ಪುಸ್ತಕ ಪರಿಚಯ
ಲೇಖಕರು: Ashwin Rao K P
October 09, 2020

ಮೇರಿ ಶೆಲ್ಲಿ ಹತ್ತೊಂಬತ್ತನೆಯ ಶತಮಾನದಲ್ಲಿ ಬಹುಮಟ್ಟಿಗೆ ಚಾಲ್ತಿಯಲ್ಲಿದ್ದ ಕಾದಂಬರಿಕಾರ್ತಿ. ಅವಳು ತನ್ನ ಹತ್ತೊಂಬತ್ತನೆಯ ವಯಸ್ಸಿನಲ್ಲೇ ಬರೆದ ‘ಫ್ರಾಂಕನ್ ಸ್ಟೈನ್’ ಎಂಬ ಕಾದಂಬರಿ ಅವಳನ್ನು ಜನಪ್ರಿಯತೆಯ ಉತ್ತುಂಗಕ್ಕೆ ಏರಿಸಿಬಿಟ್ಟಿತು. ಮೇರಿ ಶೆಲ್ಲಿ ೧೭೯೭ರ ಆಗಸ್ಟ್ ೩೦ರಂದು ಇಂಗ್ಲೆಂಡಿನಲ್ಲಿ ಹುಟ್ಟಿದಳು. ಉತ್ತಮ ಶಿಕ್ಷಣವನ್ನು ಪಡೆದ ಮೇರಿ, ತನ್ನ ಹದಿನೆಂಟನೇ ವಯಸ್ಸಿನಲ್ಲಿ ತನ್ನದೇ ತಂದೆಯ ಗೆಳೆಯನಾದ ಪರ್ಸಿ ಬಿ.ಶೆಲ್ಲಿ ಜೊತೆ ಪ್ರೇಮಾಂಕುರವಾಗಿ ಅವನ ಜೊತೆ ಪ್ಯಾರಿಸ್ಸಿಗೆ ಓಡಿ ಹೋದಳು…
ಲೇಖಕರು: Shreerama Diwana
October 07, 2020

*ಹಾ. ಮ. ಸತೀಶರ "ಆಸರೆ" : ಪ್ರಕೃತಿಪ್ರೀತಿ, ಪ್ರೇಮದುಯ್ಯಾಲೆ, ಬದುಕಿನ ಕನ್ನಡಿ*
"ಆಸರೆ", ಹಾ. ಮ. ಸತೀಶ ಅವರ ಮೊದಲ ಕವನ ಸಂಕಲನ. 1997ರಲ್ಲಿ ಮಂಗಳ ಕಲಾ ಸಾಹಿತ್ಯ ವೇದಿಕೆ ಗೂಡಿನಬಳಿ (ಬಂಟ್ವಾಳ ತಾಲೂಕು) ಪ್ರಕಟಿಸಿದ ಆಸರೆಗೆ ಪ್ರೊ. ಡಾ. ಅಮೃತ ಸೋಮೇಶ್ವರರ ಮುನ್ನುಡಿ ಮತ್ತು ಕವಿ, ಗಮಕಿ ಬೆಳ್ತಂಗಡಿಯ ಟಿ. ಸುಬ್ರಹ್ಮಣ್ಯ ಭಟ್ ಅವರ ಬೆನ್ನುಡಿ ಇದೆ.
"ಆಸರೆ" ಯಲ್ಲಿರುವ ಕವನಗಳು, "ಛಂದೋಬದ್ಧವಾದ ಗೇಯ ರಚನೆಗಳು" ಎನ್ನುವುದನ್ನು ತಮ್ಮ ಮುನ್ನುಡಿಯಲ್ಲಿ ಉಲ್ಲೇಖಿಸಿರುವ ಅಮೃತ ಸೋಮೇಶ್ವರರು, "…
ಲೇಖಕರು: Ashwin Rao K P
October 05, 2020

ಗಿರಿಮನೆ ಶ್ಯಾಮರಾವ್ ಮಲೆನಾಡಿನಲ್ಲೇ ಹುಟ್ಟಿ ಬೆಳೆದವರು. ಅಲ್ಲಿಯ ರೋಚಕತೆಯನ್ನು ಇಂಚು ಇಂಚಾಗಿ ಅನುಭವಿಸಿದವರು. ಅವರ ಅನುಭವದ ರೋಚಕ ಘಟನೆಗಳಿಗೇ ಕೃತಿರೂಪಕೊಟ್ಟು ಪ್ರಕಟಿಸಿದ ‘ಮಲೆನಾಡಿನ ರೋಚಕ ಕಥೆಗಳು’ ಎಂಬ ಓದುಗರಿಗೆ ಮೆಚ್ಚುಗೆಯಾಯಿತು. ಅದರ ಫಲವೇ ಅರಮನೆ ಗುಡ್ಡದ ಕರಾಳ ರಾತ್ರಿಗಳು ಪುಸ್ತಕ. ಇದು ಮಲೆನಾಡಿನ ರೋಚಕ ಕಥೆಗಳು ಸರಣಿಯ ಎರಡನೇ ಪುಸ್ತಕ. ಇದು ಕರ್ಮವೀರ ವಾರಪತ್ರಿಕೆಯಲ್ಲಿ ಧಾರವಾಹಿ ರೂಪದಲ್ಲಿ ಈಗಾಗಲೇ ಪ್ರಕಟವಾಗಿದೆ.
ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ವಾಸಿಸುತ್ತಿರುವ ಗಿರಿಮನೆ…
ಲೇಖಕರು: Ashwin Rao K P
October 02, 2020

