ಪುಸ್ತಕ ಪರಿಚಯ
ಲೇಖಕರು: addoor
December 02, 2021

ಪ್ರಕಾಶಕರು ಜರಗಿಸಿದ ಯುಗಾದಿ ಕಥಾಸ್ಪರ್ಧೆಯಲ್ಲಿ ಬಹುಮಾನಿತ ೧೩ ಕಥೆಗಳ ಸಂಕಲನ ಇದು. ಈ ಸ್ಪರ್ಧೆಗೆ ಪ್ರಕಾಶಕರಿಗೆ ಬೆಂಗಳೂರಿನ ಜಾಗತಿಕ ಕನ್ನಡಿಗರ ಕೂಟ “ಕಥನ" ಸಹಯೋಗ ನೀಡಿತ್ತು.
ಆ ಸ್ಫರ್ಧೆಗೆ ಸಲ್ಲಿಕೆಯಾದ ೨೨೦ ಕತೆಗಳಲ್ಲಿ ಮೊದಲ ಬಹುಮಾನ ಪಡೆದ ಕತೆ “ನೀವೂ ದಾರ ಕಟ್ಟಿ”. ಫತೇಪುರಸಿಕ್ರಿಗೆ ಪ್ರವಾಸ ಹೋಗಿದ್ದ ದಂಪತಿಗಳಿಗೆ ಸೂಫಿ ಸಂತ ಸಲೀಂ ಕ್ರಿಸ್ತಿಯ ಸಮಾಧಿಯ ಕಿಂಡಿಯನ್ನು ತೋರಿಸಿ, ಪ್ರವಾಸಿ ಗೈಡ್ “….ಮಕ್ಕಳಿಲ್ಲದವರು ಈ ಕಿಂಡಿಗೆ ದಾರ ಕಟ್ಟಿದರೆ ಅವರ ಇಷ್ಟಾರ್ಥ ಪೂರೈಸುತ್ತದಂತೆ. ಸರ್,…
ಲೇಖಕರು: Ashwin Rao K P
November 30, 2021

ಮಹಾಮಂಡಲೇಶ್ವರಿ ರಾಣಿ ಚೆನ್ನಭೈರಾದೇವಿ ಮತ್ತು ಇತರ ಕರಾವಳಿ ರಾಣಿಯರು ಎಂಬ ಪುಸ್ತಕವನ್ನು ಕಮಲಾ ಹಂಪನಾ ಇವರು ಬರೆದಿದ್ದಾರೆ. ಅವರು ತಮ್ಮ ‘ಮೊದಲ ಮಾತು’ ಎಂಬ ಮುನ್ನುಡಿಯಲ್ಲಿ ಉಲ್ಲೇಖಿಸಿರುವಂತೆ “ಸ್ವಾತಂತ್ರ್ಯ ಪೂರ್ವದಲ್ಲಿ ತುಳುನಾಡು ಮದರಾಸು ಪ್ರಾಂತ್ಯಕ್ಕೆ ಸೇರಿತ್ತು. ಭಾಷಾವಾರು ಪ್ರಾಂತ್ಯ ರಚನೆಯ ಪುನರ್ ವಿಂಗಡಣೆ ಸಂದರ್ಭದಲ್ಲಿ ‘(ಅವಿಭಜಿತ) ದಕ್ಷಿಣ ಕನ್ನಡ ಜಿಲ್ಲೆ’ ಎಂಬ ಹೆಸರಿನಿಂದ ಕನ್ನಡ ನಾಡಿನಲ್ಲಿ ವಿಲೀನವಾಯಿತು. ಮತ್ತೆ ಇತ್ತೀಚೆಗೆ ೨೦೦೨ರಲ್ಲಿ ಜಿಲ್ಲೆಗಳ ಮರುಜೋಡಣೆ…
ಲೇಖಕರು: Ashwin Rao K P
November 27, 2021

‘ಮೋಡದೊಡನೆ ಮಾತುಕತೆ' ಈ ಪುಸ್ತಕವು ಹೊಸಗಾಲದ ಆಖ್ಯಾನ-ವ್ಯಾಖ್ಯಾನ ಸಮೇತ ಕಾಳಿದಾಸನ ‘ಮೇಘದೂತ'ದ ಕನ್ನಡ ಭಾವಾನುವಾದವಾಗಿದೆ. ಖ್ಯಾತ ಬರಹಗಾರರಾದ ಅಕ್ಷರ ಕೆ.ವಿ. ಇವರು ಬರೆದ ಪುಸ್ತಕಕ್ಕೆ ಡಾ. ಶ್ರೀರಾಮ ಭಟ್ ಇವರು ಹಿನ್ನುಡಿ ಬರೆದಿದ್ದಾರೆ. ಅಕ್ಷರ ಕೆ.ವಿ. ಅವರು ತಮ್ಮ ಮಾತಿನಲ್ಲಿ ಹೇಳುವುದು ಹೀಗೆ “ ಮೇಘದೂತ ಕಾವ್ಯವು ತನ್ನ ಹಿನ್ನಲೆಯಲ್ಲಿ ಇರಬಹುದಾದ ಸಾಮಾಜಿಕ-ಸಾಂಸ್ಕೃತಿಕ ನಿಲುವುಗಳನ್ನು ಅಡಗಿಸಿ ಇಟ್ಟುಕೊಂಡಿದೆ. ಮಾತ್ರವಲ್ಲ, ತನ್ನ ಕಾವ್ಯಸ್ವರೂಪದಿಂದಾಗಿ ಅಂಥ ಹಿನ್ನಲೆಗಳನ್ನು ಹುಡುಕಿ…
ಲೇಖಕರು: Ashwin Rao K P
November 25, 2021

