ಆರದ ಗಾಯ
ಕೊಡಲಿಯೇಟು ಬಿದ್ದರೂ
ಮರವು ಚಿಗುರಬಹುದು;
ಅಂಬಿನೇಟು ಬಿದ್ದ ಮೇಲೂ
ಗಾಯ ಮಾಯಬಹುದು;
ಕೆಡುಕರ ಕಹಿ ನುಡಿಯ
ಘೋರ ಮಾತಿನೇಟು
ಬಿದ್ದರೆಂದೂ ಮಾಯದು
ಮನಕೆ ಆದ ಏಟು.
ಸಂಸ್ಕೃತ ಮೂಲ:
ಸಂರೋಹತಿ ಶರೈರ್ವಿದ್ಧಂ ವರಂ ಪರಶುನಾ ಹತಂ |
ವಾಚಾ ದುರುಕ್ತಂ ಭೀಭತ್ಸಂ ನ ಸಂರೋಹತಿ ವಾಕ್ಕ್ಷತಮ್ ||
-ಹಂಸಾನಂದಿ
Rating
Comments
ಉ: ಆರದ ಗಾಯ