ವಿಧ: ಪುಸ್ತಕ ವಿಮರ್ಶೆ
May 12, 2022
೧೯೭೩ರಲ್ಲಿ ಮೊದಲ ಮುದ್ರಣ ಕಂಡ ಡಿ.ವಿ.ಜಿ.ಯವರ ಕೃತಿ ‘ದೇವರು- ಒಂದು ವಿಚಾರ ಲಹರಿ'. ಅಂದಿನಿಂದ ಇಂದಿನವರೆಗೆ ಸುಮಾರು ೧೩ ಮುದ್ರಣಗಳನ್ನು ಕಂಡ ಅಪರೂಪದ ಮಾಹಿತಿಗಳನ್ನು ಒಳಗೊಂಡ ಪುಸ್ತಕವಿದು. ಈ ಪುಸ್ತಕವು “ದೇವರು ಇದ್ದಾನೆಯೇ? ದೇವರು ಎಂಬ ವಸ್ತು ನಿಜವಾಗಿ ಉಂಟೆ? ದೇವರು ಎಂದರೆ ಏನು? ಅದರ ಸ್ವರೂಪ ಎಂಥದು? ಅದರಿಂದ ನಮಗೆ ಆಗಬೇಕಾದ್ದೇನು? ಈ ಜಗತ್ತು ಏಕೆ ಸೃಷ್ಟಿಯಾಯಿತು? ಇದರ ವ್ಯವಸ್ಥೆಯ ತತ್ವವೇನು? ನಾನಾ ಮತಧರ್ಮಗಳ ಮೂಲತತ್ವವೇನು? ಇಂಥ ಪ್ರಶ್ನೆಗಳು ಸಾಮಾನ್ಯವಾಗಿ ಅನೇಕರ ಮನಸ್ಸಿನಲ್ಲಿ…
ವಿಧ: ಪುಸ್ತಕ ವಿಮರ್ಶೆ
May 10, 2022
ಸಚಿನ್ ತೆಂಡೂಲ್ಕರ್ ಎಂದೊಡನೆ ಕ್ರಿಕೆಟ್ ಪ್ರೇಮಿಗಳಲ್ಲಿ ಒಂಥರಾ ಪುಳಕ. ಹಲವಾರು ದಾಖಲೆಗಳನ್ನು ತಮ್ಮ ಹೆಸರಿಗೆ ಬರೆಸಿಕೊಂಡ ಇವರನ್ನು ಸಾಕ್ಷಾತ್ ಕ್ರಿಕೆಟ್ ದೇವರು ಎಂದು ಕರೆಯುವವರೂ ಹಲವಾರು ಮಂದಿ ಇದ್ದಾರೆ. ಅವರ ಕ್ರೀಡಾ ಜೀವನವನ್ನು ಒಂದೆಡೆ ಕಟ್ಟಿಕೊಡುವುದು ಸಾಹಸದ ಪ್ರಯತ್ನವೇ ಸರಿ. ‘ಸಚಿನ್’ ಪುಸ್ತಕದ ಲೇಖಕರಾದ ಅರುಣ್ ಹಾಗೂ ಮೋಹನ್ ಅವರು ಇವರ ಕ್ರೀಡಾ ಬದುಕಿನ ಪ್ರಮುಖ ಘಟನೆಗಳನ್ನು ಬಹಳ ಆಪ್ತವಾಗಿ ಚಿತ್ರಿಸಿದ್ದಾರೆ. ಪುಸ್ತಕದ ಪ್ರಾರಂಭಿಕ ಪುಟಗಳಲ್ಲಿ ಸಚಿನ್ ಕ್ರಿಕೆಟ್ ಜೀವನ ಹಾಗೂ…
ವಿಧ: ಪುಸ್ತಕ ವಿಮರ್ಶೆ
May 07, 2022
