ಪುಸ್ತಕದ ಹಿಂದಿನ ಕಥೆಗಳು ತಿಳಿದುಬರುತ್ತಿಲ್ಲ. ಆದರೆ ಪುಸ್ತಕದಲ್ಲಿ ೫೦ ಬಗೆಯ ವಿವಿಧ ಉಪಕಾರಿ ಸಸ್ಯಗಳ ಪರಿಚಯವನ್ನು ಬಹಳ ಸೊಗಸಾಗಿ ನೀಡಿದ್ದಾರೆ. ಅಗಸೆ, ಅಣಿಲೆ, ಅಶ್ವತ್ಥ,…