ಪುಸ್ತಕ ಪರಿಚಯ
ಲೇಖಕರು: Ashwin Rao K P
August 15, 2020

ಪತ್ತೇದಾರಿ ಕಾದಂಬರಿಗಳಿಗೆ ಹೊಸ ಭಾಷ್ಯ ಬರೆದವರು ಎನ್.ನರಸಿಂಹಯ್ಯನವರು. ಅವರು ಕಡಿಮೆ ವಿದ್ಯಾಭ್ಯಾಸ ಮಾಡಿದರೂ ೬೦-೭೦ರ ದಶಕದಲ್ಲಿ ಓದುಗರಿಗೆ ಪತ್ತೇದಾರಿಯ ಚಟ ಹಿಡಿಸಿಬಿಟ್ಟಿದ್ದರು. ಆ ಸಮಯದ ಸೀಮಿತ ಸಂಪನ್ಮೂಲಗಳಿಂದ ತಮ್ಮ ಮನದ ಶಕ್ತಿಯಿಂದ ಪತ್ತೇದಾರಿ ಕಾದಂಬರಿಗಳನ್ನು ಬರೆದರು. ಅವರ ಪತ್ತೇದಾರಿಯ ಪಾತ್ರಗಳಾದ ಮಧುಸೂದನ, ಅರಿಂಜಯ, ಗಾಳೀರಾಯ, ಪುರುಷೋತ್ತಮ ಇವರೆಲ್ಲಾ ನಮ್ಮ ನಡುವೆಯೇ ಇದ್ದ ವ್ಯಕ್ತಿಗಳಂತೆ ಆಗಿ ಹೋಗಿದ್ದರು. ಆ ಸಮಯದಲ್ಲಿ ಬರೆದ ನೂರಾರು ಕಾದಂಬರಿಗಳು ಮರು ಮುದ್ರಣ ಕಾಣದೇ ಈಗಿನ…
ಲೇಖಕರು: Ashwin Rao K P
August 08, 2020

ಭಾರತ ಖ್ಯಾತ ಪತ್ರಕರ್ತರಾದ ಕುಲದೀಪ್ ನಯ್ಯರ್ ಅವರು ಬರೆದ ‘ಸ್ಕೂಪ್' ದೇಶದ ರಾಜಕೀಯ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿ, ಸಮಗ್ರವಾಗಿ ವಿಶ್ಲೇಷಿಸಿರುವ ಪುಸ್ತಕವೆಂದರೆ ತಪ್ಪಾಗಲಾರದು. ಕುಲದೀಪ್ ನಯ್ಯರ್ ಇವರ ಮೊದಲ ಕನ್ನಡಕ್ಕೆ ಭಾಷಾಂತರದೊಂಡ ಪುಸ್ತಕ ಇದು. ರಾಜಕೀಯ ವಿದ್ಯಮಾನಗಳ ಬೆನ್ನು ಹತ್ತಿದ ಅವರು ಆ ವಿದ್ಯಮಾನಗಳಿಗೆ ಸಂಬಂಧಿಸಿದ ಪ್ರಮುಖ ಘಟನೆಗಳನ್ನು ಬೇರೆಲ್ಲರಿಗಿಂತ ಮೊದಲು ಗ್ರಹಿಸಿ ಬಹಿರಂಗಗೊಳಿಸಿದ ಕಥನವಿದು. ಮಹಾತ್ಮಾ ಗಾಂಧಿಯವರ ಹತ್ಯೆಯಿಂದ ಹಿಡಿದು ಮಾಜಿ ಪ್ರಧಾನಿ ವಾಜಪೇಯಿ…
ಲೇಖಕರು: addoor
August 02, 2020

ವಿಶ್ವಮಾನ್ಯತೆ ಪಡೆದ ಮಹಾನ್ ಕಲಾವಿದ ಕಟ್ಟಿಂಗೇರಿ ಕೃಷ್ಣ ಹೆಬ್ಬಾರ್ ಅವರನ್ನು ಆಪ್ತವಾಗಿ ಈ ಪುಸ್ತಕದಲ್ಲಿ ಪರಿಚಯಿಸಿದ್ದಾರೆ ವ್ಯಾಸರಾಯ ಬಲ್ಲಾಳರು. ಇವರು, ಮುಂಬಯಿಯಲ್ಲಿ ಕಲಾನಗರದ ಹೆಬ್ಬಾರರ ಮನೆಯ ಹತ್ತಿರದಲ್ಲೇ ಸುಮಾರು ಎಂಟು ವರುಷ ಕಾಲ ನೆಲೆಸಿದ್ದರು. ಈ ಅವಧಿಯಲ್ಲಿ ಮತ್ತು ಅನಂತರವೂ ಇವರಿಬ್ಬರ ಒಡನಾಟ ನಿರಂತರ. ಅದುವೇ ಇಂತಹ ಅಪರೂಪದ ಪುಸ್ತಕ ರೂಪುಗೊಳ್ಳಲು ಕಾರಣವಾಯಿತು.
ಆ ಒಡನಾಟವನ್ನು ನೆನಪು ಮಾಡಿಕೊಳ್ಳುತ್ತಾ ವ್ಯಾಸರಾಯ ಬಲ್ಲಾಳರು "ಮೊದಲ ಮಾತಿ” ನಲ್ಲಿ ಹೀಗೆ ಬರೆದಿದ್ದಾರೆ: “…
ಲೇಖಕರು: Ashwin Rao K P
July 29, 2020

