ಪುಸ್ತಕ ಪರಿಚಯ

ಲೇಖಕರು: Shreerama Diwana
January 07, 2021
*ರಾಜಗೋಪಾಲ್ ಎಂ. ಅವರ "ಧ್ಯಾನ, ಮಾತು ಮತ್ತು ಧ್ವನಿ"* ಕರ್ನಾಟಕ ಸಂಘ (ಪುತ್ತೂರು- 574201, ದಕ್ಷಿಣ ಕನ್ನಡ ಜಿಲ್ಲೆ)ವು 2002ರಲ್ಲಿ ಪ್ರಕಾಶಿಸಿದ ಉಡುಪಿ ಹಿರಿಯಡಕದ ರಾಜಗೋಪಾಲ ಎಂ. ಅವರ " ಧ್ಯಾನ, ಮಾತು ಮತ್ತು ಧ್ವನಿ" , "ಹಿಮಾಲಯ - ಯಾತ್ರೆ - ಒಂದು ದರ್ಶನ" ಹಾಗೂ "ರಂಗಾಯಣದ ಗಾಂಧಿ" ಎಂಬ ಮೂರು ಲೇಖನಗಳ ಸಂಕಲನ, " ಧ್ಯಾನ, ಮಾತು ಮತ್ತು ಧ್ವನಿ". 4 + 60 ಪುಟಗಳ ಕೃತಿಯ ಬೆಲೆ 36 ರೂಪಾಯಿ. "ಧ್ಯಾನವೆಂದರೆ, ಏಕಾಂತದಲ್ಲಿ ಕುಳಿತು, ಕಣ್ಣು ಮುಚ್ಚಿ ಏಕಾಗ್ರತೆಯಿಂದ ಯಾವುದೋ ಅಕ್ಷರವನ್ನೋ,…
ಲೇಖಕರು: Ashwin Rao K P
January 05, 2021
ಖೋಟಾ ನೋಟು ರಹಸ್ಯಗಳು ಎಂಬ ಈ ಪುಸ್ತಕವು ಹಳೆಯ ಪುಸ್ತಕವಾದುದರಿಂದ ಹಲವಾರು ವಿಷಯಗಳು ಸ್ವಲ್ಪ ಮಟ್ಟಿಗೆ ಈಗಿನ ಸಮಯಕ್ಕೆ ಸರಿಹೊಂದಲಾರವು. ಆದರೂ ಆಗಿನ ಸಮಯದಲ್ಲಿ ನೋಟುಗಳ ವಿಷಯ ತಿಳಿದುಕೊಳ್ಳಲು ಅನುಕೂಲಕರವಾದ ಸಂಗತಿಗಳನ್ನು ಈ ಪುಸ್ತಕ ಒಳಗೊಂಡಿದೆ. ಖೋಟಾ ನೋಟಿನ ಬಗ್ಗೆ ನಿಮಗಿರುವ ಸಮಸ್ಯೆ ಬಹೆಗರಿಸಲು ಮತ್ತು ಇದರಿಂದ ನಮ್ಮ ದೇಶಕ್ಕಾಗುವ ನಷ್ಟ, ಜನಸಾಮಾನ್ಯರಿಗಾಗುವ ಮೋಸ, ವ್ಯಾಪಾರದಲ್ಲಿ ಭಯ, ಬ್ಯಾಂಕುಗಳಲ್ಲಿ ಅನುಮಾನ, ಪೋಲೀಸರಿಗೆ ಒತ್ತಡ, ಸರ್ಕಾರಿ ನೌಕರರಿಗೆ ಪ್ರತಿಯೊಂದು ನೋಟನ್ನು…
ಲೇಖಕರು: Ashwin Rao K P
January 02, 2021
ವಶೀಕರಣ (Hypnotism) ಎನ್ನುವ ಈ ಕಿರು ಪುಸ್ತಕವನ್ನು ಬರೆದವರು ಡಾ. ಎನ್.ಕಪನೀಪತಯ್ಯನವರು. ಬಹಳ ಹಿಂದೆ ಅಂದರೆ ೧೯೯೪ರಲ್ಲಿ ಮುದ್ರಣ ಕಂಡ ಈ ಪುಸ್ತಕ ಆ ಸಮಯದಲ್ಲಿ ಬಹಳ ಪ್ರಾಮುಖ್ಯತೆ ಪಡೆದಿತ್ತು. ಮಾಟ, ಮಂತ್ರ, ದೆವ್ವ, ಭೂತ ಇತ್ಯಾದಿಗಳನ್ನು ನಂಬುವ ಜನರ ನಡುವೆ ಸಂಮ್ಮೋಹನ ಕ್ರಿಯೆಯ ಬಗ್ಗೆ ಬರೆದಿರುವ ಈ ಪುಸ್ತಕ ತುಂಬಾ ಮಾಹಿತಿ ಪೂರ್ಣವಾಗಿದೆ.  ನಮ್ಮ ನಿತ್ಯ ಜೀವನದಲ್ಲಿ ಸಂಮ್ಮೋಹನ ಎಂಬ ಅಧ್ಯಾಯದಲ್ಲಿ ಲೇಖಕರು ಬರೆದಂತೆ ‘ ಹಿಂದಿನ ಕಾಲದಲ್ಲಿ ಜನಗಳು ನಿತ್ಯ ಸಂತೋಷವಾಗಿದ್ದರು.…