ಬಾಂಗ್ಲಾದೇಶದ ನೊಬೆಲ್ ಪ್ರಶಸ್ತಿ ವಿಜೇತ ಅರ್ಥಶಾಸ್ತ್ರಜ್ಞ ಮಹಮದ್ ಯೂನಸ್ ಅವರ ಜೀವನ ಚರಿತ್ರೆಯೇ ‘ಬಡವರ ಬಾಪು' ಎಂಬ ಪುಸ್ತಕ. ಈ ಪುಸ್ತಕವನ್ನು ಖ್ಯಾತ ಬರಹಗಾರ ಎನ್. ಜಗದೀಶ್ ಕೊಪ್ಪ ಅವರು ಕನ್ನಡಕ್ಕೆ ಅನುವಾದ ಮಾಡಿದ್ದಾರೆ.
‘ಬಡತನವೆಂದರೆ ಶಾಪವಲ್ಲ, ಅದೊಂದು ವ್ಯವಸ್ಥೆ. ನಮ್ಮನ್ನಾಳುವ ಸರ್ಕಾರಗಳು ಮತ್ತು ಸಮಾಜದ ಕುರುಡುತನದಿಂದಾಗಿ ಸೃಷ್ಟಿಯಾಗಿರುವ ವ್ಯವಸ್ಥೆ ಎಂದು ಜಾಗತಿಕ ಬಡತನಕ್ಕೆ ಹೊಸ ಭಾಷ್ಯ ಬರೆದ ಬಾಂಗ್ಲಾದೇಶದ ನೊಬೆಲ್ ಪ್ರಶಸ್ತಿ ವಿಜೇತ ಅರ್ಥಶಾಸ್ತ್ರಜ್ಞ ಪ್ರೊ.ಮಹಮದ್ ಯೂನಸ್…
ಲೇಖಕರು: addoor
November 25, 2021

ಉತ್ತರ ಕರ್ನಾಟಕದ ಕನ್ನಡ ಭಾಷೆಯ ಸೊಗಡು ತಿಳಿಯಬೇಕಾದರೆ ಓದಬೇಕು ಈ ಪುಸ್ತಕ. ಸರಾಗವಾಗಿ, ಸುಲಲಿತವಾಗಿ ಆಡುಮಾತಿನಲ್ಲಿ ಹಲವು ಸಂಗತಿಗಳ ಬಗ್ಗೆ ಬರೆದಿದ್ದಾರೆ ಪ್ರಶಾಂತ ಆಡೂರ.
ಈಗಲೂ ಈ ಧಾಟಿಯಲ್ಲಿ ದಿನಪತ್ರಿಕೆಯಲ್ಲಿ ಅಂಕಣ ಬರೆಯುತ್ತಿರುವ ಪ್ರಶಾಂತ ಆಡೂರ, ತಾನು ಹೇಗೆ ಬರೆಯಲು ಶುರು ಮಾಡಿದೆ ಎಂದು ಪುಸ್ತಕದ ಕೊನೆಯ ಬರಹ "ಭಿಡೆ ಬಿಟ್ಟ ಬರದಿದ್ದೆ ಬರಹ"ದಲ್ಲಿ ಹೀಗೆ ಹಂಚಿಕೊಂಡಿದ್ದಾರೆ: "ನನ್ನ ಜೀವನದಾಗ ನಾ ಕನ್ನಡದಾಗ ಬರಿತೇನಿ ಎಂತ ಎಂದೂ ಅನ್ಕೊಂಡಿದ್ದಿಲ್ಲ……. ಒಂದ ದಿವಸ ಮಧ್ಯಾಹ್ನ ನಾನೂ…
ಲೇಖಕರು: Ashwin Rao K P
November 23, 2021

೧೮೫೯ರ ನವೆಂಬರ್ ನಲ್ಲಿ ಜೀವ ವಿಜ್ಞಾನಿ ಚಾರ್ಲ್ಸ್ ಡಾರ್ವಿನ್ ಅವರ ‘ಜೀವ ಸಂಕುಲಗಳ ಉಗಮ' ಎಂಬ ಸಂಶೋಧನಾ ಗ್ರಂಥ ಬಿಡುಗಡೆಯಾಯಿತು. ಇದರ ಎಲ್ಲಾ ೧೨೫೦ ಪ್ರತಿಗಳು ಮೊದಲನೇ ದಿನವೇ ಖರ್ಚಾದುವಂತೆ. ಮುಂದೆ ಮಾನವ ಜ್ಞಾನ ಭಂಡಾರಕ್ಕೆ ಅಮೂಲ್ಯವಾದ ಕೊಡುಗೆ ಎನಿಸಿಕೊಂಡ ಈ ಗ್ರಂಥ ಅಂದು ಇಡೀ ಯುರೋಪ್ ದೇಶವನ್ನು ತಲ್ಲಣಗೊಳಿಸಿತು. ಈ ಜಗತ್ತು ಒಂದು ಪರಮ ಶಕ್ತಿಯ ಸೃಷ್ಟಿ ಎಂಬ ಸೃಷ್ಟಿವಾದದ ಪರವಾಗಿ ಮತ್ತು ವಿರುದ್ಧವಾಗಿ ನಡೆದುಕೊಂಡು ಬಂದಿರುವ ವಾದ-ವಿವಾದಗಳ ಹಿನ್ನಲೆಯಲ್ಲಿ ಇದೊಂದು ಮಹತ್ವದ…