ಕನ್ನಡ ನಾಡಿನ ಕಬ್ಬಿಗರು -೧ ನಯಸೇನ

ಕನ್ನಡ ನಾಡಿನ ಕಬ್ಬಿಗರು -೧ ನಯಸೇನ

ನಯಸೇನ ( 1112 ) 

 ಈತ ಜಿನ ಕಬ್ಬಿಗ.  'ಧರಮಾಮ್ರುತ' ಈತನ ನೆಗೞ್ಚು. ಬೇಕರನದ/ವ್ಯಾಕರಣದ ಬಗ್ಗೆ ಕೂಡ ಬರೆದಿದ್ದಾನೆ. ಈತನ ಕಬ್ಬದಲ್ಲಿ ' ಮುಳುಗುಂದದೊಳಿರ್ದು.." ಇರುವುದರಿಂದ ಇವನು ಮುಳುಗುಂದದಲ್ಲಿ ಇದ್ದನೆಂದು ತಿಳಿಯಬಹುದು. ಕೆಳಗೆ ಕೊಟ್ಟಿರುವ ಸಾಲುಗಳಿಂದ ತಿಳಿಯುವುದೇನೆಂದರೆ ಈತನ ಹೊತ್ತಿ/ಕಾಲದಲ್ಲಿಯೇ ಕಬ್ಬಿಗರು ಬೇಡದೇ ಇರುವ ಸಕ್ಕದದ ಒರೆಗಳನ್ನು ಬಳಸುತ್ತಿದ್ದರೆಂದು ತಿಳಿಯುತ್ತದೆ.

೧)  ಪೊಸಗನ್ನಡದಿಂ ವ್ಯಾವ|

     ರ್ಣಿಸುವೆಂ ಸತ್ಕೃತಿಯನೆಂದು ಕನ್ನಡಮಂ ಚಿಂ|

     ತಿಸಿ ಕೂಡಲಾಱದಕ್ಕಟ|

     ಮಿಸುಕದ ಸಕ್ಕದಮನಿಕ್ಕುವವನುಂ ಕವಿಯೇ ||

 ತಿಳಿವು: ಕನ್ನಡ ಕಬ್ಬಗಳನ್ನು ಬರೆಯಲು ತೊಡಗಿದರೆ ಅದರಲ್ಲೇ ಬರೆಯಬೇಕು. ಸಕ್ಕದ ಒರೆಗಳನ್ನು ತುಮ್ಬುವುದು ತಪ್ಪು, ಹಾಗೆ ಬರೆದವನನ್ನು ಕಬ್ಬಿಗ ಎನ್ನಬಹುದೇ?

೨) ಸಕ್ಕದಮಂ ಪೇೞ್ವೊಡೆ ನೆಱೆ|

     ಸಕ್ಕದಮಂ ಪೇೞ್ಗೆ  ಸುದ್ದಗನ್ನಡದೊಳ್ ತಂ

     ದಿಕ್ಕುವುದೇ ಸಕ್ಕದಮಂ|

     ತಕ್ಕುದೆ ಬೆರಸಲ್ಕೆ ಘೃತಮುಮಂ ತೈಲಮಂ

ತಿಳಿವು:  ಸಕ್ಕದದಲ್ಲಿ ಹೇಳಬೇಕಾದುದನ್ನ ಸಕ್ಕದದಲ್ಲಿ ಹೇಳಿ/ಬರೆಯಿರಿ/ನೆಗೞ್ಚಿ, ಅದರ ಬದಲು ಸಕ್ಕದವನ್ನು ಕನ್ನಡದ ಕಬ್ಬದಲ್ಲಿ ತಂದಿಕ್ಕಿದರೆ ಎಣ್ಣೆಗೆ ತುಪ್ಪ ಬೆರೆಸಿದಂತಾಗುತ್ತದೆ. ಎಂದೂ ಹೊಂದಲ್ಲ.

[ತಿಳಿವು ತಪ್ಪಿದ್ದರೆ ಮನ್ನಿಸಿ]

ಹೆಚ್ಚಿನ ಓದಿಗೆ ರಾ.ನರಸಿಂಹಾಚಾರ್ಯರ 'ಕರ್ನಾಟಕ ಕವಿ ಚರಿತೆ' ಓದಿರಿ.

Rating
No votes yet

Comments