ಪುಸ್ತಕ ಪರಿಚಯ

ಲೇಖಕರು: Ashwin Rao K P
May 23, 2025
‘ಗತಜನ್ಮ - ಮತ್ತೆರಡು ಕತೆಗಳು’ ಕಥಾ ಸಂಕಲನದಲ್ಲಿರುವ ‘ಗತಜನ್ಮ’ ಕಥೆಯನ್ನು ಎಸ್ ಎಲ್ ಭೈರಪ್ಪನವರು ತಮ್ಮ ಹೈಸ್ಕೂಲ್ ದಿನಗಳಲ್ಲಿ ಬರೆದದ್ದು ಎನ್ನುವುದೇ ಕುತೂಹಲಕಾರಿ ಸಂಗತಿ. ಬೆಳೆಯುವ ಸಿರಿ ಮೊಳಕೆಯಲ್ಲೇ ಎನ್ನುವಂತೆ ಭೈರಪ್ಪನವರು ಇಂದಿನ ದಿನ ಏನು ಸಾಧಿಸಿದ್ದಾರೋ ಅದರ ಪ್ರಾರಂಭ ಆದದ್ದು ಅವರ ಹೈಸ್ಕೂಲ್ ದಿನಗಳಲ್ಲೇ ಎನ್ನಬಹುದು. ಭೈರಪ್ಪನವರ ಇಂದಿನ ಕಾದಂಬರಿಯ ಕಥಾವಸ್ತುಗಳಿಗೆ ಸರಿಸಾಟಿ ಇಲ್ಲ. ಅವರು ಪ್ರತೀ ಕಾದಂಬರಿಗೆ ಮುನ್ನ ಅದಕ್ಕೆ ಬೇಕಾದ ಸೂಕ್ತ ವ್ಯವಸ್ಥೆ ಹಾಗೂ ಆಳವಾದ ಅಧ್ಯಯನವನ್ನು…
ಲೇಖಕರು: Ashwin Rao K P
May 19, 2025
`ಕಪ್ಪು ಹಲ್ಲಿನ ಕಥೆ’ ಉಮೇಶ್ ತೆಂಕನಹಳ್ಳಿ ಅವರ ಕಾದಂಬರಿಯಾಗಿದೆ. ಕೃತಿಯಲ್ಲಿ ಲೇಖಕರು ಹೀಗೆ ಹೇಳಿದ್ದಾರೆ; ನಮ್ಮ ಹಿರಿಯರಿಗೆ ಎಲ್ಲಕ್ಕಿಂತ ಮುಖ್ಯವಾಗಿ ಅನುಭವದ ಜ್ಞಾನ ಹೆಚ್ಚಾಗಿತ್ತು. ಅದಕ್ಕೆ ಇಂದಿಗೂ ಜೀವಂತ ನಿದರ್ಶನಗಳು ಕಣ್ಣ ಮುಂದೆ ನಿಲ್ಲುತ್ತವೆ. ಕೆರೆ ಕಟ್ಟೆಗಳ ಪರಿಕಲ್ಪನೆ, ಎಲ್ಲರೂ ಎಲ್ಲರಿಗೋಸ್ಕರ ಎಂಬ ಸಂತೆಯ ಪರಿಕಲ್ಪನೆ. ದೇಶವಾರು, ಪ್ರಾಂತ್ಯವಾರು ಆಹಾರ ಪದ್ಧತಿ ಇರಬಹುದು. ಹವಾಮಾನಕ್ಕೆ ಅನುಗುಣವಾಗಿ ನಮ್ಮ ಉಡುಗೆ ತೊಡಿಗೆಗಳು, ಕಾಲಕ್ಕೆ ತಕ್ಕಂತೆ ಸಂಪ್ರದಾಯಗಳ ಆಚರಣೆಗಳು,…
ಲೇಖಕರು: addoor
May 18, 2025
ಮಂಡ್ಯದ ಡಾ. ಬೆಸಗರಹಳ್ಳಿ ರಾಮಣ್ಣ ಕನ್ನಡದ ಹೆಸರುವಾಸಿ ಕತೆಗಾರರು. ಇದು ಅವರ ಎರಡನೆಯ ಕಥಾಸಂಕಲನ. ಅವರು 1985ರ ನಂತರ ಬರೆದ ಕತೆಗಳು ಈ ಸಂಕಲನದಲ್ಲಿವೆ (“ಕನ್ನಂಬಾಡಿ” ಎಂಬ ಮೊದಲನೆಯ ಸಂಕಲನದಲ್ಲಿ      ಅವರಿ 1962ರಿಂದ 1985ರ ಅವಧಿಯಲ್ಲಿ ಬರೆದ ಸಣ್ಣ ಕತೆಗಳು ಪ್ರಕಟವಾಗಿದ್ದವು.) ಬೆಂಗಳೂರಿನ ಕ್ರೈಸ್ಟ್ ಕಾಲೇಜಿನ ಕನ್ನಡ ಸಂಘದ ಬೆಳ್ಳಿ ಹಬ್ಬದ ಸಂದರ್ಭದಲ್ಲಿ ಪ್ರಕಟವಾದ ಸಂಕಲನ ಇದು. ಕಥಾಸಂಕಲನದ ಬೆನ್ನುಡಿಯಲ್ಲಿ ಯು. ಆರ್. ಅನಂತಮೂರ್ತಿಯವರು ಬರೆದ ಮಾತುಗಳು ಹೀಗಿವೆ: ಬೆಸಗರಹಳ್ಳಿ…
ಲೇಖಕರು: Ashwin Rao K P