‘ಭಾವಸಿಂಚನ’ ಎಂಬ Orkut ಕವಿತೆಗಳ ಸಂಗ್ರಹವನ್ನು 3K ಬಳಗದವರು ಹೊರತಂದಿದ್ದಾರೆ. ಈ ಪುಸ್ತಕದ ಎಲ್ಲೂ ಈ ಕವಿತೆಗಳನ್ನು ಸಂಪಾದನೆ ಮಾಡಿದವರ ಹೆಸರಿಲ್ಲ. ಅದರ ಬದಲಾಗಿ 3K ಕನ್ನಡ ಕವಿತೆ ಕವನ ಎಂದು ನಮೂದಿಸಿದ್ದಾರೆ. ತಮ್ಮದೇ ಆದ ಆರ್ಕುಟ್ ಬಳಗದಲ್ಲಿನ ಸದಸ್ಯರ ಕವನಗಳನ್ನು ಆಹ್ವಾನಿಸಿ ಉತ್ತಮ ಆಯ್ಕೆಗಾರರಿಂದ ಅವುಗಳನ್ನು ಆರಿಸಿ ಪುಸ್ತಕ ರೂಪದಲ್ಲಿ ಹೊರತಂದಿರುವುದು ಶ್ಲಾಘನೀಯ. ಲಾಭದ ದೃಷ್ಟಿಯಿಂದ ಈ ಕಾರ್ಯವನ್ನು ಮಾಡದೇ ಇರುವುದು ಇನ್ನಷ್ಟು ಅಚ್ಚರಿ ತರುತ್ತದೆ. ಏಕೆಂದರೆ ಇದರ ಬೆಲೆ : ‘…
ವಿಧ: ಪುಸ್ತಕ ವಿಮರ್ಶೆ
May 05, 2022
ಇನ್ಫೋಸಿಸ್ ಪ್ರತಿಷ್ಠಾನದ ಸಮಾಜಮುಖಿ ಕೆಲಸಕಾರ್ಯಗಳಿಂದಾಗಿ ಸುಧಾ ಮೂರ್ತಿಯವರು ಒಳ್ಳೆಯ ಹೆಸರು ಗಳಿಸಿದ್ದಾರೆ. ತನ್ನ ಇತರ ಬರಹಗಳ ಜೊತೆಗೆ, ಅಲ್ಲಿನ ಕೆಲಸದ ಸಂದರ್ಭಗಳಲ್ಲಿ ತನಗಾದ ಅನುಭವಗಳನ್ನೂ ಬರಹಗಳಾಗಿಸಿ ಸಾಹಿತಿಯಾಗಿಯೂ ಹೆಸರು ಗಳಿಸಿದ್ದಾರೆ.
ಇದರಲ್ಲಿನ ಬಹುಪಾಲು ಬರಹಗಳು ಆ ಅನುಭವಗಳ ಆಧಾರಿತ. ಈ ಬರಹಗಳ ಬಗ್ಗೆ ಮುನ್ನುಡಿಯಲ್ಲಿ ಸುಧಾ ಮೂರ್ತಿಯವರ ನೇರಾನೇರ ಮಾತು ಹೀಗಿದೆ: “ಅನುಭವಗಳು ಎಲ್ಲರಿಗೂ ಆಗುತ್ತಲೇ ಇರುತ್ತವೆ. ಆದರೆ ನನ್ನ ಅನುಭವಗಳೇ ವಿಚಿತ್ರ. ಅದಕ್ಕೆ ನಾನು ಮಾಡುವ ಕೆಲಸವೇ…
ವಿಧ: ಪುಸ್ತಕ ವಿಮರ್ಶೆ
May 05, 2022
ಹಾಸ್ಯ ಬರಹಗಳು ಹಾಗೂ ನಗೆಹನಿಗಳ ರಚನೆಗೆ ಖ್ಯಾತಿ ಪಡೆದ ತೈರೊಳ್ಳಿ ಮಂಜುನಾಥ ಉಡುಪ ಇವರು ಅಗಲಿದ ತಮ್ಮ ಗೆಳತಿ ‘ಶೀಲಾ’ಳ ನೆನಪಿಗೆ ‘ಶೀಲಾಳ ಬೊಂಬಾಟ್ ಜೋಕ್ಸ್'ಗಳು ಪುಸ್ತಕವನ್ನು ಹೊರತಂದಿದ್ದಾರೆ. ಮಂಜುನಾಥ ಉಡುಪರು ತಮ್ಮ ‘ಮೊದಲ ಮಾತು' ಎಂಬ ಮುನ್ನುಡಿಯಲ್ಲಿ ಬರೆಯುವುದು ಹೀಗೆ “ನಮ್ಮ ಪ್ರಕಾಶನದ ಎಂಟನೆಯ ಕೃತಿ ತೀರಾ ಲೇಟಾಗಿ ಹೊರಬರುತ್ತಿದೆ. ಇತೀಚೆಗೆ ಈ ನನ್ನ ಸಾಹಿತ್ಯಮಿತ್ರರ ವಲಯದಲ್ಲಿ ಸ್ವಾರ್ಥಿಗಳೇ ಹೆಚ್ಚಾಗಿ ಕಾಣಸಿಗುತ್ತಿದ್ದಾರೆ. ಈ ಕೃತಿಯಲ್ಲಿ ತೀರಾ ಇತ್ತೀಚೆಗೆ ಪ್ರಕಟವಾದ ನನ್ನ ೫೨…
ವಿಧ: ಪುಸ್ತಕ ವಿಮರ್ಶೆ
May 03, 2022
‘ವಿಶ್ವವಾಣಿ' ಪತ್ರಿಕೆಯ ಪ್ರಾರಂಭದ ದಿನಗಳಿಂದ ‘ತಿಳಿರು ತೋರಣ' ಎಂಬ ವಿಶಿಷ್ಟ ಹೆಸರಿನ ಅಂಕಣ ಬರೆಯುತ್ತಿರುವವರು ಅಮೇರಿಕಾದಲ್ಲಿರುವ ಶ್ರೀವತ್ಸ ಜೋಶಿ. ಜೋಶಿಯವರು ಈ ಹಿಂದೆಯೇ ಒನ್ ಇಂಡಿಯಾ ಕನ್ನಡ ಡಾಟ್ ಕಾಮ್, ವಿಜಯ ಕರ್ನಾಟಕ ಪತ್ರಿಕೆಗಳಿಗೆಲ್ಲಾ ಅಂಕಣ ಬರೆದಿದ್ದಾರೆ. ಪ್ರತಿಯೊಂದು ಅಂಕಣದಲ್ಲೂ ಹೊಸ ವಿಚಾರಗಳನ್ನು ಅಥವಾ ಹಳೆಯ ವಿಚಾರಗಳನ್ನೇ ಹೊಸತನದಲ್ಲಿ ಮೂಡಿಸಿ ಜನವರಿ ೨೦೧೬ರಿಂದ ನಿರಂತರವಾಗಿ ವಿಶ್ವವಾಣಿಗೆ ಬರೆಯುತ್ತಿದ್ದಾರೆ. ಅವರ ಬರಹಗಳಿನ್ನೂ ತಾಜಾ ಆಗಿವೆ ಮತ್ತು ಬೋರ್ ಹೊಡೆಸಿಲ್ಲ…
ವಿಧ: ಪುಸ್ತಕ ವಿಮರ್ಶೆ
April 30, 2022
ಹತ್ತಾರು ಕಿರು ನಾಟಕಗಳನ್ನು ಬರೆದು ಖ್ಯಾತಿ ಪಡೆದ ಪ್ರೊ. ಆರ್. ಎನ್ ಕುಲಕರ್ಣಿ (ಆರ್ ಎನ್ ಕೆ) ಇವರ ಮತ್ತೊಂದು ನಾಟಕದ ಪುಸ್ತಕ ‘ಬೀಗರ ಬಡಾಯಿ'. ಇದೊಂದು ಹಾಸ್ಯಭರಿತ, ವರದಕ್ಷಿಣೆ ಸಮಸ್ಯೆಯ ಮೇಲೆ ಬೆಳಕು ಚೆಲ್ಲುವ ಸಮಸ್ಯಾ ಪ್ರಧಾನ ನಾಟಕ. ರಂಗಸ್ಥಳದಲ್ಲಿ ಸುಮಾರು ೨೦ ರಿಂದ ೩೦ ನಿಮಿಷಗಳಲ್ಲಿ ಮುಗಿದು ಹೋಗುವ ಈ ನಾಟಕವು ಸಮಾಜಕ್ಕೆ ಬಹಳ ಪ್ರಭಾವಶಾಲಿ ಸಂದೇಶವನ್ನು ಕೊಡುತ್ತದೆ.
