ಪುಸ್ತಕ ಪರಿಚಯ

ಲೇಖಕರು: Ashwin Rao K P
June 12, 2021
“ಆರು ತಿಂಗಳ ಕಾಲ ಸತತವಾಗಿ ಮನಸ್ಸನ್ನು ಕೇಂದ್ರೀಕರಿಸಿ, ಅಡಿಗರ ಕವನಗಳನ್ನು ಮನನ ಮಾಡಿಕೊಂಡು, ಅವುಗಳ ಅರ್ಥವಂತಿಕೆಯನ್ನು ಕಂಡುಕೊಳ್ಳುತ್ತ, ಆಲೋಚಿಸಿದ್ದನ್ನು ಸ್ಪಷ್ಟವಾಗುವಂತೆ ಬರೆಯಲಿಕ್ಕೆ ಹಲವು ಬಾರಿ ಪ್ರಯತ್ನಿಸಿ, ಮತ್ತೆ ಮತ್ತೆ ತಿದ್ದುತ್ತ ಈ ಮಹಾಪ್ರಬಂಧವನ್ನು ಸಿದ್ಧ ಪಡಿಸುವುದಕ್ಕೆ ಅಣ್ಣಮ್ಮನವರು ಪಟ್ಟ ಪರಿಶ್ರಮ ಅಷ್ಟಿಷ್ಟಲ್ಲ. ಇಂಥ ಪರಿಶ್ರಮವನ್ನು ಕಾಲೇಜಿನ ಉಪನ್ಯಾಸಕರು ಜೀವನದಲ್ಲಿ ಒಮ್ಮೆ ತೆಗೆದುಕೊಂಡರೆ, ಅವರು ತೋರಿಸಿದ ಧಾರಣ ಶಕ್ತಿ, ಧೀಮಂತಿಕೆ ಅವರದ್ದಲ್ಲ ಅನ್ನಿಸುವುದು…
1
ಲೇಖಕರು: Ashwin Rao K P
June 10, 2021
ಪತ್ರಕರ್ತ ಲೇಖಕ ಕೆ.ಗಣೇಶ್ ಕೋಡೂರು ಅವರ ಪುಟ್ಟ ಪುಸ್ತಕವೇ ‘ ಒನ್ ಮಿನಿಟ್ ಸಕ್ಸಸ್'. ಲೇಖಕರ ಪ್ರಕಾರ ಬದುಕಿನ ಅತಿ ದೊಡ್ಡ ಗೆಲುವನ್ನು ಆ ಕೊನೆಯ ಒಂದು ನಿಮಿಷವೇ ನಿರ್ಧರಿಸುತ್ತದೆ. ಒಂದು ನಿಮಿಷವೆಂದರೆ ಅದು ಕೇವಲ ಅರವತ್ತು ಸೆಕೆಂಡುಗಳಲ್ಲ. ಬರೀ ಅರವತ್ತು ಸೆಕೆಂಡುಗಳಲ್ಲಿ ಏನು ಮಾಡಲಿಕ್ಕೆ ಸಾಧ್ಯ ಎಂದುಕೊಂಡು ಸುಮ್ಮನುಳಿದು ಬಿಟ್ಟಿರೋ, ಅದೇ ಸಮಯ ನಿಮ್ಮ ಬಳಿ ಮುಂದೆ ಅರವತ್ತು ವರ್ಷಗಳ ಪೆನಾಲ್ಟಿ ಕೇಳುತ್ತದೆ. ಅದೇ ನೀವು ಈ ಒಂದು ನಿಮಿಷವನ್ನೂ ಸುಮ್ಮನೆ ಬಿಡದೇ ಇಟ್ಟುಕೊಂಡ ಟಾರ್ಗೆಟ್ಟನ್ನು…
ಲೇಖಕರು: Ashwin Rao K P
June 08, 2021
ಯೋಗರಾಜ್ ಭಟ್ ನಿರ್ದೇಶನದ, ಗಣೇಶ್ ಹಾಗೂ ಪೂಜಾ ಗಾಂಧಿ ಅಭಿನಯದ ‘ಮುಂಗಾರು ಮಳೆ' ಸಿನೆಮಾ ಬಿಡುಗಡೆಯಾಗಿ, ಸೂಪರ್ ಹಿಟ್ ಆದದ್ದು ಈಗ ಇತಿಹಾಸ. ಆ ಸಮಯದಲ್ಲಿ ಮಳೆಯಲ್ಲಿ ನೆನೆಯುತ್ತಾ, ಸುಂದರ ಪರಿಸರದಲ್ಲಿ ವಿಹರಿಸುತ್ತಾ, ಕರ್ಣ ಮನೋಹರವಾದ ಹಾಡುಗಳನ್ನು ಕೇಳುತ್ತಾ ಆನಂದಿಸಿದ್ದು ಈಗ ನೆನಪಾಗುತ್ತದೆ. ‘ಪ್ರೀತಿ ಮಧುರ ತ್ಯಾಗ ಅಮರ' ಎಂದು ಹೇಳುವ ಕೊನೇ ದೃಶ್ಯ ಬಹುತೇಕರ ಕಣ್ಣಂಚನ್ನು ಒದ್ದೆ ಮಾಡಿದ್ದು ಸುಳ್ಳಲ್ಲ. ಮುಂಗಾರು ಮಳೆ ಸಿನೆಮಾದ ಹಿಂದಿನ ಕಥೆಯನ್ನು ನಿರ್ದೇಶಕ ಯೋಗರಾಜ್ ಭಟ್ ಅವರು…
June 07, 2021
