ಆರದ ಗಾಯ

ಆರದ ಗಾಯ

ಕೊಡಲಿಯೇಟು ಬಿದ್ದರೂ
ಮರವು ಚಿಗುರಬಹುದು;
ಅಂಬಿನೇಟು ಬಿದ್ದ ಮೇಲೂ
ಗಾಯ ಮಾಯಬಹುದು;

ಕೆಡುಕರ ಕಹಿ ನುಡಿಯ
ಘೋರ ಮಾತಿನೇಟು
ಬಿದ್ದರೆಂದೂ ಮಾಯದು
ಮನಕೆ ಆದ ಏಟು.

 

ಸಂಸ್ಕೃತ ಮೂಲ:

ಸಂರೋಹತಿ ಶರೈರ್ವಿದ್ಧಂ ವರಂ ಪರಶುನಾ ಹತಂ |
ವಾಚಾ ದುರುಕ್ತಂ ಭೀಭತ್ಸಂ ನ ಸಂರೋಹತಿ ವಾಕ್‍ಕ್ಷತಮ್ ||

-ಹಂಸಾನಂದಿ

 

Rating
No votes yet

Comments