ಅತ್ಯಾಚಾರಕ್ಕೆ ಕಾರಣ ಸಂಶೋಧನೆ

ಅತ್ಯಾಚಾರಕ್ಕೆ ಕಾರಣ ಸಂಶೋಧನೆ

(ಬೊಗಳೂರು .... ಬ್ಯುರೋದಿಂದ)
ಬೊಗಳೂರು, ಅ.27- ಹೆಚ್ಚುತ್ತಿರುವ ಅತ್ಯಾಚಾರಕ್ಕೆ ಕಾರಣವನ್ನು ಸಂಶೋಧನೆ ಮಾಡಿರುವ ವ್ಯಕ್ತಿಯೊಬ್ಬರಿಗೆ ಅತ್ಯಾಚಾರ ರತ್ನ ಬಿರುದು ನೀಡಲು ನಿರ್ಧರಿಸಲಾಗಿದೆ.

ಮಾಂಸವನ್ನು ಹೊರಗಿಟ್ಟರೆ ಬೆಕ್ಕುಗಳು ದಾಳಿ ಮಾಡಿ ತಿನ್ನದಿರುತ್ತವೆಯೇ ಎಂಬ ಸಿದ್ಧಾಂತವನ್ನು ಮೂಲವಾಗಿಟ್ಟುಕೊಂಡು ಅತ್ಯಂತ ಆಚಾರ ಹೆಚ್ಚುತ್ತಿರುವುದರ ಹಿನ್ನೆಲೆ ಕುರಿತು ಹಗಲು ರಾತ್ರಿ ಯೋಚಿಸಿ ಯೋಚಿಸಿ ಈ ಸಂಶೋಧನೆ ಮಾಡಿರುವುದಾಗಿ ಸಂಶೋಧಕರು ಇಲ್ಲಿ ಹೇಳಿಕೊಂಡಿದ್ದಾರೆ.

ಆದರೆ ಇತ್ತೀಚಿನ ಚಲನವಲನಚಿತ್ರಗಳನ್ನು ನೋಡಿದವರು ಈ ಕಾರಣವನ್ನು ಮೊದಲೇ ಪತ್ತೆ ಹಚ್ಚಿದ್ದರಾದರೂ ಯಾರೂ ಕೂಡ ಬಹಿರಂಗಪಡಿಸಿರಲಿಲ್ಲ. ಇನ್ನು ಕೆಲವರು ಈ ಸಂಶೋಧನೆ ಕುರಿತು ಪೇಟೆಂಟ್‌ಗೆ ಅರ್ಜಿ ಸಲ್ಲಿಸಿದ್ದು, ಪೇಟೆಂಟ್ ಲಭ್ಯವಾದ ಬಳಿಕವಷ್ಟೇ ಬಹಿರಂಗಪಡಿಸಲು ತೀರ್ಮಾನಿಸಿದ್ದರು.ಆದರೆ ಈ ಮಹಾತ್ಮರು ಅಷ್ಟು ಬೇಗ Spilled the beans!. ಇದಕ್ಕಾಗಿ ಅವರಿಗೆ ಬಿದಿರುಪ್ರದಾನ ಮಾಡಲು ಅಖಿಲ ವಿಶ್ವ ಸಕಲ ಮಹಿಳಾ ಸಂಘವು ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.

Bogaleragale.blogspot.com

Rating
No votes yet