ಪುಸ್ತಕ ಪರಿಚಯ
ಲೇಖಕರು: Shreerama Diwana
September 25, 2020

ಸಾವಿರದ ಶರಣವ್ವ ತಾಯೇ.....
`ಕಣ್ಣಾ ಮುಚ್ಚೆ... ಕಾಡೇ ಗೂಡೇ...’ ಒಂದು ಯಶೋಗಾಥೆ. ಕಲಾವಿದೆಯೊಬ್ಬಳ ಯಶಸ್ಸಿನ ಹಿಂದಿನ ಅಗ್ನಿದಿವ್ಯಗಳ ಅನಾವರಣ. ಇಲ್ಲಿ ಬದುಕು ಒಂದು ಸಮುದ್ರದ ಘನತೆ ಪಡೆದುಕೊಂಡಿದೆ. ಅದನ್ನು ಮೊಗೆಯಲು ಬೊಗಸೆಯನ್ನು ನಂಬಿ ಹೊರಟ ಪ್ರೀತಿ ನಾಗರಾಜರು ತಮ್ಮ ಪುಟ್ಟ ಬೊಗಸೆಯಲ್ಲಿ ತುಂಬಿಕೊಳ್ಳಲು ಸಾಧ್ಯವಾದಷ್ಟನ್ನು ನಮಗೂ ಹಂಚಿದ್ದಾರೆ. ಪದ್ಮಶ್ರೀ ಡಾ. ಬಿ. ಜಯಶ್ರೀ ಈ ನಾಡು ಕಂಡ ಅಸಾಧಾರಣ ಕಲಾವಿದೆ.
ಬಾಲ್ಯವೆಲ್ಲ ರಂಗದ ಮೇಲೆಯೇ ಕಳೆದ ಬಾಲೆ ಆ ದಿನಗಳನ್ನು ನೆನಪಿಸಿಕೊಳ್ಳುವ…
ಲೇಖಕರು: Ashwin Rao K P
September 24, 2020

ಪತ್ರಕರ್ತ ರಮೇಶ್ ದೊಡ್ಡಪುರ ಇವರು ೨೦೧೯ರ ಲೋಕಸಭಾ ಚುನಾವಣೆಯನ್ನು ಹತ್ತಿರದಿಂದ ಕಂಡು ವರದಿ ಮಾಡಿದವರು. ಅವರು ಕಂಡ ಚುನಾವಣೆಯ ಸಾರ ಸಂಗ್ರಹವೇ ಬಿಜೆಪಿ ೨೫ + ೧ ಕರ್ನಾಟಕದಲ್ಲಿ ಕಮಲ ಅರಳಿದ ಕತೆ ಎಂಬ ಪುಸ್ತಕ. ಈ ಪುಸ್ತಕದ ಬೆನ್ನುಡಿಯಲ್ಲಿ ಬರೆದಂತೆ ‘೨೦೧೮ರ ವಿಧಾನ ಸಭೆ ಚುನಾವಣೆ ಹಾಗೂ ೨೦೧೯ ರ ಲೋಕಸಭಾ ಚುನಾವಣೆ ಅವಧಿಯೇ ದಾಖಲೆಗಳ ಕಾಲಮಾನ. ದೇಶದ ಇತಿಹಾಸದಲ್ಲೇ ಒಂದು ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರವನ್ನು ಪ್ರವಾಸ ಮಾಡಿದ ದಾಖಲೆ ನಿರ್ಮಾಣವಾದದ್ದು (ಬಿ.ಎಸ್. ಯಡಿಯೂರಪ್ಪ) ಇದೇ…
ಲೇಖಕರು: Shreerama Diwana
September 21, 2020

“ಮೂಕ ಹಕ್ಕಿಯ ಹಾಡು” ಕೃತಿಯು ಮುಖ್ತಾರ್ ಮಾಯಿಯ ತೀರಾ ಭಿನ್ನವಾದ ದಾರುಣ ಬದುಕನ್ನು ನಮ್ಮ ಮುಂದೆ ತೆರೆದಿಡುವ ಕೃತಿಯಾಗಿದೆ.
ಪಾಕಿಸ್ತಾನದ ಕೆಳವರ್ಗದ ಕೃಷಿ ಕುಟುಂಬದಲ್ಲಿ ಬೆಳೆದ ಅನಕ್ಷರಸ್ಥ ಹೆಣ್ಣು ಮಗಳು ಮುಖ್ತಾರ್ ಮಾಯಿ ಸಾಮೂಹಿಕ ಅತ್ಯಾಚಾರದಂತಹ ಕ್ರೌರ್ಯಕ್ಕೆ ಬಲಿಯಾದ ನಂತರ ಅನುಭವಿಸುವ ತೊಳಲಾಟಗಳನ್ನೆಲ್ಲಾ ಮೀರಿಯೂ ಆಕೆ ತೆಗೆದುಕೊಳ್ಳುವ ಪ್ರತಿಯೊಂದು ನಿರ್ಧಾರದ ಹಿಂದೆ ದೂರ ದೃಷ್ಟಿ ಮತ್ತು ಪ್ರಬುದ್ಧತೆ ಇದೆ.
ತನ್ನ ಹಳ್ಳಿಯಲ್ಲಿ ಶಾಲೆ ಆರಂಭಿಸಿದ ಆಕೆ, ಶಾಲೆಗೆ ಸಿಕ್ಕಿದ ಪರಿಹಾರದ…
ಲೇಖಕರು: Ashwin Rao K P
September 19, 2020