ಮಂಡೂಕ ಮಹಾರಾಜ ಎಂಬ ಹೆಸರಿನಲ್ಲಿ ನೆರೆಹೊರೆಯ ದೇಶಗಳ ಮಕ್ಕಳ ಕಥೆಗಳನ್ನು ಹುಡುಕಿ ತಂದು ರೋಹಿತ್ ಚಕ್ರತೀರ್ಥ ಪ್ರಕಟಿಸಿದ್ದಾರೆ. ಈಗಿನ ಮಕ್ಕಳು ಕಥೆ ಪುಸ್ತಕ ಓದುವುದೇ ಇಲ್ಲ ಎಂಬ ಅಪವಾದವಿದೆ. ಈಗಾಗಲೇ ನೀವು ಅಜ್ಜಿ ಹೇಳಿದ ಕಥೆಗಳು ಓದಿದ್ದರೆ, ಈ ಪುಸ್ತಕದ ಕಥೆಗಳೂ ಅವೇ ಸಾಲಿಗೆ ಸೇರುತ್ತವೆ. ಪುಟ್ಟ ಪುಟ್ಟ ಕಥೆಗಳು ಮಕ್ಕಳಿಗೆ ಓದಲೂ ಚೆನ್ನ, ಮಕ್ಕಳಿಗೆ ಕಥೆಯನ್ನು ಓದಿ ಹೇಳುವ ಹಿರಿಯರಿಗೂ ಅನುಕೂಲ.ರೋಹಿತ್ ಚಕ್ರತೀರ್ಥ ಗಣಿತ ಉಪನ್ಯಾಸಕರು. ಕನ್ನಡದಲ್ಲಿ ವಿಜ್ಞಾನ ಹಾಗೂ ಗಣಿತದ ವಿಷಯದಲ್ಲಿ…
ಲೇಖಕರು: Ashwin Rao K P
September 29, 2020

ಗಿರಿಮನೆ ಶ್ಯಾಮರಾವ್ ಮಲೆನಾಡಿನಲ್ಲೇ ಹುಟ್ಟಿ ಬೆಳೆದವರು. ಅಲ್ಲಿಯ ರೋಚಕತೆಯನ್ನು ಇಂಚು ಇಂಚಾಗಿ ಅನುಭವಿಸಿದವರು. ಅವರ ಅನುಭವದ ರೋಚಕ ಘಟನೆಗಳಿಗೇ ಕೃತಿರೂಪ ನೀಡಿ ‘ಕಾಫಿ ನಾಡಿನ ಕಿತ್ತಳೆ’ ಎಂಬ ಹೆಸರಿನಲ್ಲಿ ಸುಧಾ ವಾರಪತ್ರಿಕೆಯಲ್ಲಿ ಧಾರಾವಾಹಿ ರೂಪದಲ್ಲಿ ಪ್ರಕಟವಾಯಿತು. ಅದರಲ್ಲಿನ ಚಿಂಟಿಯ ಪಾತ್ರದ ಚಿತ್ರಣದ ಭಾಗ ಮಕ್ಕಳ ಸಾಹಿತ್ಯಕ್ಕೆ ಸ್ವೀಕೃತವಾಯಿತು. ಕೆ.ಪಿ.ಪೂರ್ಣಚಂದ್ರ ತೇಜಸ್ವಿಯವರ ಮಲೆನಾಡಿಗೆ ಸಂಬಂಧಪಟ್ಟ ಬರಹಗಳ ಪ್ರಭಾವವೂ ಈ ಕೃತಿ ರಚನೆಗೆ ಪ್ರಮುಖ ಕಾರಣ ಎನ್ನುತ್ತಾರೆ ಲೇಖಕರು. ‘…
ಲೇಖಕರು: Ashwin Rao K P
September 27, 2020

ರೋಹಿತ್ ಚಕ್ರತೀರ್ಥ ಗಣಿತ ಉಪನ್ಯಾಸಕರು. ಕನ್ನಡದಲ್ಲಿ ವಿಜ್ಞಾನ ಹಾಗೂ ಗಣಿತದ ವಿಷಯದಲ್ಲಿ ಸರಳವಾಗಿ ಜನಸಾಮಾನ್ಯರಿಗೆ ಅರ್ಥವಾಗುವ ರೀತಿಯಲ್ಲಿ ಲೇಖನಗಳನ್ನು ಬರೆಯುತ್ತಾರೆ. ಪತ್ರಿಕೆಗಳಲ್ಲಿ ಅಂಕಣಗಳನ್ನೂ ಬರೆಯುತ್ತಾರೆ. ಅಜ್ಜಿ ಹೇಳಿದ ಕಥೆಗಳು ಎಂಬ ಹೆಸರಿನಲ್ಲಿ ದೇಶ, ವಿದೇಶಗಳ ಮಕ್ಕಳ ಕಥೆಗಳನ್ನು ಹುಡುಕಿ ತಂದು ಪ್ರಕಟಿಸಿದ್ದಾರೆ. ಈಗಿನ ಮಕ್ಕಳು ಕಥೆ ಪುಸ್ತಕ ಓದುವುದೇ ಇಲ್ಲ ಎಂಬ ಅಪವಾದವಿದೆ. ಆದರೆ ರೋಹಿತ್ ಅವರ ಈ ಪುಸ್ತಕವನ್ನು ಮಕ್ಕಳು ಸರಾಗವಾಗಿ ಓದಿ ಮುಗಿಸಬಹುದು ಏಕೆಂದರೆ ಬಹುತೇಕ…