ಪುಸ್ತಕ ಪರಿಚಯ
ಲೇಖಕರು: Ashwin Rao K P
December 18, 2024

‘ಟಿಕೆಟ್ ಪ್ಲೀಸ್’ ವಿಕ್ರಂ ಚದುರಂಗ ಅವರ ಅನುವಾದಿತ ಕತೆಗಳಾಗಿವೆ. ಈ ಕೃತಿಯಲ್ಲಿ ಐದು ಕತೆಗಳಿದ್ದು, ನಮ್ಮ ಹೊರಜಗತ್ತಿನ ಮತ್ತು ದೈಹಿಕ ಅನುಭವದ ಮೂಲಕವೇ ತಲುಪಬಹುದಾದ ಒಳ ಅನುಭವಗಳನ್ನು, ಭಾವಲೋಕವನ್ನು ಓದುಗರಿಗೆ ಒಗ್ಗಿಸುವ ಅನುವಾದದ ಪ್ರಯತ್ನವಿಲ್ಲಿದೆ. ಇಲ್ಲಿನ ಟಿಕೆಟ್ ಪ್ಲೀಸ್ ಲಾರೆನ್ಸನ ಪ್ರಸಿದ್ಧ ಕತೆಯಾಗಿದ್ದು, ಹಲವಾರು ಭಾಷೆಗಳಿಗೂ ಕೂಡ ಅನುವಾದಗೊಂಡಿದೆ. ಮೊದಲ ಮಹಾಯುದ್ಧಾನಂತರದ ಕಾಲದಲ್ಲಿ ಈ ಕಥೆ ನಡೆಯುವಾಗಿನ ಯುರೋಪಿನ ಪಟ್ಟಣದ ಸ್ಥಿತಿಗತಿಗಳು, ಅಲ್ಲಿ ಬದಲಾಗುತ್ತಿರುವ ಸಾಮಾಜಿಕ…
ಲೇಖಕರು: addoor
December 17, 2024

ಇದು ಯುನೆಸ್ಕೋದ ಏಷ್ಯಾ ಸಾಂಸ್ಕೃತಿಕ ಕೇಂದ್ರ ಪ್ರಾಯೋಜಿಸಿದ ಏಷ್ಯಾದ ಸಹ ಪ್ರಕಟಣಾ ಕಾರ್ಯಕ್ರಮದ ಅನುಸಾರ ಪ್ರಕಟಿಸಿದ ಏಷ್ಯಾದ 14 ದೇಶಗಳ ಸಮಕಾಲೀನ ಕತೆಗಳ ಸಂಕಲನ.
ಮೊದಲ ಕತೆ ಅಫಘಾನಿಸ್ತಾನದ್ದು: ಗಿಡುಗ ಮತ್ತು ಮರ. ಒಂದೂರಿನಲ್ಲೊಂದು ಮೋಚಿಯ ಸಣ್ಣ ಅಂಗಡಿ. ಆತ ಬೆಳಗ್ಗೆ ಅಂಗಡಿ ತೆರೆದರೆ ಸಂಜೆಯ ವರೆಗೆ ಕೂತಿರುತ್ತಿದ್ದ. ಅವನ ಅಂಗಡಿಗೆ ಪ್ರತಿ ದಿನ ಇಬ್ಬರು ಸೋಮಾರಿಗಳು ಬಂದು ಹರಟೆ ಹೊಡೆಯುತ್ತಾ ಇರುತ್ತಿದ್ದರು. ಅದೊಂದು ದಿನ ಮೋಚಿ ಖಿನ್ನನಾಗಿದ್ದ. ಯಾಕೆಂದು ಕೇಳಿದಾಗ “ನನ್ನ ಗಿಡುಗ…
3
ಲೇಖಕರು: Ashwin Rao K P
December 16, 2024

ವಿದ್ಯಾ ಭರತನಹಳ್ಳಿ ಬರೆದ ‘ಬೇಸೂರ್’ ಎನ್ನುವ ಚೊಚ್ಚಲ ಕಥಾ ಸಂಕಲನ ಇತ್ತೀಚೆಗೆ ಬಿಡುಗಡೆಯಾಗಿದೆ. ತಮ್ಮ ಈ ಕಥಾ ಸಂಕಲನದ ಕುರಿತಾಗಿ ಲೇಖಕಿ ಹೇಳುವುದು ಹೀಗೆ…
“ನಾನು ನನ್ನೊಳಗೇ ಕಥೆ ಬರೆದುಕೊಳ್ಳುತ್ತಿದ್ದೆ. ಮನೆಯ ಬಾಗಿಲಲ್ಲಿ ಗೇಟಿಗೆ ತಲೆಯಾನಿಸಿ ಮಗಳು ಬರುವುದನ್ನು ಕಾಯುತ್ತ ಇರುವಾಗ, ಗಂಡನೊಂದಿಗೆ ವಾಕಿಂಗ್ ಮಾಡುವಾಗ, ಅರಳಿದ ಹೂವಿನೊಳಗೆ ಕಣ್ಣಿಗೆ ಕಾಣಿಸದ ಹುಳ ಹೊಕ್ಕಿದ್ದನ್ನು ತೆಗೆಯುವಾಗ, ಫಕ್ಕನೆ ಯಾವುದೋ ನೆನಪಾಗಿ ಕಣ್ಣು ತುಂಬಿ ತುಳುಕುವಾಗ. ಸುತ್ತೆಲ್ಲ ಹರವಿಕೊಂಡ ಇತಿಹಾಸ, ವರ್ತಮಾನ…
ಲೇಖಕರು: Ashwin Rao K P
December 13, 2024