ನಾಡಿನ ಖ್ಯಾತ ಸಾಹಿತಿವರೇಣ್ಯರಾದವರಿಂದ ರಚಿಸಲ್ಪಟ್ಟ ೬೪ ಶ್ರೇಷ್ಠ ಕವನಗಳು, ಕವಿಕಾವ್ಯ ಪರಿಚಯ ಇವುಗಳನ್ನು ಒಳಗೊಂಡ ಹೊತ್ತಗೆಯೇ ‘ನನ್ನದು ಈ ಕನ್ನಡ ನಾಡು'. ಕನ್ನಡ ನಾಡು ನುಡಿಯ ಬಗ್ಗೆ ಯುವಜನರಲ್ಲಿ ಆಸಕ್ತಿ ಮೂಡಿಸಬೇಕೆಂಬ ಉದ್ದೇಶದಿಂದ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹೊರತಂದ ಕವನಗಳ ಗುಚ್ಛವಿದು. ಮುನ್ನುಡಿ,ಹಿನ್ನುಡಿ ಎಂದು ಪ್ರತ್ಯೇಕವಾಗಿ ಇಲ್ಲ. ಪ್ರಧಾನ ಸಂಪಾದಕರಾದ ಬಿ.ಎಂ.ಇದಿನಬ್ಬ ಇವರೇ ಪುಸ್ತಕವನ್ನು ಹೊರತಂದ ಆಶಯವನ್ನು ಬರೆದಿರುತ್ತಾರೆ. ನಮ್ಮ ಕನ್ನಡ ನಾಡು ನುಡಿಗೆ ಈಗ ಒದಗಿರುವ…
ಲೇಖಕರು: Ashwin Rao K P
June 05, 2021
'ಸರದಾರ' ಪುಸ್ತಕವು ಹೆಸರೇ ಹೇಳುವಂತೆ ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಜೀವನದ ಮೇಲೆ ಚಿತ್ರಿತವಾಗಿದೆ. ಖ್ಯಾತ ವಾಗ್ಮಿ, ಲೇಖಕ ಚಕ್ರವರ್ತಿ ಸೂಲಿಬೆಲೆ ಇವರ ಲೇಖನಿಯಿಂದ ಹೊರ ಬಂದ ಹೊತ್ತಗೆ ಇದು. ಸರ್ದಾರ್ ಪಟೇಲರ ಬಗ್ಗೆ ಹತ್ತು ಹಲವಾರು ಪುಸ್ತಕಗಳು ಹೊರಬಂದಿವೆ. ಆದರೂ ಚಕ್ರವರ್ತಿಯವರ ಬರವಣಿಗೆ ಧಾಟಿ ಬಹು ಸುಂದರ ಮತ್ತು ಅಪರೂಪ. ಸರ್ದಾರ್ ಪಟೇಲರ ಬಗ್ಗೆ ಅವರು ಬರೆದ ಬೆನ್ನುಡಿ ಹೀಗಿದೆ “ಹಾರೊಲ್ಡ್ ಮ್ಯಾಕ್ ಮಿಲನ್ (ಬ್ರಿಟೀಷ್ ಪ್ರೀಮಿಯರ್) ವೇವೆಲ್ಲರ ಬಳಿ ಒಂದು ಮಾತು…
ಲೇಖಕರು: Ashwin Rao K P
June 03, 2021
‘ಕೆಫೆ ಕಾಫಿ ಡೇ’ ಎಂಬ ಸಂಸ್ಥೆಯ ಮಾಲೀಕ ಸಿದ್ಧಾರ್ಥ್ ಮಂಗಳೂರಿನ ನೇತ್ರಾವತಿ ನದಿಯ ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡದ್ದು ೨೦೧೯ರ ದೊಡ್ದ ಸಂಗತಿ. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಸಿದ್ಧಾರ್ಥ ಪುಟ್ಟದಾದ ‘ಕೆಫೆ ಕಾಫಿ ಡೇ’ ಎಂಬ ಅಂಗಡಿಯನ್ನು ತೆರೆದರು. ಅದು ಅವರ ಭಾಗ್ಯದ ಬಾಗಿಲೇ ತೆರೆಯಿತು. ಅದರ ಉನ್ನತಿಯೇ ಅವರ ಸಾವಿಗೂ ಕಾರಣವಾದದ್ದು ಮಾತ್ರ ದುರಂತವೇ ಸರಿ. ೧೯೯೬ರಲ್ಲಿ ಬೆಂಗಳೂರಿನ ಬ್ರಿಗೇಡ್ ರಸ್ತೆಯಲ್ಲಿ ತಲೆ ಎತ್ತಿದ ಮೊದಲ ‘ಅಡ್ಡಾ’ ಶ್ರೀಮಂತ ಯುವಕ-…