ಪುಸ್ತಕ ಪರಿಚಯ
ಲೇಖಕರು: Ashwin Rao K P
November 09, 2021

‘ನರರಾಕ್ಷಸ' ಪುಸ್ತಕವನ್ನು ಬರೆದವರು ಪತ್ತೇದಾರಿ ಕಾದಂಬರಿಯ ಪಿತಾಮಹರಾದ ಎನ್. ನರಸಿಂಹಯ್ಯನವರು. ಕಡಿಮೆ ಓದಿದ್ದರೂ ನೂರಾರು ಪತ್ತೇದಾರಿ ಕಾದಂಬರಿಗಳನ್ನು ಬರೆದಿರುವ, ಹಲವು ದಶಕಗಳ ಹಿಂದೆ ಸಾಮಾನ್ಯರಿಗೆ ಓದುವ ಗೀಳನ್ನಂಟಿಸಿದ ಮತ್ತು ಅವರಲ್ಲಿ ಅನೇಕರನ್ನು ಬರಹಗಾರರನ್ನಾಗಿ ರೂಪಿಸಿದ ಖ್ಯಾತಿ ಇವರದ್ದು. ಅಕ್ಷರ ಸೌಲಭ್ಯವಂಚಿತ ಕುಟುಂಬದಿಂದ ಬಂದ ಇವರ ಬರಹಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಟಿತ ಗೌರವ ಪ್ರಶಸ್ತಿ ದೊರೆತಿದೆ. ಇಷ್ಟೊಂದು ಪುಸ್ತಕಗಳನ್ನು ಬರೆದರೂ ಬಡತನದಿಂದಲೇ ಬದುಕಿ…
ಲೇಖಕರು: ಬರಹಗಾರರ ಬಳಗ
November 08, 2021

‘ಗಾಲಿಬ್ ಸ್ಮೃತಿ - ಗಜಲ್ ಗುಲ್ದಸ್ಥ’ ಇದು ಡಾ. ಮಲ್ಲಿನಾಥ ತಳವಾರರ ಪ್ರಥಮ ಗಜಲ್ ಸಂಕಲನ. ಕಲಬುರಗಿಯ ನೂತನ ಪದವಿ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕ ರಾಗಿರುವ ಇವರು ಈಗಾಗಲೇ 12 ಕೃತಿಗಳನ್ನು ಸಾಹಿತ್ಯ ಸರಸ್ವತಿಗೆ ಅರ್ಪಿಸುವ ಮೂಲಕ ಪರಿಚಿತರಾದವರು. ಆದರೆ ಆದಕ್ಕೂ ಹೆಚ್ಚಾಗಿ ಅವರು ಸಹೃದಯರನ್ನು ತಲುಪಿದ್ದು ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಚಿರಪರಿಚಿತರಾಗಿದ್ದು ಗಜಲ್ ಕಾರರಾಗಿ. ಅಧ್ಯಯನಪೂರ್ಣ ಬರೆವಣಿಗೆಯಲ್ಲಿ ತೊಡಗಿದ ಡಾ. ತಳವಾರರು ಸಾಕಷ್ಟು ಗಜಲ್ಗಳನ್ನು ರಚಿಸಿದ್ದರೂ ಗಜಲ್ ಸಂಕಲನ…
ಲೇಖಕರು: Ashwin Rao K P
November 06, 2021

ಖ್ಯಾತ ನಾಟಕಕಾರರಾಗಿದ್ದ ‘ಸಂಸ' ಅವರ ಜೀವನಾಧಾರಿತ ಕಾದಂಬರಿ ಇದು. ಈ ಕಾದಂಬರಿಗೆ ಖ್ಯಾತ ಬರಹಗಾರ ನವದೆಹಲಿಯ ಪ್ರೇಮಶೇಖರ ಇವರು ಮುನ್ನುಡಿಯನ್ನು ಬರೆದಿದ್ದಾರೆ. ಅವರ ಪ್ರಕಾರ ಈ ಕೃತಿ ‘ಯಶಸ್ವೀ ನಾಟಕಕಾರನ ಬದುಕೇ ಯಶಸ್ವೀ ನಾಟಕವಾಗಬಹುದಾದ ಸಾಧ್ಯತೆಯನ್ನು ಕಾಣಿಸುವ ಕಾದಂಬರಿ' ಎಂಬ ಸರ್ಟಿಫಿಕೇಟ್ ನೀಡಿದ್ದಾರೆ. ಅವರು ಹೀಗೆ ಬರೆಯುತ್ತಾರೆ “ಕಳೆದ ಶತಮಾನದ ಕನ್ನಡ ಸಾಂಸ್ಕೃತಿಕ ಲೋಕ ಕಂಡ ಅತ್ಯಂತ ಪ್ರತಿಭಾನ್ವಿತ, ಸ್ವಾಭಿಮಾನಿ ಹಾಗೂ ತನ್ನ ರಹಸ್ಯಮಯ ಜೀವನಶೈಲಿಯಿಂದ ಬದುಕಿದ್ದಾಗಲೇ…
ಲೇಖಕರು: Ashwin Rao K P
November 04, 2021

ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ಕುರಿತಾದ ಪುಸ್ತಕವಿದು. ಪುಸ್ತಕದ ಬೆನ್ನುಡಿಯಲ್ಲಿ “ಭಾರತೀಯ ಕ್ರಿಕೆಟ್ ರಂಗದ ‘ಬೃಹತ್ ಗೋಡೆ' ಎಂದು ಎಲ್ಲರಿಂದಲೂ ಮೆಚ್ಚುಗೆ ಪಡೆದಿರುವ ರಾಹುಲ್ ದ್ರಾವಿಡ್ ಕ್ರಿಕೆಟ್ ಪ್ರೇಮಿಗಳಿಗೆ ಅರ್ಹ ಮಾದರಿಯಾಗಿದ್ದಾರೆ. ಕ್ರಿಕೆಟ್ ಆಟವನ್ನು ಅದ್ಭುತ ಸ್ಥೈರ್ಯದಿಂದ ಹಾಗೂ ಬದ್ಧತೆಯಿಂದ ಆಡಿ ದೇಶದ ಯುವ ಪೀಳಿಗೆಯ ಆರಾಧ್ಯ ಧೈವವಾಗಿದ್ದಾರೆ. ಎರಡು ವಿಶ್ವಕಪ್ ಪಂದ್ಯಾವಳಿಗಳಲ್ಲಿ ವಿಕೆಟ್ ಕೀಪಿಂಗ್ ಮಾಡಿರುವ ರಾಹುಲ್ ಕೆಲಬಾರಿ ಪ್ರಾರಂಭಿಕ ಬ್ಯಾಟಿಂಗ್…
ಲೇಖಕರು: Ashwin Rao K P
November 02, 2021

'ಹಾಯ್ ಬೆಂಗಳೂರು' ಪತ್ರಿಕೆಯ ಸಂಪಾದಕರಾದ ರವಿ ಬೆಳಗೆರೆಯವರು ಬರೆದ ಅಂಕಣ ಬರಹವೇ ‘ಬಾಟಮ್ ಐಟಮ್'. ಈ ಸರಣಿಯ ಏಳನೇಯ ಹೊತ್ತಗೆ ಇದು. ಪುಟ್ಟ ಪುಟ್ಟ ಅಧ್ಯಾಯಗಳಲ್ಲಿ ಜೀವನದ ಮೌಲ್ಯವನ್ನು ಹೆಚ್ಚಿಸುವ ಚೇತೋಹಾರಿ ಬರಹಗಳು ಇಲ್ಲಿವೆ. ರವಿ ಬೆಳಗೆರೆಯವರು ತಮ್ಮ ಬೆನ್ನುಡಿಯಲ್ಲಿ “ಅಂಥದೊಂದು ಡಿಸೈರ್ ನಿಮ್ಮಲ್ಲಿ ಕುದಿಯದೆ ಹೋದರೆ ನೀವು ಏನನ್ನೂ ಸಾಧಿಸಲಾರಿರಿ. ಇದ್ದಕ್ಕಿದ್ದಂತೆ ಕೋಟ್ಯಾಧೀಶರಾದವರ ಮಾತು ಬಿಟ್ಟು ಬಿಡಿ, ಅದು ಯಾರೋ ಕೆಲವರ ವಿಷಯದಲ್ಲಿ ಸತ್ಯವಾಗಿರಬಹುದು. ಅಂಥವರು ದೇವರು-ಅದೃಷ್ಟ…
ಲೇಖಕರು: addoor
November 02, 2021

ಕನ್ನಡದ ಮಕ್ಕಳಿಗಾಗಿ ಕಥೆಗಳನ್ನು ಬರೆದ ಮೊದಲಿಗರಲ್ಲಿ ಪ್ರಮುಖರು ಪಂಜೆ ಮಂಗೇಶರಾಯರು. ೧೯೭೩ರಲ್ಲಿ ಮೊದಲ ಸಲ ಮುದ್ರಣವಾದ ಈ ಪುಸ್ತಕದ ಎರಡನೆಯ ಮುದ್ರಣವಾದದ್ದು ೨೦೧೫ರಲ್ಲಿ (೪೨ ವರುಷಗಳ ನಂತರ).
ಅವರು ಮಕ್ಕಳ ಕಥೆಗಳನ್ನು ಬರೆದು ಸುಮಾರು ನೂರು ವರುಷಗಳಾಗಿದ್ದರೂ ಇಂದಿಗೂ ಅವು ಚೇತೋಹಾರಿ. ಇದರಲ್ಲಿವೆ ೧೬ ಮಕ್ಕಳ ಕಥೆಗಳು. ಒಂದಕ್ಕಿಂತ ಒಂದು ಚಂದದ ಕತೆಗಳು. ಇಂಗ್ಲಿಷಿನ ಮಕ್ಕಳ ಕಥೆಗಳನ್ನು ಓದಿ ಬೆಳೆಯುತ್ತಿರುವ ಇಂದಿನ ತಲೆಮಾರಿನ ಕನ್ನಡದ ಮಕ್ಕಳು ಈ ಕಥೆಗಳನ್ನೊಮ್ಮೆ ಓದಬೇಕು. ಮಕ್ಕಳ…