`ಕಟ್ಟು’ ಎಂಬ ಪುಸ್ತಕ ಡಾ. ಬಸಯ್ಯಸ್ವಾಮಿ ಅವರ ವಿಮರ್ಶಾ ಲೇಖನಗಳ ಸಂಕಲನವಾಗಿದೆ. ಸಾಹಿತ್ಯ, ಶಾಸನ, ಸಮಾಜ ಎಂಬ ಮೂರು ಭಾಗವನ್ನು ಒಳಗೊಂಡ ಒಟ್ಟು ೧೫ ಲೇಖನಗಳು ಇದರಲ್ಲಿವೆ.(ವಲಸೆ ಸಾಹಿತ್ಯ, ವಚನ ಸಾಹಿತ್ಯ, ಶಾಸನ, ಮತ್ತು ಭಾಷೆ) ಸಾಹಿತ್ಯವನ್ನು ವಿವಿದ ಆಯಾಮಗಳಲ್ಲಿ, ಹಲವು ಮಗ್ಗುಲುಗಳಲ್ಲಿ ನೋಡುವ ಕುತೂಹಲದ ಕಣ್ಣನ್ನೂ ಲೇಖಕ ಹೊಂದಿರುವುದನ್ನು ಇಲ್ಲಿ ಕಾಣಬಹುದು. ಅಷ್ಟೇ ಅಲ್ಲದೆ ಸಾಮಾಜಿಕ ಮತ್ತು ಸಾಂಸ್ಕೃತಿಕ ನೆಲೆಗಳಲ್ಲಿ ಅವರ ಆಸಕ್ತಿಯು ಡಾಳಾಗಿ ಕಾಣಿಸುತ್ತದೆ. ಕನ್ನಡ ಸಾಹಿತ್ಯವನ್ನು,…
ಲೇಖಕರು: Ashwin Rao K P
December 11, 2024

ನಮ್ಮ ದೇಶದ ಪ್ರಧಾನ ಮಂತ್ರಿಯಾಗಿ ಎರಡು ಅವಧಿಗಳನ್ನು ಮುಗಿಸಿ ಮೂರನೇ ಅವಧಿಯಲ್ಲಿ ಸಾಗುತ್ತಿರುವ ನರೇಂದ್ರ ದಾಮೋದರದಾಸ್ ಮೋದಿಯವರ ಬಗ್ಗೆ ಈಗಾಗಲೇ ಹಲವಾರು ಪುಸ್ತಕಗಳು ಬಂದಿವೆ. ನರೇಂದ್ರ ಮೋದಿಯವರು ಮೊದಲ ಬಾರಿ ಪ್ರಧಾನಿಯಾದ ಸಂದರ್ಭದಲ್ಲಿ ನಿತಿನ್ ಅಗರ್ ವಾಲ್ ಅವರು ಆಂಗ್ಲ ಭಾಷೆಯಲ್ಲಿ ಬರೆದ ಕೃತಿಯು ‘ನರೇಂದ್ರ ಮೋದಿಯವರು ನಿಮಗೆ ಗೊತ್ತೇ?’ ಎಂಬ ಹೆಸರಿನಲ್ಲಿ ಕನ್ನಡಕ್ಕೆ ಅನುವಾದವಾಗಿದೆ. ಸೊಗಸಾಗಿ ಕನ್ನಡಕ್ಕೆ ಅನುವಾದ ಮಾಡಿದವರು ಜಿ.ಎಂ.ಕೃಷ್ಣಮೂರ್ತಿಯವರು. ಈ ಪುಸ್ತಕ ಮಕ್ಕಳಿಗೆ ಓದಲು ಬಹಳ…
ಲೇಖಕರು: Ashwin Rao K P
December 09, 2024

‘ಅಲೆದಾಟದ ಅಂತರಂಗ’ ಎನ್ನುವುದು ನವೀನಕೃಷ್ಣ ಎಸ್ ಉಪ್ಪಿನಂಗಡಿ ಇವರ ಪ್ರವಾಸ ಕಥನ. ನಮಗೆ ಗೊತ್ತಿಲ್ಲದ ಊರಿನ ವಿಶೇಷತೆಗಳನ್ನು ರೋಚಕವಾಗಿ ಹರಡುವ ನವೀನಕೃಷ್ಣ ಅವರ ಪ್ರವಾಸಕಥನಗಳು ಓದಲು ಬಹಳ ಸೊಗಸಾಗಿರುತ್ತವೆ. ಅವರೊಂದಿಗೆ ನಾವೂ ಪ್ರವಾಸ ಮಾಡುತ್ತಿದ್ದೇವೆ ಎನ್ನುವಷ್ಟು ಹಿತವಾಗಿರುತ್ತದೆ. ಈ ಪ್ರವಾಸ ಕಥನಕ್ಕೆ ಸೊಗಸಾದ ಮುನ್ನುಡಿಯನ್ನು ಬರೆದಿದ್ದಾರೆ ವಿವೇಕಾನಂದ ಕಾಲೇಜು ಪುತ್ತೂರು ಇದರ ಕುಲ ಸಚಿವರಾದ ಡಾ. ಶ್ರೀಧರ್ ಎಚ್ ಜಿ. ಇವರು ತಮ್ಮ ಮುನ್ನುಡಿಯಲ್ಲಿ ವ್ಯಕ್ತ ಪಡಿಸಿದ ಭಾವನೆಗಳ ಕೆಲವು…