೭ ಮಂದಿ ಪಾತ್ರಧಾರಿಗಳಿರುವ ಈ ನಾಟಕದಲ್ಲಿ ಮದುಮಗ, ಮದುಮಗಳು, ವರನ ತಂದೆ-ತಾಯಿ, ವರ ಇಬ್ಬರು ಗೆಳೆಯರು ಮತ್ತು…
ವಿಧ: ರುಚಿ
April 28, 2022
ಸೌತೇಕಾಯಿಯನ್ನು ತೆಗೆದುಕೊಂಡು ಅದನ್ನು ಚೆನ್ನಾಗಿ ತೊಳೆದು, ಅದನ್ನು ಸಣ್ಣ ಸಣ್ಣ ತುಂಡುಗಳಾಗಿ ಕತ್ತರಿಸಿ. ಈ ಕತ್ತರಿಸಿದ ತುಂಡುಗಳನ್ನು ಮಿಕ್ಸಿ ಜಾರಿಗೆ ಹಾಕಿ ತರಿ ತರಿಯಾಗಿ ರುಬ್ಬಿಕೊಳ್ಳಿರಿ. ಇದನ್ನು ಒಂದು ಪಾತ್ರೆಗೆ ಹಾಕಿ. ಅದೇ ಮಿಕ್ಸಿ ಜಾರಿಗೆ ಬೆಲ್ಲವನ್ನು ಹಾಕಿ ನೀರು ಹಾಕದೇ ರುಬ್ಬಿಕೊಳ್ಳಿರಿ. ಈ ಮಿಶ್ರಣವನ್ನು ಮೊದಲು ಮಾಡಿ ಇಟ್ಟಿದ್ದ ಸೌತೇಕಾಯಿ ಮಿಶ್ರಣಕ್ಕೆ ಸೇರಿಸಿ. ನಂತರ ತೆಂಗಿನ ಕಾಯಿ ತುರಿಯನ್ನು ಬೆಲ್ಲವನ್ನು ರುಬ್ಬಿದ ಮಿಕ್ಸಿ ಜಾರಿಗೇ ಹಾಕಿ ಸ್ವಲ್ಪ ನೀರು ಸೇರಿಸಿ…
ವಿಧ: ಪುಸ್ತಕ ವಿಮರ್ಶೆ
April 27, 2022
ಬೆಂಗಳೂರಿನಲ್ಲಿ ಆರ್ಕಿಟೆಕ್ಟ್ ಆಗಿರುವ ನಾಗರಾಜ ವಸ್ತಾರೆ ಅವರದು ಕಳೆದೆರಡು ದಶಕಗಳಲ್ಲಿ ಹೊಸಗನ್ನಡದ ಕತೆಗಾರರಲ್ಲಿ ಗಮನಾರ್ಹ ಹೆಸರು. ಕತೆ, ಕವನ ಮತ್ತು ಅಂಕಣ ಬರಹ ಅವರ ಆಸಕ್ತಿ. “ಹಳೆಮನೆ ಕತೆ", “ಬಯಲು ಆಲಯ” ಮತ್ತು “ಪಟ್ಟಣ ಪುರಾಣ” ಅವರ ಅಂಕಣ ಬರಹಗಳು. ನಗರ ಬದುಕಿನ ಒಳತೋಟಿಗಳು, ಸಂಕೀರ್ಣ ಸಂಬಂಧಗಳು ಹಾಗೂ ಮೇಲ್ನೋಟಕ್ಕೆ ಕಾಣಿಸದ ಸೂಕ್ಷ್ಮ ಸಂಗತಿಗಳನ್ನು ಕತೆಗಳನ್ನಾಗಿ ಹೆಣೆಯುವುದರಲ್ಲಿ ಅವರು ಸಿದ್ಧಹಸ್ತರು.
ಇಲ್ಲಿನ 18 ಕತೆಗಳ ಬಗ್ಗೆ ಮುನ್ನುಡಿಯಲ್ಲಿ ಕತೆಗಾರ ನಾಗರಾಜ ವಸ್ತಾರೆ…
ವಿಧ: ಪುಸ್ತಕ ವಿಮರ್ಶೆ
April 26, 2022
ಪೆನ್ ಗ್ವಿನ್ ಬುಕ್ಸ್ ಪ್ರಕಾಶನ ಸಂಸ್ಥೆಯವರು ಆಂಗ್ಲ ಭಾಷೆಯಲ್ಲಿ ಪ್ರಕಟಿಸಿದ ‘ಬ್ಲ್ಯಾಕ್ ಫ್ರೈಡೇ’ ಎಂಬ ನೈಜ ಘಟನಾಧಾರಿತ ಕಾದಂಬರಿಯನ್ನು ಕನ್ನಡಕ್ಕೆ ತಂದವರು ಖ್ಯಾತ ಪತ್ರಕರ್ತರಾದ ರವಿ ಬೆಳಗೆರೆ ಇವರು. ಈ ಪುಸ್ತಕದ ಮೂಲ ವಸ್ತು ಮುಂಬಯಿನಲ್ಲಿ ನಡೆದ ಸರಣಿ ಬಾಂಬ್ ಸ್ಪೋಟ ಮತ್ತು ಆ ನಂತರ ನಡೆದ ಘಟನಾವಳಿಗಳ ವಿವರಗಳು ಪತ್ತೇದಾರಿ ಕಾದಂಬರಿಯಂತೆ ಓದಿಸಿಕೊಂಡು ಹೋಗುತ್ತದೆ.
ಈ ಬಗ್ಗೆ ರವಿ ಬೆಳಗೆರೆಯವರು ತಮ್ಮ ಮಾತಿನಲ್ಲಿ ಹೇಳುವುದು ಹೀಗೆ “ಭಾರತವೆಂಬ ಮಹಾದೈತ್ಯ. ಸಾತ್ವಿಕ ಶಕ್ತಿಯ ಕರಡಿಗೆ…