ಮೂಡಬಿದರೆ ಸಮೀಪದ ಊರಿನಲ್ಲಿ ಹುಟ್ಟಿದ ಎಸ್.ಸುರೇಂದ್ರನಾಥ್ ಓದಿ ಬೆಳೆದದ್ದು ದಾವಣಗೆರೆಯಲ್ಲಿ. ನ್ಯಾಶನಲ್ ಸ್ಕೂಲ್ ಆಫ್ ಡ್ರಾಮಾದಲ್ಲಿ ತರಭೇತಿ. ಹುಲಗೂರ ಹುಲಿಯವ್ವ, ಸಂಕ್ರಮಣ, ಜನತೆಯ ಶತ್ರು, ಆತಂಕವಾದಿಯ ಆಕಸ್ಮಿಕ ಸಾವು ಮುಂತಾದ ಹಲವಾರು ನಾಟಕಗಳನ್ನು ಬರೆದು ನಿರ್ದೇಶಿಸಿದ್ದಾರೆ. ನಾಗಮಂಡಲ, ಕಾನೂರು ಹೆಗ್ಗಡತಿ, ಕೆಂಡಸಂಪಿಗೆ ಮೊದಲಾದ ಕೆಲವು ಚಲನ ಚಿತ್ರಗಳಿಗೆ ಕತೆ/ಚಿತ್ರಕತೆ/ಸಂಭಾಷಣೆ ಬರೆದಿದ್ದಾರೆ. ಹದಿಮೂರು ವರ್ಷಗಳ ಕಾಲ ಈಟಿವಿಯಲ್ಲಿ ಕಾರ್ಯಕ್ರಮಗಳ ಜವಾಬ್ದಾರಿಯನ್ನು…
ಲೇಖಕರು: Shreerama Diwana
September 18, 2020

ಸೋಮಾಲಿಯಾದ ಹೆಣ್ಣು ಮಗಳು ವಾರಿಸ್ ಡಿರಿಳ ಆತ್ಮಕಥೆ “ಮರುಭೂಮಿಯ ಹೂ”. ವಾರಿಸ್ ಡಿರಿ ಜಗತ್ತಿನ ಜಾಹಿರಾತು ಲೋಕದಲ್ಲಿ ಒಂದು ಅಚ್ಚಳಿಯದ ಹೆಸರು. ಆತ್ಮಕಥೆಯ ವಸ್ತು, ವಿವರ ಹಾಗೂ ಜಗತ್ ಪ್ರಸಿದ್ಧ ರೂಪದರ್ಶಿಯಾಗಿದ್ದುಕೊಂಡು ವಾರಿಸ್ ಡಿರಿ ತೆರೆದಿಟ್ಟ ತನ್ನ ಬದುಕಿನ ಬಡತನ, ಅಪಮಾನ, ಅತ್ಯಾಚಾರದಂತಹ ಸಂಗತಿಗಳು ಹಾಗೂ ಆಫ್ರಿಕಾದ ಬುಡಕಟ್ಟು ಜನಾಂಗಗಳಲ್ಲಿ ಆಚರಣೆಯಲ್ಲಿರುವ ಯೋನಿ ಛೇದನ ಎಂಬ ಕ್ರೂರ ಪದ್ಧತಿ ಇವೆಲ್ಲವುಗಳಿಂದಾಗಿ ಈ ಕೃತಿಯು ಓದುಗರನ್ನು ಕಾದಂಬರಿಯಂತೆ ಓದಿಸಿಕೊಂಡು ಹೋಗುವ ಗುಣವನ್ನು…
ಲೇಖಕರು: Ashwin Rao K P
September 17, 2020

ಬೆಂಗಳೂರಿನ ಛಂದ ಪುಸ್ತಕದವರು ಪ್ರತೀ ವರ್ಷ ಉದಯೋನ್ಮುಖ ಬರಹಗಾರರ ಪುಸ್ತಕಗಳನ್ನು ಮುದ್ರಿಸುತ್ತಾರೆ. ೨೦೨೦ರ ಸಾಲಿನಲ್ಲಿ ಬಿಡುಗಡೆಯಾದ ೪ ಪುಸ್ತಕಗಳಲ್ಲಿ ಒಂದು ಪುಸ್ತಕವೇ ಹರೀಶ್ ಹಾಗಲವಾಡಿಯವರ ಕಾದಂಬರಿ ಋಷ್ಯಶೃಂಗ. ತುಮಕೂರಿನ ಬಳಿಯ ಹಾಗಲವಾಡಿಯವರಾದ ಹರೀಶ್ ಇವರಿಗೆ ವಿದ್ಯಾಭ್ಯಾಸದ ಕಾಲದಿಂದಲೂ ಸಂಸ್ಕೃತಿ, ಆಧ್ಯಾತ್ಮಗಳ ಸೆಳೆತ. ಈಗ ಪ್ರಸ್ತುತ ಸಂಸ್ಕೃತ ಅಧ್ಯಾಪಕರಾಗಿ, ಭಾರತೀಯ ಸಂಸ್ಕೃತಿಯ ಸಂಶೋಧಕ ವಿದ್ಯಾರ್ಥಿಯಾಗಿ ದುಡಿಯುತ್ತಾ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ‘ನ್ಯಾಸ' ಇವರ ಮೊದಲ…