ಲೇಖಕರು: Ashwin Rao K P
December 31, 2020
ಮೂರು ಕೊಲೆಗಳ ಮರ್ಮ ಪುಸ್ತಕವನ್ನು ಬರೆದವರು ಪತ್ತೇದಾರಿ ಕಾದಂಬರಿಯ ಪಿತಾಮಹರಾದ ಎನ್. ನರಸಿಂಹಯ್ಯನವರು. ಕಡಿಮೆ ಓದಿದ್ದರೂ ನೂರಾರು ಪತ್ತೇದಾರಿ ಕಾದಂಬರಿಗಳನ್ನು ಬರೆದಿರುವ, ಹಲವು ದಶಕಗಳ ಹಿಂದೆ ಸಾಮಾನ್ಯರಿಗೆ ಓದುವ ಗೀಳನ್ನಂಟಿಸಿದ ಮತ್ತು ಅವರಲ್ಲಿ ಅನೇಕರನ್ನು ಬರಹಗಾರರನ್ನಾಗಿ ರೂಪಿಸಿದ ಖ್ಯಾತಿ ಇವರದ್ದು. ಅಕ್ಷರ ಸೌಲಭ್ಯವಂಚಿತ ಕುಟುಂಬದಿಂದ ಬಂದ ಇವರ ಬರಹಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಟಿತ ಗೌರವ ಪ್ರಶಸ್ತಿ ದೊರೆತಿದೆ. ಇಷ್ಟೊಂದು ಪುಸ್ತಕಗಳನ್ನು ಬರೆದರೂ ಬಡತನದಿಂದಲೇ…
ಲೇಖಕರು: Ashwin Rao K P
December 29, 2020
ಪತ್ರಕರ್ತ, ಸಂಘಟಕ ಶ್ರೀರಾಮ ದಿವಾಣರದ್ದು ಬಹುಮುಖ ಪ್ರತಿಭೆ. ಅವರೊಬ್ಬ ಹೋರಾಟಗಾರ, ಸಾಮಾಜಿಕ ಕಾರ್ಯಕರ್ತ. ‘ವ್ಯವಸ್ಥೆಯೆಂಬ ಅವ್ಯವಸ್ಥೆ' ಇದು ಶ್ರೀರಾಮ ದಿವಾಣರ ಎರಡನೇ ಪ್ರಕಟಿತ ಲೇಖನಗಳ ಸಂಕಲನ. ಈಗಾಗಲೇ ೩೧ ಆಯ್ದ ಲೇಖನಗಳನ್ನು ‘ಕೃಷ್ಣಾರ್ಪಣ!’ ಎಂಬ ಹೆಸರಿನಲ್ಲಿ ಪುಸ್ತಕ ರೂಪದಲ್ಲಿ ಬಿಡುಗಡೆ ಮಾಡಿದ್ದಾರೆ. ಪ್ರಸ್ತುತ ಈ ಪುಸ್ತಕದಲ್ಲಿರುವ ಲೇಖನಗಳು ೨೦೧೧ ರಿಂದ ೨೦೧೪ರ ನಡುವಿನ ಅವಧಿಯಲ್ಲಿ ಜಯಕಿರಣ ಪತ್ರಿಕೆ, ಹಾಯ್ ಉಡುಪಿ ಮತ್ತು ಉಡುಪಿ ಬಿಟ್ಸ್.ಇನ್ ಇವುಗಳಲ್ಲಿ ಬರೆದ ಅಂಕಣ ಬರಹಗಳು. ೬೧…
ಲೇಖಕರು: Ashwin Rao K P
December 26, 2020
‘ಪಾರಿವಾಳಗಳು’ ಎಂಬ ಲಲಿತ ಪ್ರಬಂಧಗಳನ್ನು ಒಳಗೊಂಡಿರುವ ಪುಸ್ತಕವನ್ನು ಕೈಯಲ್ಲಿ ಓದಲು ಹಿಡಿದುಕೊಂಡಾಗ ನನಗೆ ಅದರ ಕಥಾ ವಸ್ತುವಿನ ಮೇಲೆ ಬಹಳವೇನೂ ಅಪೇಕ್ಷೆಯಿರಲಿಲ್ಲ. ಆದರೆ ಸ್ವಲ್ಪ ಕುತೂಹಲ ಖಂಡಿತಾ ಇತ್ತು. ಇದು ಲೇಖಕರಾದ ವಿಠಲ್ ಶೆಣೈ ಅವರ ಮೊದಲ ಪ್ರಕಟಿತ ಪುಸ್ತಕ. ಈಗಾಗಲೇ ಅವರು ಬಿಟ್ ಕಾಯಿನ್ ಬಗ್ಗೆ ಬರೆದ ‘ನಿಗೂಢ ನಾಣ್ಯ' ಮತ್ತು ‘ಹುಲಿವೇಷ’ ಎಂಬ ಕಥಾ ಸಂಕಲನವನ್ನು ಓದಿ, ಮಾಹಿತಿ ಹಂಚಿಕೊಂಡಿರುವುದರಿಂದ ಅವರ ಮೊದಲ ಪುಸ್ತಕ ಹೇಗಿರಬಹುದು? ಎಂಬುವುದರ ಬಗ್ಗೆ ಕೊಂಚ ಕುತೂಹಲವಿತ್ತು. ಆದರೆ…