ಅಂಕಣಕಾರ, ಲೇಖಕ ರೋಹಿತ್ ಚಕ್ರತೀರ್ಥ ಇವರು ವಿಶ್ವವಾಣಿ ಪತ್ರಿಕೆಯಲ್ಲಿ ‘ಚಕ್ರವ್ಯೂಹ' ಎಂಬ ಅಂಕಣವನ್ನು ಬರೆಯುತ್ತಿದ್ದರು. ಆ ಅಂಕಣ ಬರಹಗಳಿಂದ ಆಯ್ದ ಕೆಲವು ವ್ಯಕ್ತಿಚಿತ್ರಗಳನ್ನು ಈ ಪುಸ್ತಕದಲ್ಲಿ ಕಟ್ಟಿಕೊಟ್ಟಿದ್ದಾರೆ. ರೋಹಿತ್ ಅವರ ಬರಹಗಳು ಸಾಕಷ್ಟು ಅಧ್ಯಯನ ಮಾಡಿ ಬರೆದವುಗಳಾಗಿರುತ್ತವೆ. ಏಕೆಂದರೆ ವ್ಯಕ್ತಿ ಚಿತ್ರಗಳನ್ನು ರೂಪಿಸುವಾಗ ಅವರ ಬಗ್ಗೆ ನಿಖರವಾದ ದಾಖಲೆಗಳಿರುವುದು ಅತ್ಯಂತ ಅವಶ್ಯಕ. ಅಯೋಧ್ಯಾ ಪ್ರಕಾಶನದವರು ಈ ಪುಸ್ತಕದ ಜೊತೆಗೆ ಇನ್ನೊಂದು ಪುಸ್ತಕವನ್ನೂ ಹೊರತಂದಿದ್ದಾರೆ.…
ಲೇಖಕರು: Ashwin Rao K P
July 24, 2020

ಆಕರ್ಷಕವಾದ ಹೆಸರನ್ನು ಹೊಂದಿರುವ ೫ ಪೈಸೆ ವರದಕ್ಷಿಣೆ ಎಂಬ ಪುಸ್ತಕವು ವಸುಧೇಂದ್ರ ಇವರ ಸುಲಲಿತ ಪ್ರಬಂಧಗಳ ಸಂಗ್ರಹ. ಸುಲಲಿತ ಪ್ರಬಂಧಗಳನ್ನು ಬರೆಯುವುದರಲ್ಲಿ ವಸುಧೇಂದ್ರ ಇವರದ್ದು ಎತ್ತಿದ ಕೈ. ಈ ಪುಸ್ತಕದಲ್ಲಿ ೨೪ ಪುಟ್ಟ ಪುಟ್ಟ ಪ್ರಬಂಧಗಳಿವೆ. ಚೆನ್ನಾಗಿ ಓದಿಸಿಕೊಂಡೂ ಹೋಗುತ್ತದೆ. ೫ ಪೈಸೆಯನ್ನು ಒಂದೊಂದು ಪೈಸೆಯಾಗಿ ವಿಂಗಡಿಸಿ ಒಂದೊಂದರ ಅಡಿಯಲ್ಲಿ ೪-೬ ಪ್ರಬಂಧಗಳು ಬರುವಂತೆ ಮಾಡಿದ್ದಾರೆ.
ಪ್ರತಿಯೊಬ್ಬರ ಜೀವನದಲ್ಲಿ ಬರುವ ಘಟನೆಗಳನ್ನೇ ಕೆಲವು ಪ್ರಬಂಧಗಳಾಗಿ ಬರೆದಿದ್ದಾರೆ. 'ಚುಕ್ಕಿ…
ಲೇಖಕರು: Ashwin Rao K P
July 21, 2020

ಕಾವ್ಯ ಸಂಗಮವೆನ್ನುವುದು ಹೆಸರೇ ಹೇಳುವಂತೆ ಕವನಗಳ ಸಂಗ್ರಹ. ಕರಾವಳಿ ತೀರದ ಕವಿ/ಕವಯತ್ರಿಯವರ ೯೬ ಕವನಗಳು ಈ ಪುಸ್ತಕದಲ್ಲಿವೆ. ಇವನ್ನೆಲ್ಲ ಅತ್ಯಂತ ಆಸಕ್ತಿಯಿಂದ ಸಂಪಾದನೆ ಮಾಡಿದವರು ಸ್ವತಃ ಕವಿಯಾದ ಮೇಟಿ ಮುದಿಯಪ್ಪ ಇವರು.
ಬೆನ್ನುಡಿಯಲ್ಲಿ ಕವಿ, ವಿಮರ್ಶಕ ವಿ.ಗ.ನಾಯಕ್ ಇವರು ಬರೆಯುತ್ತಾರೆ ‘ಕವಿ ಮೇಟಿಯವರು ಶಿಕ್ಷಣ ತಜ್ಞರಾಗಿ, ಸಾಹಿತಿಯಾಗಿ, ರಂಗಕಲಾವಿದರಾಗಿ, ಸಂಘಟಕ, ಸಮಾಜ ಸೇವಕನಾಗಿ ಹೀಗೆ ಹತ್ತು ಹಲವಾರು ಕ್ಷೇತ್ರದಲ್ಲಿ ಗುರುತಿಸಿಕೊಂಡವರು. ಈಗಾಗಲೇ ಹಲವಾರು ಕೃತಿಗಳನ್ನು ಸಮಾಜಕ್ಕೆ…