ಪುಸ್ತಕ ಪರಿಚಯ
ಲೇಖಕರು: Ashwin Rao K P
October 27, 2020

ಆಫ್ ದಿ ರೆಕಾರ್ಡ್ ಅನ್ನುವುದು ಪತ್ರಕರ್ತರ ವೃತ್ತಿ ಜೀವನದಲ್ಲಿ ಸದಾ ಕೇಳುವ ಪದ. ಸಮಾಜದ ಗಣ್ಯ ವ್ಯಕ್ತಿಗಳು ಪತ್ರಕರ್ತರ ಜೊತೆ ಮಾತನಾಡುವಾಗ ಗುಟ್ಟಾಗಿ ಕೆಲವು ವಿಷಯಗಳನ್ನು ಹೇಳಿ ಬಿಡುತ್ತಾರೆ. ಅವರದ್ದೇ ಓರಗೆಯ ಪತ್ರಕರ್ತರಾದ ಬಿ.ಗಣಪತಿಯವರು ಈ ಪುಸ್ತಕಕ್ಕೆ ಬೆನ್ನುಡಿ ಬರೆದಿದ್ದಾರೆ. ಅದರಲ್ಲಿ ‘ಪತ್ರಕರ್ತರಾದ ಗಣೇಶ್ ಕಾಸರಗೋಡು ಅವರಿಗೆ ವೃತ್ತಿ ಜೀವನದ ಮೂರು ದಶಕಗಳ ಸಂಭ್ರಮ. ಸಿನೆಮಾ ಪ್ರಪಂಚಕ್ಕೆ ಒಬ್ಬ ಬೆರಗುಗಣ್ಣಿನ ಪತ್ರಕರ್ತನಾಗಿ ಅಡಿ ಇಟ್ಟ ಗಣೇಶರು ಇಂದು ಸಿನೆಮಾ ಲೋಕವೇ…
ಲೇಖಕರು: Ashwin Rao K P
October 24, 2020

‘ಕೂರ್ಗ್ ರೆಜಿಮೆಂಟ್’ ಕಥಾ ಸಂಕಲನವು ನಿವೃತ್ತ ಮೇಜರ್ ಡಾ. ಕುಶ್ವಂತ್ ಕೋಳಿಬೈಲ್ ಇವರ ಮೊದಲ ಕೃತಿ. ಕೊಡಗಿನ ಭಾಗಮಂಡಲದಲ್ಲಿ ಜನಿಸಿದ ಇವರು ತಮ್ಮ ಬಾಲ್ಯವನ್ನು ಭಾಗಮಂಡಲದಲ್ಲೇ ಕಳೆದರು. ನಂತರದ ಶಾಲಾ ದಿನಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಮುಗಿಸಿದರು. ಮಂಗಳೂರಿನ ಫಾದರ್ ಮುಲ್ಲರ್ಸ್ ಮೆಡಿಕಲ್ ಕಾಲೇಜಿನಲ್ಲಿ ವೈದ್ಯಕೀಯ ಪದವಿ ಪಡೆದ ಕುಶ್ವಂತ್, ೨೦೦೯ರಲ್ಲಿ ಭಾರತೀಯ ಸೇನೆಯ ಆರ್ಮಿ ಮೆಡಿಕಲ್ ಕೋರ್ ವಿಭಾಗಕ್ಕೆ ಸೇರಿಕೊಳ್ಳುತ್ತಾರೆ. ಭಾರತದ ಗಡಿಭಾಗಗಳಲ್ಲಿ ಇವರು ಸಲ್ಲಿಸಿದ ಸೇವೆ…
ಲೇಖಕರು: Shreerama Diwana
October 22, 2020

*ಡಾ. ರಮಾನಂದ ಬನಾರಿಯವರ ಆತ್ಮ ವೃತ್ತಾಂತ "ಸವೆಯದ ದಾರಿ"*
ಡಾ. ರಮಾನಂದ ಬನಾರಿಯವರ ಆತ್ಮ ವೃತ್ತಾಂತ " ಸವೆಯದ ದಾರಿ"ಯನ್ನು ಮೈಸೂರಿನ ತಾರಾ ಪ್ರಿಂಟ್ಸ್ 2017 ರಲ್ಲಿ ಪ್ರಕಾಶಿಸಿದೆ. 4 + 24 + 288 ಪುಟಗಳ, 250 ರೂಪಾಯಿ ಬೆಲೆಯ ಈ ಕೃತಿಗೆ ಎಡನೀರು ಮಠದ ಕೇಶವಾನಂದ ಭಾರತಿ ಸ್ವಾಮೀಜಿಯವರ ಶುಭನುಡಿ (ಮೌಲ್ಯದ ಹೃದಯವಂತಿಕೆಯ ಆತ್ಮ ವೃತ್ತಾಂತ), ಪ್ರೊ.ಹಂಪ ನಾಗರಾಜಯ್ಯರ ಮುನ್ನುಡಿ (ಸುಶೋಭಿತ ಆತ್ಮಕಥನ), ಕಾಲೇಜು ಉಪನ್ಯಾಸಕರಾದ ಟಿ. ಎ. ಎನ್. ಖಂಡುಗೆಯವರ ಒಳ ನುಡಿ ("ತಿಳಿ" ನೀರಿನಲ್ಲಿ ತೇಲಿ…
ಲೇಖಕರು: Ashwin Rao K P
October 19, 2020