May 16, 2025
ಡಾ. ಅಜಿತ್ ಹರೀಶಿ ಅವರ ನೂತನ ಕವನ ಸಂಕಲನ ‘ತೇಲಿಬಿಟ್ಟ ಆತ್ಮ ಬುಟ್ಟಿ’ ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಕವನ ಸಂಕಲನಕ್ಕೆ ಬೆನ್ನುಡಿಯನ್ನು ಬರೆದಿದ್ದಾರೆ ಗೀತಾ ವಸಂತ. ತಮ್ಮ ಬೆನ್ನುಡಿಯಲ್ಲಿ  “ಅವರು ಹೇಗೆ ಹುಟ್ಟೀತು ಪದ್ಯ ಅಲೆಗಳೇಳದ ಕೊಳದ ಮಧ್ಯ ಎಂದು ಕವಿತೆಯಲ್ಲಿ ಕನವರಿಸುವ ಅಜಿತ್ ಹರೀಶಿಯವರು ಕಾವ್ಯವನ್ನು ಕಾದು ಧೇನಿಸಿ ಕಟ್ಟುವ ಕಸುಬುಗಾರರು. ಹಾಗೆ ಕಟ್ಟಲು ಬೇಕಾದ ದ್ರವ್ಯವಿರುವುದು ನಮ್ಮೊಳಗೇ ಎಂಬ ದಟ್ಟ ಅರಿವು ಅವರ ಬರಹದಲ್ಲಿದೆ. ಒಡಲ ನೂಲಿನಿಂದಲೇ ಜೇಡ ಜಾಲ ನೇಯುವಂತೆ ಒಡಲಲ್ಲಿ…
ಲೇಖಕರು: Ashwin Rao K P
May 14, 2025
“ಪೌಝಿಯಾ ಸಲೀಂರವರ 'ಕುಚುಕು' ಕಥೆ ಹೆಸರಿನಲ್ಲಿಯೇ ಇದೆ. ಸ್ನೇಹಿತರ ಸಾಲುಗಳಲ್ಲಿ ಭಾವನೆಗಳ ಜೊತೆ ಉಕ್ಕಿದ, ಅನುಮಾನದ ನೆರಳಿನಲ್ಲಿ ಮನಸ್ಸನ್ನು ಚಂಚಲಿಸುವ ಗೋಡೆಗಳಿಗೆ ಕಡಿವಾಣ ಹಾಕದೆ ಬದುಕನ್ನು ಬರಡು ಮಾಡಿಕೊಳ್ಳುವುದರ ಜೊತೆಗೆ ಮನಸನ್ನು ಮೌನವಾಗುವ ಪ್ರಶ್ನೆಗಳಾಗಿ ಉಳಿದುಕೊಂಡಿರುತ್ತವೆ. ಈ ಕಥೆಯಲ್ಲಿ ಬರುವ ಸನ್ನಿವೇಶಗಳು ಹೃದಯದ ಅಂತರಂಗಕ್ಕೆ ಹೋಗಿ ಬಡಿಯುವ ಅಲೆಗಳಂತಿವೆ. ಓದುಗರ ಮನಸ್ಸಿನಲ್ಲಿ ಹಾಗೇ ಉಳಿದು ಬಿಡುವ ಪಾತ್ರಗಳು ಯೋಚನೆ ಮಾಡದೆ ತೆಗೆದುಕೊಂಡ ನಿರ್ಧಾರ ಅಂತ್ಯದ ದಾರಿಗೆ ಹತ್ತಿರ…
ಲೇಖಕರು: Ashwin Rao K P
May 12, 2025
ಚೆನ್ನಭೈರಾದೇವಿ, ಪುನರ್ವಸು ಅಂತಹ ಕಾದಂಬರಿಗಳನ್ನು ರಚಿಸಿದ ಅದ್ಭುತ ಕಾದಂಬರಿಕಾರ ಡಾ ಗಜಾನನ ಶರ್ಮ ಅವರು ಮಹಾಮಾಪನದ ಅಪೂರ್ವ ಕಥನವನ್ನು ‘ಪ್ರಮೇಯ’ ಎನ್ನುವ ಕಾದಂಬರಿ ಮೂಲಕ ಹೇಳಲು ಹೊರಟಿದ್ದಾರೆ. ಗಜಾನನ ಶರ್ಮ ಅವರು ಬರೆಯುವ ಕಾದಂಬರಿಗಳು ಇತಿಹಾಸದ ಯಾವುದೋ ಒಂದು ಮೂಲೆಯಲ್ಲಿ ಅಡಗಿರುವ ಸತ್ಯ ಕಥೆಯನ್ನು ಕಾಲ್ಪನಿಕವಾಗಿ ಚಿತ್ರಿಸುತ್ತಾ ಬರುತ್ತವೆ. ಇದೇ ಅವರ ಹೆಗ್ಗಳಿಕೆ. ಈ ಕಾರಣದಿಂದ ಅವರು ಬರೆಯುವ ಕಾದಂಬರಿಗಳು ಕೇವಲ ಅಂಕಿ ಅಂಶಗಳ ಪ್ರಬಂಧವಾಗದೇ, ಸ್ವಾರಸ್ಯಕರವಾದ ಕಾದಂಬರಿಯಾಗುತ್ತದೆ. ಇದೇ…