ಜೇನು ಕಲ್ಲಿನ ರಹಸ್ಯ ಕಣಿವೆ ಇದು ಮಲೆನಾಡಿನ ರೋಚಕ ಕತೆಗಳು ಸರಣಿಯ ನಾಲ್ಕನೇ ಭಾಗದ ಪುಸ್ತಕ. ಎಂದಿನಂತೆ ಲೇಖಕರಾದ ಗಿರಿಮನೆ ಶ್ಯಾಮರಾವ್ ಅವರು ತಾವು ಮಲೆನಾಡಿನ ಪರಿಸರದಲ್ಲಿ ಅನುಭವಿಸಿದ ರೋಚಕತೆಗಳನ್ನು ಕಾಲ್ಪನಿಕ ಕಥೆಯ ಮೂಲಕ ಅನಾವರಣ ಮಾಡುತ್ತಾ ಹೋಗುತ್ತಾರೆ. ಗಿರಿಮನೆ ಶ್ಯಾಮರಾವ್ ಅವರು ಈ ಪುಸ್ತಕದಲ್ಲಿ ಒಂದು ಕಾಲ್ಪನಿಕ ಕಥೆಯನ್ನು ತುಂಬಾ ಸೊಗಸಾಗಿ ಹೆಣೆದಿದ್ದಾರೆ. ಒಂದೆಡೆ ಜೇನು ಕಲ್ಲಿನ ಗುಡ್ಡದಲ್ಲಿ ಜೇನು ನೊಣಗಳ ಬಗ್ಗೆ ಸಂಶೋಧನೆ ಮಾಡಲು ಬರುವ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಹಾಗೂ ಅವರ…
ಲೇಖಕರು: Shreerama Diwana
October 15, 2020

*ಸುಂದರ ಬಾರಡ್ಕರ "ಪೊಲದ್ಯೆ": ತುಳುವರ ಜನಪದೀಯ ಚಿಕಿತ್ಸಾ ಕ್ರಮಗಳ ಉನ್ನತ ಅಧ್ಯಯನಕ್ಕೆ ಅಡಿಗಲ್ಲು*
"ಪೊಲದ್ಯೆ", ಸುಂದರ ಬಾರಡ್ಕ ಅವರ ಮೂರನೇ ಪ್ರಕಟಿತ ಸಂಕಲನ. ತುಳು ಜನಪದ ಚಿಕಿತ್ಸೆ, ಆಚರಣೆ ಮತ್ತು ನಂಬಿಕೆಗಳ ಕುರಿತಾದ ಈ ಕೃತಿಯನ್ನು 2016ರಲ್ಲಿ ಬದಿಯಡ್ಕದ ಅಂಬೇಡ್ಕರ್ ವಿಚಾರ ವೇದಿಕೆ (ರಿ) ಪ್ರಕಾಶಿಸಿದೆ. 51 + 9 ಪುಟಗಳ ಕೃತಿಯ ಬೆಲೆ 70.00 ರೂಪಾಯಿ. ನಯನರಾಜ್ ಎನ್. ಬಿ. ಇವರ ಕಲಾತ್ಮಕ ಮುಖಪುಟವಿರುವ ಸಂಕಲನಕ್ಕೆ ಸಾಹಿತಿ ಆತ್ರಾಡಿ ಅಮೃತಾ ಶೆಟ್ಟಿಯವರ ಮುನ್ನುಡಿ ಮತ್ತು ಉಪನ್ಯಾಸಕರೂ…
ಲೇಖಕರು: Ashwin Rao K P
October 14, 2020

ಅಯೋಧ್ಯಾ ಪ್ರಕಾಶನದವರು ತಮ್ಮ ೧೧ನೆಯ ಪುಸ್ತಕವಾಗಿ ರೋಹಿತ್ ಚಕ್ರತೀರ್ಥ ಇವರು ಪರದೇಶದಿಂದ ಹೆಕ್ಕಿ ಕನ್ನಡಕ್ಕೆ ತಂದ ಕಥಾ ಸಂಕಲನ ‘ಮನ ಮೆಚ್ಚಿದ ಹುಡುಗಿ’ ಹೊರ ತಂದಿದ್ದಾರೆ. ರೋಹಿತ್ ಚಕ್ರತೀರ್ಥ ಇವರ ಬಗ್ಗೆ ನಿಮಗೆ ಈಗಾಗಲೇ ತಿಳಿದಿದೆ. ಸುಮಾರು ೨೨ ಪುಸ್ತಕಗಳನ್ನು ಬರೆದು ಪ್ರಕಟಿಸಿರುವ ಇವರು ಗಣಿತ ಹಾಗೂ ವಿಜ್ಞಾನದ ಬಗ್ಗೆ ಸೊಗಸಾಗಿ, ಸರಳ ಪದಗಳಲ್ಲಿ ಬರೆಯುತ್ತಾರೆ. ಕನ್ನಡದ ಪ್ರಮುಖ ದಿನಪತ್ರಿಕೆಗಳಲ್ಲಿ ಇವರು ಅಂಕಣಗಳನ್ನು ಬರೆಯುತ್ತಾರೆ. ಪ್ರಸ್ತುತ ಟೆಸ್ಲಾ ಎಜುಕೇಷನ್ ಎಂಬ ಶಿಕ್ಷಣ…